ಆಡೂರರ 'ಗೊಜ್ಜವಲಕ್ಕಿ' ಛಂದ ಪುಸ್ತಕ ರಿಲೀಸ್
"ಇತ್ತಲಾಗ ಅಕೀವು ಸಾರ್ವಜನಿಕ - ಸಾಮೂಹಿಕ ಕುಬಸ, ಮಂದಿ ಮಾಡೋವು ಹಂಗ ಚಾಲ್ತಿ ಇದ್ದವು. ಒಮ್ಮೊಮ್ಮೆ ಅಂತು ದಿವಸಕ್ಕ ಎರೆಡೆರಡು. ಒಂದ ದಿವಸ ಯಾರದೊ ಮನಿ ಕುಬಸಾ ಮುಗಿಸಿಕೊಂಡ ಬಂದೋಕಿನ
"ರ್ರಿ, ಯಾರದರ ಮನ್ಯಾಗ ತೂಗ ಮಂಚ ಇದ್ದರ ಕೇಳ್ರಿ, ತೂಗ ಮಂಚ ಕುಬಸಾ ಮಾಡ್ಕೋಬೇಕು" ಅಂದ್ಲು. ನಂಗ ಈ ಸರತೆ ಭಾಳ ತಲಿಕೆಟ್ಟತ.
" ಲೇ, ನಿನ್ನೌನ, ನೀ ಒಂದ ಬಸರಾಗೋದರಾಗ ಇದ್ದ ಮನಿ ಮಂಚನ ತುಗ್ಯಾಡಲಿಕತ್ತದ ನಿನ್ನ ವೇಟಿಗೆ, ಮತ್ತ ತೂಗ ಮಂಚ ಅಂತ ತೂಗ ಮಂಚಾ, ಇನ್ನ ಹಡೇಯೋ ತನಕ ಯಾವದರ ಕುಬಸಾ ಅಂದರ ನೋಡ ನಿನ್ನ" ಅಂತ ಸಿಟ್ಟಲೇ ಒದರಿದೆ
"ಅಯ್ಯ, ಒಂದನೇದಕ್ಕ ಇಷ್ಟ ಮಾಡ್ತಾರ, ಅದೇನ ಹಂಗ ಹಗಲಗಲ ಬರತದ ಜೀವನದಾಗ. ಮುಂದ ನಾ ಹತ್ತ ಹಡದರು ನಂಗ ಯಾರು ಮೂಸ ನೋಡಂಗಿಲ್ಲಾ, ಏನೇನ ಪದ್ಧತಿ ಅವ ಅವನೇಲ್ಲಾ ಈಗ ಮಾಡಿ ಮುಗಸಿಬಿಡಬೇಕು" ಅಂತ ನಂಗ ತಿವದು, ಕಡಿಕೆ ಅಲ್ಲೆ ನೇಕಾರ ನಗರದಾಗ ಯಾರದೊ ಸಂಬಂಧ ಇಲ್ಲದವರ ಮನ್ಯಾಗ ತೂಗಮಂಚ ಇತ್ತಂತ ಅವರ ಮನ್ಯಾಗ ಕುಬಸಾ ಮಾಡಿಸಿಗೊಂಡ ಬಂದ್ಲು.
ಬರಬರತ ಇಕಿ ಈ ಪರಿ ಕುಬಸಾ ಮಾಡಿಸ್ಗೋಳೊದ ನೋಡಿ ನಮ್ಮವ್ವಗೂ ತಲಿ ಕೆಟ್ಟತ, ಇನ್ನ ಇಕಿನ್ನ ಹಂಗ ಬಿಟ್ಟರ ಇಕಿ ಹನ್ನೆರಡ ಹದಿಮೂರ ತಿಂಗಳಾದರು ಕುಬಸದ ಆಶಾಕ್ಕ ಹಡಿಲಿಕ್ಕಿಲ್ಲಾ ಅಂತ ಹೆದರಿ ಎಂಟರಾಗ ಭಡಾ-ಭಡಾ ಅತ್ತಿಮನಿ ಸೀಮಂತ ಫಿಕ್ಸ್ ಮಾಡಿಬಿಟ್ಟಳು.

"ನೋಡ್ವಾ ಹಂಗ ಒಮ್ಮೆ ಅತ್ತಿ ಮನ್ಯಾಗ ಸೀಮಂತ ಆದ ಮ್ಯಾಲೆ ಎಲ್ಲಾ ಕುಬಸ ಬಂದ. ನೀ ಹೊರಗೆಲ್ಲೂ ಹೋಗಂಗಿಲ್ಲಾ, ಮುಂದ ಒಂದ ವಾರಕ್ಕ ನೀ ಹಡಿಲಿಕ್ಕೆ ಹೋಗಬೇಕು, ಇನ್ನ ಸಾಕ ತಿರಗೋದು, ಒಂದ ಸ್ವಲ್ಪ ರೆಸ್ಟ್ ತೊಗೊ. ಕಡಿಕೆ ಒಂದ ಹೋಗಿ ಒಂದ ಮಾಡ್ಕೊಂಡಿ" ಅಂತ ಜೋರ ಮಾಡಿದ್ಲು.
ಪಾಪ, ನನ್ನ ಹೆಂಡತಿ ಮನಸ್ಸಿನಾಗ ಇನ್ನು ಕುಬಸಾ ಭಾಳ ಉಳದಿದ್ವು, ಅವರ ಮೌಶಿಗೊಳ ಇನ್ನೂ ಕುಬಸಾ ಮಾಡಿದ್ದಿಲ್ಲಾ, ಧಾರವಾಡದ ಅತ್ಯಾ ಮಾಡಿದ್ದಿಲ್ಲಾ, ಅವರೇಲ್ಲಾ " ನೀ ಮೊದ್ಲ ಹೊರಗಿನ್ವೇಲ್ಲಾ ಮುಗಿಸಿಗೋವಾ, ನಾವೇನ ಮನಿ ಮಂದಿ ಎಲ್ಲೆ ಓಡಿ ಹೋಗ್ತೇವಿನ? ನೀ ಯಾವಗ ಅಂತಿ ಆವಾಗ ಮಾಡ್ತೇವಿ, ಒಟ್ಟ ಹಡಿಯೊಕಿಂತಾ ಮುಂಚೆ ಹೇಳ ಸಾಕ" ಅಂತ ಹೇಳಿದ್ದರು. ನಮ್ಮವ್ವ ಅತ್ತಿ ಮನಿ ಸೀಮಂತ ಡಿಸೈಡ ಮಾಡಿ ಎಲ್ಲಾದಕ್ಕೂ ಬ್ರೇಕ್ ಹಾಕಿ ಬಿಟ್ಟಳು.
ಇದು ನನ್ನ 'ಗೊಜ್ಜವಲಕ್ಕಿ'ಪುಸ್ತಕದ 'ಸಾಧನೇಯ ಸಮಾವೇಶ' ಪ್ರಬಂಧದ ಆಯ್ದ ಭಾಗ.[ಸಾಯಂಕಾಲದ ತಿಂಡಿ : ಗೊಜ್ಜವಲಕ್ಕಿ]
ಆತ್ಮೀಯರೇ
ಈ ಗೊಜ್ಜವಲಕ್ಕಿ ಪುಸ್ತಕ ಇದೇ ದಿನಾಂಕ 20ರಂದು ಬೆಂಗಳೂರಿನ ಉದಯಭಾನು ಕಲಾ ಸಂಘ, ಗವಿಪುರ ಸಾಲು ಛತ್ರಗಳ ಎದರು, ರಾಮಕೃಷ್ಣ ಆಶ್ರಮದ ಹಿಂಭಾಗ, ಕೆಂಪೆಗೌಡ ನಗರ, ಬೆಂಗಳೂರನಲ್ಲಿ ಸರಿಯಾಗಿ 10.00ಕ್ಕೆ ಬಿಡುಗಡೆಯಾಗಲಿದೆ...ದಯವಿಟ್ಟು ತಾವು ಈ ಕಾರ್ಯಕ್ರಮಕ್ಕ ಸಹಕುಟಂಬ ಪರಿವಾರ ಸಹಿತ ಬರ್ರಿ.
ಈ ಪುಸ್ತಕವನ್ನ 'ಛಂದ'ಪುಸ್ತಕದ ವಸುಧೇಂದ್ರವರು ಪ್ರಕಟಿಸುತ್ತಿದ್ದಾರೆ, ಪುಸ್ತಕದ ಬೆನ್ನುಡಿಯನ್ನ ಗಿರೀಶ ಹತ್ವಾರ (ಜೋಗಿ) ಅವರು ಬರದಿದ್ದು, ಮುಖಪುಟವನ್ನ ವಿನ್ಯಾಸಗೊಳಿಸಿರುವವರು ವಿನಯ ಸಾಯ. ಇನ್ನ ಕರಡು ತಿದ್ದುಪಡಿ ಮಾಡಿದವರು ಅನಂತ ಹುದಂಗಜೆ ಹಾಗೂ ರೇಖಾ ಚಿತ್ರಗಳನ್ನು ಮಾಡಿಕೊಟ್ಟವರು ಮಹಾಂತೇಶ ದೊಡ್ಡಮನಿ. ಹಂಗ ಪೂರ್ತಿ ಬುಕ್ ಬರದಂವ ನಾನ ಮತ್ತ ...:)
ಕನ್ನಡಾ ಒನ್ ಇಂಡಿಯಾದ ಸಮಸ್ತ ಓದುಗರು ಈ ಕಾರ್ಯಕ್ರಮಕ್ಕ ಬಂದು ಗೊಜ್ಜವಲಕ್ಕಿ ತೊಗೊಂಡ ಕಾರ್ಯಕ್ರಮ ಯಶಸ್ವಿ ಮಾಡಿಕೊಡಿ ಅಂತ ನಿಮ್ಮಲ್ಲಿ ವಿನಂತಿಸುತ್ತೇನೆ. ಲಗೂನ ಬಂದವರಿಗೆ ಟಿಫಿನ್ ವ್ಯವಸ್ಥಾನೂ ಅದ ಮತ್ತ...ಲಗೂನ ಬರ್ರಿ.
ನಿಮ್ಮ ಆಗಮನದ ನೀರೀಕ್ಷೆಯಲ್ಲಿ
ಪ್ರಶಾಂತ ಆಡೂರ
-
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ? -
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
IPL 2026 Ticket: ಐಪಿಎಲ್ ಟಿಕೆಟ್ ಖರೀದಿ ಕುರಿತು ಬೆಂಗಳೂರು ಪೊಲೀಸರಿಂದ ಕ್ರಿಕೆಟ್ ಪ್ರೇಮಿಗಳಿಗೆ ಮಹತ್ವದ ಸಲಹೆ -
By-Election: ದಾವಣಗೆರೆ ದಕ್ಷಿಣದಲ್ಲಿ ಮೊದಲ ಬಾರಿ ಬಿಜೆಪಿ ಗೆಲುವು ನಿಶ್ಚಿತ; ಬಸವರಾಜ ಬೊಮ್ಮಾಯಿ ವಿಶ್ವಾಸ -
ಆರ್ಸಿಬಿ ವಿರುದ್ಧದ ಪಂದ್ಯಕ್ಕೂ ಮುನ್ನ ಕೇವಲ 42 ಎಸೆತಗಳಲ್ಲಿ 94 ರನ್ ಸಿಡಿಸಿದ ಅಭಿಷೇಕ್ ಶರ್ಮಾ: ಭಾರೀ ವೈರಲ್












Click it and Unblock the Notifications