Get Updates
Get notified of breaking news, exclusive insights, and must-see stories!

ಪ್ರದೀಪ್‌ ಆತ್ಮಹತ್ಯೆ: ಶಾಸಕ ಅರವಿಂದ ಲಿಂಬಾವಳಿ ಬಂಧನಕ್ಕೆ ಎಎಪಿ ಆಗ್ರಹ

ಬೆಂಗಳೂರು, ಜನವರಿ 02: ಪ್ರದೀಪ್‌ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಬಿಜೆಪಿ ಶಾಸಕ ಅರವಿಂದ ಲಿಂಬಾವಳಿರವರನ್ನು ಶೀಘ್ರವೇ ಬಂಧಿಸಿ ತನಿಖೆ ನಡೆಸಬೇಕು ಎಂದು ಆಮ್‌ ಆದ್ಮಿ ಪಾರ್ಟಿ ರಾಜ್ಯ ಪ್ರಚಾರ ಸಮಿತಿ ಅಧ್ಯಕ್ಷರಾದ ಮುಖ್ಯಮಂತ್ರಿ ಚಂದ್ರು ಒತ್ತಾಯಿಸಿದರು.

ಬೆಂಗಳೂರಿನಲ್ಲಿ ಎಎಪಿ ಪಕ್ಷದ ರಾಜ್ಯ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿ ಮಾತನಾಡಿದ ಅವರು, ಸಚಿವರಾಗಿದ್ದ ಕೆ.ಎಸ್‌.ಈಶ್ವರಪ್ಪ ವಿರುದ್ಧ ಗುತ್ತಿಗೆದಾರ ಸಂತೋಷ್‌ ಪಾಟೀಲ್ ಡೆತ್‌ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದರು. ಆ ಪ್ರಕರಣದಲ್ಲಿ ಈಶ್ವರಪ್ಪನವರ ವಿಚಾರಣೆಯನ್ನೂ ನಡೆಸದೇ ಪೊಲೀಸರು ಅವರಿಗೆ ಕ್ಲೀನ್‌ಚಿಟ್ ನೀಡಿದರು ಎಂದು ಆಪಾದಿಸಿದರು.

ಈಗ ಮತ್ತೆ ಮಾಜಿ ಸಚಿವ ಕೆ.ಎಸ್‌.ಈಶ್ವರಪ್ಪ ಅವರನ್ನು ಸಚಿವ ಸಂಪುಟಕ್ಕೆ ಸೇರಿಸಿಕೊಳ್ಳಲು ಬಿಜೆಪಿ ಸಿದ್ಧತೆ ನಡೆಸುತ್ತಿದೆ. ಈಶ್ವರಪ್ಪನವರ ಪ್ರಕರಣದಲ್ಲಿ ಆದಂತೆ ಪೊಲೀಸರು ಅರವಿಂದ ಲಿಂಬಾವಳಿಯವರನ್ನು ಬಂಧಿಸಿ ವಿಚಾರಣೆ ನಡೆಸದಿದ್ದರೆ ಪ್ರದೀಪ್‌ ಆತ್ಮಹತ್ಯೆ ಪ್ರಕರಣ ಕೂಡ ಅದೇ ರೀತಿ ಮುಚ್ಚಿಹೋಗುವ ಅಪಾಯವಿದೆ ಎಂದರು.

Pradeep Suicide Case: AAP Urge for Arrest BJP MLA Arvind Limbavali

ಡೆತ್‌ನೋಟ್‌ನಲ್ಲಿ ನಾಯಕ ಹೆಸರು ಖುಲಾಸೆ

ಒಂದು ವೇಳೆ ಯಾವುದಾದರೂ ಡೆತ್‌ನೋಟ್‌ನಲ್ಲಿ ಜನಸಾಮಾನ್ಯರ ಹೆಸರಿದ್ದರೆ, ಪೊಲೀಸರು ಶೀಘ್ರವೇ ಬಂಧಿಸಿ ವಿಚಾರಣೆ ನಡೆಸುತ್ತಾರೆ. ಆದರೆ ಬಿಜೆಪಿಯ ಸಚಿವರು ಅಥವಾ ಶಾಸಕರ ಹೆಸರಿದ್ದರೆ ಖುಲಾಸೆ ಮಾಡುತ್ತಾರೆ. ರಾಜ್ಯದಲ್ಲಿ ಜನಸಾಮಾನ್ಯರಿಗೆ ಒಂದು ಕಾನೂನು, ಪ್ರಭಾವಿಗಳಿಗೆ ಮತ್ತೊಂದು ಕಾನೂನು ಇದೆಯೇ?. ಅರವಿಂದ ಲಿಂಬಾವಳಿಯವರಿಗೆ ಸಾಕ್ಷಿ ನಾಶಕ್ಕೆ ಅವಕಾಶ ನೀಡದೇ, ಶೀಘ್ರವೇ ಬಂಧಿಸಬೇಕು. ಪ್ರದೀಪ್‌ ಸಾವಿನಲ್ಲಿ ಅರವಿಂದ ಲಿಂಬಾವಳಿ ಪಾತ್ರ ಏನಿದೆ ಎಂಬುದು ಜನರಿಗೆ ತಿಳಿಯಬೇಕು. ಎಲ್ಲ ತಪ್ಪಿತಸ್ಥರಿಗೆ ಕಠಿಣ ಶಿಕ್ಷೆಯಾಗುವ ಮೂಲಕ ಪ್ರದೀಪ್‌ ಅವರ ಕುಟುಂಬಕ್ಕೆ ನ್ಯಾಯ ಸಿಗಬೇಕು ಎಂದು ಮುಖ್ಯಮಂತ್ರಿ ಚಂದ್ರು ಮನವಿ ಹೇಳಿದರು.

ಮಹದೇವಪುರ ವಿಧಾನಸಭಾ ಕ್ಷೇತ್ರದ ಎಎಪಿ ಅಧ್ಯಕ್ಷ ಅಶೋಕ್‌ ಮೃತ್ಯುಂಜಯ ಮಾತನಾಡಿ, ಅಧಿಕಾರದ ಮದದಲ್ಲಿರುವ ಬಿಜೆಪಿ ನಾಯಕರು ನಾನಾ ರೀತಿಯ ಅಕ್ರಮದಲ್ಲಿ ತೊಡಗಿಕೊಂಡಿದ್ದಾರೆ. ಇದರ ಪರಿಣಾಮವಾಗಿ ಪ್ರಾಮಾಣಿಕರು ಕಿರುಕುಳ ತಾಳಲಾರದೇ ಆತ್ಮಹತ್ಯೆ ಮಾಡಿಕೊಳ್ಳುವಂತಾಗಿದೆ. ಕೆಲವು ದಿನಗಳ ಹಿಂದೆ ತುಮಕೂರಿನ ಗುತ್ತಿಗೆದಾರ ಟಿ.ಎನ್‌.ಪ್ರಸಾದ್‌ ಆತ್ಮಹತ್ಯೆ ಮಾಡಿಕೊಂಡಿದ್ದರು. ಇದಕ್ಕೆ ಬಿಜೆಪಿ ಸರ್ಕಾರದ 40 ಪರ್ಸೆಂಟ್ ಕಮಿಷನ್‌ ದಂಧೆ ಕಾರಣ ಎಂದು ಹೇಳಲಾಗಿದೆ. ಆದರೆ ಇಂತಹ ಯಾವ ಪ್ರಕರಣದ ತನಿಖೆಯೂ ಸರಿಯಾಗಿ ನಡೆಯುತ್ತಿಲ್ಲ. ಪ್ರಭಾವಿಗಳನ್ನು ರಕ್ಷಿಸುವ ಉದ್ದೇಶದಿಂದ, ಸತ್ಯ ಹೊರಬಾರದಂತೆ ನೋಡಿಕೊಳ್ಳಲು ಬಿಜೆಪಿಯು ಅಧಿಕಾರದ ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂದು ಆಪಾದಿಸಿದರು.

Pradeep Suicide Case: AAP Urge for Arrest BJP MLA Arvind Limbavali

ಉದ್ಯಮಿ ಪ್ರದೀಪ್ ಎಂಬಾತ ತಲೆಗೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಈ ಸಂಬಂದ ಮೃತರ ಪತ್ನಿ ನೀಡಿದ ದೂರಿನ ಮೇರೆಗೆ ಕಗ್ಗಲಿ ಪುರ ಪೊಲೀಸ್ ಠಾಣೆಯಲ್ಲಿ ಶಾಸಕ ಅರವಿಂದ ಬೆಲ್ಲದ್ ಸೇರಿದಂತೆ ಆರು ಮಂದಿ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+