ಪೋಸ್ಟ್ ಕಾರ್ಡ್ ಕನ್ನಡ ವೆಬ್ ಸೈಟ್ ವಿರುದ್ಧ ಪ್ರಕಾಶ್ ರೈ ದೂರು
ಬೆಂಗಳೂರು, ಏಪ್ರಿಲ್ 4: ಪೋಸ್ಟ್ ಕಾರ್ಡ್ ಕನ್ನಡ ವೆಬ್ ಸೈಟ್ ವಿರುದ್ಧ ನಟ ಪ್ರಕಾಶ್ ರೈ ಬುಧವಾರ ಕಬ್ಬನ್ ಪಾರ್ಕ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಸೆಕ್ಷನ್ 66, ಸೆಕ್ಷನ್ 43(i), ಸೆಕ್ಷನ್ 2(1)(k) ಮತ್ತು ಸೆಕ್ಷನ್ 2(1)(o) ಮಾಹಿತಿ ತಂತ್ರಜ್ಞಾನ ಕಾಯ್ದೆ 2000 ಅಡಿಯಲ್ಲಿ ದೂರು ದಾಖಲಿಸಿದ್ದಾರೆ.
"ಮಗನ ಸಾವಿನ ದುಃಖದಲ್ಲಿದ್ದ ಹೆಂಡತಿಯನ್ನು ಬಿಟ್ಟು ಡ್ಯಾನ್ಸರ್ ಹಿಂದೆ ಓಡಿದ ಪ್ರಕಾಶ್ ರೈಯಂಥವನು ಮೋದಿ-ಯೋಗಿಗೆ ಹೇಳುವಷ್ಟು ಯೋಗ್ಯತೆ ಇರುವವನೆ?" ಹಾಗೂ "ಮಾನ ಇಲ್ಲದವನಿಂದ ಮಾನನಷ್ಟ ಮೊಕದ್ದಮೆ ದಾಖಲು" ಎಂಬ ಅವಹೇಳನಕಾರಿ ಲೇಖನವನ್ನು ಪೋಸ್ಟ್ ಕಾರ್ಡ್ ವೆಬ್ ಸೈಟ್ ನಲ್ಲಿ ಪ್ರಕಾಶ್ ರೈ ಅವರ ಬಗ್ಗೆ ಬರೆಯಲಾಗಿತ್ತು ಎಂದು ಆರೋಪಿಸಲಾಗಿದೆ.
ಆ ಲೇಖನಗಳನ್ನು ತಪಸ್ವಿ ಹಾಗೂ ಚೇಕಿತಾನ್ ಎಂಬ ಹೆಸರುಗಳಲ್ಲಿ ಬರೆಯಲಾಗಿತ್ತು. ಆ ವೆಬ್ ಸೈಟ್ ನ ವಿಳಾಸವಾಗಲೀ, ಲೇಖನ ಬರೆದವರ ಮಾಹಿತಿಯಾಗಲೀ ಈ ವರೆಗೆ ಲಭ್ಯವಾಗಿರಲಿಲ್ಲ. ಎಲ್ಲ ಪ್ರಯತ್ನದ ನಂತರವೂ ವೆಬ್ ಸೈಟ್ ನ ಮಾಲೀಕರು ಹಾಗೂ ಲೇಖಕರ ವಿಳಾಸ ಪತ್ತೆ ಮಾಡಲು ಆಗಿರಲಿಲ್ಲ ಎಂದು ಪ್ರಕಾಶ್ ರೈ ತಿಳಿಸಿದ್ದಾರೆ.

ನನ್ನ ವಿರುದ್ಧವಾದ ಆಧಾರರಹಿತ ಹಾಗೂ ಅವಹೇಳನಕಾರಿ ಮತ್ತು ವಿಶ್ವಾಸಾರ್ಹವಲ್ಲದ ಲೇಖನಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹರಡಲಾಗಿದೆ. ಇದು ಸುಳ್ಳು ಸುದ್ದಿ ಹರಡುವುದಾಗಿದೆ. ಎಫ್ ಐಆರ್ ದಾಖಲಿಸಿ, ಇಂಟರ್ ನೆಟ್ ನಿಂದ ಈ ಲೇಖನಗಳನ್ನು ತೆಗೆಸಬೇಕು ಎಂದು ಮನವಿ ಮಾಡಿದ್ದಾರೆ ಪ್ರಕಾಶ್ ರೈ.
ಸುಳ್ಳು ಸುದ್ದಿ ಪ್ರಕಟಿಸಿದ ಆರೋಪದ ಮೇಲೆ ಪೋಸ್ಟ್ ಕಾರ್ಡ್ ಡಾಟ್ ಕಾಂ ಮಾಲೀಕ ವಿಕ್ರಂ ಹೆಗ್ಡೆಯವರನ್ನು ಬೆಂಗಳೂರಿನ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಅವರು ತಮ್ಮ ವೆಬ್ ಸೈಟ್ ನಲ್ಲಿ ಜೈನ ಮುನಿ ಮೇಲೆ ಹಲ್ಲೆ ಎಂಬ ಸುದ್ದಿ ಪ್ರಕಟಿಸಿದ್ದರು.
ಆದರೆ ಜೈನ ಮುನಿ, ನಂಜನಗೂಡಿನಲ್ಲಿ ಅಪಘಾತದಿಂದ ಗಾಯಗೊಂಡಿದ್ದು, ಅವರ ಮೇಲೆ ಯಾವುದೇ ರೀತಿಯ ಹಲ್ಲೆ ನಡೆದಿರಲಿಲ್ಲ ಎಂದು ಗಫಾರ್ ಬೇಗ್ ಎಂಬುವವರು ಕ್ರೈಂ ಸೆಲ್ ಗೆ ನೀಡಿದ್ದ ದೂರಿನ ಮೇಲೆ ಹೆಗ್ಡೆಯನ್ನು ಪೊಲೀಸರು ಬಂಧಿಸಿದ್ದಾರೆ.
-
Karnataka: ಧಾರ್ಮಿಕ ಮೆರವಣಿಗೆ, ಜಯಂತಿಗಳಲ್ಲಿ DJ ಸದ್ದಿಗೆ ಬ್ರೇಕ್? 'ಐಟಂ ಸಾಂಗ್' ಬ್ಯಾನ್ ಮಾಡಲು ರಾಜ್ಯ ಸರ್ಕಾರ ಒಲವು -
Property Mutation: ಆಸ್ತಿ ನೋಂದಣಿ ನಂತರ ಶೇ.98ರಷ್ಟು ಖಾತೆಗಳು ಸ್ವಯಂ ಚಾಲಿತವಾಗಿ ಬದಲಾವಣೆ: ಸಚಿವ ಕೃಷ್ಣ ಬೈರೇಗೌಡ -
SSLC ಪರೀಕ್ಷೆ-1 ಆರಂಭ: ಮಲ್ಲೇಶ್ವರಂನ ಕೆಪಿಎಸ್ ಶಾಲೆಗೆ ಸಚಿವ ಮಧು ಬಂಗಾರಪ್ಪ ಭೇಟಿ, ವಿದ್ಯಾರ್ಥಿಗಳಿಗೆ ಶುಭಹಾರೈಕೆ -
Gold Price Today: ಯುಗಾದಿಗೂ ಮೊದಲೇ ಚಿನ್ನದ ದರದಲ್ಲಿ ಭಾರೀ ಇಳಿಕೆ; ಆಭರಣ ಪ್ರಿಯರಿಗೆ ಇಂದೇ ಹಬ್ಬ -
RCB: ಆರ್ಸಿಬಿಯಲ್ಲಿ ಜೋಶ್ ಹ್ಯಾಜಲ್ವುಡ್ ಸ್ಥಾನ ತುಂಬುವ ಆಟಗಾರ ಇವರೇ ನೋಡಿ -
ಶೆಲ್ ಬಂಕ್ನಲ್ಲಿ ಪೆಟ್ರೋಲ್ ದರ ಏರಿಕೆ: ಬೆಂಗಳೂರಿನಲ್ಲಿ 10 ದಿನಗಳಲ್ಲಿ 4.50 ರೂಪಾಯಿ ಹೆಚ್ಚಳ; ಇಲ್ಲಿದೆ ದರಪಟ್ಟಿ -
ಮಗುವನ್ನ ಸಾಕಲು ಹಣ ಬೇಕಾದ್ರೆ ಯಾರ ಜೊತೆ ಬೇಕಿದ್ರೂ ಮಲಗುವೆ: ಬಿಗ್ಬಾಸ್ ಖ್ಯಾತಿಯ ಚಂದ್ರಿಕಾ ದೀಕ್ಷಿತ್ -
Karnataka Weather: ಬೆಂಗಳೂರು ಸೇರಿದಂತೆ ರಾಜ್ಯದ 17 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
ಸರಕು ಖಾಲಿಯಾಯ್ತಾ ಪ್ರೇಮ್, ಇಡೀ ದೇಶದ ಮುಂದೆ ಕನ್ನಡಿಗರು ತಲೆತಗ್ಗಿಸುವಂತೆ ಮಾಡಿದಿರಿ: ಸೆರಗ ಸರ್ಸೆ ಹಾಡಿಗೆ ವಿರೋಧ -
ಟೀಂ ಇಂಡಿಯಾಗೆ ನನ್ನದೊಂದು ಸಲಾಂ, ಐಪಿಎಲ್ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಪಂಜಾಬ್ ಕಿಂಗ್ಸ್ ಕೋಚ್ ರಿಕಿ ಪಾಂಟಿಂಗ್ -
Horoscope March 17; ಈ ರಾಶಿಯವರ ಅದೃಷ್ಟ ಇಂದು ಬದಲಾಗಬಹುದು -
Byadagi Chilli: ಕರ್ನಾಟಕದ ಕೆಂಪು ಚಿನ್ನ ಬ್ಯಾಡಗಿ ಮೆಣಸಿನಕಾಯಿಗೆ ಹೊಸ ಸಂಕಷ್ಟ, ರೈತರು ಕಂಗಾಲು












Click it and Unblock the Notifications