Power Cut in Bengaluru : ಜ.17 ರಿಂದ 30ರವರೆಗೆ ಬೆಂಗಳೂರಿನ ಈ ಪ್ರದೇಶಗಳಲ್ಲಿ ವಿದ್ಯುತ್ ಕಡಿತ!
ಬೆಂಗಳೂರು ಜನವರಿ 16: ಬೆಂಗಳೂರಿನಲ್ಲಿ ವಿವಿದೆಡೆ ಕಾಮಗಾರಿ ಕೆಲಸಗಳು ನಡೆಯುತ್ತಿದ್ದು ವಿದ್ಯುತ್ ಕಡಿತಗೊಳ್ಳಲಿದೆ ಎಂದು ಬೆಸ್ಕಾಂ ತಿಳಿಸಿದೆ. ನಾಳೆಯಿಂದ ಬೆಂಗಳೂರಿನ ಯಾವ ಪ್ರದೇಶಗಳಲ್ಲಿ ವಿದ್ಯುತ್ ಕಡಿತದ ಬಿಸಿ ಗ್ರಾಹಕರಿಗೆ ತಟ್ಟಲಿದೆ ಎನ್ನುವುದನ್ನು ಬೆಸ್ಕಾಂ ಪ್ರಕಟಿಸಿದೆ.
ನಾಲ್ಕನೇ ತ್ರೈಮಾಸಿಕ ನಿರ್ವಹಣಾ ವೇಳಾಪಟ್ಟಿಯಂತೆ ನಿಯತಕಾಲಿಕವಾಗಿ ಕೆಲವು ನಿರ್ವಹಣಾ ಕಾರ್ಯ ನಡೆಸುವ ಸಂಬಂಧ ಬೆಂಗಳೂರಿನ ಹಲವು ಪ್ರದೇಶಗಳಲ್ಲಿ ವಿದ್ಯುತ್ ಕಡಿತವಾಗಲಿದೆ. ಇಲ್ಲಿ ನಾವು ಯಾವ ದಿನ ಯಾವ ಸಮಯಕ್ಕೆ ಹಾಗೂ ಯಾವ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಾಯಗೊಳ್ಳಲಿದೆ ಎನ್ನುವ ಬಗ್ಗೆ ಮಾಹಿತಿಯನ್ನು ನೀಡಲಿದ್ದೇವೆ.
ಜನವರಿಯಲ್ಲಿ ಬೆಂಗಳೂರಿನಲ್ಲಿ ಲೋಡ್ ಶೆಡ್ಡಿಂಗ್ ಎಲ್ಲೆಲ್ಲಿ?
ಜನವರಿ 17 ರಿಂದ 20: ಕೆಂಗೇರಿಯಲ್ಲಿ ಜನವರಿ 17 ರಂದು ಬೆಳಿಗ್ಗೆ 10ರಿಂದ ಸಂಜೆ 5ರವರೆಗೆ ವಿದ್ಯುತ್ ಕಡಿತಗೊಳ್ಳಲಿದೆ. ನೆಲಮಂಗಲದಲ್ಲಿ ಜನವರಿ 18 ಹಾಗೂ 19 ರಂದು ಬೆಳಿಗ್ಗೆ 10ರಿಂದ ಮದ್ಯಾಹ್ನ 2ವರೆಗೆ, ಶಿವಾಜಿನಗರದಲ್ಲಿ ಜನವರಿ 17 ಮತ್ತು 19ರಂದು ಬೆಳಿಗ್ಗೆ 10ರಿಂದ ಮದ್ಯಾಹ್ನ 3, ಹೆಚ್ಎಸ್ಆರ್ ಲೇಔಟ್ನಲ್ಲಿ ಜನವರಿ 19 ರಂದು ಬೆಳಿಗ್ಗೆ 10:30 ರಿಂದ ಸಂಜೆ 5:30 ಗಂಟೆಯವರೆಗೆ ಪವರ್ ಕಡಿತಗೊಳ್ಳಲಿದೆ.
ಕೆಂಗೇರಿಯ ಸೋಮನಹಳ್ಳಿ ಜನವರಿ 16 ಹಾಗೂ 18ರಂದು ಬೇಳಿಗ್ಗೆ 10ರಿಂದ ಮದ್ಯಾಹ್ನ 3ಗಂಟೆವರೆಗೆ, ನೆಲಮಂಗಲದಲ್ಲಿ ಜನವರಿ 19 ರಂದು ಬೆಳಿಗ್ಗೆ 10ರಿಂದ ಸಂಜೆ5ರವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ.

ಜನವರಿ 21ರಿಂದ 25: ಮಾಗಡಿಯಲ್ಲಿ ಜನವರಿ22 ರಂದು ಬೆಳಿಗ್ಗೆ 10 ರಿಂದ ಮದ್ಯಾಹ್ನ 3, ನೆಲಮಂಗಲ ಜನವರಿ 25ರಂದು ಬೆಳಿಗ್ಗೆ 10ರಿಂದ ಮದ್ಯಾಹ್ನ 2ಗಂಟೆವರೆಗೆ, ಶಿವಾಜಿನಗರ ಜನವರಿ 21 ರಂದು ಬೆಳಿಗ್ಗೆ 10ರಿಂದ ಮದ್ಯಾಹ್ನ 3, ವೈಟ್ ಪೀಲ್ಡ್ ಜನವರಿ 20 ಹಾಗೂ 23ರಂದು ಬೆಳಿಗ್ಗೆ 10ರಿಂದ ಸಂಜೆ 4ರವರೆಗೆ, ಪೀಣ್ಯದಲ್ಲಿ ಜನವರಿ 22ರಂದು ಬೆಳಿಗ್ಗೆ 11ರಿಂದ ಮದ್ಯಾಹ್ನ 2, ವಿಧಾನಸೌಧ ಜನವರಿ 21, 22ರಂದು ಬೆಳಿಗ್ಗೆ 10ರಿಂದ ಸಂಜೆ 5ಯವರೆಗೆ ವಿದ್ಯುತ್ ಕಡಿತವಾಗಲಿದೆ.
ಇನ್ನೂ ಜಯನಗರ ಜನವರಿ 25 ರಂದು ಬೆಳಿಗ್ಗೆ 10ರಿಂದ ಸಂಜೆ 4, ಜಯನಗರ ಎಸ್6 ಜನವರಿ 24ರಂದು ಬೆಳಿಗ್ಗೆ 10ರಿಂದ ಮದ್ಯಾಹ್ನ 3ರವರೆಗೆ, ಕೆಂಗೇರಿಯ ಸೋಮನಹಳ್ಳಿ, ಜನವರಿ 21, 22, 24, 25ರಂದು ಬೆಳಿಗ್ಗೆ 10ರಿಂದ ಮದ್ಯಾಹ್ನ 3ಗಂಟೆ, ಹೆಚ್ಎಸ್ಆರ್ ಜನವರಿ 23 ರಂದು ಬೆಳಿಗ್ಗೆ 10 ರಿಂದ 5ಗಂಟೆಯವರೆಗೆ ಪವರ್ ಕಡಿತಗೊಳ್ಳಲಿದೆ.

ಜನವರಿ 26ರಿಂದ 30: ನೆಲಮಂಗಲ 29 ರಂದು ಬೆಳಿಗ್ಗೆ 10ರಿಂದ ಸಂಜೆ 5ಗಂಟೆವರೆಗೆ, ವೈಟ್ ಪೀಲ್ಡ್ ಜನವರಿ 30 ರಂದು ಬೆಳಿಗ್ಗೆ 10ರಿಂದ ಸಂಜೆ4ರವರೆಗೆ, ಪೀಣ್ಯದಲ್ಲಿ ಜನವರಿ 29ರಂದು ಬೆಳಿಗ್ಗೆ 11ರಿಂದ ಮದ್ಯಾಹ್ನ 2ಗಂಟೆಯವರೆಗೆ, ಜಯನಗರ ಜನವರಿ 28 ಹಾಗೂ 30ರಂದು ಬೆಳಿಗ್ಗೆ 10 ಗಂಟೆಯಿಂದ ಸಂಜೆ 5ಗಂಟೆವರೆಗೆ ವಿದ್ಯುತ್ ಕಡಿತವಾಗಲಿದೆ ಎಂದು ಬೆಸ್ಕಾಂ ತಿಳಿಸಿದೆ.
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
ಕಾಂತಾರ ವಿವಾದ: ಮೈಸೂರು ಚಾಮುಂಡಿ ಬೆಟ್ಟಕ್ಕೆ ಬರ್ತೀನಿ, ಕ್ಷಮೆಯೂ ಕೇಳ್ತೀನಿ ಎಂದ ನಟ ರಣವೀರ್ ಸಿಂಗ್












Click it and Unblock the Notifications