Power Cut: ಕೋರಮಂಗಲ ಸೇರಿದಂತೆ ಬೆಂಗಳೂರಿನ ಈ ಪ್ರದೇಶಗಳಲ್ಲಿ ಇಂದು ವಿದ್ಯುತ್ ವ್ಯತ್ಯಯ
ಬೆಂಗಳೂರು, ಆಗಸ್ಟ್ 30: ಬೆಂಗಳೂರಿನಲ್ಲಿ ಇತ್ತೀಚಿಗೆ ವಿದ್ಯುತ್ ವ್ಯತ್ಯಯ ಹೆಚ್ಚಾಗುತ್ತಿದ್ದು, ಇಂದು ಕೂಡ ಕೆಲವು ಪ್ರದೇಶದಲ್ಲಿ ವಿದ್ಯುತ್ ಸಮಸ್ಯೆ ಎದುರಾಗಲಿದೆ. ಕರ್ನಾಟಕ ವಿದ್ಯುತ್ ಸರಬರಾಜು ನಿಗಮ ನಿಯಮಿತ ಲೈನ್ ತುರ್ತು ದುರಸ್ತಿ ಹಾಗೂ ನಿರ್ವಹಣಾ ಕಾಮಗಾರಿ ಹಿನ್ನೆಲೆಯಲ್ಲಿ ಇಂದು( ಆಗಸ್ಟ್ 30) ಶುಕ್ರವಾರ ಬೆಂಗಳೂರಿನ ಕೆಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯವಾಗಲಿದೆ. ಈ ಬಗ್ಗೆ ನಮ್ಮ ಬೆಸ್ಕಾಂ ಪ್ರದೇಶ ಹಾಗೂ ಸಮಯದ ವಿವರದೊಂದಿದೆ ಮಾಹಿತಿ ಹಂಚಿಕೊಂಡಿದೆ.
ಕರ್ನಾಟಕ ವಿದ್ಯುತ್ ಸರಬರಾಜು ನಿಗಮ ನಿಯಮಿತ ತುರ್ತು ದುರಸ್ತಿ ಕಾರ್ಯ ಕೈಗೊಂಡ ಹಿನ್ನೆಲೆಯಲ್ಲಿ ಬೆಂಗಳೂರಿನ ಕೆಲವು ಪ್ರದೇಶದಲ್ಲಿ ಬೆಳಗ್ಗೆಯಿಂದ ಸಂಜೆಯವರೆಗೆ ಅಂದರೆ ಕನಿಷ್ಠ ಏಳು ಗಂಟೆ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ನಿಯಮಿತ ಪ್ರಕಟಣೆ ಮೂಲಕ ತಿಳಿಸಿದೆ.

ಕ.ವಿ.ಪ್ರ.ನಿ.ನಿ ಲೈನ್ ದುರಸ್ತಿ/ ನಿರ್ವಹಣಾ ಕಾಮಗಾರಿ ಸಲುವಾಗಿ ಆಗಸ್ಟ್ 30 ರಂದು ಈ ಪ್ರದೇಶಗಳಲ್ಲಿ ವಿದ್ಯುತ್ ಅಡಚಣೆ ಉಂಟಾಗಲಿದೆ. ವಿದ್ಯುತ್ ಅಡಚಣೆಗಾಗಿ ವಿಷಾದಿಸುತ್ತೇವೆ. ಹೆಚ್ಚಿನ ಮಾಹಿತಿ ಅಥವಾ ದೂರುಗಳಿಗೆ ಬೆಸ್ಕಾಂ ಸಹಾಯವಾಣಿ 1912 ಅಥವಾ http://bescom.karnataka.gov.in ಸಂಪರ್ಕಿಸಿ ಎಂದು ತಿಳಿಸಿರುವ ಬೆಸ್ಕಾಂ ಈ ಕೆಳಗಿನ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ ಎಂದು ತಿಳಿಸಿದೆ.
ನಗರದ ಹೆಚ್ಎಸ್ಆರ್ ಲೇಔಟ್ ಮತ್ತು ಕೋರಮಂಗಲ ವಿಭಾಗದ ಬೆಳ್ಳಂದೂರು, ರಾಝ್, ದೇವರಬೀಸನಹಳ್ಳಿ, ಕರಿಯಮ್ಮನಪಾಳ್ಯ, ಅಕ್ಮೆ ಪ್ರಾಜೆಕ್ಟ್ಸ್, ಅನುಪಮಾ, ಟೋಟಲ್ ಮಾಲ್, ಶೋಭಾ ಐರಿಸ್ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 3 ಗಂಟೆವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ. ಕೋರಮಂಗಲದ ಗುಂಜೂರು ಪಾಳ್ಯದಲ್ಲಿ ಮಾತ್ರ ಬೆಳಗ್ಗೆ 11 ರಿಂದ ಸಂಜೆ 5 ಗಂಟೆವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ.
ಇನ್ನು ರಾಮನಗರ ವೃತ್ತಿ ವಿಭಾಗದ ಭೂಹಳ್ಳಿ, ದ್ಯಾವಪಟ್ಟಣ, ಸಿಂಗರಾಜಿಪುರ, ಬ್ಯಾಡರ ಹಳ್ಳಿ, ಹುಲುವಾಡಿಯಲ್ಲಿ ಬೆಳಗ್ಗೆ 10 ಗಂಟೆಯಿಂದ 12:30ರವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ. ಅಲ್ಲದೇ ದಾವಣಗೆರೆ ಜಿಲ್ಲೆಯ ಕೆಲವು ಗ್ರಾಮ ಮತ್ತು ನಗರ ಪ್ರದೇಶಗಳಲ್ಲಿ ಬೆಳಗ್ಗೆ 10 ರಿಂದ ಮಧ್ಯಾಹ್ನ 3 ಗಂಟೆವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ನಿಯಮಿತ ಪ್ರಕಟಣೆಯಲ್ಲಿ ತಿಳಿಸಿದೆ.












Click it and Unblock the Notifications