Poster campaign: ತೇಜಸ್ವಿ ಸೂರ್ಯ ಬೆಂಬಲಿಗರಿಂದ ಬೆಂಗಳೂರಿನ ಆಟೋ ಚಾಲಕರ ಮೇಲೆ ಹಲ್ಲೆ!
ಬೆಂಗಳೂರು ನವೆಂಬರ್ 21: ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಅವರನ್ನು ಟೀಕಿಸುವ ಪೋಸ್ಟರ್ ಹಾಕಿದ್ದಕ್ಕೆ ಬೆಂಗಳೂರಿನಲ್ಲಿ ಆಟೋ ಚಾಲಕರ ಮೇಲೆ ಹಲ್ಲೆ ಮಾಡಲಾಗಿದೆ. ಈ ಹಲ್ಲೆ ಮಾಡಿದ ಆರೋಪದ ಮೇಲೆ ಬಿಜೆಪಿ ಮಾಜಿ ಕಾರ್ಪೊರೇಟರ್ ವಿರುದ್ಧ ಎಫ್ಐಆರ್ ದಾಖಲಾಗಿದೆ.
ಕಾರ್ಪೂಲಿಂಗ್ಗೆ ಅವಕಾಶ ನೀಡುವಂತೆ ಮುಖ್ಯಮಂತ್ರಿಗೆ ಬರೆದಿರುವ ಪತ್ರ ಮತ್ತು ಹೇಳಿಕೆಯನ್ನು ಹಿಂಪೆಯುವಂತೆ ಆಗ್ರಹಿಸಿರುವ ಖಾಸಗಿ ಸಾರಿಗೆ ಸಂಘಟನೆಗಳ ಒಕ್ಕೂಟ ಸದಸ್ಯರು 'ಪೋಸ್ಟರ್ ಅಭಿಯಾನ' ಆರಂಭಿಸಿದ್ದರು. ಹೀಗಾಗಿ ಬೆಂಗಳೂರಿನ ಆಟೋ ಚಾಲಕರು ತಮ್ಮ ವಾಹನಗಳ ಮೇಲೆ ಪೋಸ್ಟರ್ಗಳನ್ನು ಪ್ರದರ್ಶಿಸಿದರು.

ಪೋಸ್ಟರ್ಗಳನ್ನು ತೆಗೆಯುವಂತೆ ಆಗ್ರಹಿಸಿ ಬಿಜೆಪಿಯ ಮಾಜಿ ಕಾರ್ಪೊರೇಟರ್ ವೆಂಕಟೇಶ್ ಬೆಂಬಲಿಗರು ಆಟೋ ಚಾಲಕರ ಮೇಲೆ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ. ಅಲ್ಲದೆ ವೆಂಕಟೇಶ್ ಅವರು ತಮ್ಮ ವಾಹನಗಳನ್ನು ಚಲಾಯಿಸದಂತೆ ಪ್ರದೇಶದ ಎಲ್ಲಾ ಆಟೋ ಚಾಲಕರಿಗೆ ಎಚ್ಚರಿಕೆ ನೀಡಿದ್ದಾರೆ. ಜೊತೆಗೆ ಪೋಸ್ಟರ್ಗಳನ್ನು ತೆಗೆದುಹಾಕದಿದ್ದರೆ ಮಾರಣಾಂತಿಕ ಪರಿಣಾಮಗಳನ್ನು ಎದುರಿಸಬೇಕಾಗುತ್ತದೆ ಎಂದು ಬೆದರಿಕೆ ಕೂಡ ಹಾಕಿದ್ದಾರೆ ಎಂದು ಆರೋಪಿಸಲಾಗಿದೆ. ವೆಂಕಟೇಶ್ ಮತ್ತು ಆತನ ಬೆಂಬಲಿಗರ ವಿರುದ್ಧ ಹನುಮಂತನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
ಕಳೆದ ಗುರುವಾರ ನಗರದ ಫ್ರೀಡಂ ಪಾರ್ಕಿನ ಮೈದಾನದಲ್ಲಿ ಖಾಸಗಿ ಸಾರಿಗೆ ಸಂಘಟನೆಗಳ ಒಕ್ಕೂಟದ ಸದಸ್ಯರು, ಕಾರ್ ಪೂಲಿಂಗ್ ಮತ್ತು ವೈಟ್ಬೋರ್ಡ್ ವಾಹನ ಬಾಡಿಗೆಗೆ ಬಳಸಲು ನೀಡಿರುವ ಹೇಳಿಕೆಯನ್ನು ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಈ ಕೂಡಲೇ ಹಿಂಪಡೆಯಬೇಕೆಂದು ಆಗ್ರಹಿಸಿದರು.

'ಇತ್ತೀಚಿಗೆ ಬೃಹತ್ ಪ್ರತಿಭಟನೆ ನಡೆಸಿ ಕಾನೂನು ಬಾಹಿರ ಆ್ಪ್ ಸೇವೆಗಳನ್ನು ರದ್ದುಪಡಿಸಬೇಕೆಂದು ರಾಜ್ಯ ಸರಕಾರಕ್ಕೆ ಒತ್ತಾಯ ಮಾಡಲಾಗಿತ್ತು. ಅದರಂತೆ ಕಾನೂನು ಬಾಹಿರ ಹಾಗೂ ಕಾರ್ಮಿಕ, ಬಡ ವಿರೋಧಿ ನೀತಿಗಳನ್ನು ಜಾರಿಗೊಳಿಸುವುದಿಲ್ಲ ಎಂದು ಸರಕಾರ ಭರವಸೆ ನೀಡಿತ್ತು. ಆದರೆ ಈ ಮಧ್ಯೆ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಮುಖ್ಯಮಂತ್ರಿಗಳಿಗೆ ಪತ್ರ ಬರೆದು ವೈಟ್ ಬೋರ್ಡ್ ವಾಹನ ಮತ್ತು ಕಾರ್ ಪೂಲಿಂಗ್ ಅವಕಾಶ ನೀಡುವಂತೆ ಮನವಿ ಮಾಡಿರುವುದು ಖಂಡನೀಯ' ಎಂದು ಒಕ್ಕೂಟದ ಎಸ್.ನಟರಾಜ ಶರ್ಮಾ ಆಕ್ರೋಶ ಹೊರಹಾಕಿದ್ದಾರೆ.
ತೇಜಸ್ವಿ ಸೂರ್ಯ ನಡೆಯಿಂದ ವಾಣಿಜ್ಯ ಸೇವೆಗೆ ತೆರಿಗೆ ಕಟ್ಟಿ, ಪರವಾನಿಗೆ ಪಡೆದ, ಬ್ಯಾಡ್ಜ ಹೊಂದಿರುವ ಚಾಲಕರಿಗೆ ದೊಡ್ಡ ನಷ್ಟ ಆಗಲಿದೆ. ತೇಜಸ್ವಿ ಸೂರ್ಯಗೆ ಈ ಕುರಿತು ಒಂದಿಷ್ಟು ಮಾಹಿತಿ ಇಲ್ಲದೆ, ಪತ್ರ ಬರೆದಿದ್ದು ಇದರಿಂದ ಕಾನೂನು ಉಲ್ಲಂಘನೆ ಮಾಡಿ ಓಡಿಸುತ್ತಿರುವ ವಾಹನ ಮತ್ತು ಆಪ್ ಆದಾರಿತ ಕಂಪನಿಗಳಿಗೆ ಇನ್ನಷ್ಟು ಬೆಂಬಲ ಸಿಕ್ಕ ಹಾಗೆ ಆಗಿದೆ ಎಂದರು.
ಒಕ್ಕೂಟದ ಗಂಡಸಿ ಸದಾನಂದ ಸ್ವಾಮಿ, ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಕಾರ್ಮಿಕರ ಪರ ನಿಲ್ಲಬೇಕಾಗಿದೆ. ಆದರೆ ಅವರ ನಡೆಯಿಂದ ಬಡ ಮತ್ತು ಮಧ್ಯ ವರ್ಗದ ಕಾರ್ಮಿಕರ ಆರ್ಥಿಕ ಸ್ಥಿತಿ ಹಾಳಾಗಲಿದೆ. ಹೀಗಾಘಿ ಅವರು ಈ ಕೂಡಲೇ ತಮ್ಮ ಹೇಳಿಕೆ ಮತ್ತು ಪತ್ರವನ್ನು ವಾಪಸ್ಸು ಪಡೆಯಬೇಕು ಎಂದು ಒತ್ತಾಯಿಸಿದರು.
-
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Bengaluru: ಶ್ರೀರಾಮ ನವಮಿ ಹಬ್ಬದ ಪ್ರಯುಕ್ತ ಮಾ.27ರಂದು ನಗರದಲ್ಲಿ ಮಾಂಸ ಮಾರಾಟ ಬಂದ್ಗೆ GBA ಆದೇಶ -
ಬೆಂಗಳೂರು ಇ-ಖಾತಾ ದಂಧೆ ಬಯಲು: ಬ್ರ್ಯಾಂಡ್ ಬೆಂಗಳೂರಿಗೆ ಆರ್ ಅಶೋಕ್ ತೀವ್ರ ಟೀಕೆ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
ಐಪಿಎಲ್ಗೂ ಮುನ್ನ ಆರ್ಸಿಬಿ ಹೊಸ ದಾಖಲೆ: 16,000 ಕೋಟಿಗೆ ಆದಿತ್ಯ ಬಿರ್ಲಾ ಗ್ರೂಪ್ ಪಾಲಾದ ರಾಯಲ್ ಚಾಲೆಂಜರ್ಸ್ ಬೆಂಗಳೂರು -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ












Click it and Unblock the Notifications