ಇಂದು ರಾಷ್ಟ್ರಪತಿ ಚುನಾವಣೆ: ವಿಧಾನಸೌಧದ ಕೊಠಡಿ 106ರಲ್ಲಿ ಮತದಾನ
ಬೆಂಗಳೂರು, ಜುಲೈ 17: ಇಂದು ದೇಶಾದ್ಯಂತ ರಾಷ್ಟ್ರಪತಿ ಸ್ಥಾನಕ್ಕೆ ಚುನಾವಣೆಗಾಗಿ ಮತದಾನ ನಡೆಯಲಿದ್ದು, ರಾಜ್ಯದಲ್ಲಿ ನಡಯಲಿರುವ ಮತದಾನಕ್ಕಾಗಿ ವಿಧಾನಸೌಧದ ಮೊದಲ ಮಹಡಿಯ ಕೊಠಡಿ ಸಂಖ್ಯೆ 106ರಲ್ಲಿ ಅಗತ್ಯ ಸಿದ್ಧತೆ ಮಾಡಿಕೊಳ್ಳಲಾಗಿದೆ.
ಬೆಳಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆವರೆಗೆ ಮತದಾನ ನಡೆಯಲಿದೆ. ಬ್ಯಾಲೆಟ್ ಪೇಪರ್ ನಲ್ಲಿ ವಿಧಾನಸಭೆಯ ಚುನಾಯಿತ 224 ಸದಸ್ಯರು ಮತದಾನ ಮಾಡಲಿದ್ದಾರೆ. ಸರ್ಕಾರದಿಂದ ನಾಮನಿರ್ದೇಶನಗೊಂಡ ಆಂಗ್ಲೋ ಇಂಡಿಯನ್ ಸದಸ್ಯೆಗೆ ಮಾತ್ರ ಮತ ಚಲಾಯಿಸುವ ಹಕ್ಕು ಇರುವುದಿಲ್ಲ. ಇನ್ನು ಲೋಕಸಭೆ ಕಾರ್ಯದರ್ಶಿಯಿಂದ ಅನುಮತಿ ಪಡೆದು ಸಂಸದರೂ ರಾಜ್ಯದಲ್ಲೇ ಮತದಾನ ಮಾಡಬಹುದು. ಬೇರೆ ರಾಜ್ಯಗಳ ಶಾಸಕರಿಗೂ ತಮ್ಮ ಮತಪತ್ರವನ್ನು ಇಲ್ಲಿಗೆ ವರ್ಗಾಯಿಸಿಕೊಂಡು ಮತ ಚಲಾಯಿಸುವ ಅವಕಾಶ ಇದೆ.

'ಸಂಸದ ಪ್ರಕಾಶ ಹುಕ್ಕೇರಿ ರಾಜ್ಯದಲ್ಲೇ ಮತ ಚಲಾಯಿಸುವುದಾಗಿ ಮಾಹಿತಿ ನೀಡಿದ್ದಾರೆ' ಎಂದು ಸಹಾಯಕ ಚುನಾವಣಾಧಿಕಾರಿಯೂ ಆಗಿರುವ ವಿಧಾನಸಭೆ ಕಾರ್ಯದರ್ಶಿ ಎಸ್. ಮೂರ್ತಿ ಹೇಳಿದ್ದಾರೆ.
ಚುನಾವಣಾ ವೀಕ್ಷಕರಾಗಿ ಐಎಎಸ್ ಅಧಿಕಾರಿ, ದೆಹಲಿಯ ಅರುಣ್ ಸಿಂಘಲ್ ಆಗಮಿಸಲಿದ್ದಾರೆ. ಕೇಂದ್ರ ಚುನಾವಣಾ ಆಯೋಗವೇ ನೀಡುವ ನೀಲಿ ಶಾಯಿ ಪೆನ್ ನಲ್ಲಿ ಮತದಾರರು ಮೊದಲ ಪ್ರಾಶಸ್ತ್ಯದ ಮತಕ್ಕೆ-1 ಮತ್ತು ಎರಡನೇ ಪ್ರಾಶಸ್ತ್ಯದ ಮತಕ್ಕೆ- 2 ಎಂದು ನಮೂದಿಸಬೇಕು. ಒಂದೊಮ್ಮೆ ಎರಡನೇ ಪ್ರಾಶಸ್ತ್ಯದ ಮತ- 2 ಎಂದು ಮಾತ್ರ ಬರೆದರೆ ಆ ಮತ ಅಸಿಂಧುವಾಗಲಿದೆ.
ಕಣದಲ್ಲಿ ಮೀರಾ ಕುಮಾರ್, ಕೋವಿಂದ್
ಚುನಾವಣಾ ಕಣದಲ್ಲಿ ಕಾಂಗ್ರೆಸ್ ನೇತೃತ್ವದ ವಿರೋಧ ಪಕ್ಷಗಳ ಅಭ್ಯರ್ಥಿಯಾಗಿ ಮೀರಾ ಕುಮಾರ್ ಇದ್ದಾರೆ. ಗೆಲ್ಲುವ ಫೇವರಿಟ್ ಅಭ್ಯರ್ಥಿಯಾಗಿ ಎನ್ಡಿಎಯ ರಾಮನಾಥ್ ಕೋವಿಂದ್ ಕಣದಲ್ಲಿದ್ದಾರೆ.
ಮತದಾನ ಮುಗಿದ ಬಳಿಕ ಮತಪೆಟ್ಟಿಗೆಯನ್ನು ಸ್ವತಃ ಮೂರ್ತಿ ಮತ್ತು ಚುನಾವಣಾ ವೀಕ್ಷಕರು ಅದೇ ದಿನ ವಿಮಾನದಲ್ಲಿ ತೆರಳಿ ಲೋಕಸಭೆ ಕಾರ್ಯದರ್ಶಿಗೆ ಹಸ್ತಾಂತರಿಸಲಿದ್ದಾರೆ. ವಿಮಾನದಲ್ಲಿ ಮತಪೆಟ್ಟಿಗೆಗೆಂದೇ ಪ್ರತ್ಯೇಕ ಆಸನ ಕಾಯ್ದಿರಿಸಲಾಗಿದೆ.
ಜುಲೈ 20ರಂದು ಮತಗಳ ಎಣಿಕೆ ನಡೆಯಲಿದೆ. ಅಂದು ಭಾರತದ ಮುಂದಿನ ರಾಷ್ಟ್ರಪತಿ ಆಯ್ಕೆಯಾಗಲಿದ್ದಾರೆ.
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications