ಸಭಿಕರ ಮೆಚ್ಚುಗೆಗೆ ಪಾತ್ರವಾದ ಪ್ರಣವಾಂಜಲಿ ನೃತ್ಯ ಕಾರ್ಯಕ್ರಮ
ಬೆಂಗಳೂರು, ಜೂನ್ 30: ಪ್ರಣವಾಂಜಲಿ ಅಕಾಡೆಮಿ ಫಾರ್ ಪರ್ಫಾಮಿಂಗ್ ಆರ್ಟ್ಸ್ ಸಂಸ್ಥೆ ಆಯೋಜಿದ್ದ ನೃತ್ಯ ಕಾರ್ಯಕ್ರಮ ಸಭಿಕರ ಮೆಚ್ಚುಗೆಗೆ ಪಾತ್ರವಾಗಿದೆ. ನಗರದ ದಕ್ಷಿಣ ಭಾಗದಲ್ಲಿರುವ ಅಚ್ಯುತ್ ಪಾರ್ಟಿ ಹಾಲ್ ನಲ್ಲಿ, ಜೂನ್ 30ರ ಸಂಜೆ ಏಳು ಗಂಟೆಗೆ ಈ ಕಾರ್ಯಕ್ರಮವನ್ನು ಸಂಸ್ಥೆ ಆಯೋಜಿಸಿತ್ತು.
ಭರತನಾಟ್ಯ ಪ್ರತಿಭಾ ಅನಾವರಣದ ಜೂನ್ ತಿಂಗಳ ಭಾಗವಾಗಿ ಈ ನೃತ್ಯ ಸಂಜೆ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಪವಿತ್ರ ಅವರ ನೇತೃತ್ವದಲ್ಲಿ ಈ ಸಂಸ್ಥೆ ಈಗಾಗಲೇ ಹಲವಾರು ಪ್ರತಿಭೆಗಳನ್ನು ಪರಿಚಯಿಸಿದೆ.
ಪ್ರಣವಾಂಜಲಿ ಸಂಸ್ಥೆಯ ವತಿಯಿಂದ ಆಯೋಜಿಸಲಾಗಿದ್ದ ಈ ನೃತ್ಯ ಕಾರ್ಯಕ್ರಮ, ಕುಮಾರಿ ಸಾಯಿಯ ಗಣೇಶನ ಪ್ರಾರ್ಥನೆಯೊಂದಿಗೆ ಆರಂಭವಾಯಿತು. ಗಂ ಗಣಪತಿ ಎನ್ನುವ ಗಣಪತಿ ಕೌತ್ವಂ ಮೂಲಕ ಕುಮಾರಿ ಸಾಯಿಯ ಉತ್ತಮ ಪ್ರರ್ದಶನಕ್ಕೆ ಸಭಿಕರು ಸಾಕ್ಷಿಯಾದರು.

ಶಿವ ತಾಂಡವ ನೃತ್ಯವನ್ನು ವರ್ಣಿಸುವ 'ಆನಂದ ನಟನವಾಡಿದ' ಎನ್ನುವ ಕೃತಿಗೆ ಕುಮಾರಿ ಸಾರಿಕ ಉತ್ತಮ ನೃತ್ಯ ಪ್ರದರ್ಶನ ನೀಡುವ ಮೂಲಕ, ಸಭಿಕರ ಚಪ್ಪಾಳೆಯನ್ನು ಗಿಟ್ಟಿಸಿಕೊಂಡರು.
ಕಾರ್ಯಕ್ರಮದ ನಿರೂಪಣೆಯನ್ನು ಕುಮಾರಿಯರಾದ ತೇಜಸ್ವಿನಿ ಹಾಗು ಸುಮೇದಾ ಅಚ್ಚುಕಟ್ಟಾಗಿ ನಡೆಸಿಕೊಟ್ಟರು. ಕಾರ್ಯಕ್ರಮದಲ್ಲಿ ಪ್ರದರ್ಶನ ನೀಡಿದ ಮಕ್ಕಳಿಗೆ ಸಂಸ್ಥೆಯ ಅಧ್ಯಕ್ಷರಾಗಿರುವ ಮಂಜುನಾಥ್ ಅವರು ಪ್ರಮಾಣಪತ್ರವನ್ನು ನೀಡಿ ಸನ್ಮಾನಿಸಿದರು.

ಶಾಸ್ತ್ರೀಯ ನೃತ್ಯ ಮತ್ತು ಸಂಸ್ಕೃತಿಗೆ ಗೌರವ ಸೂಚಿಸಲು ಪ್ರಣವಾಂಜಲಿ ಅಕಾಡೆಮಿ ಇಂತಹ ಕಾರ್ಯಕ್ರಮವನ್ನು ಆಯೋಜಿಸುತ್ತಿದ್ದು, ಹಲವು ಯುವ ಪ್ರತಿಭೆಗಳನ್ನು ನೃತ್ಯಲೋಕಕ್ಕೆ ಪರಿಚಯಿಸಿದ ಕೀರ್ತಿಯನ್ನು ಈಗಾಗಲೇ ಹೊಂದಿದೆ.
Recommended Video
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
IPL 2026 RCB: ಹ್ಯಾಜಲ್ವುಡ್, ಯಶ್ ದಯಾಳ್ ಅಲಭ್ಯರಾದ್ರೆ ಆರ್ಸಿಬಿ ಮುಂದಿರುವ 'ಪ್ಲಾನ್ ಬಿ' ಏನು? -
Bengaluru: ಶ್ರೀರಾಮ ನವಮಿ ಹಬ್ಬದ ಪ್ರಯುಕ್ತ ಮಾ.27ರಂದು ನಗರದಲ್ಲಿ ಮಾಂಸ ಮಾರಾಟ ಬಂದ್ಗೆ GBA ಆದೇಶ -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಬೆಂಗಳೂರು ಇ-ಖಾತಾ ದಂಧೆ ಬಯಲು: ಬ್ರ್ಯಾಂಡ್ ಬೆಂಗಳೂರಿಗೆ ಆರ್ ಅಶೋಕ್ ತೀವ್ರ ಟೀಕೆ












Click it and Unblock the Notifications