ಅಂಚೆ ಇಲಾಖೆ ಮನೆಗೇ ಬಂದು ಪತ್ರ ಒಯ್ಯುತ್ತೆ
ಬೆಂಗಳೂರು, ನ. 27: ಇ ಮೇಲ್ ಹಾಗೂ ಕೊರಿಯರ್ ಸ್ಪರ್ಧೆಯನ್ನು ಎದುರಿಸುವ ನಿಟ್ಟಿನಲ್ಲಿ ಅಂಚೆ ಇಲಾಖೆಯು ಇದೀಗ ಮತ್ತಷ್ಟು ಗ್ರಾಹಕ ಸ್ನೇಹಿಯಾಗಲು ಯತ್ನಿಸಿದೆ.
ಇನ್ನು ಮುಂದೆ ಜನರು ಸ್ಪೀಡ್ ಅಥವಾ ರಿಜಿಸ್ಟರ್ಡ್ ಪೋಸ್ಟ್ ಕಳುಹಿಸಲು ಅಂಚೆ ಕಚೇರಿಗೆ ತೆರಳಿ ಸಾಲು ಹಚ್ಚಿ ನಿಲ್ಲಬೇಕಿಲ್ಲ. ಇಷ್ಟು ದಿನ ಪತ್ರ ತಲುಪಿಸುವ ಕೆಲಸವನ್ನಷ್ಟೇ ಮಾಡುತ್ತಿದ್ದ ಅಂಚೆ ವಿತರಕರು ಇನ್ನು ಮುಂದೆ ಮನೆಗೇ ಬಂದು ಪತ್ರ ಒಯ್ಯುತ್ತಾರೆ. ಇದಕ್ಕಾಗಿ ನೀವು ದೂರವಾಣಿ ಮೂಲಕ ಸಂಪರ್ಕಿಸಿ ತಿಳಿಸಬೇಕು ಅಷ್ಟೇ. [ಮೊಬೈಲ್ ಮೂಲಕ ಮನಿ ಆರ್ಡರ್ ಕಳಿಸಿ]

ಗ್ರಾಹಕರು ಹೀಗೆ ಮಾಡಬೇಕು: ಪತ್ರವನ್ನು ಕಳುಹಿಸಲು ಇಚ್ಛಿಸುವ ಗ್ರಾಹಕ ಅಂಚೆ ಇಲಾಖೆಯ ವಿಚಾರಣೆ ಕೇಂದ್ರ (080-22863344) ಕ್ಕೆ ದೂರವಾಣಿ ಕರೆ ಮಾಡಿ ವಿಷಯ ತಿಳಿಸಬೇಕು. ಅಲ್ಲಿ ನಿಮ್ಮ ದೂರವಾಣಿ ಸಂಖ್ಯೆ ಹಾಗೂ ವಿಳಾಸ ಪಡೆಯಲಾಗುತ್ತದೆ. ನೀವು ಅನುಸರಿಸಬೇಕಾದ ನಿಯಮಗಳ ಕುರಿತೂ ತಿಳಿಸಲಾಗುತ್ತದೆ. [ಇ ಕಾಮರ್ಸ್ ಕ್ಷೇತ್ರಕ್ಕೆ ಅಂಚೆ ಇಲಾಖೆ]
ನಿಮ್ಮ ಹತ್ತಿರ 10 ಅಥವಾ ಅದಕ್ಕಿಂತ ಹೆಚ್ಚು ಪತ್ರಗಳು ಇದ್ದರೆ ಅಂಚೆ ಇಲಾಖೆಯ ಮಾರುಕಟ್ಟೆ ಕಾರ್ಯನಿರ್ವಾಹಕ ನಿಮ್ಮ ಹತ್ತಿರ ಬಂದು ಪತ್ರಗಳನ್ನು ಒಯ್ಯುತ್ತಾರೆ. ಅದಕ್ಕಿಂತ ಕಡಿಮೆ ಇದ್ದರೆ ಸ್ಥಳೀಯ ಅಂಚೆ ವಿತರಕರೇ ಪತ್ರವನ್ನು ಒಯ್ಯುತ್ತಾರೆ. ನಿಮ್ಮ ಮನೆಗೆ ಬಂದು ಒಯ್ಯಲು ಅಂಚೆ ಇಲಾಖೆ ವಿಶೇಷ ಶುಲ್ಕವನ್ನೂ ಆಕರಿಸುವುದಿಲ್ಲ.
ಹೊಸ ಯೋಜನೆಗಳು: ದೂರವಾಣಿ, ಕೊರಿಯರ್ ಹಾಗೂ ಇ ಮೇಲ್ಗಳ ಸ್ಪರ್ಧೆ ಎದುರಿಸಲಾಗದೆ ಬಸವಳಿದಿದ್ದರೂ ಅಂಚೆ ಇಲಾಖೆಯಲ್ಲಿ ಗ್ರಾಹಕ ಸೇವೆಯನ್ನು ಮುಂದುವರಿಸಲಾಗಿತ್ತು. ಅತ್ಯಂತ ಕಡಿಮೆ ದರದಲ್ಲಿ ಸಾಮಾನ್ಯ ಪತ್ರಗಳ ರವಾನೆ, ಅಂಚೆ ಕಾರ್ಡ್ ಮುದ್ರಣ ಹಾಗೂ ಮನಿ ಆರ್ಡರ್ ಸೇವೆಗಳನ್ನು ನಿಲ್ಲಿಸಿರಲಿಲ್ಲ. [ಪೋಸ್ಟ್ ಮ್ಯಾನ್ ಪತ್ರ ಬಂದಿದೆಯಾ]
ಇದರಿಂದ ಇಲಾಖೆಗೆ ಸಾಕಷ್ಟು ನಷ್ಟವಾಗುತ್ತಿದೆ ಎಂಬ ಆರೋಪ ಕೇಳಿಬಂದಿದ್ದರೂ ಸೇವೆಯನ್ನು ಸ್ಥಗಿತಗೊಳಿಸಿರಲಿಲ್ಲ. ದೇಶಾದ್ಯಂತ ಲಕ್ಷಾಂತರ ದಿನ ಪತ್ರಿಕೆಗಳನ್ನು ನಗಣ್ಯ ದರಕ್ಕೆ ಗ್ರಾಹಕರಿಗೆ ಪೂರೈಸುತ್ತಿತ್ತು. ಈ ಸೇವೆಗೆ ಸಾಕಷ್ಟು ಮೆಚ್ಚುಗೆ ವ್ಯಕ್ತವಾಗಿದ್ದರೂ ಆರ್ಥಿಕವಾಗಿ ಮೇಲೆತ್ತುವಲ್ಲಿ ಸಹಕಾರಿಯಾಗಿರಲಿಲ್ಲ.
ನಂತರದಲ್ಲಿ ಬ್ಯಾಂಕಿಂಗ್, ವಿಮೆ, ತಕ್ಷಣ ಹಣ ರವಾನೆಯಂತಹ (instant money order) ನೂತನ ಸೇವೆಗಳನ್ನೂ ಆರಂಭಿಸಿತ್ತು. ಈಗ ಮನೆಯಿಂದಲೇ ಪತ್ರ ಪಡೆದು ರವಾನಿಸುವ ಮೂಲಕ ಕೊರೆಯರ್ ಸೇವೆಗೆ ಪ್ರಬಲ ಸ್ಪರ್ಧೆ ಒಡ್ಡಲು ಮುಂದಾಗಿದೆ. [ಅಂಚೆ ಕಚೇರಿಯಲ್ಲಿ ಚಿನ್ನದ ನಾಣ್ಯ ಲಭ್ಯ]
-
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
ಮಾರ್ಚ್ 31ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Gold Price: ದಿಢೀರ್ ಏರಿಕೆ ಕಂಡ ಚಿನ್ನದ ದರ: ಪ್ರತಿ ಗ್ರಾಂಗೆ 14,929 ರೂಪಾಯಿ, ಕೆ.ಜಿಗೆ 2.5 ಲಕ್ಷ ರೂ. ತಲುಪಿದ ಬೆಳ್ಳಿ -
Kannada: ಕರ್ನಾಟಕದಲ್ಲಿರುವ ಬ್ಯಾಂಕ್ಗಳಲ್ಲಿ ಸ್ಪಷ್ಟ ಕನ್ನಡ; ತುಳು, ಕೊಂಕಣಿ ಭಾಷೆಯ ಕಲರವ ಈಗ ಉಳಿದಿಲ್ಲ: ಕವಿರಾಜ್












Click it and Unblock the Notifications