ಬೆಂಗಳೂರು ರಸ್ತೆ ಗುಂಡಿಗಳು, ಓದುಗರು ಕಳಿಸಿದ ಚಿತ್ರಗಳು
ಬೆಂಗಳೂರು, ಅಕ್ಟೋಬರ್ 11 : ಬೆಂಗಳೂರಿನ ರಸ್ತೆ ಗುಂಡಿಗಳಿಗೆ ಇದುವರೆಗೂ 5 ಜನರು ಬಲಿಯಾಗಿದ್ದಾರೆ. ಗುಂಡಿಗಳನ್ನು ಮುಚ್ಚಿಲ್ಲ ಎಂದು ಬಿಬಿಎಂಪಿಗೆ ಜನರು ಪ್ರತಿದಿನ ಮಂಗಳಾರತಿ ಮಾಡುತ್ತಿದ್ದಾರೆ. ಹಲವು ರಸ್ತೆಗಳ ಗುಂಡಿಗಳು ಇನ್ನೂ ಬಾಯ್ತೆರೆದು ಕೂತಿದ್ದು, ಅಪಾಯಕ್ಕೆ ಆಹ್ವಾನ ನೀಡುತ್ತಿವೆ.
ಬೆಂಗಳೂರು ನಗರದಲ್ಲಿ ಸುಮಾರು 15 ಸಾವಿರ ಗುಂಡಿಗಳಿವೆ ಎಂದು ಬಿಬಿಎಂಪಿ ಅಂದಾಜಿಸಿದೆ. ಗುಂಡಿ ಮುಚ್ಚುವ ಕಾರ್ಯವನ್ನು ಆರಂಭಿಸಲಾಗಿದೆ. ನಗರದ ರಸ್ತೆಗಳನ್ನು ಗುಂಡಿ ಮುಕ್ತವಾಗಿ ಮಾಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 15 ದಿನಗಳ ಗಡುವು ನೀಡಿದ್ದಾರೆ.
ನಾಯಂಡಹಳ್ಳಿ, ಸಂಪಂಗಿ ರಾಮನಗರ, ಮಾಗಡಿ ಮುಖ್ಯರಸ್ತೆ ಸೇರಿದಂತೆ ನಗರದ ವಿವಿಧ ಪ್ರದೇಶಗಳಲ್ಲಿ ಗುಂಡಿಗಳನ್ನು ಮಚ್ಚಲು ಬಿಬಿಎಂಪಿ ಕಾರ್ಯಾಚರಣೆ ಆರಂಭಿಸಿದೆ. ನಗರದ ವಿವಿಧ ಭಾಗಗಳಲ್ಲಿ ಗುಂಡಿಗಳು ಇನ್ನೂ ಬಾಯ್ತೆರೆದು ಕೂತಿವೆ. ಒನ್ ಇಂಡಿಯಾ ಕನ್ನಡದ ಓದುಗರು ಅದರ ಚಿತ್ರಗಳನ್ನು ಕಳುಹಿಸಿದ್ದಾರೆ. ಓದುಗರು ಕಳುಹಿಸಿದ ಚಿತ್ರಗಳು ಇಲ್ಲಿವೆ....

ನಾಗರಬಾವಿ ಕೆಎಲ್ಇ ಸ್ಕೂಲ್ ರಸ್ತೆ
ಬೆಂಗಳೂರಿನ ನಾಗರಬಾವಿ ಬಿಡಿಎ ಕಾಂಪ್ಲೆಕ್ಸ್ ಹಿಂಭಾಗದ ರಸ್ತೆ ಸಂಪೂರ್ಣವಾಗಿ ಗುಂಡಿಗಳಿಂದ ತುಂಬಿ ಹೋಗಿದೆ. ಕಳೆದ ಐದು ವರ್ಷಗಳಿಂದ ರಸ್ತೆಯನ್ನು ಸರಿಯಾಗಿ ದುರಸ್ಥಿ ಮಾಡಿಲ್ಲ ಎಂದು ಸ್ಥಳೀಯರು ಆರೋಪ ಮಾಡುತ್ತಿದ್ದಾರೆ. ಕೆಎಲ್ಇ ಸ್ಕೂಲ್ ರಸ್ತೆಯ ಚಿತ್ರವನ್ನು ಓದುಗರು ಕಳುಹಿಸಿದ್ದಾರೆ.

ನಾಗವಾರ ವಾರ್ಡ್ ನಂ 6
ಬಿಬಿಎಂಪಿಯ ವಾರ್ಡ್ ನಂಬರ್ 6ರ ರಸ್ತೆ ಸಂಪೂರ್ಣವಾಗಿ ಹದಗೆಟ್ಟಿದ್ದು ಗುಂಡಿಗಳಿಂದ ತುಂಬಿ ಹೋಗಿದೆ. ಮಳೆ ನೀರು ರಸ್ತೆಯಲ್ಲಿ ತುಂಬಿಕೊಂಡಿದೆ. ಒಳಚರಂಡಿ ನೀರು ಸಹ ರಸ್ತೆ ಮೇಲೆ ಹರಿಯುತ್ತಿದೆ ಎಂದು ಸ್ಥಳೀಯರು ಹೇಳಿದ್ದು ಚಿತ್ರವನ್ನು ಕಳುಹಿಸಿಕೊಟ್ಟಿದ್ದಾರೆ.

ಕಾಟನ್ ಪೇಟೆ ರಸ್ತೆ ಸ್ಥಿತಿ
ಗಾಂಧಿ ನಗರ ವಿಧಾನಸಭಾ ಕ್ಷೇತ್ರದ ಕಾಟನ್ ಪೇಟೆ (ವಾರ್ಡ್ ನಂಬರ್ 29) ಯ ಬೇಲಿಮಠ ರಸ್ತೆಯ ಸ್ಥಿತಿ ನೋಡಿ. ರಸ್ತೆಗಳ ತುಂಬಾ ಗುಂಡಿಗಳು ಬಿದ್ದಿವೆ. ಕಸವನ್ನು ಎಲ್ಲೆಂದರಲ್ಲಿ ಎಸೆಯಲಾಗಿದೆ. ನಮ್ಮ ಓದುಗರು ರಸ್ತೆಯ ಚಿತ್ರವನ್ನು ಕಳುಹಿಸಿದ್ದಾರೆ.

ಕಾಡಗೋಡಿ ರಸ್ತೆ
ಹೋಪ್ ಫಾರ್ಮ್ ಮತ್ತು ಕಾಡುಗೋಡಿ ಬ್ರಿಡ್ಜ್ ನಡುವಿನ ರಸ್ತೆ ಹದಗೆಟ್ಟಿದೆ. ರಸ್ತೆಯನ್ನು ರಿಪೇರಿ ಮಾಡಿಸಿ ಎಂದು ಜನರು ಬಿಬಿಎಂಪಿಯನ್ನು ಒತ್ತಾಯಿಸಿದ್ದಾರೆ.

ವಿಶ್ವಪ್ರಿಯ ಲೇಔಟ್
ಬೇಗೂರಿನ ವಿಶ್ವಪ್ರಿಯ ಲೇಔಟ್ ರಸ್ತೆಯಲ್ಲಿ ಮಳೆ ನೀರು ಸರಿಯಾಗಿ ರಾಜಕಾಲುವೆಗೆ ಹರಿದು ಹೋಗುತ್ತಿಲ್ಲ. ಇದರಿಂದಾಗಿ ರಸ್ತೆಯಲ್ಲಿ ನೀರು ನಿಂತು ದೊಡ್ಡ ಗುಂಡಿಗಳು ನಿರ್ಮಾಣವಾಗಿವೆ. ಇದರಿಂದ ವಾಹನ ಸವಾರರು ಮತ್ತು ಪಾದಚಾರಿಗಳು ಸಂಕಷ್ಟ ಅನುಭವಿಸುತ್ತಿದ್ದಾರೆ.
-
Jobs: ಹೈಕೋರ್ಟ್ನಲ್ಲಿ ಕೆಲಸ ಬೇಕೆ? 70 ಅಸಿಸ್ಟೆಂಟ್ ಕೋರ್ಟ್ ಸೆಕ್ರೆಟರಿ ಹುದ್ದೆಗಳಿಗೆ ಅರ್ಜಿ ಆಹ್ವಾನ, ಇಂದೇ ಅರ್ಜಿ ಸಲ್ಲಿಸಿ -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
Bengaluru Rent: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಬಾಡಿಗೆ ಮನೆಗಳು ಸಿಗುವ 6 ಪ್ರಮುಖ ಪ್ರದೇಶಗಳು -
ನೌಕರಿ ಬಿಟ್ಟು ಸ್ವಂತ ಉದ್ಯಮ: ಹುಣಸೆ ಸಿಹಿತಿಂಡಿಗೆ ಪೇಟೆಂಟ್ ಪಡೆದ ಬೈಲಹೊಂಗಲದ ಟೆಕ್ಕಿ; 17 ದೇಶಗಳಿಗೆ ರಫ್ತು -
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು












Click it and Unblock the Notifications