ಎಚ್ಆರ್ ಸೋಗಿನಲ್ಲಿ ಬೆಂಗಳೂರಿನಲ್ಲಿ ಯುವತಿ ಮೇಲೆ ಲೈಂಗಿಕ ದೌರ್ಜನ್ಯ
ಮಂಗಳೂರು ಮೂಲದ ಯುವತಿಗೆ ಕೆಲಸಕ್ಕೆ ಅನುಕೂಲ ಮಾಡಿಕೊಡುತ್ತೇನೆ. ತಾನು ಎಚ್ ಆರ್ ಅಧಿಕಾರಿ ಎಂದು ಪರಿಚಯ ಮಾಡಿಕೊಂಡ ವ್ಯಕ್ತಿ ಬೆಂಗಳೂರಿನಲ್ಲಿ ಲೈಂಗಿಕ ದೌರ್ಜನ್ಯಕ್ಕೆ ಯತ್ನಿಸಿದ್ದಾನೆ
ಬೆಂಗಳೂರು, ಮೇ 25: ಮಂಗಳೂರು ಮೂಲದ 25 ವರ್ಷದ ಯುವತಿಗೆ ಬೆಂಗಳೂರಿನಲ್ಲಿ ಎಚ್ ಆರ್ (ಮಾನವ ಸಂಪನ್ಮೂಲ) ಅಧಿಕಾರಿ ಎಂದು ಹೇಳಿಕೊಂಡು ವ್ಯಕ್ತಿಯೊಬ್ಬ ಲೈಂಗಿಕ ದೌರ್ಜನ್ಯಕ್ಕೆ ಎಸಗಿದ ಬಗ್ಗೆ ಮೈಕೋ ಲೇಔಟ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಮೇರಿ ಬಹುರಾಷ್ಟ್ರೀಯ ಬ್ಯಾಂಕ್ ವೊಂದರಲ್ಲಿ ಗ್ರಾಹಕ ಸೇವಾ ಅಧಿಕಾರಿ (ಕಸ್ಟಮರ್ ಸರ್ವೀಸ್ ಎಕ್ಸ್ ಕ್ಯುಟಿವ್) ಹುದ್ದೆಗಾಗಿ ಅಂತಿಮ ಸುತ್ತಿನ ಸಂದರ್ಶನ ಮುಗಿಸಿ, ಫಲಿತಾಂಶಕ್ಕಾಗಿ ಕಾಯುತ್ತಿದ್ದರು. ಆ ವೇಳೆ ಅಪರಿಚಿತ ಮೊಬೈಲ್ ಸಂಖ್ಯೆಯಿಂದ ಆಕೆಗೆ ಕರೆ ಬಂದಿದ್ದು, ತುಂಬ ಮುಖ್ಯವಾದ ವಿಚಾರ ಇದೆ. ಹೊರಗೆ ಬನ್ನಿ ಮಾತನಾಡಬೇಕು ಎಂದು ವ್ಯಕ್ತಿಯೊಬ್ಬ ಹೇಳಿದ್ದಾನೆ.[ಅಸ್ವಾಭಾವಿಕ ಲೈಂಗಿಕ ಕ್ರಿಯೆಗೆ ಆಸೆಪಟ್ಟ ಟೆಕ್ಕಿಗೆ ಸಂಕಷ್ಟ!]

ಅದರಂತೆ ಆಕೆ ಆಚೆಗೆ ಬಂದಾಗ, ತನ್ನನ್ನು ರೋಹನ್, ಕಂಪೆನಿಯ ಎಚ್ ಆರ್ ಅಧಿಕಾರಿ ಎಂದು ಪರಿಚಯಿಸಿಕೊಂಡಿದ್ದಾನೆ. ಸಂದರ್ಶನದಲ್ಲಿ ನೀವು ಆಯ್ಕೆಯಾಗಿಲ್ಲ. ನನ್ನ ಜತೆಗೆ ಮನೆಗೆ ಬಂದರೆ, ಸಹಾಯ ಮಾಡ್ತೀನಿ ಎಂದು ಹೇಳಿದ್ದಾನೆ. ಅದಕ್ಕೆ ಆಕೆ ಒಪ್ಪದಿದ್ದಾಗ ಕಾರಿನೊಳಗೆ ಎಳೆದೊಯ್ಯಲು ಯತ್ನಿಸಿದ್ದಾನೆ. ಆದರೆ ಆತನಿಂದ ತಪ್ಪಿಸಿಕೊಂಡಿದ್ದಾರೆ.
ಈ ಬಗ್ಗೆ ತಕ್ಷಣವೇ ಕಂಪೆನಿಯವರಿಗೆ ಮಾಹಿತಿ ನೀಡಿದ ಮೇರಿ, ಆತನು ತನ್ನ ಜತೆ ನಡೆದುಕೊಂಡಿದ್ದನ್ನು ತಿಳಿಸಿದ್ದಾರೆ. ಆ ಹೆಸರಿನವರು ಯಾರೂ ನಮ್ಮಲ್ಲಿ ಕೆಲಸ ಮಾಡುತ್ತಿಲ್ಲ. ನೀವು ಕೆಲಸಕ್ಕೆ ಆಯ್ಕೆ ಆಗಿದ್ದೀರಿ ಎಂದು ತಿಳಿಸಿದ್ದಾರೆ. ಹಾಗಿದ್ದ ಮೇಲೆ ತನ್ನ ಮೊಬೈಲ್ ನಂಬರ್ ಸಂಖ್ಯೆ ಹಾಗೂ ಅಂತಿಮ ಸುತ್ತಿನ ಸಂದರ್ಶನಕ್ಕೆ ಹಾಜರಾಗಿರುವುದು ಆ ವ್ಯಕ್ತಿಗೆ ಹೇಗೆ ಗೊತ್ತಾಯಿತು ಎಂದು ಮೇರಿ ಮರುಪ್ರಶ್ನೆ ಹಾಕಿದ್ದಾರೆ.[ನೆಟ್ ಸಮಸ್ಯೆ ಬಗೆ ಸರಿಪಡಿಸಲೆಂದು ಬಂದವನಿಂದ ಲೈಂಗಿಕ ದೌರ್ಜನ್ಯ]
ಇದೀಗ ಅಲ್ಲಿನ ಉದ್ಯೋಗ ಅವಕಾಶವನ್ನು ನಿರಾಕರಿಸಿದ ಮೇರಿ, ಮೈಕೋ ಲೇಔಟ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಆ ವ್ಯಕ್ತಿ ಕರೆ ಮಾಡಿದ ಮೊಬೈಲ್ ನಂಬರ್ ಸಹಾಯದಿಂದ ಪತ್ತೆ ಕಾರ್ಯ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದು, ಈ ಬಗ್ಗೆ ಬೆಂಗಳೂರ್ ಮಿರರ್ ನಲ್ಲಿ ವರದಿ ಪ್ರಕಟವಾಗಿದೆ.
-
ದ್ವಿತೀಯ ಪಿಯುಸಿ 'ಕಲಾ' ವಿಭಾಗದಲ್ಲಿ ಶೇ.72.86 ರಷ್ಟು ಫಲಿತಾಂಶ: ಟಾಪರ್ಸ್ ಲಿಸ್ಟ್ ಇಲ್ಲಿದೆ -
2nd PUC 'ವಾಣಿಜ್ಯ' ವಿಭಾಗದಲ್ಲಿ ಶೇ.88.4ರಷ್ಟು ಸಾಧನೆ: ಇಬ್ಬರಿಗೆ 600ಕ್ಕೆ 600 ಅಂಕ, ಇವರೇ ಟಾಪರ್ಸ್ -
ಮೈಸೂರು-ಬೆಂಗಳೂರು ರೈಲು ಪ್ರಯಾಣಿಕರಿಗೆ ಗುಡ್ನ್ಯೂಸ್ ಕೊಟ್ಟ ವಿ.ಸೋಮಣ್ಣ -
2nd PUC ಫಲಿತಾಂಶದಲ್ಲಿ ಶೇ. 13ರಷ್ಟು ಏರಿಕೆ; ಕಲಿಕೆಯಲ್ಲಿ ಗ್ರಾಮೀಣ ಭಾಗದ ವಿದ್ಯಾರ್ಥಿಗಳೇ ಫಸ್ಟ್: ಮಧು ಬಂಗಾರಪ್ಪ -
Chandrika Dixit: ಒಂದು ರಾತ್ರಿ ನನ್ನ ಜೊತೆ ಮಲಗಿದ್ರೆ 50 ಲಕ್ಷ ಕೊಡ್ತೇನೆ; ಚಂದ್ರಿಕಾಗೆ ಖ್ಯಾತ ಉದ್ಯಮಿ ಆಫರ್ -
2025ರ ದ್ವಿತೀಯ PUC ಪರೀಕ್ಷೆಯಲ್ಲಿ ವಿಜ್ಞಾನ, ವಾಣಿಜ್ಯ, ಕಲಾ ವಿಭಾಗದಲ್ಲಿ ಮಿಂಚಿದ ಪ್ರತಿಭೆಗಳು; ಇಲ್ಲಿದೆ ಟಾಪರ್ಗಳ ಪಟ್ಟಿ -
Ankita Jayaram: ನಟನೆಯ ನಡುವೆಯೂ ದ್ವಿತೀಯ ಪಿಯುಸಿಯಲ್ಲಿ ಕರ್ಣ ಧಾರಾವಾಹಿ ಖ್ಯಾತಿಯ ನಟಿ ಅಂಕಿತಾ ಜಯರಾಮ್ ಅಮೋಘ ಸಾಧನೆ -
Gold Rate April 9: ಚಿನ್ನ - ಬೆಳ್ಳಿ ಬೆಲೆಯಲ್ಲಿ ಭರ್ಜರಿ ಇಳಿಕೆ: ಬಂಗಾರ ಖರೀದಿದಾರರಿಗೆ ಸಂತೋಷದ ಸುದ್ದಿ -
ರಾಜ್ಯದ ಕಳೆದ 3 ವರ್ಷಗಳ ದ್ವಿತೀಯ PUC ಫಲಿತಾಂಶದ ಹೈಲೈಟ್ಸ್; ಮೇಲುಗೈ ಸಾಧಿಸಿದ ಜಿಲ್ಲೆಗಳು ಯಾವುವು? ಇಲ್ಲಿದೆ ಮಾಹಿತಿ -
Dhurandhar-2 OTT: ನೆಟ್ಫ್ಲಿಕ್ಸ್ ಅಲ್ಲ, ಈ ಒಟಿಟಿಯಲ್ಲಿ 'ಧರಂಧರ-2' ಅಬ್ಬರ, ಯಾವಾಗ? -
Karnataka Weather: ಕರ್ನಾಟಕದ 4 ಜಿಲ್ಲೆಗಳಲ್ಲಿ ಮಳೆ - ವಿವಿಧ ಭಾಗಗಳಲ್ಲಿ ಭಾರೀ ಬಿಸಿಲು, ಕರ್ನಾಟಕದ ಹವಾಮಾನ ವರದಿ -
Ragi Price Today: ಕರ್ನಾಟಕದ ಮಾರುಕಟ್ಟೆಗಳಲ್ಲಿ ಇಂದಿನ "ರಾಗಿ' ಬೆಲೆ ಎಷ್ಟಿದೆ? ಲೇಟೆಸ್ಟ್ ಅಪ್ಡೇಟ್











Click it and Unblock the Notifications