Prajwal Revanna case: ನಮ್ಮ ನಡಿಗೆ ಹಾಸನದ ಕಡೆಗೆ ಎಂದ 'ನಾವೆದ್ದು ನಿಲ್ಲದಿದ್ದರೆ' ಸಂಘಟನೆ
ಬೆಂಗಳೂರು, ಮೇ. 28: ಈಗಾಗಲೇ ಹಾಸನ ಸಂಸದ, ಎನ್ಡಿಎ ಲೋಕಸಭಾ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಲೈಂಗಿಕ ಪ್ರಕರಣದ ಸಂತ್ರಸ್ತ ಮಹಿಳೆಯರಿಗೆ ನ್ಯಾಯ ಒದಗಿಸುವಂತೆ ಆಗ್ರಹಿಸಿ ಮೇ 30ರಂದು ಹಾಸನ ಚಲೋಗೆ ಕರೆ ನೀಡಲಾಗಿದೆ. ಇದರ ಬೆನ್ನಲ್ಲೇ ಮಾನವ ಹಕ್ಕುಗಳ ಸಂಘಟನೆ 'ನಾವೆದ್ದು ನಿಲ್ಲದಿದ್ದರೆ' ಈ ಪ್ರತಿಭಟನೆಗೆ ಬೆಂಬಲ ಸೂಚಿಸಿದೆ.
'ನಮ್ಮ ನಡಿಗೆ ಹಾಸನದ ಕಡೆಗೆ' ಎಂಬ ಘೋಷಣೆ ಅಡಿಯಲ್ಲಿ ಸಂಸದ ಪ್ರಜ್ವಲ್ ರೇವಣ್ಣ ಅವರ ಲೈಂಗಿಕ ದೌರ್ಜನ್ಯಕ್ಕೆ ಒಳಗಾದ ಸಂತ್ರಸ್ತರಿಗೆ ನ್ಯಾಯ ಒದಗಿಸುವಂತೆ ಆಗ್ರಹಿಸಿ ಚಲೋ ನಡೆಸುವುದಾಗಿ 'ನಾವೆದ್ದು ನಿಲ್ಲದಿದ್ದರೆ' ಸಂಘಟನೆ ಘೋಷಣೆ ಮಾಡಿದೆ. ಪ್ರಗತಿಪರ ಸಂಘಟನೆಗಳ ಒಕ್ಕೂಟ ಹಮ್ಮಿಕೊಂಡಿರುವ ಪ್ರತಿಭಟನೆಗೆ ಸಾಥ್ ನೀಡಲಿದೆ.

'ನಮ್ಮ ನಡಿಗೆ ಹಾಸನದ ಕಡೆಗೆ'
ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ವಿವಿಧ ಪ್ರಗತಿಪರ ಗುಂಪುಗಳ 10,000 ಕ್ಕೂ ಹೆಚ್ಚು ವ್ಯಕ್ತಿಗಳು ಮೇ 30 ರಂದು ಹಾಸನಕ್ಕೆ 'ನ್ಯಾಯ ಮೆರವಣಿಗೆ' ನಡೆಸಲಿದ್ದಾರೆ. ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ಅವರ ರಾಜಕೀಯ ಅಧಿಕಾರ, ಸಾಂವಿಧಾನಿಕ ಜವಾಬ್ದಾರಿ ಮತ್ತು ಜಾತಿ ಸವಲತ್ತುಗಳನ್ನು ದುರುಪಯೋಗ ಪಡಿಸಿಕೊಂಡಿದ್ದಾರೆ. ಅವರನ್ನು ತಕ್ಷಣ ಬಂಧಿಸಬೇಕು ಎಂದು ಒತ್ತಾಯಿಸಿದೆ.
ಏಪ್ರಿಲ್ನಲ್ಲಿ ಪ್ರಕರಣ ಬೆಳಕಿಗೆ ಬಂದ ನಂತರ ಭಾರತದಿಂದ ಪಲಾಯನ ಮಾಡಿದ ಸಂಸದರನ್ನು ಮರಳಿ ಕರೆತರುವಲ್ಲಿ ಕೇಂದ್ರ ಸರ್ಕಾರದ 'ಉದ್ದೇಶಪೂರ್ವಕ ವಿಳಂಬ' ಮಾಡಿದೆ ಎಂದು ಅಖಿಲ ಭಾರತ ಪ್ರಗತಿಪರ ಮಹಿಳಾ ಸಂಘದ ಮೈತ್ರೇಯಿ ಕೃಷ್ಣನ್ ಆರೋಪಿಸಿದ್ದಾರೆ. ಜೊತೆಗೆ ಪ್ರಜ್ವಲ್ ಅವರ ರಾಜತಾಂತ್ರಿಕ ವೀಸಾವನ್ನು ತಕ್ಷಣವೇ ರದ್ದುಗೊಳಿಸಬೇಕೆಂದು ಒತ್ತಾಯಿಸಿದ್ದಾರೆ.
"ಪ್ರಜ್ವಲ್ ಮತ್ತು ಅವರ ತಂದೆ ಎಚ್ ಡಿ ರೇವಣ್ಣ ಅವರು ಮಾಡಿದ ಘೋರ ಅಪರಾಧಗಳ ಚರ್ಚೆಯನ್ನು ಬಿಟ್ಟು, ಪೆನ್ ಡ್ರೈವ್ಗಳನ್ನು ಯಾರು ಹಂಚಿದ್ದಾರೆ ಎಂಬುದಕ್ಕೆ ಪ್ರಾಮುಖ್ಯತೆ ನೀಡುವುದನ್ನು ನೋಡುವುದು ಅಸಹನೀಯವಾಗಿದೆ. ರಾಜಕೀಯ ಲಾಭದ ಉದ್ದೇಶದಿಂದ ಇದನ್ನು ಮಾಡಲಾಗಿದೆ. ಯಾವುದೇ ಬೆಲೆ ತೆತ್ತಾದರೂ ಪ್ರಜ್ವಲ್ನನ್ನು ತಕ್ಷಣವೇ ಬಂಧಿಸಬೇಕೆಂದು ನಾವು ಒತ್ತಾಯಿಸುತ್ತೇವೆ" ಎಂದು ಮಹಿಳಾ ಮತ್ತು ಮಾನವ ಹಕ್ಕುಗಳ ಕಾರ್ಯಕರ್ತೆ ಅಕ್ಕೈ ಪದ್ಮಶಾಲಿ ಆಗ್ರಹಿಸಿದ್ದಾರೆ.

ಹಾಸನದ ತುಳಿತಕ್ಕೊಳಗಾದ ಸಮುದಾಯಗಳಿಂದ ಬಂದ ಹಲವಾರು ಮಹಿಳೆಯರ ಜೀವನ ಈ ಪ್ರಕರಣದ ಮೇಲೆ ನಿಂತಿದ್ದು, ಇಡೀ ಪ್ರಕರಣವನ್ನು ಸೂಕ್ಷ್ಮತೆಯಿಂದ ನೋಡಬೇಕು. ಸಂತ್ರಸ್ತ ಮಹಿಳೆಯರ ಘನತೆ ಮತ್ತು ಖಾಸಗಿತನವನ್ನು ಎಲ್ಲ ರೀತಿಯಲ್ಲೂ ಕಾಪಾಡಬೇಕು ಎಂದು ಜನವಾದಿ ಮಹಿಳಾ ಸಂಘಟನೆಯ ರಾಜ್ಯ ಉಪಾಧ್ಯಕ್ಷೆ ವಿಮಲಾ ಕೆ.ಎಸ್. ಹೇಳಿದ್ದಾರೆ.
ಜೊತೆಗೆ ಸಂತ್ರಸ್ತರಿಗೆ ವೈಯಕ್ತಿಕ ಸಮಾಲೋಚನೆ, ಕಾನೂನು ಸಲಹೆ, ಸೂಕ್ತ ರಕ್ಷಣೆ, ಪುನರ್ವಸತಿ ಮತ್ತು ಪರಿಹಾರದ ಬೇಡಿಕರಯನ್ನು ಮುಂದಿಡುವುದು ಕೂಡ ಈ ಹಾಸನ ಚಲೋದ ಗುರಿಯಾಗಿದೆ ಎಂದು ಅಕ್ಕೈ ಪದ್ಮಶಾಲಿ ಘೋಷಿಸಿದ್ದಾರೆ. ಇನ್ನು, ಸೈಬರ್ ಪೊಲೀಸರು ಸಾಮಾಜಿಕ ಮಾಧ್ಯಮದಿಂದ ವೈರಲ್ ಆಗಿರುವ ಎಲ್ಲಾ ವೀಡಿಯೊಗಳನ್ನು ತೆಗೆದುಹಾಕಬೇಕು ಎಂದು 'ನಾವೆದ್ದು ನಿಲ್ಲದಿದ್ದಿರೆ' ಸಮಘಟನೆ ಒತ್ತಾಯಿಸಿದೆ.
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
ಕಾಂತಾರ ವಿವಾದ: ಮೈಸೂರು ಚಾಮುಂಡಿ ಬೆಟ್ಟಕ್ಕೆ ಬರ್ತೀನಿ, ಕ್ಷಮೆಯೂ ಕೇಳ್ತೀನಿ ಎಂದ ನಟ ರಣವೀರ್ ಸಿಂಗ್












Click it and Unblock the Notifications