ಇಂದು ರಾಷ್ಟ್ರಪತಿ ಚುನಾವಣೆ: ವಿಧಾನಸೌಧದ ಕೊಠಡಿ 106ರಲ್ಲಿ ಮತದಾನ
ಬೆಂಗಳೂರು, ಜುಲೈ 17: ಇಂದು ದೇಶಾದ್ಯಂತ ರಾಷ್ಟ್ರಪತಿ ಸ್ಥಾನಕ್ಕೆ ಚುನಾವಣೆಗಾಗಿ ಮತದಾನ ನಡೆಯಲಿದ್ದು, ರಾಜ್ಯದಲ್ಲಿ ನಡಯಲಿರುವ ಮತದಾನಕ್ಕಾಗಿ ವಿಧಾನಸೌಧದ ಮೊದಲ ಮಹಡಿಯ ಕೊಠಡಿ ಸಂಖ್ಯೆ 106ರಲ್ಲಿ ಅಗತ್ಯ ಸಿದ್ಧತೆ ಮಾಡಿಕೊಳ್ಳಲಾಗಿದೆ.
ಬೆಳಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆವರೆಗೆ ಮತದಾನ ನಡೆಯಲಿದೆ. ಬ್ಯಾಲೆಟ್ ಪೇಪರ್ ನಲ್ಲಿ ವಿಧಾನಸಭೆಯ ಚುನಾಯಿತ 224 ಸದಸ್ಯರು ಮತದಾನ ಮಾಡಲಿದ್ದಾರೆ. ಸರ್ಕಾರದಿಂದ ನಾಮನಿರ್ದೇಶನಗೊಂಡ ಆಂಗ್ಲೋ ಇಂಡಿಯನ್ ಸದಸ್ಯೆಗೆ ಮಾತ್ರ ಮತ ಚಲಾಯಿಸುವ ಹಕ್ಕು ಇರುವುದಿಲ್ಲ. ಇನ್ನು ಲೋಕಸಭೆ ಕಾರ್ಯದರ್ಶಿಯಿಂದ ಅನುಮತಿ ಪಡೆದು ಸಂಸದರೂ ರಾಜ್ಯದಲ್ಲೇ ಮತದಾನ ಮಾಡಬಹುದು. ಬೇರೆ ರಾಜ್ಯಗಳ ಶಾಸಕರಿಗೂ ತಮ್ಮ ಮತಪತ್ರವನ್ನು ಇಲ್ಲಿಗೆ ವರ್ಗಾಯಿಸಿಕೊಂಡು ಮತ ಚಲಾಯಿಸುವ ಅವಕಾಶ ಇದೆ.

'ಸಂಸದ ಪ್ರಕಾಶ ಹುಕ್ಕೇರಿ ರಾಜ್ಯದಲ್ಲೇ ಮತ ಚಲಾಯಿಸುವುದಾಗಿ ಮಾಹಿತಿ ನೀಡಿದ್ದಾರೆ' ಎಂದು ಸಹಾಯಕ ಚುನಾವಣಾಧಿಕಾರಿಯೂ ಆಗಿರುವ ವಿಧಾನಸಭೆ ಕಾರ್ಯದರ್ಶಿ ಎಸ್. ಮೂರ್ತಿ ಹೇಳಿದ್ದಾರೆ.
ಚುನಾವಣಾ ವೀಕ್ಷಕರಾಗಿ ಐಎಎಸ್ ಅಧಿಕಾರಿ, ದೆಹಲಿಯ ಅರುಣ್ ಸಿಂಘಲ್ ಆಗಮಿಸಲಿದ್ದಾರೆ. ಕೇಂದ್ರ ಚುನಾವಣಾ ಆಯೋಗವೇ ನೀಡುವ ನೀಲಿ ಶಾಯಿ ಪೆನ್ ನಲ್ಲಿ ಮತದಾರರು ಮೊದಲ ಪ್ರಾಶಸ್ತ್ಯದ ಮತಕ್ಕೆ-1 ಮತ್ತು ಎರಡನೇ ಪ್ರಾಶಸ್ತ್ಯದ ಮತಕ್ಕೆ- 2 ಎಂದು ನಮೂದಿಸಬೇಕು. ಒಂದೊಮ್ಮೆ ಎರಡನೇ ಪ್ರಾಶಸ್ತ್ಯದ ಮತ- 2 ಎಂದು ಮಾತ್ರ ಬರೆದರೆ ಆ ಮತ ಅಸಿಂಧುವಾಗಲಿದೆ.
ಕಣದಲ್ಲಿ ಮೀರಾ ಕುಮಾರ್, ಕೋವಿಂದ್
ಚುನಾವಣಾ ಕಣದಲ್ಲಿ ಕಾಂಗ್ರೆಸ್ ನೇತೃತ್ವದ ವಿರೋಧ ಪಕ್ಷಗಳ ಅಭ್ಯರ್ಥಿಯಾಗಿ ಮೀರಾ ಕುಮಾರ್ ಇದ್ದಾರೆ. ಗೆಲ್ಲುವ ಫೇವರಿಟ್ ಅಭ್ಯರ್ಥಿಯಾಗಿ ಎನ್ಡಿಎಯ ರಾಮನಾಥ್ ಕೋವಿಂದ್ ಕಣದಲ್ಲಿದ್ದಾರೆ.
ಮತದಾನ ಮುಗಿದ ಬಳಿಕ ಮತಪೆಟ್ಟಿಗೆಯನ್ನು ಸ್ವತಃ ಮೂರ್ತಿ ಮತ್ತು ಚುನಾವಣಾ ವೀಕ್ಷಕರು ಅದೇ ದಿನ ವಿಮಾನದಲ್ಲಿ ತೆರಳಿ ಲೋಕಸಭೆ ಕಾರ್ಯದರ್ಶಿಗೆ ಹಸ್ತಾಂತರಿಸಲಿದ್ದಾರೆ. ವಿಮಾನದಲ್ಲಿ ಮತಪೆಟ್ಟಿಗೆಗೆಂದೇ ಪ್ರತ್ಯೇಕ ಆಸನ ಕಾಯ್ದಿರಿಸಲಾಗಿದೆ.
ಜುಲೈ 20ರಂದು ಮತಗಳ ಎಣಿಕೆ ನಡೆಯಲಿದೆ. ಅಂದು ಭಾರತದ ಮುಂದಿನ ರಾಷ್ಟ್ರಪತಿ ಆಯ್ಕೆಯಾಗಲಿದ್ದಾರೆ.
-
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
Bengaluru: 'ಮುಕ್ಕಾಲ ಮುಕ್ಕಾಬುಲ' ಹಾಡಿಗೆ ಸಖತ್ ಹೆಜ್ಜೆ ಹಾಕಿದ ಗಣಿತ ಪ್ರೊಫೆಸರ್; ಡಾನ್ಸ್ ವಿಡಿಯೋ ಭಾರೀ Viral -
Naseer Ahmed: ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ನಸೀರ್ ಅಹ್ಮದ್ ವಜಾ; ಕಾಂಗ್ರೆಸ್ನಲ್ಲಿ ಆಂತರಿಕ ಭಿನ್ನಮತ ಸ್ಫೋಟ -
ದ್ವಿತೀಯ PUC ಪರೀಕ್ಷೆ-2: ಅನುತ್ತೀರ್ಣರಾದ ವಿದ್ಯಾರ್ಥಿಗಳಿಗಾಗಿ ಸರ್ಕಾರಿ ಕಾಲೇಜುಗಳಲ್ಲಿ ವಿಶೇಷ ತರಗತಿಗಳು ಆರಂಭ












Click it and Unblock the Notifications