ಉತ್ತಿಷ್ಠ ಭಾರತದಿಂದ ಗೀತೆಯ ಕುರಿತು ಜಾಗೃತಿ ಅಭಿಯಾನ
ಮಹಾಭಾರತ ಯುದ್ಧದ ಸಮಯದಲ್ಲಿ ಅರ್ಜುನನಿಗೆ ಶ್ರೀಕೃಷ್ಣ ಉಪದೇಶಿಸಿದ ಭಗವದ್ಗೀತೆ ಹಿಂದೂಗಳಿಗೆ ಮಾತ್ರವಲ್ಲ ಸರ್ವರಿಂದಲೂ ಮಾನ್ಯವಾದ ಪವಿತ್ರ ಗ್ರಂಥ. ಇತ್ತೀಚಿನ ದಿನಗಳಲ್ಲಿ ಕೆಲವರು ಭಗವದ್ಗೀತೆಯನ್ನೇ ಸುಡಬೇಕು ಎಂಬೆಲ್ಲ ಹೇಳಿಕೆ ನೀಡಿ ಪ್ರಚೋದನೆ ನೀಡುತ್ತಿದ್ದಾರೆ. ಈ ದೃಷ್ಟಿಯಿಂದ ಮತ್ತು ಜನರಲ್ಲಿ ಜಾಗೃತಿ ಮೂಡಿಸಬೇಕು ಜನರಿಗೆ ಗೀತೆಯ ಮಹತ್ವವನ್ನು ಇನ್ನಷ್ಟು ತಿಳಿಸಬೇಕು ಎಂಬ ಉದ್ದೇಶದಿಂದ ಉತ್ತಿಷ್ಠ ಭಾರತ ಸಂಘಟನೆ ವಿನೂತನ ಅಭಿಯಾನವನ್ನು ಬೆಂಗಳೂರಿನಲ್ಲಿ ಮಾ.29ರಂದು ಆರಂಭಿಸಲಿದೆ. ಈ ಸಂಗತಿ ಕುರಿತು ಪತ್ರಿಕಾ ಹೇಳಿಕೆ ಇಲ್ಲಿದೆ.

ಆತ್ಮೀಯರೆ,
ಉತ್ತಿಷ್ಠ ಭಾರತ ದೇಶಭಕ್ತ ಸಮಾಜಸೇವೆಯ ಸಂಘಟನೆಯಾಗಿದ್ದು, ತನ್ನ ವಿನೂತನ ವಿಶಿಷ್ಟ ಕಾರ್ಯಕ್ರಮಗಳ ಮೂಲಕ ಜನಜಾಗೃತಿಯನ್ನು ಮೂಡಿಸುತ್ತಿದೆ. ಅದರಲ್ಲೂ ಯುವಕರಲ್ಲಿ ದೇಶಭಕ್ತಿ ಮತ್ತು ಸಾಮಾಜಿಕ ಕಳಕಳಿಯನ್ನು ಬೆಳೆಸುವ ಕಾರ್ಯವನ್ನು ಮಾಡುತ್ತಿದೆ.
ಭಗವದ್ಗೀತೆ ಭಾರತದ ಶ್ರೇಷ್ಠ ಗ್ರಂಥವಾಗಿದ್ದು, ವಿಶ್ವವ್ಯಾಪಿ ಮನ್ನಣೆಯನ್ನು ಗಳಿಸಿದೆ. ಅದರ ಸಂದೇಶಗಳು ಮತ್ತು ತತ್ತ್ವಗಳು ಎಲ್ಲರನ್ನೂ ಮುಟ್ಟಬೇಕು. ಇತ್ತೀಚಿನ ದಿನಗಳಲ್ಲಿ ಭಗವದ್ಗೀತೆಯನ್ನು ಹಲವರು ವಿರೋಧಿಸುತ್ತಿದ್ದಾರೆ. ಪವಿತ್ರ ಗ್ರಂಥವಾದ ಗೀತೆಯನ್ನು ಸಾರ್ವಜನಿಕವಾಗಿ ಸುಡಬೇಕೆಂದು ಹೇಳಿಕೆಯನ್ನು ನೀಡುತ್ತಿದ್ದಾರೆ.
ಸಾಕಷ್ಟು ಜನರಿಗೆ ಗೀತೆಯ ಸಾರ ಮತ್ತು ಅದರ ಮಹತ್ವ ತಿಳಿದಿಲ್ಲ. ಈ ನಿಟ್ಟಿನಲ್ಲಿ ಪ್ರತಿಯೊಬ್ಬರಿಗೂ ಭಗವದ್ಗೀತೆಯ ಸಾರ ಮತ್ತು ತತ್ತ್ವವನ್ನು ತಿಳಿಸಲು ಉತ್ತಿಷ್ಠ ಭಾರತ "ಪವರ್ ಟು ಚೇಂಜ್ ದಿ ವರ್ಲ್ಡ್" ಎಂಬ ಭಗವದ್ಗೀತಾ ಅಭಿಯಾನವನ್ನು ಕೈಗೆತ್ತಿಕೊಂಡಿದೆ.
ಪ್ರತಿ ಮನೆಗೆ ಉಚಿತವಾಗಿ ಭಗವದ್ಗೀತೆಯನ್ನು ನೀಡಿ, ಅದರ ಮಹತ್ವದ ಕುರಿತು ಜನರಲ್ಲಿ ಜಾಗೃತಿ ಮೂಡಿಸುವುದು ಈ ಅಭಿಯಾನದ ಮುಖ್ಯ ಉದ್ದೇಶ. ಇದರ ಜೊತೆಗೆ ಆಸಕ್ತರಿಗೆ ಗೀತೆಯನ್ನು ಕಲಿಸುವ ಪ್ರಯತ್ನವನ್ನು ನಾವು ಮಾಡಲಿದ್ದೇವೆ. ಒಂದು ಲಕ್ಷ ಮನೆಗೆ ಗೀತೆಯನ್ನು ತಲುಪಿಸುವ ಗುರಿಯನ್ನು ಅಭಿಯಾನ ಹೊಂದಿದೆ.
ಈ ಅಭಿಯಾನಕ್ಕೆ ಇದೇ ತಿಂಗಳು ಮಾರ್ಚ್ 29 ಭಾನುವಾರದಂದು ಬೆಂಗಳೂರಿನ ರಾಗಿಗುಡ್ಡ ಪ್ರಸನ್ನ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ಸಂಜೆ ಚಾಲನೆ ದೊರೆಯಲಿದೆ. ಈ ಮಹತ್ಕಾರ್ಯಕ್ಕೆ ಉತ್ತಿಷ್ಠ ಭಾರತ ಎಲ್ಲರ ಸಹಕಾರವನ್ನು ಬಯಸುತ್ತದೆ.
ಇಂತಿ,
ಉತ್ತಿಷ್ಠ ಭಾರತ ತಂಡ
ಹೆಚ್ಚಿನ ಮಾಹಿತಿಗೆ ಸಂಪರ್ಕಿಸಿ : ಶ್ರೀನಿವಾಸ್ - 9036778840, ವಿಜಯ್ - 9880688133
ಸೂಚನೆ : ಆಸಕ್ತರು Sponsor Gita ಕಾರ್ಯಕ್ರಮದಲ್ಲಿ ಪಾಲ್ಗೊಂಡು ಈ ಅಭಿಯಾನಕ್ಕೂ ಸಹಾಯಹಸ್ತ ನೀಡಬಹುದು. ವಿವರಗಳು ಈ ವೆಬ್ ವಿಳಾಸದಲ್ಲಿವೆ.
-
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Bengaluru: ಶ್ರೀರಾಮ ನವಮಿ ಹಬ್ಬದ ಪ್ರಯುಕ್ತ ಮಾ.27ರಂದು ನಗರದಲ್ಲಿ ಮಾಂಸ ಮಾರಾಟ ಬಂದ್ಗೆ GBA ಆದೇಶ -
ಬೆಂಗಳೂರು ಇ-ಖಾತಾ ದಂಧೆ ಬಯಲು: ಬ್ರ್ಯಾಂಡ್ ಬೆಂಗಳೂರಿಗೆ ಆರ್ ಅಶೋಕ್ ತೀವ್ರ ಟೀಕೆ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
ಐಪಿಎಲ್ಗೂ ಮುನ್ನ ಆರ್ಸಿಬಿ ಹೊಸ ದಾಖಲೆ: 16,000 ಕೋಟಿಗೆ ಆದಿತ್ಯ ಬಿರ್ಲಾ ಗ್ರೂಪ್ ಪಾಲಾದ ರಾಯಲ್ ಚಾಲೆಂಜರ್ಸ್ ಬೆಂಗಳೂರು -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ












Click it and Unblock the Notifications