ಪ್ರದೀಪ್ ಆತ್ಮಹತ್ಯೆ: ಶಾಸಕ ಅರವಿಂದ ಲಿಂಬಾವಳಿ ಬಂಧನಕ್ಕೆ ಎಎಪಿ ಆಗ್ರಹ
ಬೆಂಗಳೂರು, ಜನವರಿ 02: ಪ್ರದೀಪ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಬಿಜೆಪಿ ಶಾಸಕ ಅರವಿಂದ ಲಿಂಬಾವಳಿರವರನ್ನು ಶೀಘ್ರವೇ ಬಂಧಿಸಿ ತನಿಖೆ ನಡೆಸಬೇಕು ಎಂದು ಆಮ್ ಆದ್ಮಿ ಪಾರ್ಟಿ ರಾಜ್ಯ ಪ್ರಚಾರ ಸಮಿತಿ ಅಧ್ಯಕ್ಷರಾದ ಮುಖ್ಯಮಂತ್ರಿ ಚಂದ್ರು ಒತ್ತಾಯಿಸಿದರು.
ಬೆಂಗಳೂರಿನಲ್ಲಿ ಎಎಪಿ ಪಕ್ಷದ ರಾಜ್ಯ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿ ಮಾತನಾಡಿದ ಅವರು, ಸಚಿವರಾಗಿದ್ದ ಕೆ.ಎಸ್.ಈಶ್ವರಪ್ಪ ವಿರುದ್ಧ ಗುತ್ತಿಗೆದಾರ ಸಂತೋಷ್ ಪಾಟೀಲ್ ಡೆತ್ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದರು. ಆ ಪ್ರಕರಣದಲ್ಲಿ ಈಶ್ವರಪ್ಪನವರ ವಿಚಾರಣೆಯನ್ನೂ ನಡೆಸದೇ ಪೊಲೀಸರು ಅವರಿಗೆ ಕ್ಲೀನ್ಚಿಟ್ ನೀಡಿದರು ಎಂದು ಆಪಾದಿಸಿದರು.
ಈಗ ಮತ್ತೆ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಅವರನ್ನು ಸಚಿವ ಸಂಪುಟಕ್ಕೆ ಸೇರಿಸಿಕೊಳ್ಳಲು ಬಿಜೆಪಿ ಸಿದ್ಧತೆ ನಡೆಸುತ್ತಿದೆ. ಈಶ್ವರಪ್ಪನವರ ಪ್ರಕರಣದಲ್ಲಿ ಆದಂತೆ ಪೊಲೀಸರು ಅರವಿಂದ ಲಿಂಬಾವಳಿಯವರನ್ನು ಬಂಧಿಸಿ ವಿಚಾರಣೆ ನಡೆಸದಿದ್ದರೆ ಪ್ರದೀಪ್ ಆತ್ಮಹತ್ಯೆ ಪ್ರಕರಣ ಕೂಡ ಅದೇ ರೀತಿ ಮುಚ್ಚಿಹೋಗುವ ಅಪಾಯವಿದೆ ಎಂದರು.

ಡೆತ್ನೋಟ್ನಲ್ಲಿ ನಾಯಕ ಹೆಸರು ಖುಲಾಸೆ
ಒಂದು ವೇಳೆ ಯಾವುದಾದರೂ ಡೆತ್ನೋಟ್ನಲ್ಲಿ ಜನಸಾಮಾನ್ಯರ ಹೆಸರಿದ್ದರೆ, ಪೊಲೀಸರು ಶೀಘ್ರವೇ ಬಂಧಿಸಿ ವಿಚಾರಣೆ ನಡೆಸುತ್ತಾರೆ. ಆದರೆ ಬಿಜೆಪಿಯ ಸಚಿವರು ಅಥವಾ ಶಾಸಕರ ಹೆಸರಿದ್ದರೆ ಖುಲಾಸೆ ಮಾಡುತ್ತಾರೆ. ರಾಜ್ಯದಲ್ಲಿ ಜನಸಾಮಾನ್ಯರಿಗೆ ಒಂದು ಕಾನೂನು, ಪ್ರಭಾವಿಗಳಿಗೆ ಮತ್ತೊಂದು ಕಾನೂನು ಇದೆಯೇ?. ಅರವಿಂದ ಲಿಂಬಾವಳಿಯವರಿಗೆ ಸಾಕ್ಷಿ ನಾಶಕ್ಕೆ ಅವಕಾಶ ನೀಡದೇ, ಶೀಘ್ರವೇ ಬಂಧಿಸಬೇಕು. ಪ್ರದೀಪ್ ಸಾವಿನಲ್ಲಿ ಅರವಿಂದ ಲಿಂಬಾವಳಿ ಪಾತ್ರ ಏನಿದೆ ಎಂಬುದು ಜನರಿಗೆ ತಿಳಿಯಬೇಕು. ಎಲ್ಲ ತಪ್ಪಿತಸ್ಥರಿಗೆ ಕಠಿಣ ಶಿಕ್ಷೆಯಾಗುವ ಮೂಲಕ ಪ್ರದೀಪ್ ಅವರ ಕುಟುಂಬಕ್ಕೆ ನ್ಯಾಯ ಸಿಗಬೇಕು ಎಂದು ಮುಖ್ಯಮಂತ್ರಿ ಚಂದ್ರು ಮನವಿ ಹೇಳಿದರು.
ಮಹದೇವಪುರ ವಿಧಾನಸಭಾ ಕ್ಷೇತ್ರದ ಎಎಪಿ ಅಧ್ಯಕ್ಷ ಅಶೋಕ್ ಮೃತ್ಯುಂಜಯ ಮಾತನಾಡಿ, ಅಧಿಕಾರದ ಮದದಲ್ಲಿರುವ ಬಿಜೆಪಿ ನಾಯಕರು ನಾನಾ ರೀತಿಯ ಅಕ್ರಮದಲ್ಲಿ ತೊಡಗಿಕೊಂಡಿದ್ದಾರೆ. ಇದರ ಪರಿಣಾಮವಾಗಿ ಪ್ರಾಮಾಣಿಕರು ಕಿರುಕುಳ ತಾಳಲಾರದೇ ಆತ್ಮಹತ್ಯೆ ಮಾಡಿಕೊಳ್ಳುವಂತಾಗಿದೆ. ಕೆಲವು ದಿನಗಳ ಹಿಂದೆ ತುಮಕೂರಿನ ಗುತ್ತಿಗೆದಾರ ಟಿ.ಎನ್.ಪ್ರಸಾದ್ ಆತ್ಮಹತ್ಯೆ ಮಾಡಿಕೊಂಡಿದ್ದರು. ಇದಕ್ಕೆ ಬಿಜೆಪಿ ಸರ್ಕಾರದ 40 ಪರ್ಸೆಂಟ್ ಕಮಿಷನ್ ದಂಧೆ ಕಾರಣ ಎಂದು ಹೇಳಲಾಗಿದೆ. ಆದರೆ ಇಂತಹ ಯಾವ ಪ್ರಕರಣದ ತನಿಖೆಯೂ ಸರಿಯಾಗಿ ನಡೆಯುತ್ತಿಲ್ಲ. ಪ್ರಭಾವಿಗಳನ್ನು ರಕ್ಷಿಸುವ ಉದ್ದೇಶದಿಂದ, ಸತ್ಯ ಹೊರಬಾರದಂತೆ ನೋಡಿಕೊಳ್ಳಲು ಬಿಜೆಪಿಯು ಅಧಿಕಾರದ ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂದು ಆಪಾದಿಸಿದರು.

ಉದ್ಯಮಿ ಪ್ರದೀಪ್ ಎಂಬಾತ ತಲೆಗೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಈ ಸಂಬಂದ ಮೃತರ ಪತ್ನಿ ನೀಡಿದ ದೂರಿನ ಮೇರೆಗೆ ಕಗ್ಗಲಿ ಪುರ ಪೊಲೀಸ್ ಠಾಣೆಯಲ್ಲಿ ಶಾಸಕ ಅರವಿಂದ ಬೆಲ್ಲದ್ ಸೇರಿದಂತೆ ಆರು ಮಂದಿ ವಿರುದ್ಧ ಎಫ್ಐಆರ್ ದಾಖಲಾಗಿದೆ.
-
Karnataka Weather: ಇಂದು ರಾಜ್ಯದ ಹಲವೆಡೆ ಗುಡುಗು ಸಹಿತ ಅಕಾಲಿಕ ಮಳೆ, ಬೆಂಗಳೂರಿನಲ್ಲಿ ಹೇಗಿರಲಿದೆ ವಾತಾವರಣ? -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
AI ಎಫೆಕ್ಟ್: 2026ರಲ್ಲೂ ಮುಂದುವರಿದ ಉದ್ಯೋಗ ಕಡಿತ; ಯಾವ್ಯಾವ ಕಂಪನಿಗಳಿಂದ ಎಷ್ಟು ವಜಾ? ಪಟ್ಟಿ ಇಲ್ಲಿದೆ -
Jobs: ಹೈಕೋರ್ಟ್ನಲ್ಲಿ ಕೆಲಸ ಬೇಕೆ? 70 ಅಸಿಸ್ಟೆಂಟ್ ಕೋರ್ಟ್ ಸೆಕ್ರೆಟರಿ ಹುದ್ದೆಗಳಿಗೆ ಅರ್ಜಿ ಆಹ್ವಾನ, ಇಂದೇ ಅರ್ಜಿ ಸಲ್ಲಿಸಿ -
Bengaluru Rent: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಬಾಡಿಗೆ ಮನೆಗಳು ಸಿಗುವ 6 ಪ್ರಮುಖ ಪ್ರದೇಶಗಳು -
ನೌಕರಿ ಬಿಟ್ಟು ಸ್ವಂತ ಉದ್ಯಮ: ಹುಣಸೆ ಸಿಹಿತಿಂಡಿಗೆ ಪೇಟೆಂಟ್ ಪಡೆದ ಬೈಲಹೊಂಗಲದ ಟೆಕ್ಕಿ; 17 ದೇಶಗಳಿಗೆ ರಫ್ತು -
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು












Click it and Unblock the Notifications