ಸಾಂಸ್ಕೃತಿಕ ಲೋಕಕ್ಕೆ ರಂಗಮಂದಿರ ಅರ್ಪಣೆ
ಬೆಂಗಳೂರು: ನವೆಂಬರ್,3: ಜಗಮಗಿಸುವ ವೈವಿಧ್ಯಮಯ ದೀಪಾಲಾಂಕಾರದೊಂದಿಗೆ ವಿವಿಧ ಕಾರ್ಯಕ್ರಮಕ್ಕೆ ಪ್ರಭಾತ್ ಕಲಾಪೂರ್ಣಿಮಾ ರಂಗಮಂದಿರ ಇದೇ ನ.5ರಂದು ಲೋಕಾರ್ಪಣೆಗೊಳ್ಳಲಿದೆ.
ಈ ರಂಗಮಂದಿರ ಇರುವುದು ಬೆಂಗಳೂರಿನ ಎನ್.ಆರ್. ಕಾಲನಿಯಲ್ಲಿ ಅದ್ಭುತವಾಗಿ ರೂಪಿತವಾಗಿರುವ ವೇದಿಕೆ. ನಾಟಕ, ನೃತ್ಯ, ಸಂಗೀತ ಕಛೇರಿ, ವಿವಿಧ ಕಾರ್ಯಕ್ರಮಗಳ ಆಯೋಜನೆಗೆ ಹೇಳಿಮಾಡಿಸಿದಂತಿರುವ ಈ ಭವ್ಯ ಮಂದಿರ.
ಪ್ರಭಾತ್ ಕಲಾಪೂರ್ಣಿಮಾವನ್ನು ಖ್ಯಾತ ನಿರ್ದೇಶಕ ಟಿ.ಎಸ್.ನಾಗಾಭರಣ ಮತ್ತು ಮಾಜಿ ಮೇಯರ್ ಬಿ.ಎಸ್ ಸತ್ಯನಾರಾಯಣ ಅವರು ಸಂಜೆ ಲೋಕಾರ್ಪಣೆ ಗೊಳಿಸಲಿದ್ದಾರೆ.[ಸವಿಸವಿ ನೆನಪುಗಳೊಂದಿಗೆ ಸಿಂಗಾರ ಸಮ್ಮೇಳನಕ್ಕೆ ಮಂಗಳ]

ಸಾಂಸ್ಕೃತಿಕ ಕಲಾ ರಸಿಕರ ಮನಸೂರೆಗೊಳಿಸಲು ಪ್ರಭಾತ್ ಕಲಾವಿದರ ಕುಟುಂಬ ಈ ಹಿಂದೆ ನಗರದ ಕೋರಮಂಗಲದಲ್ಲಿ ಕೆಇಎ ಪ್ರಭಾತ್ ರಂಗಮಂದಿರ ಆರಂಭಿಸಿತ್ತು.
ಇದೀಗ ಎನ್.ಆರ್ ಕಾಲನಿಯಲ್ಲಿ ಪ್ರಭಾತ್ ಕಲಾಪೂರ್ಣಿಮಾ ಎಂಬ ಮತ್ತೊಂದು ಅತ್ಯಾಧುನಿಕ ಸುಸಜ್ಜಿತ ಕಲಾ ಮಂದಿರವನ್ನು ಆರಂಭಿಸಲಿದೆ.
ಕಲಾಮಂದಿರದ ಆರಂಭೋತ್ಸವದ ಹಿನ್ನೆಲೆಯಲ್ಲಿ ಹಲವು ಸಾಂಸ್ಕೃತಿಕ ಕಾರ್ಯಕ್ರಮಗಳನ್ನೂ ಹಮ್ಮಿಕೊಳ್ಳಲಾಗಿದೆ.
ನವೆಂಬರ್ 5ರ ಸಂಜೆ 7 ಗಂಟೆಗೆ ಕಿರುತೆರೆಯ ಖ್ಯಾತ ನಟ, ನಿರ್ದೇಶಕ ಎಸ್.ಎನ್.ಸೇತುರಾಮ್ ಅವರ ತಂಡದಿಂದ 'ಅತೀತ' ಎಂಬ ನಾಟಕ ಪ್ರದರ್ಶನಗೊಳ್ಳಲಿದೆ..[ಹುಚ್ಚೆದ್ದು ಕುಣಿಯುವಂತೆ ಮಾಡಿದ ಜಾನಪದ ಕಲಾವೈಭವ]

ನವೆಂಬರ್ 6ರಂದು ಸಂಜೆ 6.30ಕ್ಕೆ ಖ್ಯಾತ ಕಥಕ್ ಜೋಡಿ ನಿರುಪಮಾ ರಾಜೇಂದ್ರ ಅವರಿಂದ 'ಕಥಾಕೀರ್ತನ' ಎಂಬ ನೃತ್ಯರೂಪಕ ನಡೆಯಲಿದೆ.
ನವೆಂಬರ್ 13ರಂದು ಖ್ಯಾತ ಹಿಂದೂಸ್ಥಾನಿ ಗಾಯಕ ಫಯಾಜ್ಖಾನ್ ಅವರಿಂದ ಗಾಯನ ಕಾರ್ಯಕ್ರಮ ಜರುಗಲಿದೆ.
ಮಾಹಿತಿಗಾಗಿ: 96322057799
-
Property Mutation: ಆಸ್ತಿ ನೋಂದಣಿ ನಂತರ ಶೇ.98ರಷ್ಟು ಖಾತೆಗಳು ಸ್ವಯಂ ಚಾಲಿತವಾಗಿ ಬದಲಾವಣೆ: ಸಚಿವ ಕೃಷ್ಣ ಬೈರೇಗೌಡ -
ಬೆಂಗಳೂರಿನಿಂದ ಬೀದರ್-ಕಲಬುರಗಿಗೆ ವಿಮಾನಸೇವೆ: 23ರೊಳಗೆ ಪ್ರಸ್ತಾವನೆ ಸಲ್ಲಿಸಲು ಸೂಚನೆ -
ಲಂಡನ್ ಮೆಟ್ರೋಗಿಂತ ಬೆಂಗಳೂರಿನ 'ನಮ್ಮ ಮೆಟ್ರೋ' ಬೆಸ್ಟ್: Viral ಪೋಸ್ಟ್ನಲ್ಲಿ ಅಚ್ಚರಿಯ ಸತ್ಯ ಬಿಚ್ಚಿಟ್ಟ ಯುವತಿ -
Gold Price Today: ಯುಗಾದಿಗೂ ಮೊದಲೇ ಚಿನ್ನದ ದರದಲ್ಲಿ ಭಾರೀ ಇಳಿಕೆ; ಆಭರಣ ಪ್ರಿಯರಿಗೆ ಇಂದೇ ಹಬ್ಬ -
Karnataka: ಧಾರ್ಮಿಕ ಮೆರವಣಿಗೆ, ಜಯಂತಿಗಳಲ್ಲಿ DJ ಸದ್ದಿಗೆ ಬ್ರೇಕ್? 'ಐಟಂ ಸಾಂಗ್' ಬ್ಯಾನ್ ಮಾಡಲು ರಾಜ್ಯ ಸರ್ಕಾರ ಒಲವು -
Gold Price: ಯುಗಾದಿಗೆ ಚಿನ್ನಪ್ರಿಯರಿಗೆ ಶುಭ ಸುದ್ದಿ: ಚಿನ್ನದ ಬೆಲೆಯಲ್ಲಿ ಭರ್ಜರಿ ಇಳಿಕೆ, ಬೆಳ್ಳಿ ದರ 15,000 ರೂ.ಕುಸಿತ -
ಯುದ್ಧದ ಬಿಸಿ: ಬೆಂಗಳೂರಿಗೆ ಅರಬ್ ರಾಷ್ಟ್ರಗಳ ವಿಮಾನ ಸಂಚಾರ ಕಡಿತ; ರಾಜ್ಯ ಟ್ರಾವೆಲ್ಸ್ ಮಾಲೀಕರಲ್ಲಿ ಆತಂಕ -
ಉನ್ನತ ಶಿಕ್ಷಣಕ್ಕೆ ಭಾರತದ ಯಾವ ನಗರ ಬೆಸ್ಟ್? QS ರ್ಯಾಂಕಿಂಗ್ ಪಟ್ಟಿಯಲ್ಲಿದೆ ಬೆಂಗಳೂರು ಸೇರಿದಂತೆ 4 ನಗರಗಳ ಹೆಸರು -
SSLC ಪರೀಕ್ಷೆ-1 ಆರಂಭ: ಮಲ್ಲೇಶ್ವರಂನ ಕೆಪಿಎಸ್ ಶಾಲೆಗೆ ಸಚಿವ ಮಧು ಬಂಗಾರಪ್ಪ ಭೇಟಿ, ವಿದ್ಯಾರ್ಥಿಗಳಿಗೆ ಶುಭಹಾರೈಕೆ -
Nora Fatehi: ಸರ್ಸೆ ನಿನ್ನ ಸೆರಗ ಹಾಡು ವಿವಾದ: ಹೇಳಿದ್ದೊಂದು- ಮಾಡಿದ್ದು ಇನ್ನೊಂದು, ನನ್ನ ನಂಬಿ ಪ್ಲೀಸ್ -
"ಕೆಡಿ" ಸಿನಿಮಾದ ಹಾಡು ಅಶ್ಲೀಲವಾಗಿದ್ರೆ ಕೂಡಲೇ ಎಲ್ಲ ಕಡೆ ತೆರವು ಮಾಡಿ: ಸೆನ್ಸಾರ್ ಮಂಡಳಿಗೆ ಕೇಂದ್ರ ಸರ್ಕಾರ ಸೂಚನೆ -
Bengaluru Second Airport: ಬೆಂಗಳೂರಿಗೆ ಎರಡನೇ ವಿಮಾನ ನಿಲ್ದಾಣ: ದೆಹಲಿಯಲ್ಲಿ ಕೇಂದ್ರ ಸಚಿವರ ಭೇಟಿಯಾದ ಡಿ.ಕೆ.ಶಿವಕುಮಾರ್












Click it and Unblock the Notifications