ಚಿತ್ರಗಳು : ಬೆಂಗಳೂರಿನ ರಸ್ತೆಗುಂಡಿಯಲ್ಲಿ ಮತ್ಸ್ಯಕನ್ಯೆ ಪ್ರತ್ಯಕ್ಷ!
ಬೆಂಗಳೂರು, ಅಕ್ಟೋಬರ್ 13 : ಉದ್ಯಾನ ನಗರಿ ಬೆಂಗಳೂರಿನಲ್ಲಿ ಕಳೆದ ರಾತ್ರಿ ಭಾರೀ ಮಳೆಯಾಗಿದೆ. ಶುಕ್ರವಾರ ಬೆಳಗ್ಗೆ ಮತ್ಸ್ಯಕನ್ಯೆ ಪ್ರತ್ಯಕ್ಷಳಾಗಿದ್ದು ಜನರು ಅಚ್ಚರಿಗೊಂಡಿದ್ದಾರೆ. ನಗರದ ರಸ್ತೆಯಲ್ಲಿ ಬಿದ್ದಿರುವ ಹೊಂಡದಲ್ಲಿ ಆಕೆ ಪ್ರತ್ಯಕ್ಷವಾಗಿದ್ದು, ಜನರು ಫೋಟೋ ತೆಗೆದುಕೊಳ್ಳುವುದರಲ್ಲಿ ಬ್ಯುಸಿಯಾದರು.
ಬೆಂಗಳೂರಿನ ರಸ್ತೆ ಗುಂಡಿಗಳ ಬಗ್ಗೆ ಭಾರೀ ಚರ್ಚೆ ನಡೆಯುತ್ತಿದೆ. 5 ದಿನದಲ್ಲಿ ಐವರು ನಗರದ ರಸ್ತೆ ಗುಂಡಿಗಳಿಂದಾಗಿ ಪ್ರಾಣ ಕಳೆದುಕೊಂಡಿದ್ದಾರೆ. ಕಲಾವಿದ ಬಾದಲ್ ನಂಜುಂಡಸ್ವಾಮಿ ರಸ್ತೆ ಗುಂಡಿಗಳ ವಿರುದ್ಧ ವಿನೂತನ ಪ್ರತಿಭಟನೆ ಮಾಡಿ ಬಿಬಿಎಂಪಿ ಗಮನ ಸೆಳೆದಿದ್ದಾರೆ.

ಶುಕ್ರವಾರ ಬೆಳಗ್ಗೆ ನಗರದ ಕಾಮರಾಜ ರಸ್ತೆ, ಕಬ್ಬನ್ ರಸ್ತೆ ಜಂಕ್ಷನ್ನಲ್ಲಿ ನಟಿ ಸೋನು ಗೌಡ ಅವರು ಮತ್ಸ್ಯಕನ್ಯೆ ವೇಷ ತೊಟ್ಟು ಬಿಬಿಎಂಪಿ ವಿರುದ್ಧ ಪ್ರತಿಭಟನೆ ಮಾಡಿ ಜನರ ಗಮನ ಸೆಳೆದರು. ಜಂಕ್ಷನ್ ನಲ್ಲಿನ ರಸ್ತೆ ಗುಂಡಿಯಲ್ಲಿ ಬಾದಲ್ ನಂಜುಂಡಸ್ವಾಮಿ ಈಜುಕೊಳ ಚಿತ್ರಿಸಿ, ಬಿಬಿಎಂಪಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
After! #kamarajroad #potholes #nammabengaluru pic.twitter.com/e1m7QRlDJz
— baadal nanjundaswamy (@baadalvirus) October 13, 2017
ಮುಂಜಾನೆಯೇ ಬಾದಲ್ ನಂಜುಂಡಸ್ವಾಮಿ ಕೆಲಸ ಆರಂಭಿಸಿದ್ದರು. 8.30ರ ವೇಳೆಗೆ ಅವರ ಕಲ್ಪನೆಯ ಚಿತ್ರ ಮೂಡಿಬಂದಿತು. ಮತ್ಸ್ಯಕನ್ಯೆ ವೇಷ ತೊಟ್ಟಿದ್ದ ಸೋನು ಗೌಡ ರಸ್ತೆ ಗುಂಡಿಯ ಬಳಿ ಬಂದರು. ಸಂಚಾರ ದಟ್ಟಣೆ ಆರಂಭವಾಗುವ ವೇಳೆಗೆ ಮತ್ಸ್ಯಕನ್ಯೆ ನೋಡಿದ ಜನರು ಮೊಬೈಲ್ನಲ್ಲಿ ಚಿತ್ರಗಳನ್ನು ಸೆರೆ ಹಿಡಿದರು....

ಹಲವು ವರ್ಷಗಳಿಂದ ಪ್ರತಿಭಟನೆ
ಬಾದಲ್ ನಂಜುಡಸ್ವಾಮಿ ಹಲವು ವರ್ಷಗಳಿಂದ ರಸ್ತೆ ಗುಂಡಿಗಳ ಸುತ್ತ ಕಲಾತ್ಮಕ ಚಿತ್ರಗಳನ್ನು ಬಿಡಿಸುವ ಮೂಲಕ ಪಾಲಿಕೆ ಅಧಿಕಾರಿಗಳನ್ನು ಎಚ್ಚರಿಸುವ ಕೆಲಸ ಮಾಡುತ್ತಿದ್ದಾರೆ.

ಮೈಸೂರಿನಲ್ಲಿಯೂ ಪ್ರತಿಭಟಿಸಿದ್ದರು
ಬೆಂಗಳೂರು ಮಾತ್ರವಲ್ಲ ಬಾದಲ್ ನಂಜುಂಡಸ್ವಾಮಿ ಅವರು ಮೈಸೂರು ನಗರದ ರಸ್ತೆಗಳಲ್ಲೂ ಕಲಾಕೃತಿಗಳನ್ನು ರಚಿಸಿ ಸ್ಥಳೀಯ ಆಡಳಿತವನ್ನು ಎಚ್ಚರಿಸುವ ಕೆಲಸ ಮಾಡಿದ್ದಾರೆ.

ನಾಯಂಡಹಳ್ಳಿಯಲ್ಲಿ ಪ್ರತಿಭಟನೆ
ನಗರದ ನಾಯಂಡಹಳ್ಳಿ ಜಂಕ್ಷನ್ ರಸ್ತೆ ಗುಂಡಿಯಲ್ಲಿ ಕೆಲವು ದಿನಗಳ ಹಿಂದೆ ಸುಂದರ ಕೊಳ ಚಿತ್ರಿಸಿ ಕಪ್ಪೆಯನ್ನು ತಂದು ಕೂರಿಸಿದ್ದರು. ಈ ಪ್ರತಿಭಟನೆಗೂ ಸೋನು ಗೌಡ ಅವರು ಸಹಕಾರ ನೀಡಿದ್ದರು.

ಪಾಲಿಕೆ ಅಧಿಕಾರಿಗಳು ಎಚ್ಚೆತ್ತಿದ್ದಾರೆ
ಬಾದಲ್ ಅವರ ಕಲಾಕೃತಿ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆದ ಮೇಲೆ ಬಿಬಿಎಂಪಿ ಅಧಿಕಾರಿಗಳು ಎಚ್ಚೆತ್ತು ಗುಂಡಿ ಮುಚ್ಚಿದ ಉದಾಹರಣೆಗಳು ಇವೆ.

15 ಸಾವಿರ ಗುಂಡಿಗಳು
ಬೆಂಗಳೂರು ನಗರದಲ್ಲಿ 15 ಸಾವಿರ ರಸ್ತೆ ಗುಂಡಿಗಳಿವೆ ಎಂದು ಬಿಬಿಎಂಪಿಯೇ ಹೇಳಿದೆ. ರಸ್ತೆ ಗುಂಡಿಗಳನ್ನು ಮುಚ್ಚುವ ಕಾರ್ಯವನ್ನು ಪಾಲಿಕೆ ಆರಂಭಿಸಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗುಂಡಿಗಳನ್ನು ಮುಚ್ಚಲು 15 ದಿನಗಳ ಗಡುವು ಕೊಟ್ಟಿದ್ದಾರೆ.
-
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Expressway: ಏಪ್ರಿಲ್ 1ರಿಂದ ರಾಜ್ಯಾದ್ಯಂತ ಟೋಲ್ ದರ ಏರಿಕೆ; ಬೆಂಗಳೂರು-ಮೈಸೂರು ಸೇರಿ ಈ ಪ್ರಮುಖ ಹೆದ್ದಾರಿಗಳಲ್ಲಿ ಸಂಚಾರ ದುಬಾರಿ -
KEA: ರಾಜ್ಯದ ವಸತಿ ಶಾಲೆಗಳ ಪ್ರವೇಶ ಪರೀಕ್ಷೆ, ಅಂತಿಮ ಅಂಕಪಟ್ಟಿ ಪ್ರಕಟ -
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಆಗಿ ಬದಲಾದ ಪೆರಿಫೆರಲ್ ರಿಂಗ್ ರೋಡ್: 2029ರ ವೇಳೆಗೆ ನಗರದ ಟ್ರಾಫಿಕ್ಗೆ ಸಿಗಲಿದೆ ಮುಕ್ತಿ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Bengaluru: ಶ್ರೀರಾಮ ನವಮಿ ಹಬ್ಬದ ಪ್ರಯುಕ್ತ ಮಾ.27ರಂದು ನಗರದಲ್ಲಿ ಮಾಂಸ ಮಾರಾಟ ಬಂದ್ಗೆ GBA ಆದೇಶ












Click it and Unblock the Notifications