ಭಾರತದ ಸಂಸ್ಕೃತಿ, ಮೌಲ್ಯಗಳನ್ನು ವಿಶ್ವಕ್ಕೆ ಹಂಚಿ: ರಾಷ್ಟ್ರಪತಿ
ಬೆಂಗಳೂರು, ಜನವರಿ 10: ಪ್ರಗತಿ ಸಾಧಿಸುತ್ತಿರುವ ಭಾರತದ ಯಶಸ್ಸು ಮತ್ತು ಮೌಲ್ಯಗಳನ್ನು ವಿಶ್ವಕ್ಕೆ ಹಂಚಬೇಕಿದೆ ಎಂದು ರಾಷ್ಟ್ರಪತಿ ಪ್ರಣಭ್ ಮುಖರ್ಜಿ ತಿಳಿಸಿದರು.
14ನೇ ಪ್ರವಾಸಿ ಭಾರತೀಯ ದಿವಸ್ ಕಾರ್ಯಕ್ರಮದ ಸಮಾರೋಪ ಸಮಾರಂಭದಲ್ಲಿ ಮಾತನಾಡಿ, ಭಾರತ ವೈವಿಧ್ಯತೆಯಲ್ಲಿ ಏಕತೆಯನ್ನು ಸಾಧಿಸಿರುವ ರಾಷ್ಟ್ರ ಇದು ದೇಶವಾಸಿಗಳ ಭಾಷೆ, ಧರ್ಮಗಳ ವಿವಿಧತೆ ಹೊಂದಿದೆ. ಇಷ್ಟೆಲ್ಲಾ ಇದ್ದರೂ ಏಕತೆಯಿಂದ ಬದುಕುವ ಜನರು ಎಲ್ಲಿಯೂ ದೊರೆಯುವುದಿಲ್ಲ. ಹೀಗಾಗಿ ಭಾರತದ ರಾಯಭಾರಿಗಳಾಗಿ ನೀವು ದೇಶದ ಸಂಸ್ಕೃತಿ, ಮೌಲ್ಯ, ಜ್ಞಾನವನ್ನು ಹರಡಲು ನಿಮಗೆ ಸಿಕ್ಕಿರುವ ಸದವಕಾಶವನ್ನು ಬಳಸಿಕೊಳ್ಳಿ ಎಂದು ಪ್ರವಾಸಿ ಭಾರತಿಯರಿಗೆ ಸಲಹೆ ನೀಡಿದರು.[ಪ್ರವಾಸಿ ಭಾರತೀಯ ದಿವಸ: ಮೋದಿ ಭಾಷಣದ ಮುಖ್ಯಾಂಶ]

ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಭಾರತ ಮೂಲದ ಮೂವತ್ತು ಮಂದಿಗೆ ಪ್ರವಾಸಿ ಭಾರತೀಯ ಸಮ್ಮಾನ್ ಪ್ರಶಸ್ತಿ ಪ್ರದಾನ ಮಾಡಿದ ಅವರು, ಕೊಲ್ಲೆ ರಾಷ್ಟ್ರಗಳಲ್ಲಿ ದುಡಿಯುತ್ತಿರುವ ದೇಶಿಯರು ತಮ್ಮ ಕುಟುಂಬ ಹಿತಕ್ಕಾಗಿ ಹಗಲಿರುಳು ಶ್ರಮಿಸುತ್ತಿದ್ದಾರೆ. ಅಲ್ಲಿನ ಪೌರತ್ವ ಸಿಗದ ಕಾರಣ ಅವರು ಎಲ್ಲ ಸವಲತ್ತುಗಳನ್ನು ಅವರು ಅನುಭವಿಸಲು ಆಗುತ್ತಿಲ್ಲ, ಸುರಕ್ಷತೆಯೂ ಇಲ್ಲ ಎಂದರು.
ಅನಿವಾಸಿ ಭಾರತೀಯರನ್ನು ವಿವಾಹವಾಗುವ ಹೆಣ್ಣುಮಕ್ಕಳು ನೋವಿನಲ್ಲಿ ನರಳುತ್ತಿದ್ದಾರೆ ಅವರ ಬಗ್ಗೆ ಸ್ಪಂದನೆಯ ಅಗತ್ಯವಿದೆ. ಇದಕ್ಕೆ ಸರ್ಕಾರದೊಂದಿಗೆ ಸಹಕರಿಸಬೇಕಿದೆ. ಅಲ್ಲದೆ ಕೇಂದ್ರದ ಜನಪರ ಕಾರ್ಯಕ್ರಮಗಳಿಗೆ ಕೈಜೋಡಿಸಿದರೆ ಭಾರತೀಯರಿಗೆ ಬಹಳಷ್ಟು ಅವಕಾಶವಿದೆ ಎಂದು ಹೇಳಿದರು.
ಪ್ರವಾಸಿ ಭಾರತೀಯರು ತಾವು ಪಡೆದ ಜ್ಞಾನವನ್ನು ಸ್ವದೇಶಕ್ಕೆ ಬಂದು ಐಐಟಿ, ಐಐಎಂಗಳಂಥ ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಹಂಚಿ ಕೊಳ್ಳುವ ಮೂಲಕ ಸರ್ಕಾರ ಆರಂಭಿಸಿರುವ ಕಾರ್ಯಕ್ರಮಕ್ಕೆ ಕೈ ಜೋಡಿಸಬೇಕು ಎಂದರು.
-
AI ಎಫೆಕ್ಟ್: 2026ರಲ್ಲೂ ಮುಂದುವರಿದ ಉದ್ಯೋಗ ಕಡಿತ; ಯಾವ್ಯಾವ ಕಂಪನಿಗಳಿಂದ ಎಷ್ಟು ವಜಾ? ಪಟ್ಟಿ ಇಲ್ಲಿದೆ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
ಮೈಸೂರಲ್ಲಿ ವಂದೇ ಭಾರತ್ ರೈಲ್ವೆ ಹಬ್: 400 ಕೋಟಿ ರೂ ವೆಚ್ಚದಲ್ಲಿ ಹೈಟೆಕ್ ನಿರ್ವಹಣಾ ಕೇಂದ್ರ -
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್












Click it and Unblock the Notifications