ಶಿವಮೂರ್ತಿ ಮುರುಘಾ ಶರಣರ ವಿರುದ್ದ ಫೋಕ್ಸೋ ಪ್ರಕರಣ: ಮಠದ ವಕೀಲ ಪ್ರತಿಕ್ರಿಯೆ ಏನು?
ಬೆಂಗಳೂರು, ಆಗಸ್ಟ್ 27: ಮುರುಘಾ ಮಠ ಶಿವಮೂರ್ತಿ ಮುರುಘಾ ಶರಣರ ವಿರುದ್ದ ಪೋಕ್ಸೋ ಕಾಯ್ದೆಯಡಿ ಮೈಸೂರಿನ ನಜರಾಬಾದ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅಕ್ಕಮಹಾದೇವಿ ವಸತಿ ನಿಲಯದ ಅಪ್ರಾಪ್ತ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿರುವ ಆರೋಪದ ಮೇಲೆ ಎಫ್ಐಆರ್ ದಾಖಲಾಗಿದೆ. ಈ ಪ್ರಕರಣ ಸಂಬಂಧ ಮಠದ ಪರವಾಗಿ ವಕೀಲರು ಪ್ರತಿಕ್ರಿಯೆಯನ್ನು ನೀಡಿದ್ದಾರೆ.
ಮಠದ ಹಿರಿಯ ಸ್ವಾಮೀಜಿ ಶಿವಮೂರ್ತಿ ಮುುರುಘಾ ಶರಣರು ವಿರುದ್ದ ಮಕ್ಕಳು ದೂರನ್ನು ನೀಡಿರುವುದರಿಂದ ಶ್ರೀಗಳು ಮಾತಾನಾಡುವುದಿಲ್ಲ. ಸ್ವಾಮೀಜಿಗೆ ಬಹಳ ಮನಸ್ಸಿಗೆ ನೋವಾಗಿದೆ. ಇದೊಂದು ಷಡ್ಯಂತ್ರದ ಭಾಗ ದೂರಿನ ಅಂಶ ತಿಳಿದ ಬಳಿಕ ಸ್ವಾಮೀಜಿ ಮಾತನಾಡುತ್ತಾರೆ ಎಂದು ತಿಳಿದು ಬಂದಿದೆ.

ಮುರುಘಾ ಮಠದ ಬಳಿ ವಕೀಲ ವಿಶ್ವನಾಥಯ್ಯ ಹೇಳಿಕೆ:
ಮುರುಘಾಮಠ ಶಿವಮೂರ್ತಿ ಮುರುಗ ಶರಣರ ವಿರುದ್ದ ಪೋಕ್ಸೋ ಕಾಯ್ದೆ ಮೈಸೂರಿನಲ್ಲಿ ಪ್ರಕರಣ ದಾಖಲು ಸಂಬಂಧ ಚಿತ್ರದುರ್ಗದ ಮುರುಘಾ ಮಠದ ಬಳಿ ವಕೀಲ ವಿಶ್ವನಾಥಯ್ಯ ಹೇಳಿಕೆ ನೀಡಿದ್ದು, "ಮಾಧ್ಯಮಗಳಲ್ಲಿ ಬಂದ ಸುದ್ದಿಯಿಂದ ಸ್ವಾಮೀಜಿ ಅವರಿಗೆ ನೋವಾಗಿದೆ. ಮಕ್ಕಳು ಮೈಸೂರು ಠಾಣೆಯಲ್ಲಿ ದೂರು ದಾಖಲಿಸಿರುವ ವಿಚಾರ ಗೊತ್ತಾಗಿದೆ. ದೂರಿನ ಪೂರ್ಣ ವಿವರ ನಮಗೆ ಗೊತ್ತಿಲ್ಲ. ಇದರಿಂದ ಸ್ವಾಮೀಜಿ ಅವರಿಗೆ ಬಹಳ ನೋವಾಗಿದ್ದು, ಮಾತನಾಡುವ ಸ್ಥಿತಿಯಲ್ಲಿ ಇಲ್ಲ. ಆದರೆ ಯಾವುದೋ ಮಠದ ವಿರೋಧಿ ಶಕ್ತಿ ಅತೀ ಆಸೆಯಿಂದ ಇಂಥ ಕೆಲಸ ಮಾಡಿರಬಹುದು. ಮಕ್ಕಳನ್ನು ದುರ್ಬಳಕೆ ಮಾಡಿಕೊಂಡು ದೂರು ನೀಡಿದ್ದಾರೆ" ಎಂದು ಹೇಳಿದ್ದಾರೆ.
ದೂರಿನ ಹಿಂದೆ ವಿರೋಧಿ ಶಕ್ತಿಗಳ ಕೈವಾಡ
"ಇದರ ಹಿಂದೆ ವಿರೋಧಿ ಶಕ್ತಿಗಳ ಕೈವಾಡ ಇದೆ ಎಂದು ತಿಳಿದು ಬಂದಿದೆ ಎಂದು ಸ್ವಾಮೀಜಿ ತಿಳಿಸಿದ್ದಾರೆ. ಹೆಚ್ಚಿನದಾಗಿ ದೂರಿನ ಅಂಶಗಳು ಬಂದ ಮೇಲೆ ಸ್ವಾಮೀಜಿ ಮಾತನಾಡುತ್ತಾರೆ. ಈ ಕುರಿತು ಕಾನೂನು ಹೋರಾಟ ಮಾಡುತ್ತೇವೆ. ಅವರು ತಪ್ಪು ದೂರು ನೀಡಿದ್ದರೆ ಮುರುಘೇಶ ಅವರಿಗೆ ಬುದ್ದಿ ನೀಡಲಿ. ತಪ್ಪಿನ ಅರಿವಾಗಿ ಅವರು ಕೇಸ್ ವಾಪಸ್ ಪಡೆಯಲಿ. ಎಲ್ಲಾ ಭಕ್ತ ವೃಂದದ ಪರವಾಗಿ ದೇವರಲ್ಲಿ ಪ್ರಾರ್ಥಿಸುವೆ" ಚಿತ್ರದುರ್ಗದ ಮುರುಘಾ ಮಠದ ಬಳಿ ವಕೀಲ ವಿಶ್ವನಾಥಯ್ಯ ಎಂದು ತಿಳಿಸಿದ್ದಾರೆ.

ದೂರಿನ ಸಾರಾಂಶವೇನು?
ಮುರುಘಾಮಠದ ಸ್ವಾಜೀಜಿಗಳಾದ ಶಿವಮೂರ್ತಿ ಮುರುಘಾ ಶರಣರು ಇಬ್ಬರು ಅಪ್ರಾಪ್ತ ಬಾಲಕಿಯರಿಗೆ ಮೂರುವರೆ ವರ್ಷಗಳಿಂದ ಲೈಂಗಿಕ ದೌರ್ಜನ್ಯ ನೀಡುತ್ತಿದ್ದಾರೆ. ಇವರಿಗೆ ವಾರ್ಡನ್ ರಶ್ಮಿ, ಮಠದ ಮರಿಸ್ವಾಮಿಗಳಾದ ಬಸವಾದಿತ್ಯ , ಲಾಯರ್ ಗಂಗಾಧರಯ್ಯ, ಲೀಡರ್ ಪರಮ ಶಿವಯ್ಯ ಸಹಾಯವನ್ನು ಮಾಡಿರುತ್ತಾರೆ ಎಂದು ಮಕ್ಕಳ ಕಲ್ಯಾಣ ಸಮಿತಿ ಮೈಸೂರಿನ ಮುಂದೆ ಹಾಜರು ಪಡಿಸಿರುತ್ತಾರೆ. ಮಕ್ಕಳ ಹೇಳಿಕೆಯನ್ನು ಪಡೆದಿರುವ ವೇಳೆ ಲೈಂಗಿಕ ದೌರ್ಜನ್ಯ ನೀಡಿರುವುದು ತಿಳಿದು ಬಂದಿರುತ್ತದೆ. ಆರೋಪಿಗಳ ವಿರುದ್ದ ಸೂಕ್ತ ಕಾನೂನು ಕ್ರಮ ಕೈಗೊಳ್ಳಲು ಮನವಿಯನ್ನು ಮಾಡಿದ್ದು ಮಕ್ಕಳಿಗೆ ತಾತ್ಕಾಲಿಕವಾಗಿ ಒಡನಾಡಿ ಸಂಸ್ಥೆಯಲ್ಲಿ ವಸತಿಯನ್ನು ಕಲ್ಪಿಸಲಾಗಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.
-
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Yami Gautam: ಕನ್ನಡದಲ್ಲೇ ಧುರಂಧರ್ ನಿರ್ದೇಶಕನ ಪತ್ನಿ ಯಾಮಿ ಗೌತಮ್ ಮೊದಲ ಸಿನಿಮಾ, ಸ್ಟಾರ್ ಹೀರೋ ಜೊತೆ ಚೊಚ್ಚಲ ನಟನೆ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು












Click it and Unblock the Notifications