ಮೊದಲೇ ಹಂಚಿಕೆಯಾಗಿದ್ದ ಹಣದಲ್ಲಿ ಕೆಂಪೇಗೌಡ ಪ್ರತಿಮೆ: ಡಾ.ಅಶ್ವತ್ಥನಾರಾಯಣ
ಬೆಂಗಳೂರು, ಜೂನ್ 10: ''ಹಿಂದಿನ ಬಜೆಟ್ ನಲ್ಲಿ ಹಂಚಿಕೆಯಾಗಿರುವ ನಿಧಿ ಬಳಸಿಕೊಂಡು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಎದುರು ನಾಡಪ್ರಭು ಕೆಂಪೇಗೌಡರ ಬೃಹತ್ ಪ್ರತಿಮೆ ನಿರ್ಮಾಣ ಮಾಡಲಾಗುವುದು. ಇದಕ್ಕೆ ಹೊಸದಾಗಿ ಹಣ ಪಡೆಯುತ್ತಿಲ್ಲ'' ಎಂದು ಉಪಮುಖ್ಯಮಂತ್ರಿ ಡಾ. ಸಿ.ಎನ್ ಅಶ್ವತ್ಥನಾರಾಯಣ ಸ್ಪಷ್ಟಪಡಿಸಿದ್ದಾರೆ.
Recommended Video
ಕೆಂಪೇಗೌಡ ಪ್ರತಿಮೆ ನಿರ್ಮಾಣದ ಬಗ್ಗೆ ಎದ್ದಿರುವ ಅಪಸ್ವರದ ಕುರಿತು ಮಂಗಳವಾರ ಮಾತನಾಡಿದ ಡಾ.ಸಿ.ಎನ್ ಅಶ್ವತ್ಧನಾರಾಯಣ, ''ಈಗಾಗಲೇ ಹಂಚಿಕೆಯಾಗಿರುವ ಹಣದಲ್ಲಿ ಪ್ರತಿಮೆ ನಿರ್ಮಾಣ ಮಾಡಲಾಗುತ್ತಿದೆ. ಹೀಗಿರುವಾಗ ಅಪಸ್ವರ ಸಲ್ಲ'' ಎಂದರು.
ಕೊರೊನಾ ವೈರಸ್ ರೋಗದ ಸಂಕಷ್ಟದ ಸಂದರ್ಭದಲ್ಲಿ ಕೆಂಪೇಗೌಡರ ಪ್ರತಿಮೆ ನಿರ್ಮಾಣದ ಅಗತ್ಯವೇನು ಎಂದು ಕೇಳಿದ ಪ್ರಶ್ನೆಗೆ ಉತ್ತರಿಸಿದ ಡಾ.ಅಶ್ವತ್ಥನಾರಾಯಣ, "ಕೆಂಪೇಗೌಡ ಅಭಿವೃದ್ಧಿ ಪ್ರಾಧಿಕಾರ ರಚನೆಯಾಗಿ 3 ವರ್ಷ ಆಗಿದೆ. ಪ್ರತಿಮೆ ನಿರ್ಮಾಣಕ್ಕೂ ಈ ಹಿಂದೆಯೇ ಹಣ ಹಂಚಿಕೆ ಆಗಿದೆ. ಅದನ್ನು ಈಗ ಬಳಸಿಕೊಳ್ಳಲಾಗುತ್ತಿದೆಯೇ ಹೊರತು, ಹೊಸದಾಗಿ ಸರ್ಕಾರದ ಬೊಕ್ಕಸದಿಂದ ಹಣ ಪಡೆಯುತ್ತಿಲ್ಲ" ಎಂದರು.

"ಪ್ರತಿಮೆ ನಿರ್ಮಾಣದ ಪರಿಕಲ್ಪನೆ ಸಿದ್ಧವಾಗಿದ್ದು, ಏಜೆನ್ಸಿಯನ್ನೂ ಗುರುತಿಸಲಾಗಿದೆ. ಈಗ ಕೆಲಸ ಆರಂಭವಾದರೂ ಅದು ಪೂರ್ಣಗೊಳ್ಳಲು ಸಮಯ ಹಿಡಿಯುತ್ತದೆ. ಜೂನ್ 27ರಂದು ಕೆಂಪೇಗೌಡರ 511ನೇ ಜಯಂತಿ ಇದೆ. ಹೀಗಾಗಿ ಅಂದು ಶಂಕುಸ್ಥಾಪನೆ ನೆರವೇರಿಸಲು ನಿರ್ಧರಿಸಲಾಗಿದೆ. ಕೆಂಪೇಗೌಡರ ಗೌರವಾರ್ಥ ಅವರ ಸ್ಮಾರಕ ನಿರ್ಮಿಸುವ ಕೆಲಸ ಮಾಡಲಾಗುತ್ತಿದೆ" ಎಂದು ಡಾ.ಅಶ್ವತ್ಥನಾರಾಯಣ ಹೇಳಿದರು.
ಕೋವಿಡ್-19 ಪರಿಸ್ಥಿತಿ ಉತ್ತಮವಾಗಿ ನಿಭಾಯಿಸಿದ್ದೇವೆ
''ಕೋವಿಡ್-19 ನಿರ್ವಹಣೆಗೆಂದೇ ಮುಖ್ಯಮಂತ್ರಿಗಳ ಪರಿಹಾರ ನಿಧಿಯಲ್ಲಿ ಸಂಗ್ರಹವಾಗಿರುವ ದೇಣಿಗೆಯನ್ನು ಅದೇ ಉದ್ದೇಶಕ್ಕೆ ಬಳಸಿಕೊಳ್ಳಲಾಗುತ್ತದೆ. ವೈರಸ್ ಬಹಳ ಕಾಲ ಇರುವುದರಿಂದ ಅದರ ನಿರ್ವಹಣೆಗೆ ಹೆಚ್ಚಿನ ಹಣದ ಅಗತ್ಯ ಇರುತ್ತದೆ. ವಿಪತ್ತು ನಿರ್ವಹಣೆಗೆ ಅದನ್ನು ಬಳಸಿಕೊಂಡು ಪರಿಸ್ಥಿತಿ ನಿಭಾಯಿಸಲಾಗುವುದು" ಎಂದು ಡಾ.ಅಶ್ವತ್ಥನಾರಾಯಣ ತಿಳಿಸಿದರು.

"ಕೋವಿಡ್-19 ಪರಿಸ್ಥಿತಿಯನ್ನು ರಾಜ್ಯ ಸರ್ಕಾರ ಉತ್ತಮವಾಗಿ ನಿಭಾಯಿಸಿದೆ. ವಲಸೆ ಕಾರ್ಮಿಕರ ಸಮಸ್ಯೆಗೆ ಸ್ಪಂದಿಸಿದೆ. ಸಂತ್ರಸ್ತರಿಗೆ ಪಡಿತರ, ಆಹಾರ ಒದಗಿಸಿ ಆಶ್ರಯ ಕಲ್ಪಿಸಲಾಗಿದೆ. ಆರೋಗ್ಯದ ಕಾಳಜಿ ವಹಿಸಲಾಗಿದೆ. ಸಾರಿಗೆ ವ್ಯವಸ್ಥೆಯನ್ನೂ ಕಲ್ಪಿಸಲಾಗಿದೆ. ಬೇರೆ ರಾಜ್ಯಗಳು ಸಹ ತಮ್ಮ ಕಾರ್ಮಿಕರ ನೆರವಿಗೆ ಬರಲಿಲ್ಲ. ಅಂಥ ಸಂದರ್ಭದಲ್ಲಿ ಅವರ ಕೈ ಹಿಡಿದಿದ್ದು ರಾಜ್ಯ ಸರ್ಕಾರ" ಎಂದರು ಡಾ.ಅಶ್ವತ್ಥನಾರಾಯಣ.
-
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಪಿಎಂ ಇ-ಬಸ್ ಯೋಜನೆ: ಕರ್ನಾಟಕದಲ್ಲಿ ರಸ್ತೆಗಿಳಿಯಲಿವೆ 750 ಇ-ಬಸ್ಗಳು; ಮಹಾರಾಷ್ಟ್ರಕ್ಕೆ ಸಿಂಹಪಾಲು -
Bengaluru Drone Survey: ಬೆಂಗಳೂರಿನಲ್ಲಿ ಆಸ್ತಿಗಳ ಡ್ರೋನ್ ಸರ್ವೇ: ಇದರ ಉದ್ದೇಶವೇನು, ವಿರೋಧವೇಕೆ ಇಲ್ಲಿದೆ ಮಾಹಿತಿ -
ಇರಾನ್ ಸಂಘರ್ಷ: ಭಾರತದ ಪ್ರಯತ್ನಕ್ಕೆ ಫಲ, ಕೊಲ್ಲಿ ಮಾರ್ಗವಾಗಿ ಭಾರತಕ್ಕೆ ಬಂದ ಮೊದಲ ತೈಲ ಟ್ಯಾಂಕರ್ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
ಭಾರತದ ಹಡಗುಗಳಿಗೆ ಭರ್ಜರಿ ಸುದ್ದಿ ನೀಡಿದ ಇರಾನ್, ಗ್ಯಾಸ್ ಸಮಸ್ಯೆ ಇತ್ಯರ್ಥ ಸಾಧ್ಯತೆ | Operation Roaring Lion -
Swamijis: ಬಹುತೇಕ ಕಾವಿಧಾರಿ ಸ್ವಾಮೀಜಿಗಳು ಅವಿವಾಹಿತರು, ಆದರೆ ಅವರೆಲ್ಲರೂ ಬ್ರಹ್ಮಚಾರಿಗಳಲ್ಲ: ರವಿಕೃಷ್ಣ ರೆಡ್ಡಿ -
ಬೆಂಗಳೂರಿನ ಪ್ರಮುಖ ವಿದ್ಯುತ್ ಸ್ಥಾವರ ಬಂದ್; ರಾಜ್ಯದಲ್ಲಿ ವಿದ್ಯುತ್ ಕಡಿತದ ಭೀತಿ! -
ಅರಬ್ ದೇಶಗಳ ಬ್ಯಾಕಿಂಗ್ ಸೇವೆ ಮೇಲೆ ಇರಾನ್ ಸೇನೆ ದಾಳಿ ಸಾಧ್ಯತೆ ಹಿನ್ನೆಲೆ ಕಟ್ಟೆಚ್ಚರ | Operation Roaring Lion -
LPG Gas: ಗೃಹ-ವಾಣಿಜ್ಯ ಸಿಲಿಂಡರ್ ಬುಕಿಂಗ್ ಮಿತಿ, ದಾಸ್ತಾನು ನಿಯಮಗಳೇನು? ಗ್ಯಾಸ್ ದರಪಟ್ಟಿ












Click it and Unblock the Notifications