ಕಸ ಹಾಕೋ ಜಾಗದಲ್ಲಿ ರಂಗೋಲಿ ಬಿಡಿಸಿ ಗಾಂಧಿಗಿರಿ ತೋರಿದ ಪೌರಕಾರ್ಮಿಕರು
ಬೆಂಗಳೂರು, ಅಕ್ಟೋಬರ್ 31: ತ್ಯಾಜ್ಯ ಎಸೆಯೋ ಮುನ್ನ ಈ ರಂಗೋಲಿನಾದ್ರು ನೋಡ್ರಪ್ಪಾ, ಕಸ ಬಿಸಾಡುವ ಮನಸಾಗಲ್ಲ ಎಂದು ಹೇಳುತ್ತಾ ತ್ಯಾಜ್ಯ ಎಸೆಯುವ ಜಾಗದಲ್ಲಿ ರಂಗೋಲಿ ಬಿಡಿಸುವ ಮೂಲಕ ಬಿಬಿಎಂಪಿ ಪೌರಕಾರ್ಮಿಕರು ಸ್ವಚ್ಛತೆ ಬಗ್ಗೆ ಜಾಗೃತಿಗೆ ಮುಂದಾಗಿದ್ದಾರೆ.
ಬೆಂಗಳೂರನ್ನು ಕಸಮುಕ್ತ ನಗರವನ್ನಾಗಿ ಮಾಡಲು ಹೈಕೋರ್ಟ್ ಬಿಬಿಎಂಪಿಗೆ ಪದೇ ಪದೇ ಚಾಟಿ ಬೀಸುತ್ತಿದೆ. ಅಷ್ಟೇ ಅಲ್ಲದೆ ಅಕ್ಟೋಬರ್ 31ರೊಳಗೆ ಕಸಮುಕ್ತ ನಗರವನ್ನಾಗಿ ಮಾಡಲು ಅಂತಿಮ ಗಡುವು ನೀಡಿದೆ.
ಬಿಬಿಎಂಪಿಯ ಪ್ರತಿಯೊಂದು ವೈಫಲ್ಯವನ್ನು ಹುಡುಕುತ್ತಿರುವ ಹೈಕೋರ್ಟ್ ಒಂದೊಂದೇ ವಿಚಾರವನ್ನು ಕೈಗೆತ್ತಿಕೊಂಡು ಸರಿಪಡಿಸಿಉವ ಪ್ರಯತ್ನ ಮಾಡುತ್ತಿದೆ. ಹಾಗೆಯೇ ಬಿಬಿಎಂಪಿಯು ಕೂಡ ತನಗಾದ ಪ್ರಯತ್ನವನ್ನು ಆರಂಭಿಸಿದೆ. ಕಸ ಮುಕ್ತ ನಗರವನ್ನಾಗಿಸಲು ಪೌರಕಾರ್ಮಿಕರು ಉಪಾಯೊಂದನ್ನು ಮಾಡಿದ್ದು, ತ್ಯಾಜ್ಯ ಎಸೆಯುವ ಜಾಗದಲ್ಲಿ ರಂಗೋಲಿಯನ್ನು ಹಾಕುವ ಮೂಲಕ ಜಾಗೃತಿ ಮೂಡಿಸುವ ಕೆಲಸವನ್ನು ಮಾಡುತ್ತಿದ್ದಾರೆ.

ಇದಕ್ಕೆ ಪೂರಕವಾಗಿ ಬನ್ನೇರುಘಟ್ಟ ರಸ್ತೆಯಲ್ಲಿರುವ ಐಐಎಂಬಿ ಕಾಂಪೌಂಡ್ ಬದಿಯಲ್ಲಿರುವ ಕಸದ ಬ್ಲಾಕ್ಸ್ಪಾಟ್ನಲ್ಲಿ ಪೌರಕಾರ್ಮಿಕರು ರಂಗೋಲಿ ಬಿಡಿಸಿ ಗಮನ ಸೆಳೆದಿದ್ದಾರೆ. ಅದೇ ರೀತಿ ನಗರದ ವಿವಿಧ ಭಾಗಗಳಲ್ಲಿ ಇದೇ ರೀತಿಯ ಪ್ರಯತ್ನವನ್ನು ಮುಂದುವರೆಸಿದ್ದಾರೆ. ಹಾಗೆಂದ ಮಾತ್ರಕ್ಕೆ ಕಸ ಹಾಕುವವರ ಸಂಖ್ಯೆಯೇನೂ ಕಡಿಮೆ ಆಗಿಲ್ಲ ಆದರೆ ಇದೊಂದು ವಿನೂತನ ಪ್ರಯತ್ನವಾಗಿದೆ.
ಐಐಎಂಬಿ ಸುತ್ತಮುತ್ತಲಿನ ನಿವಾಸಿಗಳು ನಿತ್ಯ ಕಸವನ್ನು ತಂದು ಕಾಂಪೌಂಡ್ ಬಳಿಯಲ್ಲಿ ಬಿಸಾಡುತ್ತಿದ್ದರು. ತ್ಯಾಜ್ಯವನ್ನು ಕಾಂಪೌಂಡ್ ಬಳಿ ಹಾಕದಂತೆ ಪಾಲಿಕೆ ಅಧಿಕಾರಿಗಳು ಮನವಿ ಮಾಡಿಕೊಂಡರೂ ಪ್ರಯೋಜನವಾಗಿರಲಿಲ್ಲ. ಇಲ್ಲಿ ಕಸ ಹಾಕದಂತೆ ನಿತ್ಯ ಜನರಲ್ಲಿ ಮನವಿ ಮಾಡಿಕೊಳ್ಳುತ್ತಲೇ ಇದ್ದೇವೆ ಎಂದು ಪೌರಕಾರ್ಮಿಕರು ತಿಳಿಸಿದ್ದಾರೆ.
ಪರ ಕಾರ್ಮಿಕರು ಕಸವನ್ನು ತೆರವುಗೊಳಿಸಿ ಬಳಿಕ ಮತ್ತೆ ತಂದು ಸುರಿಯುತ್ತಿದ್ದಾರೆ ಹಾಗಾಗಿ ಕಾರ್ಮಿಕರು ರಂಗೋಲಿ ಬಿಡಿಸುವಂತಹ ಕ್ರಮ ಕೈಗೊಂಡಿದ್ದಾರೆ.
-
ಬೆಂಗಳೂರು ಇ-ಖಾತಾ ದಂಧೆ ಬಯಲು: ಬ್ರ್ಯಾಂಡ್ ಬೆಂಗಳೂರಿಗೆ ಆರ್ ಅಶೋಕ್ ತೀವ್ರ ಟೀಕೆ -
ಬೆಂಗಳೂರು ಉತ್ತರ: ಮಳೆಗಾಲಕ್ಕೂ ಮುನ್ನ ಮುನ್ನೆಚ್ಚರಿಕೆ ಕ್ರಮ, ರಸ್ತೆ ಅಗಲೀಕರಣ, ಟಿ.ಡಿ.ಆರ್ ಬಗ್ಗೆ ಮಹತ್ವದ ಚರ್ಚೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
Bengaluru: 50 ವಾರ್ಡ್ಗಳಲ್ಲಿ ಕಸ ವಿಲೇವಾರಿ ಸ್ಥಗಿತ; ವೇತನ ವಿಳಂಬಕ್ಕೆ ಮುನಿದು ಸಾಮೂಹಿಕ ರಜೆ ಹಾಕಿದ ಕಾರ್ಮಿಕರು -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD











Click it and Unblock the Notifications