ಹೈಕೋರ್ಟ್ ಸಮನ್ಸ್ ಸ್ವೀಕರಿಸದ ಪ್ರಜ್ವಲ್ ರೇವಣ್ಣ, ಜಾಹಿರಾತಿಗೆ ಅನುಮತಿ
Recommended Video
ಬೆಂಗಳೂರು, ಸೆಪ್ಟೆಂಬರ್ 06: ಚುನಾವಣಾ ಆಯೋಗಕ್ಕೆ ಸುಳ್ಳು ದಾಖಲೆ ಸಲ್ಲಿಸಿದ್ದ ಪ್ರಕರಣದಲ್ಲಿ ಹೈಕೋರ್ಟ್ ನೀಡಿದ್ದ ಸಮನ್ಸ್ ಅವನ್ನು ಸಂಸದ ಪ್ರಜ್ವಲ್ ರೇವಣ್ಣ ಸ್ವೀಕರಿಸಿಲ್ಲದಿರುವ ಕಾರಣ ಸಮನ್ಸ್ ಅನ್ನು ಪತ್ರಿಕೆಯಲ್ಲಿ ಪ್ರಕಟಿಸಲು ಅನುಮತಿ ನೀಡಲಾಗಿದೆ.
ಕಳೆದ ಲೋಕಸಭೆ ಚುನಾವಣೆಯಲ್ಲಿ ಹಾಸನದಿಂದ ಸ್ಪರ್ಧಿಸಿದ್ದ ಪ್ರಜ್ವಲ್ ರೇವಣ್ಣ ಅವರು, ಆಸ್ತಿ ವಿವರಗಳನ್ನು ಮುಚ್ಚಿಟ್ಟಿದ್ದಾರೆ ಎಂದು ಅವರ ಮೇಲೆ ಪ್ರಕರಣ ದಾಖಲಾಗಿತ್ತು. ಪ್ರಕರಣದ ವಿಚಾರಣೆ ನಡೆಸಿದ ಹೈಕೋರ್ಟ್ ಪ್ರಜ್ವಲ್ ರೇವಣ್ಣ ಅವರಿಗೆ ಸಮನ್ಸ್ ಅವರಿಗೆ ಸಮನ್ಸ್ ಜಾರಿ ಮಾಡಿತ್ತು ಆದರೆ ಪ್ರಜ್ವಲ್ ರೇವಣ್ಣ ಅವರು ಸಮನ್ಸ್ ಅನ್ನು ಸ್ವೀಕರಿಸಿಲ್ಲ.
ಹಾಸನದ ಪ್ರಜ್ವಲ್ ರೇವಣ್ಣ ಅವರ ನಿವಾಸಕ್ಕೆ ಸಮನ್ಸ್ ಅನ್ನು ತಲುಪಿಸುವ ಯತ್ನ ಮಾಡಲಾಯಿತು. ಆದರೆ ಪ್ರಜ್ವಲ್ ರೇವಣ್ಣ ಅವರು ಆ ವಿಳಾಸದಲ್ಲಿ ಇರಲಿಲ್ಲ, ಹಲವು ದಿನದಿಂದ ಅವರಿಗೆ ಸಮನ್ಸ್ ನೀಡುವ ಯತ್ನ ಮಾಡಿದರೂ ಸಹ ಸಾಧ್ಯವಾಗಿರಲಿಲ್ಲ, ಹಾಗಾಗಿ ವಕೀಲರ ಮನವಿಯಂತೆ ಸಮನ್ಸ್ ಅನ್ನು ಪತ್ರಿಕೆಯ ಜಾಹಿರಾತಾಗಿ ಪ್ರಕಟಿಸಲು ಅನುಮತಿ ನೀಡಲಾಗಿದೆ.

ಸಮನ್ಸ್ನ ಅನ್ವಯ ಸೆಪ್ಟೆಂಬರ್ 30 ರ ಒಳಗಾಗಿ ಪ್ರಜ್ವಲ್ ರೇವಣ್ಣ ಅವರು ಆರೋಪಕ್ಕೆ ಉತ್ತರ ನೀಡಬೇಕಿದೆ. ಸೆಪ್ಟೆಂಬರ್ 30 ರ ಒಳಗೆ ಉತ್ತರ ನೀಡದಿದ್ದಲ್ಲಿ ಕಠಿಣ ಕ್ರಮವನ್ನು ಎದುರಿಸಬೇಕಾದ ಸಂದರ್ಭ ಬರಲಿದೆ.
ಹಾಸನದಲ್ಲಿ ಬಿಜೆಪಿ ಅಭ್ಯರ್ಥಿ ಆಗಿದ್ದ ಎ.ಮಂಜು ಅವರು ಸಹ ದೂರು ಸಲ್ಲಿಸಿದ್ದು, ಆಸ್ತಿ ವಿವರ ಮುಚ್ಚಿಟ್ಟ ಆರೋಪವು ಸಾಬೀತಾದರೆ ಪ್ರಜ್ವಲ್ ರೇವಣ್ಣ ಅವರು ತಮ್ಮ ಸಂಸದ ಸ್ಥಾನ ಕಳೆದುಕೊಳ್ಳುವ ಅಪಾಯವಿದೆ.
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications