Bengaluru Power Cut: ಬೆಂಗಳೂರಿನ ಈ ಪ್ರದೇಶಗಳಲ್ಲಿ ಫೆಬ್ರವರಿ 14 & 15ರಂದು ಕರೆಂಟ್ ಕಟ್
Bengaluru Power Cut: ವಿದ್ಯುತ್ಗೆ ಸಂಬಂಧಿಸಿದ ಕಾಮಗಾರಿ ನಡೆಯುವ ಸ್ಥಳ ಹಾಗೂ ಅತೀ ಹೆಚ್ಚು ಮಳೆಯಾಗುವ ಪ್ರದೇಶಗಳಲ್ಲಿ ಮುಂಜಾಗ್ರತಾ ಕ್ರಮವಾಗಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಮಾಡಲಾಗುತ್ತದೆ. ಹಾಗೆಯೇ ಫೆಬ್ರವರಿ 14 & 15ರಂದು ನಗರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಆಗಲಿದೆ ಎಂದು ಬೆಸ್ಕಾಂ ಮಾಹಿತಿ ನೀಡಿದೆ. ಹಾಗಾದರೆ ಇದಕ್ಕೆ ಕಾರಣ ಏನು ಹಾಗೂ ಎಲ್ಲೆಲ್ಲಿ ಎನ್ನುವ ಮಾಹಿತಿಯನ್ನು ಇಲ್ಲಿ ತಿಳಿಯಿರಿ.
66/11 ಕೆವಿ ಎಲಿಟಾ ಪ್ರೋಮೊನೇಡ್ ಉಪಕೇಂದ್ರದಲ್ಲಿ ಕೆಪಿಟಿಸಿಎಲ್ ವತಿಯಿಂದ ತುರ್ತು ನಿರ್ವಹಣಾ ಕಾಮಗಾರಿ ಹಿನ್ನೆಲೆ ನಗರದ ಹಲವು ಪ್ರದೇಶಗಳಲ್ಲಿ ಫೆಬ್ರವರಿ 14 ರಂದು ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 3 ಗಂಟೆಯವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ ಅಧಿಕಾರಿಗಳು ತಿಳಿಸಿದ್ದಾರೆ.

ಫೆಬ್ರವರಿ 14ರಂದು ಎಲ್ಲೆಲ್ಲಿ ಕರೆಂಟ್ ಕಟ್?: ಶುಕ್ರವಾರ (ಫೆಬ್ರವರಿ 14) ಬೆಳಗ್ಗೆ 10ರಿಂದ ಮಧ್ಯಾಹ್ನ 3 ಗಂಟೆಯವರೆಗೂ ಎಲಿಟಾ ಪ್ರೋಮೊನೇಡ್ ಅಪಾರ್ಟ್ ಮೆಂಟ್, ಕೆಆರ್ ಲೇಔಟ್, ಶಾರದಾನಗರ, ಚುಂಚುನ್ ಘಟ್ಟ ಮತ್ತು ಉಪ ಕೇಂದ್ರದ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ.
ಫೆಬ್ರವರಿ 14ರ ಬೆಳಗ್ಗೆ 9 ಗಂಟೆಯಿಂದ ಮಧ್ಯಾಹ್ನ 12 ಗಂಟೆವರೆಗೆ ಶಾಂತಿನಿಕೇತನ ರೆಸಿಡೆನ್ಸೀಯಲ್ ಅಪಾರ್ಟ್ಮೆಂಟ್, ಬ್ರಿಗೇಡ್ ಲೇಕ್ ಫ್ರಂಟ್ ರೆಸಿಡೆನ್ಸೀಯಲ್ ಅಪಾರ್ಟ್ಮೆಂಟ್, ಟೋಟಲ್ ಎನ್ವಿರಾನ್ಮೆಂಟ್ ಅಪಾರ್ಟ್ಮೆಂಟ್, ಇಪಿಐಪಿ ಇಂಡಸ್ಟ್ರೀಯಲ್ ಏರೀಯಾ, ಸದರಮಂಗಳ ಇಂಡಸ್ಟ್ರೀಯಲ್ ಏರೀಯಾ, ನಲ್ಲರಹಳ್ಳಿ ವಿಲೇಜ್, ಪಟ್ಟಂದೂರು ಅಗ್ರಹಾರ, ಇಸಿಸಿ ರೋಡ್, ಸಿದ್ದಾಪುರ ರೋಡ್, ಐಟಿಪಿಎಲ್ ಮುಖ್ಯ ರಸ್ತೆಯಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ತಿಳಿಸಿದೆ.
ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ ಮೈಸೂರು ರೋಡ್ 7ನೆ ಅಡ್ಡರಸ್ತೆ, ಶ್ಯಾಮಣ್ಣ ಗಾರ್ಡನ್, ಮಂಜುನಾಥ ನಗರ, ಪೈಪ್ಲೈನ್, ಅನಂತ ರಾಮಯ್ಯ ಕಂಪೋಂಟ್, ಹೊಸ ಮತ್ತು ಹಳೆ ಗುಡ್ಡದ ಹಳ್ಳಿ, ಕುವೆಂಪುನಗರ, ಮೈಸೂರು ರೋಡ್ ಅಡ್ಡರಸ್ತೆ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಶುಕ್ರವಾರ ಮತ್ತು ಶನಿವಾರ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ತಿಳಿಸಿದೆ.
ಶನಿವಾರ ಎಲ್ಲೆಲ್ಲಿ ಕರೆಂಟ್ ಕಟ್?: ಫೆಬ್ರವರಿ 15ರ ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 1 ಗಂಟೆವರೆಗೆ ಶ್ರೀನಗರ, ಹೊಕೆರೆಹಳ್ಳಿ, ಪಿಇಎಸ್ ಎಂಜಿನಿಯರಿಂಗ್ ಕಾಲೇಜು, ವೀರಭದ್ರನಗರ, ಬ್ಯಾಂಕ್ ಕಾಲೋನಿ, ಹನುಮಂತನಗರ, ಗಿರಿನಗರ, ಸೀತಾ ವೃತ್ತ, ವಿದ್ಯಾಪೀಠ ವೃತ್ತ, ಪ್ರಮೋದ್ ಲೇಔಟ್, ಮುನೇಶ್ವರ ಬ್ಲಾಕ್, ನಾಗೇಂದ್ರ ಬ್ಲಾಕ್, ಬುಲ್ ಟೆಂಪಲ್ ರಸ್ತೆ, ಕತ್ರಿಗುಪ್ಪೆ, ಅವಲಹಳ್ಳಿ, ಸ್ಟರ್ಲಿಂಗ್ ಅಪಾರ್ಟ್ಮೆಂಟ್, ಎನ್ ಟಿ ವೈ ಲೇಔಟ್, ತ್ಯಾಗರಾಜನಗರ.
ಬಸವನಗುಡಿ, ಬನಶಂಕರಿ 3ನೇ ಹಂತ, ನಿಮ್ಹಾನ್ಸ್, ಕಿದ್ವಾಯ್, ರಾಜೀವ್ ಗಾಂಧಿ, ಸಂಜಯ್ ಗಾಂಧಿ, ಇಂಧಿರಾಗಾಂಧಿ, ಜಯನಗರ-1ನೇ, 2ನೇ, 3ನೇ, 4ನೇ, 9ನೇ ಟಿ ಬ್ಲಾಕ್, ಸೋಮೇಶ್ವರನಗರ, ವಿಲ್ಸನ್ ಗಾರ್ಡನ್. "ಎಲ್ಕೆಟ್ರಾನ್ ಸಿಟಿ ಫೇಸ್ -2, ವೀರಸಂದ್ರ, ದೊಡ್ಡನಾಗಮಂಗಳ, ಟೆಕ್ಮಹಿಂದ್ರ, ಇ.ಹೆಚ್.ಟಿ.ಟಾಟಾ ಬಿ.ಪಿ.ಸೋಲಾರ್ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಕರೆಂಟ್ ಕಟ್ಟಾಗಲಿದೆ ಎಂದು ತಿಳಿಸಿದೆ.
ಶನಿವಾರ ಬೆಳಗ್ಗೆ 9ಗಂಟೆಯಿಂದ ಮಧ್ಯಾಹ್ನ 12 ಗಂಟೆಯವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ. ಬೆಳತ್ತೂರು, ಅಯಪ್ಪ ದೇವಸ್ಥಾನ, ಕುಂಬೆನ ಅಗ್ರಹಾರ, ಪಟಾಲಮ್ಮ ಲೇಔಟ್, ವಿಎಸ್ಆರ್ ಲೇಔಟ್, ಕಾಡುಗೋಡಿ, ಚನ್ನಸದ್ರ, ಎಫ್ಸಿಐ ಗೌಡನ್, ಸಫಲ್, ವಿಎಸ್ಆರ್ ಲೇಔಟ್, ಕಾಡುಗೋಡಿ, ಶಂಕ್ರಪುರ, ಸಿದ್ದಾರ್ಥ ಲೇಔಟ್, ಸಾಯಿ ಆಶ್ರಮ, ಎಚ್ಡಿಎಫ್ಸಿ ಬ್ಯಾಂಕ್, ಅಲಂಬಿಕ್ ಆ್ಯಪ್ಟ್, ಮಾರ್ವೆಲ್ ಆಪ್ಟ್, ಮರ್ವೆಲ್ಲ್ ಡಿಐಎಂಐಟಿ. ಲೇಔಟ್, ದಿನ್ನೂರು ಪೊಲೀಸ್ ಠಾಣೆ, ಮೈತ್ರಿ ಲೇಔಟ್.
ಸರ್ಕಾರಿ ಪಾಲಿಟೆಕ್ನಿಕ್, ಚನ್ನಸಂದ್ರ ಮುಖ್ಯ ರಸ್ತೆ ನಾಗೊಂಡನಹಳ್ಳಿ, ನಾಗರಾಜ್ ಲೇಔಟ್, ದೊಮ್ಮರ ಪಾಳ್ಯ, ಪ್ರಶಾಂತ್ ಲೇಔಟ್, ಉಪಕಾರ್ ಲೇಔಟ್, ಪೃಥ್ವಿ ಲೇಔಟ್, ಸ್ವಾಮಿ ವಿವೇಕಾನಂದ ರಸ್ತೆ, ವೈಟ್ಫೀಲ್ಡ್ ಮುಖ್ಯ ರಸ್ತೆ, ಇಸಿಸಿ ರಸ್ತೆ, ಪ್ರಶಾಂತ್ ಲೇಔಟ್, ಪ್ರಶಾಂತ್ ಲೇಔಟ್, ಪ್ರಶಾಂತ್ ಲೇಔಟ್, ಪ್ರಶಾಂತ್ ಲೇಔಟ್, ರಸ್ತೆ, ಒಳ ವೃತ್ತ, ಕರುಮಾರಿಯಪ್ಪ ದೇವಸ್ಥಾನದ ಬೀದಿ, ಭುವನೇಶ್ವರಿ ರಸ್ತೆ, ಭೈರಪ್ಪ ಲೇಔಟ್, ವಿನಾಯಕ ಲೇಔಟ್.
ರುಸ್ತುಮ್ಜಿ ಲೇಔಟ್, ಅಂಬೇಡ್ಕರ್ ನಗರ ಗುಟ್ಟಾ, ವೈಟ್ಫೀಲ್ಡ್ ಮುಖ್ಯ ರಸ್ತೆ, ಪ್ರೆಸ್ಟೀಜ್ ಮೇಬೆರಿ ಆಪ್ಟ್, ಆದರ್ಶ ಫಾರ್ಮ್ ಮೆಡೋಸ್, ಬೋರ್ವೆಲ್ ರಸ್ತೆ, ಬ್ರೋಕ್ ಸ್ಟ್ರೀಟ್, ಔಟರ್ ಸ್ಟ್ರೀಟ್ ಹಗದೂರು, ವಿನಾಯಕನಗರ, ಬ್ರಿಗೇಡ್ ಕಾಸ್ಪೊಲೀಸ್ ಆಪ್ಟ್, ಗೋಯಲ್ ಹರಿಯಾಣ ಆಪ್ಟ್, ವಿಜಯನಗರ, ಗಾಂಧಿಪುರ, ಇಮ್ಮಡಿಹಳ್ಳಿ ಮುಖ್ಯರಸ್ತೆ, ನಾಗರಾಜ್ ಲೇಔಟ್, ದೊಬರಪಾಳ್ಯ, ಇಮ್ಮಡಿಹಳ್ಳಿ, ಸುಮದುರ ಆಪ್ಪಾರ್ಟ್ಮೆಂಟ್ ಮತ್ತು ಸುತ್ತಲಿನ ಪ್ರದೇಶಗಳಲ್ಲಿ ಕರೆಂಟ್ ಕಟ್ಟಾಗಲಿದೆ ಎಂದು ತಿಳಿಸಿದೆ.












Click it and Unblock the Notifications