ಬೆಂಗಳೂರಿಗೆ ಗ್ಯಾಸ್ ಬೆನ್ನಲ್ಲೇ ಕರೆಂಟ್ ಶಾಕ್! ಯಲಹಂಕ ಅನಿಲ ವಿದ್ಯುತ್ ಸ್ಥಾವರ ಬಂದ್; ಕತ್ತಲಿನತ್ತ ಸಿಲಿಕಾನ್ ಸಿಟಿ..
ಬೆಂಗಳೂರು: ರಾಜಧಾನಿ ಬೆಂಗಳೂರಲ್ಲಿ ಕೇವಲ ಅನಿಲ ಪೂರೈಕೆ ಸಮಸ್ಯೆ ಮಾತ್ರವಲ್ಲದೇ ಹೊಸದೊಂದು ಸಮಸ್ಯೆ ಸೃಷ್ಟಿಯಾಗುವ ನಿರೀಕ್ಷೆ ಇದೆ. ಎಲ್ಪಿಜಿ ಪೂರೈಕೆ ಬಿಕ್ಕಟ್ಟು ಜೊತೆಗೆ ಬೇಸಿಗೆ ಹಿನ್ನೆಲೆಯಲ್ಲಿ ಗರಿಷ್ಠ ವಿದ್ಯುತ್ ಬೇಡಿಕೆ ಪೂರೈಕೆ ಸವಾಲು ಎದುರಾಗಲಿದೆ. ಅನಿಲ ಸರಬಾಜುವಿನಲ್ಲಿ ವ್ಯತ್ಯಯವಾದ ಕಾರಣಕ್ಕೆ ಕಾರಣಕ್ಕೆ ಯಲಹಂಕದಲ್ಲಿರುವ ವಿದ್ಯುತ್ ಉತ್ಪಾದನಾ ಸ್ಥಾವರವು ತಾತ್ಕಾಲಿಕವಾಗಿ ಬಂದ್ ಆಗಿದೆ. ಈ ಮೂಲಕ ಬೆಂಗಳೂರಿಗೆ ಮತ್ತೊಂದು ಸಮಸ್ಯೆ ಎದುರಾಗುವ ಆತಂಕ ಎದುರಾಗಿದೆ.
ಬೆಂಗಳೂರಿನ ಯಲಹಂಕ ಅನಿಲ ವಿದ್ಯುತ್ ಸ್ಥಾವರವು ಅನಿಲ ಪೂರೈಕೆ ಕೊರತೆಯಿಂದಾಗಿ ಕಾರ್ಯಾಚರಣೆ ಬಂದ್ ಮಾಡಿದೆ. ಬೇಸಿಗೆ ಅವಧಿಯಾದ ಡಿಸೆಂಬರ್ ಮತ್ತು ಏಪ್ರಿಲ್ ನಡುವಿನ ಗರಿಷ್ಠ ವಿದ್ಯುತ್ ಬೇಡಿಕೆಯನ್ನು ನಿರ್ವಹಿಸುವಲ್ಲಿ ಈ ಸ್ಥಾವರವು ಮಹತ್ವದ ಪಾತ್ರ ವಹಿಸುತ್ತಿತ್ತು. ಇದೀಗ ಸ್ಥಾವರದ ಕಾರ್ಯಾಚರಣೆಗೆ ಈ ಅನಿಲ ಬಿಕ್ಕಟ್ಟಿನ ತೊಂದರೆ ಆಗಿದೆ. ಹೀಗಾಗಿ ಬೇಸಿಗೆಯಲ್ಲಿ ವಿದ್ಯುತ್ ಪೂರೈಸಬೇಕಿದ್ದ ಸ್ಥಾವರವು ಸ್ಥಗಿತಗೊಂಡಿದೆ. ಈ ಮೂಲಕ ವಿದ್ಯುತ್ ಪೂರೈಕೆ ಕೊರತೆ ಸಹ ಎದುರಾಗುವ ಸಾಧ್ಯತೆ ದಟ್ಟವಾಗಿದೆ.

ಮಧ್ಯಪ್ರಾಚ್ಯದ ಯುದ್ಧ ಪರಿಸ್ಥಿತಿ ಉಲ್ಬಣಗೊಂಡಿದೆ. ಹಾರ್ಮುಜ್ ಜಲಸಂಧಿ ಇದೀಗ ಯುದ್ಧದ ಪ್ರಮುಖ ಕೇಂದ್ರಬಿಂದುವಾಗಿದೆ. ಈ ಕೊಲ್ಲಿ ಮಾರ್ಗವಾಗಿ ಬರಬೇಕಿದ್ದ ತೈಲ ಟ್ಯಾಂಕರ್ಗಳ ಸಂಚಾರಕ್ಕೆ ನಿರ್ಬಂಧ ಹೇರಿರುವ ಇರಾನ್ ಮೇಲೆ ಯುಎಸ್-ಇಸ್ರೇಲ್ ಕ್ಷಿಪಣಿ ದಾಳಿ ಮುಂದುವರಿಸಿವೆ. ಸಂಘರ್ಷ ಮುಂದುವರಿದ ಪರಿಣಾಮ ಭಾರತ ಮಾತ್ರವಲ್ಲದೇ ಜಾಗತಿಕವಾಗಿ ಅನಿಲ ಪೂರೈಕೆಯಲ್ಲಿ ಸಮಸ್ಯೆ ಆಗಿದೆ.
ಮಾರ್ಚ್ 12ರಿಂದ ಸ್ಥಾವರಕ್ಕೆ ಅನಿಲ ಪೂರೈಕೆ ಸ್ಥಗಿತ
ಇದರ ಪ್ರಭಾವ ಕರ್ನಾಟಕದ ಮೇಲು ಆಗಿದೆ. ಬೆಂಗಳೂರಿನ ಯಲಹಂಕದಲ್ಲಿದ್ದ ಈ ಸ್ಥಾವರವು ಮಾರ್ಚ್ 12 ರಂದು ಬೆಳಗ್ಗೆ 6:00 ಗಂಟೆಗೆ ಗ್ಯಾಸ್ ಅಥಾರಿಟಿ ಆಫ್ ಇಂಡಿಯಾ ಲಿಮಿಟೆಡ್ (GAIL) ಘಟಕಕ್ಕೆ ಅನಿಲ ಪೂರೈಕೆಯನ್ನು ನಿಲ್ಲಿಸಿದ್ದಾಗಿ ತಿಳಿಸಿದೆ. ಹೀಗಾಗಿ ಸ್ಥಾವರ ಕಾರ್ಯ ನಿರ್ವಹಣೆ ನಿಂತಿದೆ. ಇದರಿಂದಾಗಿ ಬೇಸಿಗೆ ವೇಳೆ ಅಗತ್ಯವಾದ ವಿದ್ಯುತ್ ಪೂರೈಕೆಯ ಉಂಟಾಗಲಿದೆ. ಒಟ್ಟು 370 ಮೆಗಾವ್ಯಾಟ್ ವಿದ್ಯುತ್ ಉತ್ಪಾದನಾ ಸಾಮರ್ಥ್ಯ ಹೊಂದಿದೆ. 236.82 ಮೆಗಾವ್ಯಾಟ್ ಅನಿಲ ಟರ್ಬೈನ್ ಮೂಲಕ ಮತ್ತು 133.22 ಮೆಗಾವ್ಯಾಟ್ ಉಗಿ ಟರ್ಬೈನ್ ಜನರೇಟರ್ ಮೂಲಕ ಉತ್ಪಾದಿಸಲಾಗುತ್ತಿದೆ.
ಘಟಕದ ವಾರ್ಷಿಕ ವಿದ್ಯುತ್ ಉತ್ಪಾದನೆ ಎಷ್ಟು?
ಈ ಸ್ಥಾವರವು ವಾರ್ಷಿಕವಾಗಿ ಸುಮಾರು 2,600 ರಿಂದ 2,700 ಮಿಲಿಯನ್ ಯೂನಿಟ್ ವಿದ್ಯುತ್ ಉತ್ಪಾದಿಸುವ ಸಾಮರ್ಥ್ಯದ ಸ್ಥಾವರ ಅನಿಲ ಪೂರೈಕೆ ಇಲ್ಲದೇ ತಾತ್ಕಾಲಿಕವಾಗಿ ಸ್ಥಗಿತವಾಗಿದ್ದರಿಂದ ಬೆಂಗಳೂರು ಅನಿಲ ಬಿಕ್ಕಟ್ಟಿನ ನಡುವೆ ಪ್ರಮುಖ ವಿದ್ಯುತ್ ಪೂರೈಕೆಯಲ್ಲೂ ಸಮಸ್ಯೆ ಎದುರಿಸುವ ಸಾಧ್ಯತೆ ಇದೆ.
ಇತ್ತೀಚೆಗೆ ವಿದ್ಯುತ್ ದರ ಏರಿಕೆಗೆ ಮುಂದಾಗಿರುವ ರಾಜ್ಯ ಸರ್ಕಾರ ವಿದ್ಯುತ್ ಕೊರತೆ ಸಮಸ್ಯೆಯ ಪರಿಸ್ಥಿತಿಯನ್ನು ನಿರ್ವಹಿಸಲು ಸಿದ್ಧವಾಗಿದೆ. ಈ ಅಡಚಣೆ ಕೇವಲ ಅನಿರೀಕ್ಷಿತ. ಬೇಸಿಗೆಯಲ್ಲಿ ಹೆಚ್ಚುತ್ತಿರುವ ಬೇಡಿಕೆ ಪೂರೈಕೆಗೆ ಈಗಾಗಲೇ ಕ್ರಮ ಕೈಗೊಳ್ಳಲಾಗಿದೆ ಎಂದು ಇಂಧನ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ. ಸಚಿವ ಕೆ.ಎಚ್.ಮುನಿಯಪ್ಪ ಅವರು ಕೊಟ್ಟ ಭರವಸೆಯಂತೆ ಒಂದು ವಾರದಲ್ಲಿ ಅನಿಲ ಸರಬರಾಜು ಯಥಾ ಸ್ಥಿತಿಯಲ್ಲಿ ಮುಂದುವರಿದರೆ ಬೆಂಗಳೂರಿಗೆ ಯಾವುದೇ ಸಮಸ್ಯೆ ಆಗುವುದಿಲ್ಲ ಎನ್ನಲಾಗಿದೆ.
-
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ













Click it and Unblock the Notifications