ಅಂಚೆ ಇಲಾಖೆ ಮನೆಗೇ ಬಂದು ಪತ್ರ ಒಯ್ಯುತ್ತೆ
ಬೆಂಗಳೂರು, ನ. 27: ಇ ಮೇಲ್ ಹಾಗೂ ಕೊರಿಯರ್ ಸ್ಪರ್ಧೆಯನ್ನು ಎದುರಿಸುವ ನಿಟ್ಟಿನಲ್ಲಿ ಅಂಚೆ ಇಲಾಖೆಯು ಇದೀಗ ಮತ್ತಷ್ಟು ಗ್ರಾಹಕ ಸ್ನೇಹಿಯಾಗಲು ಯತ್ನಿಸಿದೆ.
ಇನ್ನು ಮುಂದೆ ಜನರು ಸ್ಪೀಡ್ ಅಥವಾ ರಿಜಿಸ್ಟರ್ಡ್ ಪೋಸ್ಟ್ ಕಳುಹಿಸಲು ಅಂಚೆ ಕಚೇರಿಗೆ ತೆರಳಿ ಸಾಲು ಹಚ್ಚಿ ನಿಲ್ಲಬೇಕಿಲ್ಲ. ಇಷ್ಟು ದಿನ ಪತ್ರ ತಲುಪಿಸುವ ಕೆಲಸವನ್ನಷ್ಟೇ ಮಾಡುತ್ತಿದ್ದ ಅಂಚೆ ವಿತರಕರು ಇನ್ನು ಮುಂದೆ ಮನೆಗೇ ಬಂದು ಪತ್ರ ಒಯ್ಯುತ್ತಾರೆ. ಇದಕ್ಕಾಗಿ ನೀವು ದೂರವಾಣಿ ಮೂಲಕ ಸಂಪರ್ಕಿಸಿ ತಿಳಿಸಬೇಕು ಅಷ್ಟೇ. [ಮೊಬೈಲ್ ಮೂಲಕ ಮನಿ ಆರ್ಡರ್ ಕಳಿಸಿ]

ಗ್ರಾಹಕರು ಹೀಗೆ ಮಾಡಬೇಕು: ಪತ್ರವನ್ನು ಕಳುಹಿಸಲು ಇಚ್ಛಿಸುವ ಗ್ರಾಹಕ ಅಂಚೆ ಇಲಾಖೆಯ ವಿಚಾರಣೆ ಕೇಂದ್ರ (080-22863344) ಕ್ಕೆ ದೂರವಾಣಿ ಕರೆ ಮಾಡಿ ವಿಷಯ ತಿಳಿಸಬೇಕು. ಅಲ್ಲಿ ನಿಮ್ಮ ದೂರವಾಣಿ ಸಂಖ್ಯೆ ಹಾಗೂ ವಿಳಾಸ ಪಡೆಯಲಾಗುತ್ತದೆ. ನೀವು ಅನುಸರಿಸಬೇಕಾದ ನಿಯಮಗಳ ಕುರಿತೂ ತಿಳಿಸಲಾಗುತ್ತದೆ. [ಇ ಕಾಮರ್ಸ್ ಕ್ಷೇತ್ರಕ್ಕೆ ಅಂಚೆ ಇಲಾಖೆ]
ನಿಮ್ಮ ಹತ್ತಿರ 10 ಅಥವಾ ಅದಕ್ಕಿಂತ ಹೆಚ್ಚು ಪತ್ರಗಳು ಇದ್ದರೆ ಅಂಚೆ ಇಲಾಖೆಯ ಮಾರುಕಟ್ಟೆ ಕಾರ್ಯನಿರ್ವಾಹಕ ನಿಮ್ಮ ಹತ್ತಿರ ಬಂದು ಪತ್ರಗಳನ್ನು ಒಯ್ಯುತ್ತಾರೆ. ಅದಕ್ಕಿಂತ ಕಡಿಮೆ ಇದ್ದರೆ ಸ್ಥಳೀಯ ಅಂಚೆ ವಿತರಕರೇ ಪತ್ರವನ್ನು ಒಯ್ಯುತ್ತಾರೆ. ನಿಮ್ಮ ಮನೆಗೆ ಬಂದು ಒಯ್ಯಲು ಅಂಚೆ ಇಲಾಖೆ ವಿಶೇಷ ಶುಲ್ಕವನ್ನೂ ಆಕರಿಸುವುದಿಲ್ಲ.
ಹೊಸ ಯೋಜನೆಗಳು: ದೂರವಾಣಿ, ಕೊರಿಯರ್ ಹಾಗೂ ಇ ಮೇಲ್ಗಳ ಸ್ಪರ್ಧೆ ಎದುರಿಸಲಾಗದೆ ಬಸವಳಿದಿದ್ದರೂ ಅಂಚೆ ಇಲಾಖೆಯಲ್ಲಿ ಗ್ರಾಹಕ ಸೇವೆಯನ್ನು ಮುಂದುವರಿಸಲಾಗಿತ್ತು. ಅತ್ಯಂತ ಕಡಿಮೆ ದರದಲ್ಲಿ ಸಾಮಾನ್ಯ ಪತ್ರಗಳ ರವಾನೆ, ಅಂಚೆ ಕಾರ್ಡ್ ಮುದ್ರಣ ಹಾಗೂ ಮನಿ ಆರ್ಡರ್ ಸೇವೆಗಳನ್ನು ನಿಲ್ಲಿಸಿರಲಿಲ್ಲ. [ಪೋಸ್ಟ್ ಮ್ಯಾನ್ ಪತ್ರ ಬಂದಿದೆಯಾ]
ಇದರಿಂದ ಇಲಾಖೆಗೆ ಸಾಕಷ್ಟು ನಷ್ಟವಾಗುತ್ತಿದೆ ಎಂಬ ಆರೋಪ ಕೇಳಿಬಂದಿದ್ದರೂ ಸೇವೆಯನ್ನು ಸ್ಥಗಿತಗೊಳಿಸಿರಲಿಲ್ಲ. ದೇಶಾದ್ಯಂತ ಲಕ್ಷಾಂತರ ದಿನ ಪತ್ರಿಕೆಗಳನ್ನು ನಗಣ್ಯ ದರಕ್ಕೆ ಗ್ರಾಹಕರಿಗೆ ಪೂರೈಸುತ್ತಿತ್ತು. ಈ ಸೇವೆಗೆ ಸಾಕಷ್ಟು ಮೆಚ್ಚುಗೆ ವ್ಯಕ್ತವಾಗಿದ್ದರೂ ಆರ್ಥಿಕವಾಗಿ ಮೇಲೆತ್ತುವಲ್ಲಿ ಸಹಕಾರಿಯಾಗಿರಲಿಲ್ಲ.
ನಂತರದಲ್ಲಿ ಬ್ಯಾಂಕಿಂಗ್, ವಿಮೆ, ತಕ್ಷಣ ಹಣ ರವಾನೆಯಂತಹ (instant money order) ನೂತನ ಸೇವೆಗಳನ್ನೂ ಆರಂಭಿಸಿತ್ತು. ಈಗ ಮನೆಯಿಂದಲೇ ಪತ್ರ ಪಡೆದು ರವಾನಿಸುವ ಮೂಲಕ ಕೊರೆಯರ್ ಸೇವೆಗೆ ಪ್ರಬಲ ಸ್ಪರ್ಧೆ ಒಡ್ಡಲು ಮುಂದಾಗಿದೆ. [ಅಂಚೆ ಕಚೇರಿಯಲ್ಲಿ ಚಿನ್ನದ ನಾಣ್ಯ ಲಭ್ಯ]
-
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
Karnataka Weather: ಕರ್ನಾಟಕದಲ್ಲಿ ಹೆಚ್ಚಿದ ಬಿಸಿಲ ಧಗೆ: ಬಳ್ಳಾರಿಯಲ್ಲಿ ಗರಿಷ್ಠ ತಾಪಮಾನ ದಾಖಲು, ಬೀದರ್ನಲ್ಲಿ ಚಳಿ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Expenses: ಬೆಂಗಳೂರು ಎಷ್ಟು ದುಬಾರಿ, ಅಮೆಜಾನ್ ಉದ್ಯೋಗಿ ಹಂಚಿಕೊಂಡ ವಾರಾಂತ್ಯದ ವೆಚ್ಚದ ವಿಡಿಯೋ ವೈರಲ್ -
Gold Rate: ಸತತ ಇಳಿಕೆಯ ನಂತರ ಚಿನ್ನದ ಬೆಲೆ ಮತ್ತೆ ಏರಿಕೆ: ಬೆಂಗಳೂರಿನಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ವಿವರ ಇಲ್ಲಿದೆ ನೋಡಿ -
Vijay Divorce: ನನ್ನ ಸಮಸ್ಯೆಗಳ ಬಗ್ಗೆ ನೀವು ತಲೆಕೆಡಿಸಿಕೊಳ್ಳಬೇಡಿ: ಡಿವೋರ್ಸ್ ಬಗ್ಗೆ ಕೊನೆಗೂ ಮೌನ ಮುರಿದ ನಟ ದಳಪತಿ ವಿಜಯ್ -
Horoscope March 8: ಈ ರಾಶಿಯವರಿಗೆ ಉದ್ಯೋಗದಲ್ಲಿ ಒಳಿತು, ಹೂಡಿಕೆಗಳಿಂದ ಲಾಭ, ದಿನ ಭವಿಷ್ಯ -
Kamal Haasan: ನಿಮ್ಮ ಕೆಲಸ ಎಷ್ಟಿದೆಯೋ ಅಷ್ಟು ನೋಡಿಕೊಳ್ಳಿ; ಭಾರತ ಸಾರ್ವಭೌಮ ರಾಷ್ಟ್ರ: ಟ್ರಂಪ್ಗೆ ಕಮಲ್ ಹಾಸನ್ ತಿರುಗೇಟು -
ಚಿಕ್ಕಬಳ್ಳಾಪುರದ ಜಿಲ್ಲೆಯ ಸತ್ಯಸಾಯಿ ಗ್ರಾಮಕ್ಕೆ ನಟ ರಿಷಬ್ ಶೆಟ್ಟಿ ಭೇಟಿ: ಮಾನವೀಯ ಕಾರ್ಯಗಳಿಗೆ ಶ್ಲಾಘನೆ -
Kiccha Sudeep: ಸುದೀಪ್ ನಂ 1 ಅಂತ ಗೂಗಲ್ನಲ್ಲಿ ಬರುತ್ತಾ, ನಟ ಆದ್ರೆ ತಲೆ ಮೇಲೆ ಕೊಂಬು ಇದ್ಯಾ: ಡಾಗ್ ಸತೀಶ್, ವೈರಲ್ ವಿಡಿಯೋ -
IMD Weather Forecast: ಭಾರತ vs ನ್ಯೂಜಿಲೆಂಡ್ ಟಿ20 ವಿಶ್ವಕಪ್ ಫೈನಲ್: ಅಹಮದಾಬಾದ್ನಲ್ಲಿ ಹವಾಮಾನ ಹೇಗಿದೆ, ಮಳೆ ಭೀತಿ ಇದೆಯೇ -
Jaggery: ಬೆಲ್ಲದಲ್ಲಿ ಕಲಬೆರಕೆಯ ಕೆಮಿಕಲ್, ಬಣ್ಣ, ಸಕ್ಕರೆ ಮಿಶ್ರಣ: ಪರಿಶೀಲನೆ ಮಾಡುವ ಸರಳ ವಿಧಾನಗಳು












Click it and Unblock the Notifications