ಪುಸ್ತಕ ಬಿಡುಗಡೆ ಮುನ್ನವೇ ಜಾಫರ್ ಷರೀಫ್ ವಿಧಿವಶ
ಬೆಂಗಳೂರು, ನವೆಂಬರ್ 28 : ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಇಂದು ಬೆಂಗಳೂರಿಗೆ ಭೇಟಿ ನೀಡಲಿದ್ದಾರೆ. ಕೇಂದ್ರ ಮಾಜಿ ಸಚಿವ ಜಾಫರ್ ಷರೀಫ್ ನಿವಾಸಕ್ಕೆ ಭೇಟಿ ನೀಡಲಿರುವ ಅವರು, ಕುಟುಂಬಸ್ಥರಿಗೆ ಸಾಂತ್ವನ ಹೇಳಲಿದ್ದಾರೆ.
ಪೂರ್ವ ನಿಗದಿತ ಕಾರ್ಯಕ್ರಮದ ಪ್ರಕಾರ ಪ್ರಣಬ್ ಮುಖರ್ಜಿ ಅವರು ಇಂದು ಅರಮನೆ ಮೈದಾನದಲ್ಲಿ 'ಇಂಡಿಯಾ ವಿನ್ಸ್ ಫ್ರೀಡಂ' ಪುಸ್ತಕವನ್ನು ಬಿಡುಗಡೆ ಮಾಡಬೇಕಿತ್ತು. ಆದರೆ, ಪುಸ್ತಕ ಬಿಡುಗಡೆಗೆ ಮುನ್ನವೇ ಜಾಫರ್ ಷರೀಫ್ ವಿಧಿವಶರಾದರು.
ಮೌಲಾನಾ ಅಬ್ದುಲ್ ಕಲಾಮ್ ಆಝಾದ್ ಅವರ 'ಇಂಡಿಯಾ ವಿನ್ಸ್ ಫ್ರೀಡಂ' ಪುಸ್ತಕವನ್ನು ಜಾಫರ್ ಷರೀಫ್ ಉರ್ದು ಭಾಷೆಗೆ ಅನುವಾದ ಮಾಡಿಸಿದ್ದರು. ಇಂದು ಪ್ರಣಬ್ ಮುಖರ್ಜಿ ಪುಸ್ತಕವನ್ನು ಬಿಡುಗಡೆ ಮಾಡಬೇಕಿತ್ತು.
ಆದರೆ, ಪುಸ್ತಕ ಬಿಡುಗಡೆಗೆ ಮುನ್ನವೇ ಜಾಫರ್ ಷರೀಫ್ ವಿಧಿವಶರಾಗಿದ್ದಾರೆ. ಆದ್ದರಿಂದ, ಪೂರ್ವ ನಿಗದಿ ಕಾರ್ಯಕ್ರಮದಂತೆ ಪ್ರಣಬ್ ಮುಖರ್ಜಿ ಬೆಂಗಳೂರಿಗೆ ಬರಲಿದ್ದು, ಜಾಫರ್ ಷರೀಫ್ ಕುಟುಂಬಕ್ಕೆ ಸಾಂತ್ವನ ಹೇಳಲಿದ್ದಾರೆ.

ಜಾಫರ್ ಷರೀಫ್ ನಿವಾಸಕ್ಕೆ ಭೇಟಿ
ಬುಧವಾರ ಮಧ್ಯಾಹ್ನ 3 ಗಂಟೆಗೆ ಪ್ರಣಬ್ ಮುಖರ್ಜಿ ಅವರು ಬೆಂಗಳೂರಿಗೆ ಆಗಮಿಸಲಿದ್ದು, ಜಾಫರ್ ಷರೀಫ್ ನಿವಾಸಕ್ಕೆ ತೆರಳಿ ಕುಟುಂಬದವರಿಗೆ ಸಾಂತ್ವನ ಹೇಳಲಿದ್ದಾರೆ. ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ಸಚಿವ ಜಮೀರ್ ಅಹಮದ್ ಖಾನ್ ಮುಂತಾದವರು ಈ ಸಂದರ್ಭದಲ್ಲಿ ಉಪಸ್ಥಿತರಿರುವರು.

ಜಾಫರ್ ಷರೀಫ್ ವಿಧಿವಶ
ಕೇಂದ್ರ ಮಾಜಿ ಸಚಿವ, ಹಿರಿಯ ಕಾಂಗ್ರೆಸ್ ನಾಯಕ ಸಿ.ಕೆ.ಜಾಫರ್ ಷರೀಫ್ ನವೆಂಬರ್ 25ರಂದು ವಿಧಿವಶರಾಗಿದ್ದರು. ನವೆಂಬರ್ 26ರಂದು ಅವರ ಅಂತ್ಯಕ್ರಿಯೆ ಬೆಂಗಳೂರಿನಲ್ಲಿ ನಡೆದಿತ್ತು. ಪ್ರಣಬ್ ಮುಖರ್ಜಿ ಅವರು ಇಂದು ಕುಟುಂಬದವರಿಗೆ ಸಾಂತ್ವನ ಹೇಳಲಿದ್ದಾರೆ.

ಆಸ್ಪತ್ರೆಗೆ ದಾಖಲಾಗಿದ್ದರು
85 ವರ್ಷದ ಜಾಫರ್ ಷರೀಫ್ ಅವರು ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದರು. ಉಸಿರಾಟದ ತೊಂದರೆ ಕಾಣಿಸಿಕೊಂಡ ಹಿನ್ನಲೆಯಲ್ಲಿ ಅವರನ್ನು ನವೆಂಬರ್ 23ರಂದು ಬೆಂಗಳೂರಿನಗ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೇ ಅವರು ನವೆಂಬರ್ 25ರಂದು ಮೃತಪಟ್ಟಿದ್ದರು.

ಪುಸ್ತಕ ಬಿಡುಗಡೆ ಕಾರ್ಯಕ್ರಮ
ಜಾಫರ್ ಷರೀಫ್ ಅವರು ಮೌಲಾನಾ ಅಬ್ದುಲ್ ಕಲಾಮ್ ಆಝಾದ್ ಅವರ 'ಇಂಡಿಯಾ ವಿನ್ಸ್ ಫ್ರೀಡಂ' ಪುಸ್ತಕವನ್ನು ಉರ್ದು ಭಾಷೆಗೆ ಅನುವಾದ ಮಾಡಿಸಿದ್ದರು. ಇಂದು ಪ್ರಣಬ್ ಮುಖರ್ಜಿ ಪುಸ್ತಕವನ್ನು ಬಿಡುಗಡೆ ಮಾಡಬೇಕಿತ್ತು. ಆದರೆ, ಅದಕ್ಕೂ ಮೊದಲೇ ಷರೀಫ್ ಇಹಲೋಕ ತ್ಯಜಿಸಿದ್ದು, ಕನಸು ಅಪೂರ್ಣವಾಗಿದೆ.
-
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು












Click it and Unblock the Notifications