ಕುಮಾರಸ್ವಾಮಿ ಅಪ್ಪನ ಕಾಲ ಬಳಿಯೇ ಕುಳಿತೀರಲ್ಲ ಸಿದ್ದರಾಮಯ್ಯ?: ಚುಚ್ಚಿದ ಸಿಂಹ

Recommended Video

      ಟ್ವಿಟ್ಟರ್ ನಲ್ಲಿ ಸಿದ್ದರಾಮಯ್ಯರನ್ನ ತರಾಟೆಗೆ ತೆಗೆದುಕೊಂಡ ಪ್ರತಾಪ್ ಸಿಂಹ | Oneindia Kannada

      ಬೆಂಗಳೂರು, ಅಕ್ಟೋಬರ್ 29: ಬಳ್ಳಾರಿ ಗಣಿಗಾರಿಕೆಗೆ ಸಂಬಂಧಿಸಿದಂತೆ ಜನಾರ್ದನ ರೆಡ್ಡಿ ನಡೆಸಿದ್ದ ಪತ್ರಿಕಾಗೋಷ್ಠಿಗೆ ಪ್ರತಿಯಾಗಿ ಸಿದ್ದರಾಮಯ್ಯ ಟ್ವಿಟ್ಟರ್‌ನಲ್ಲಿ ಬಾಣ ಬಿಟ್ಟಿದ್ದರು.

      'ನೀವು ಜೈಲಿಗೆ ಹೋಗಲು ನಾನು ಕಾರಣ ಎಂದಿದ್ದೀರಿ. ನಿಮ್ಮ ಅಕ್ರಮ ಗಣಿಗಾರಿಕೆ ಕುರಿತು ನಿಮ್ಮದೇ ಪಕ್ಷದ ಸಂಸದ ಬರೆದ ಪುಸ್ತಕ ಓದಿ' ಎಂದು ಪ್ರತಾಪ್ ಸಿಂಹ ಪತ್ರಕರ್ತನಾಗಿದ್ದ ಸಂದರ್ಭದಲ್ಲಿ ಜನಾರ್ದನ ರೆಡ್ಡಿ ಕುರಿತು ಬರೆದಿದ್ದ ಪುಸ್ತಕದ ಚಿತ್ರದೊಂದಿಗೆ ರೆಡ್ಡಿ ವಿರುದ್ಧ ಸಿದ್ದರಾಮಯ್ಯ ವ್ಯಂಗ್ಯವಾಡಿದ್ದರು. ಜತೆಗೆ ಪ್ರತಾಪ್ ಸಿಂಹ್ ಅವರ ಹಳೆಯ ಟ್ವೀಟ್‌ನ ಸ್ಕ್ರೀನ್ ಶಾಟ್ ಸಹ ಬಳಿಸಿಕೊಂಡಿದ್ದರು.

      ಸಿದ್ದರಾಮಯ್ಯ ಟ್ವೀಟ್‌ಗೆ ಪ್ರತಿಕ್ರಿಯೆ ಎಂಬಂತೆ ಚುನಾವಣೆ ಸಂದರ್ಭದಲ್ಲಿ ಅವರು ಆಡಿದ್ದ ಮಾತುಗಳನ್ನೇ ಬಳಸಿಕೊಂಡು ಪ್ರತಾಪ್ ಸಿಂಹ ಅವರಿಗೆ ಚುಚ್ಚಿದ್ದಾರೆ.

      pratap simha tweet reaction to siddaramaiah tweet on janardhan reddy

      ಜೆಡಿಎಸ್ ಜತೆ ಮೈತ್ರಿ ಮಾಡಿಕೊಂಡಿರುವ ಕಾಂಗ್ರೆಸ್ ಅನ್ನು ಕಟುವಾಗಿ ಟೀಕಿಸಿರುವ ಪ್ರತಾಪ್ ಸಿಂಹ, ನೇರವಾಗಿ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

      ಅರೆರೇ ಸಿದ್ದರಾಮಯ್ಯನವರೇ, ಅವ್ರಪ್ಪನಾಣೆ ಕುಮಾರಸ್ವಾಮಿ ಮುಖ್ಯಮಂತ್ರಿಯಾಗೋಲ್ಲ... ಅಂತ ಬೊಂಬ್ಡ ಹೊಡೆದು ಅವರಪ್ಪನ ಕಾಲ ಬಳಿಗೇ ಓಡಿಹೋಗಿ ಬೇಷರತ್ ಬೆಂಬಲ ಕೊಡುತ್ತೇವೆ, ಮಗನನ್ನು ಮುಖ್ಯಮಂತ್ರಿ ಮಾಡಿ ಎಂದಿದ್ದು, ನೀಚ ಅಂದವರ ಜೊತೇನೆ ಪತ್ರಿಕಾಗೋಷ್ಠಿ ಮಾಡಿದ್ದೂ ಅಷ್ಟು ಬೇಗ ಮರೆತು ಹೋಯಿತಾ? ಎಂದು ದೇವೇಗೌಡರ ಜತೆ ಕೈ ಜೋಡಿಸಿದ ಸಿದ್ದರಾಮಯ್ಯ ಅವರನ್ನು ವ್ಯಂಗ್ಯವಾಗಿ ಪ್ರಶ್ನಿಸಿದ್ದಾರೆ.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+