KSRTC ಬಸ್ನಲ್ಲಿಯೇ ಗರ್ಭಿಣಿ ಮಹಿಳೆಗೆ ಹೆರಿಗೆ ಮಾಡಿಸಿ ಮಾನವೀಯತೆ ಮೆರೆದ ಮಹಿಳಾ ನಿರ್ವಾಹಕಿ, ಭಾರಿ ಮೆಚ್ಚುಗೆ
ಬೆಂಗಳೂರು, ಮೇ, 15: ಕೆಎಸ್ಆರ್ಟಿಸಿ ಬಸ್ನಲ್ಲಿ ಪ್ರಯಾಣಿಸುತ್ತಿದ್ದ ಗರ್ಭಿಣಿ ಮಹಿಳೆಗೆ ಹೆರಿಗೆ ನೋವು ಕಾಣಿಸಿಕೊಂಡ ಕಾರಣ ಮಾರ್ಗ ಮಧ್ಯದಲ್ಲಿಯೇ ಮಹಿಳಾ ನಿರ್ವಾಹಕಿಯು ಅವರಿಗೆ ಹೆರಿಗೆ ಮಾಡಿಸಿದ ಘಟನೆ ಉದಯಪುರ ಸಮೀಪದಲ್ಲಿ ನಡೆದಿದೆ. ಇದೀಗ ಮಗು ಮತ್ತು ಮಹಿಳೆ ಆರೋಗ್ಯವಾಗಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.
KA-18-F-0865 ನಂಬರ್ನ ಕೆಎಸ್ಆರ್ಟಿಸಿ ಬಸ್ನಲ್ಲಿ ಬೆಂಗಳೂರಿನಿಂದ ಬೇಲೂರಿಗೆ ಪ್ರಯಾಣಿಸುತ್ತಿದ್ದ ಮಹಿಳೆಯೋರ್ವರಿಗೆ ಹೆರಿಗೆ ನೋವು ಕಾಣಿಸಿಕೊಂಡಿತ್ತು. ಉದಯಪುರ ಸಮೀಪವಿರುವ ಕೃಷಿ ಕಾಲೇಜು ಹತ್ತಿರ ಬಸ್ ಬರುತ್ತಿದ್ದಂತೆ ಮಹಿಳೆಗೆ ಹೆರಿಗೆ ನೋವು ಇನ್ನು ಹೆಚ್ಚಾಗಿದೆ. ಇದನ್ನು ಗಮನಿಸಿದ ಮಹಿಳಾ ನಿರ್ವಾಹಕಿಯು ಬಸ್ ಅನ್ನು ರಸ್ತೆ ಪಕ್ಕಕ್ಕೆ ನಿಲ್ಲಿಸುವಂತೆ ಡ್ರೈವರ್ಗೆ ಸೂಚಿಸಿದ್ದಾರೆ.

ಹತ್ತಿರ ಯಾವುದೇ ಆಸ್ಪತ್ರೆ ಇಲ್ಲದ ಕಾರಣ ಹಾಗೂ ಅವರಿಗೆ ಸಹಾಯದ ಅಗತ್ಯವಿರುತ್ತದೆ ಎಂದು ಮನಗಂಡು ತಕ್ಷಣ ಮಹಿಳಾ ನಿರ್ವಾಹಕಿ ವಸಂತಮ್ಮ ಎಂಬುವವರು ಬಸ್ ನಿಲ್ಲಿಸಿದ್ದಾರೆ. ನಂತರ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ 45 ಜನ ಪ್ರಯಾಣಿಕರನ್ನು ಕೆಳಗೆ ಇಳಿಸಿ ಹೆರಿಗೆ ನೋವಿನಿಂದ ಬಳಲುತ್ತಿದ್ದ ಮಹಿಳೆಗೆ ಬಸ್ಸಿನಲ್ಲಿಯೇ ಹೆರಿಗೆ ಮಾಡಿಸಿದ್ದು, ಈ ಕಾರ್ಯಕ್ಕೆ ಎಲ್ಲೆಡೆ ಶ್ಲಾಘನಿಯ ಸುರಿಮಳೆಯೇ ಹರಿದುಬರುತ್ತಿದೆ.
ಹೆರಿಗೆ ನೋವಿಗೆ ಒಳಗಾಗಿದ್ದ ಮಹಿಳೆಯು ಆರ್ಥಿಕವಾಗಿ ದುರ್ಬಲಳಾಗಿದ್ದ ಕಾರಣ, ನಿಗಮದ ಚಾಲನಾ ಸಿಬ್ಬಂದಿಗಳು ಎಲ್ಲಾ ಪ್ರಯಾಣಿಕರಿಂದ ಸೇರಿ ಒಟ್ಟು 1,50,000 ರೂಪಾಯಿಗಳನ್ನು ಸಂಗ್ರಹಿಸಿ ತುರ್ತು ಖರ್ಚಿಗಾಗಿ ಮಹಿಳೆಗೆ ನೀಡಿದ್ದಾರೆ. ಬಳಿಕ ಮಹಿಳೆಯನ್ನು ಆಂಬುಲೆನ್ಸ್ ಮೂಲಕ ಶಾಂತಿಗ್ರಾಮ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆಯನ್ನು ಕೊಡಿಸಿದ್ದಾರೆ. ಈಗ ಮಹಿಳೆ ಮತ್ತು ಮಗು ಆರೋಗ್ಯವಾಗಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.
ಹೀಗೆ ಸಕಾಲದಲ್ಲಿ ಸ್ಪಂದಿಸಿ ಮಗು ಮತ್ತು ತಾಯಿಯನ್ನು ಉಳಿಸಿ ಮಾನವೀಯ ನೆರವನ್ನು ನೀಡಿದ ನಿರ್ವಾಹಕಿಗೆ ವ್ಯವಸ್ಥಾಪಕ ನಿರ್ದೇಶಕರಾದ ಶ್ರೀಮತಿ ಜಿ.ಸತ್ಯವತಿ ಅವರು ಶ್ಲಾಘನೆ ವ್ಯಕ್ತಪಡಿಸಿದ್ದಾರೆ.
-
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
RCB: ಆರ್ಸಿಬಿ ಪಂದ್ಯದ ನಡುವೆಯೆ ಮತ್ತೊಮ್ಮ ಅಭಿಮಾನಿಗಳ ಮನಗೆದ್ದ 'ಕ್ರಶ್' ಅನನ್ಯಾ ಬಿರ್ಲಾ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
RCB: ಆರ್ಸಿಬಿ ಜೆರ್ಸಿ ಧರಿಸಿದವರಿಗೆ ಉಚಿತ ಪ್ರಯಾಣ; ಬೆಂಗಳೂರು ಆಟೋ ಚಾಲಕನ 'ಆಫರ್' ಪೋಸ್ಟರ್ ವೈರಲ್ -
IPL 2026: ಆರ್ಸಿಬಿ-ಎಸ್ಆರ್ಎಚ್ ಉದ್ಘಾಟನಾ ಪಂದ್ಯಕ್ಕೆ ಮಳೆ ಅಡ್ಡಿಯಾಗಲಿದ್ಯಾ? ಹವಾಮಾನ ಇಲಾಖೆ ಹೇಳೋದೇನು? -
KEA Recruitment: ವಾಯುವ್ಯ ಸಾರಿಗೆ ಸಂಸ್ಥೆ ನೇಮಕಾತಿ ಪರೀಕ್ಷೆಗಳ ದಿನಾಂಕ ಬದಲಾವಣೆ -
ಬೆಂಗಳೂರಿನ ಪಾನಿಪುರಿ ವ್ಯಾಪಾರಿಯ ತಿಂಗಳ ಸಂಪಾದನೆ ಫುಲ್ Viral: ದಿನಕ್ಕೆ 3 ಸಾವಿರ ರೂ. ಗಳಿಕೆ -
ಪೆಟ್ರೋಲ್ ಬದಲು ಎಥೆನಾಲ್ ಬ್ಲೆಂಡಿಂಗ್ ಮ್ಯಾಜಿಕ್; ಸಂಕಷ್ಟದಲ್ಲಿ ಭಾರತಕ್ಕೆ ನೆರವಾದ ಮೋದಿ ಮಾಸ್ಟರ್ ಪ್ಲ್ಯಾನ್: ಕೃಷ್ಣ ಭಟ್ ಬರಹ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
IPL ಐಪಿಎಲ್ ಫ್ರೀ ಟಿಕೆಟ್ ವಿವಾದ: ವೆಂಕಟೇಶ್ ಪ್ರಸಾದ್ – ಸಿದ್ದರಾಮಯ್ಯ ಭೇಟಿ ಫೋಟೋಗೆ ತೇಜಸ್ವಿ ಸೂರ್ಯ ಕೆಂಡ










Click it and Unblock the Notifications