Prajwal Revanna Case: 19 ಶಾಸಕರ ಭವಿಷ್ಯ ಬೇಕೋ ತಮ್ಮ ಕುಟುಂಬದ ರೇವಣ್ಣ, ಪ್ರಜ್ವಲ್ ಮುಖ್ಯವೋ?
ಬೆಂಗಳೂರು, ಏಪ್ರಿಲ್. 29: ಹಾಸನದ ಎನ್ಡಿಎ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವಿಡಿಯೋ ಪ್ರಕರಣ ರಾಷ್ಟ್ರಾದ್ಯಾಂತ ಸದ್ದು ಮಾಡುತ್ತಿದ್ದು, ರಾಜಕೀಯ ಕೂಡ ಶುರುವಾಗಿದೆ. ಲೋಕಸಭಾ ಚುನಾವಣೆಯ ಎರಡನೇ ಹಂತದ ಮತದಾನ ಇನ್ನು ಬಾಕಿಯಿದ್ದು, ಬಿಜೆಪಿ- ಜೆಡಿಎಸ್ ಮೈತ್ರಿ ಮೇಲೆ ಪ್ರಭಾವ ಬೀರುವ ಸಂಭವವಿದೆ.
ಇದರ ಬೆನ್ನಲ್ಲೇ ಜೆಡಿಎಸ್ ಪಕ್ಷದಲ್ಲಿಯೇ ಪ್ರಜ್ವಲ್ ರೇವಣ್ಣ ಅವರ ಉದ್ಘಾಟನೆಗೆ ಭಾರಿ ಒತ್ತಡ ಕೇಳಿ ಬಂದಿದೆ. ಗುರುಮಿಠಕಲ್ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಶಾಸಕ ಶರಣಗೌಡ ಕಂದಕೂರು ಅವರು ಪಕ್ಷದ ವರಿಷ್ಠ, ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡರಿಗೆ ಪತ್ರ ಬರೆದು, ಪ್ರಜ್ವಲ್ ರೇವಣ್ಣ ಅವರನ್ನು ಪಕ್ಷದಿಂದ ಅಮಾನತುಗೊಳಿಸುವಂತೆ ಆಗ್ರಹಿಸಿದ್ದ ಬೆನ್ನಲ್ಲೇ, ಜೆಡಿಎಸ್ ಶಾಸಕ ಸಮೃದ್ಧಿ ಮಂಜುನಾಥ್ ಕೂಡ ಪ್ರಜ್ವಲ್ ಉಚ್ಛಾಟನೆಗೆ ಬೇಡಿಕೆಯಿಟ್ಟಿದ್ದಾರೆ.

19 ಶಾಸಕರ ಭವಿಷ್ಯ ಬೇಕೋ ತಮ್ಮ ಕುಟುಂಬದ ರೇವಣ್ಣ, ಪ್ರಜ್ವಲ್, ಮುಖ್ಯವೋ?
ಸಾಮಾಜಿಕ ಮಾಧ್ಯಮದಲ್ಲಿ ಈ ಬಗ್ಗೆ ಟ್ವೀಟ್ ಮಾಡಿರುವ ಮುಳಬಾಗಲು ವಿಧಾನಸಭಾ ಕ್ಷೇತ್ರದ ಜೆಡಿಎಸ್ ಶಾಸಕ ಸಮೃದ್ಧಿ ಮಂಜುನಾಥ್ ಅವರು '19 ಜನ ಶಾಸಕರ ಭವಿಷ್ಯ ಬೇಕೋ ತಮ್ಮ ಕುಟುಂಬದ ರೇವಣ್ಣರವರು.. ಪ್ರಜ್ವಲ್ ಅವರು ಮುಖ್ಯವೋ ತೀರ್ಮಾನಿಸಬೇಕಿದೆ' ಎಂದು ಒತ್ತಡ ಹಾಕಿದ್ದಾರೆ.
"ಇತ್ತಿಚಿನ ದಿನಗಳಲ್ಲಿ ಹಾಸನದ ಲೀಲೆಗಳು ಮಾಧ್ಯಮಗಳಲ್ಲಿ ಪ್ರಜ್ವಲಿಸುತ್ತಿರುವುದು ಪಕ್ಷದ ಸಾಮಾನ್ಯ ಕಾರ್ಯಕ್ರತರಾಗಿ ರಾಜ್ಯದಲ್ಲೆಡೆ ಮುಜುಗರಕ್ಕೆ ಒಳಗಾಗಿರುವುದಲ್ಲದೆ ಪಕ್ಷದ ಹೆಸರು ಹೇಳಲು ಸಹ ಹೇಸಿಗೆ ಅನಿಸುವಂತ ಸ್ಥಿತಿಗೆ ತಲುಪಿದೆ. ಮಾಧ್ಯಮದವರು ಕೇಳುವ ಪ್ರಶ್ನೆಗಳಿಗೆ ಉತ್ತರಿಸಲಾಗದ ದಯನೀಯ ಪರಿಸ್ಥಿತಿ ಮೊದಲ ಬಾರಿಗೆ ಶಾಸಕನಾಗಿರುವ ನನಗೆ ಈ ಕಷ್ಟಕರ ಸನ್ನಿವೇಶಗಳು ಎದುರಾಗುತ್ತಿದ್ದರೆ, ಸಾಮಾನ್ಯ ಕಾರ್ಯಕರ್ತರ ಪರಿಸ್ಥಿತಿಯಾದರೇನು ಯೋಚಿಸಿ..??" ಎಂದು ಪ್ರಶ್ನಿಸಿದ್ದಾರೆ.
ವಿನಂತಿಸಿಕೊಳ್ಳುವುದೇನೆಂದರೆ 19ಜನ ಶಾಸಕರ ಭವಿಷ್ಯ ಬೇಕೋ ತಮ್ಮ ಕುಟುಂಬದ ರೇವಣ್ಣರವರು ಪ್ರಜ್ವಲ್ ರವರು ಮುಖ್ಯವೋ ತೀರ್ಮಾನಿಸಬೇಕಿದೆ. 24ಗಂಟೆಗಳಲ್ಲಿ ಆರೋಪ ಹೊರಿರುವ ರೇವಣ್ಣ ಮತ್ತು ಪ್ರಜ್ವಲ್ ರವರನ್ನು ಪಕ್ಷದಿಂದ ಉಚ್ಛಾಟನೆ ಮಾಡಿ ಪಕ್ಷದ ಸಿದ್ಧಂತಗಳನ್ನು ಉಳಿಸಿ ಕಾರ್ಯಕರ್ತರನ್ನು ನಮ್ಮನ್ನು ಮುಜುಗರದಿಂದ ಪಾರು ಮಾಡಲು ಕೋರುತ್ತೇನೆ. pic.twitter.com/mDgDJ2GgHW
— ಸಮೃದ್ಧಿ ಮಂಜುನಾಥ್ | Samruddhi Manjunath (@SamManjuJDS) April 29, 2024
"ಮಾನ್ಯ ವರಿಷ್ಠರು ರಾಷ್ಟ್ರಾಧ್ಯಕ್ಷರು ಎಚ್.ಡಿ.ದೇವೇಗೌಡ ಅಪ್ಪಾಜಿ, ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಣ್ಣ ಅವರು ಸೂಕ್ತ ತೀರ್ಮಾನ ತೆಗೆದುಕೊಳ್ಳಬೇಕಾದ ಸಮಯವಿದಾಗಿದೆ. ವಿನಂತಿಸಿಕೊಳ್ಳುವುದೇನೆಂದರೆ 19 ಜನ ಶಾಸಕರ ಭವಿಷ್ಯ ಬೇಕೋ ತಮ್ಮ ಕುಟುಂಬದ ರೇವಣ್ಣರವರು ಪ್ರಜ್ವಲ್ ರವರು ಮುಖ್ಯವೋ ತೀರ್ಮಾನಿಸಬೇಕಿದೆ" ಎಂದು ತಿಳಿಸಿದ್ದಾರೆ.
ಜೊತೆಗೆ, " 24 ಗಂಟೆಗಳಲ್ಲಿ ಆರೋಪ ಹೊತ್ತಿರುವ ರೇವಣ್ಣ ಮತ್ತು ಪ್ರಜ್ವಲ್ ಅವರನ್ನು ಪಕ್ಷದಿಂದ ಉಚ್ಛಾಟನೆ ಮಾಡಿ ಪಕ್ಷದ ಸಿದ್ಧಾಂತಗಳನ್ನು ಉಳಿಸಿ ಕಾರ್ಯಕರ್ತರನ್ನು ನಮ್ಮನ್ನು ಮುಜುಗರದಿಂದ ಪಾರು ಮಾಡಲು ಕೋರುತ್ತೇನೆ" ಎಂದು 24 ಗಂಟೆಗಳ ಸಮಯಾವಕಾಶ ನೀಡಿದ್ದಾರೆ.
ಪ್ರಜ್ವಲ್ ರೇವಣ್ಣ ಅಮಾನತಿಗೆ ಆಗ್ರಹಿಸಿದ್ದ ಶರಣಗೌಡ ಕಂದಕೂರು
ಜೆಡಿಎಸ್ ಶಾಸಕ ಶರಣಗೌಡ ಕಂದಕೂರು ಕೂಡ ಜೆಡಿಎಸ್ ವರಿಷ್ಠ ಎಚ್ಡಿ ದೇವೇಗೌಡ ಅವರಿಗೆ ಪತ್ರ ಬರೆದು ಪ್ರಜ್ವಲ್ ರೇವಣ್ಣ ಅವರ ಅಮಾನತಿಗೆ ಆಗ್ರಹಿಸಿದ್ದಾರೆ. "ಕೆಲದಿನಗಳಿಂದ ರಾಜ್ಯಾದ್ಯಂತ ಹರಿದಾಡುತ್ತಿರುವ ಅಶ್ಲೀಲ ವೀಡಿಯೋ ತುಣುಕುಗಳಿಂದ ಪಕ್ಷಕ್ಕೆ ತೀರಾ ಮುಜುಗರ ಉಂಟಾಗಿದೆ. ಸದರಿ ವೀಡಿಯೋ ದೃಶ್ಯಗಳಲ್ಲಿ ಸಂಸದರಾದ ಪ್ರಜ್ವಲ್ ರೇವಣ್ಣ ಅವರು ಕಾಣಿಸಿಕೊಂಡಿದ್ದಾರೆ. ಸದ್ಯ ಮೇಲ್ನೋಟಕ್ಕೆ ಅವರು ತಪ್ಪಿತಸ್ಥರೆಂದು ಭಾವನೆ ಉಂಟಾಗಿದೆ. ಪ್ರಯುಕ್ತ ಅವರನ್ನು ಕೂಡಲೇ ಪಕ್ಷದಿಂದ ಅಮಾನತು ಮಾಡಲು ತಮ್ಮಲ್ಲಿ ಕೋರುತ್ತೇನೆ" ಎಂದು ಮನವಿ ಮಾಡಿದ್ದಾರೆ.
-
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
RCB Vs SRH: ಎಸ್ಆರ್ಎಚ್ ವಿರುದ್ಧದ ಐಪಿಎಲ್ ಉದ್ಘಾಟನಾ ಪಂದ್ಯದ ಟಿಕೆಟ್ ಬುಕಿಂಗ್ ಕುರಿತು ಆರ್ಸಿಬಿ ಬಿಗ್ ಅಪ್ಡೇಟ್ -
ತಿಂಗಳಿಗೆ 50 ಸಾವಿರ ಸಂಬಳ ಇದೆಯಾ? 2026ರಲ್ಲಿ ಬೆಂಗಳೂರಿನಂತಹ ಮಹಾನಗರದಲ್ಲಿ ಜೀವನ ವೆಚ್ಚ ಎಷ್ಟಾಗುತ್ತೆ ಗೊತ್ತಾ? ಇಲ್ಲಿದೆ ಮಾಹಿತಿ -
ಜೋಶ್ ಹ್ಯಾಜಲ್ವುಡ್ ಔಟ್, 7 ಕೋಟಿಯ ಆಟಗಾರನಿಗಿಲ್ಲ ಸ್ಥಾನ; ಅಶ್ವಿನ್ ಹೇಳಿದ ಆರ್ಸಿಬಿ ಸಂಭಾವ್ಯ ಪ್ಲೇಯಿಂಗ್ 11 ಇಲ್ಲಿದೆ -
AI ಮೂಲಕ ಬರುವ ಉದ್ಯೋಗ ಅರ್ಜಿಗಳಿಂದ ಬೆಂಗಳೂರು ಉದ್ಯಮಿ ಬೇಸರ: 'ಅರ್ಜಿಗಳು ಜಾಸ್ತಿ, ಅರ್ಹತೆ ಕಡಿಮೆ’ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣದ ಸ್ಥಳ: ಸಚಿವ ಎಂ.ಬಿ.ಪಾಟೀಲ್ ಮಹತ್ವದ ಮಾಹಿತಿ -
Power Cut: ನಾಳೆ ಮಾ.22 ರಿಂದ 25ರವರೆಗೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ: ಬೆಸ್ಕಾಂ -
ಕೇವಲ 2 ನಿಮಿಷದಲ್ಲಿ ಉದ್ಯೋಗ ಅರ್ಜಿ ರಿಜೆಕ್ಟ್: 'ಎಐ' ನೇಮಕಾತಿ ಬಗ್ಗೆ ಭಾರತೀಯ ಮೂಲದ ವಿದ್ಯಾರ್ಥಿನಿ ಬೇಸರ -
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain












Click it and Unblock the Notifications