ಆರ್ಆರ್ ನಗರದಲ್ಲಿ ಶಾಂತಿಯುತ ಚುನಾವಣೆಗೆ ಸಿದ್ಧತೆ
ಬೆಂಗಳೂರು, ಮೇ 24: ರಾಜರಾಜೇಶ್ವರಿನಗರ ವಿಧಾನಸಭಾ ಕ್ಷೇತ್ರ ಚುನಾವಣೆ ಮೇ 28 ಸೋಮವಾರದಂದು ನಡೆಯಲಿರುವುದರಿಂದ ಅನೇಕ ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತಿದೆ. ಒಟ್ಟು 421 ಮತಗಟ್ಟೆಗಳ ಪೈಕಿ 4 ಕಷ್ಟಕರ, 47 ಅತಿಸೂಕ್ಷ್ಮ ಮತ್ತು 186 ಸೂಕ್ಷ್ಮ ಮತಗಟ್ಟೆಗಳನ್ನು ಗುರುತಿಸಲಾಗಿದೆ.
ಕ್ಷೇತ್ರದಲ್ಲಿ 14 ಅಭ್ಯರ್ಥಿಗಳು ಸ್ಪರ್ಧಿಸಿದ್ದು, ನೀತಿ ಸಂಹಿತೆ ಉಲ್ಲಂಘನೆ ತಡೆಗೆ 9 ಎಂಸಿಸಿ ಮತ್ತು ಸಂಚಾರಿ ದಳ 14 ಎಸ್ಎಸ್ಟಿ ತಂಡ, 45 ಸಬ್ ಸೆಕ್ಟರ್ ಮ್ಯಾಜಿಸ್ಟ್ರೇಟ್ ಅಧಿಕಾರಿಗಳ ತಂಡ, 2 ವಿಎಸ್ಟಿ ಒಂದು ವಿವಿಐಟಿ ತಂಡವನ್ನು ರಚಿಸಲಾಗಿದೆ ಎಂದು ಬಿಬಿಎಂಪಿ ಆಯುಕ್ತ ಎಂ. ಮಹೇಶ್ವರ್ ರಾವ್ ತಿಳಿಸಿದ್ದಾರೆ.
100 ಮಂದಿ ಮತಗಟ್ಟೆ ಸೂಕ್ಷ್ಮ ವೀಕ್ಷಕರನ್ನು ನಿಯೋಜಿಸಲಾಗಿದೆ. ಮತ ದಾರರಿಗೆ ಆಮಿಷವೊಡ್ಡುತ್ತಿರುವ ದೂರುಗಳ ಪರಿಶೀಲನೆಗೆ ವಿಶೇಷ ತಂಡಗಳನ್ನು ನೇಮಿಸಲಾಗಿದೆ. 20 ಅತಿಸೂಕ್ಷ್ಮ ಮತಗಟ್ಟೆಗಳಲ್ಲಿ ವೆಬ್ಕ್ಯಾಸ್ಟಿಂಗ್ ಅಳವಡಿಸಲಾಗುವುದು.

ಪ್ರತಿ ಮತಗಟ್ಟೆಗೆ ವಿಡಿಯೋಗ್ರಾಫರ್ಗಳನ್ನು ನಿಯೋಜಿಸಲಾಗುತ್ತದೆ. ಇಲ್ಲಿ ಮಾರ್ಕ್ 3 ಇವಿಎಂ, ವಿವಿಪ್ಯಾಟ್ ಗಳನ್ನು ಸಿದ್ಧಪಡಿಸಿಟ್ಟುಕೊಳ್ಳಲಾಗಿದೆ. ಮೇ 31ರಂದು ಹಲವಡೇರಹಳ್ಳಿಯಲ್ಲಿನ ಜ್ಞಾನಾಕ್ಷಿ ವಿದ್ಯಾನಿಕೇತನ ಶಾಲೆಯಲ್ಲಿ ಮತ ಎಣಿಕೆ ನಡೆಯಲಿದೆ. ಒಟ್ಟು 2524 ಮತಗಟ್ಟೆ ಅಧಿಕಾರಿಗಳನ್ನು ನೇಮಿಸಲಾಗಿದೆ. ಚುನಾವಣಾ ಕರ್ತವ್ಯಕ್ಕೆ 83 ಬಸ್ಗಳನ್ನು ಬಾಡಿಗೆ ಪಡೆಯಲಾಗುತ್ತಿದೆ ಎಂದು ಮಾಹಿತಿ ನೀಡಿದರು.
ವಶಕ್ಕೆ ಪಡೆಯಲಾಗಿದ್ದ ಚುನಾವಣಾ ಗುರುತಿನ ಚೀಟಿಗಳನ್ನು ಸಂಬಂಧಪಟ್ಟ ಮತದಾರರಿಗೆ ಹಿಂದಿರುಗಿಸಲಾಗುತ್ತದೆ. ಗುರುತಿನ ಚೀಟಿ ನಾಪತ್ತೆ ಬಗ್ಗೆ ಪೊಲೀಸರು ಹೇಳಿಕೆಯನ್ನು ದಾಖಲಿಸಿಕೊಳ್ಳುತ್ತುವಿದಲ್ಲ. ಮತದಾರರು ಅಥವಾ ಅವರ ಸಂಬಂಧಿಗಳೇ ನಾಪತ್ತೆ ಕುರಿತು ಸ್ವತಃ ಹೇಳಿಕೆ ಬರೆದುಕೊಟ್ಟು ಸಹಿ ಮಾಡಬೇಕು, ಅಗತ್ಯ ಬಿದ್ದರೆ ಈ ದಾಖಲೆಯನ್ನು ಚಿತ್ರೀಕರಣ ಮಾಡಲಾಗುವುದು ಎಂದು ನಗರ ಪೊಲೀಸ್ ಕಮಿಷನರ್ ಟಿ. ಸುನೀಲ್ ಕುಮಾರ್ ತಿಳಿಸಿದ್ದಾರೆ.
ಆರ್ಆರ್ ನಗರ ವಿಧಾನಸಭಾ ಕೇತ್ರದ ವ್ಯಾಪ್ತಿಯಲ್ಲಿ ಬರುವ ಜಾಲಹಳ್ಳಿಯ ಅಪಾರ್ಟ್ಮೆಂಟ್ ಒಂದರಲ್ಲಿ ಮತದಾರರ ಚೀಟಿ ಮತ್ತೆಯಾಗಿತ್ತು. ಈ ಕುರಿತು ಕಾಂಗ್ರೆಸ್ ಮತ್ತು ಬಿಜೆಪಿ ನಾಯಕರು ಆರೋಪ ಪ್ರತ್ಯಾರೋಪ ಮಾಡಿಕೊಂಡಿದ್ದರು. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮುನಿರತ್ನ ಅವರನ್ನು ಬಂಧಿಸಲಾಗಿತ್ತು. ನಂತರ ಅವರಿಗೆ ಬೇಲ್ ಕೂಡ ದೊರೆತಿತ್ತು. ಈ ಹಿನ್ನೆಲೆಯಲ್ಲಿ ಚುನಾವಣೆಯನ್ನು ಮುಂದೂಡಲಾಗಿತ್ತು.
-
Jowar Price Today: ಕರ್ನಾಟಕದಲ್ಲಿ ಕ್ವಿಂಟಾಲ್ ಜೋಳದ ಬೆಲೆ ಎಷ್ಟಿದೆ, ಮಾರುಕಟ್ಟೆವಾರು ಪಟ್ಟಿ ಇಲ್ಲಿದೆ. -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
RCB: ಆರ್ಸಿಬಿ ಪಂದ್ಯದ ನಡುವೆಯೆ ಮತ್ತೊಮ್ಮ ಅಭಿಮಾನಿಗಳ ಮನಗೆದ್ದ 'ಕ್ರಶ್' ಅನನ್ಯಾ ಬಿರ್ಲಾ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ












Click it and Unblock the Notifications