ಜೈಲು ಅವ್ಯವಹಾರ ಬಯಲಿಗೆಳೆದ ರೂಪಾಗೆ ರಾಷ್ಟ್ರಪತಿ ಪದಕ
ಬೆಂಗಳೂರು, ಸೆಪ್ಟೆಂಬರ್ 20: ಜಯಲಲಿತಾ ಆಪ್ತೆ ವಿ.ಕೆ.ಶಶಿಕಲಾಗೆ ರಾಜಾತಿಥ್ಯ ದೊರೆಯುತ್ತಿದ್ದದ್ದು ಸೇರಿದಂತೆ ಪರಪ್ಪನ ಅಗ್ರಹಾರ ಜೈಲಿನ ಅವ್ಯವಹಾರಗಳನ್ನು ವರದಿ ಮಾಡಿದ್ದ ಡಿ.ರೂಪಾ ಮೌದ್ಗಿಲ್ ಅವರಿಗೆ ಇತ್ತೀಚೆಗೆ ರಾಜ್ಯಪಾಲ ವಿ.ಆರ್.ವಾಲಾ ರಾಷ್ತ್ರಪತಿ ಪದಕ ವಿತರಿಸಿದರು.
ರೂಪಾ ಮೌದ್ಗಿಲ್ ಅವರ ಸೇವೆ ಪರಿಗಣಿಸಿ ಈ ಪದಕ ನೀಡಲಾಗಿದ್ದು, ರಾಜಭವನದಲ್ಲಿ ನಡೆದ ಸಮಾರಂಭದಲ್ಲಿ ರಾಜ್ಯಪಾಲರು ಪದಕ ಪ್ರದಾನ ಮಾಡಿದರು. ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಗೃಹ ಸಚಿವ ರಾಮಲಿಂಗಾ ರೆಡ್ಡಿ ಸಹ ಉಪಸ್ಥಿತರಿದ್ದರು.

ಅತ್ಯುತ್ತಮ ಸೇವೆ ಸಲ್ಲಿಸುವ ಮೂಲಕ ರಾಷ್ಟ್ರಪತಿ ಪದಕದ ಗೌರವಕ್ಕೆ ಭಾಜನರಾದ ಇತರ ಪೊಲೀಸ್ ಅಧಿಕಾರಿಗಳಿಗೂ ವಿತರಿಸಲಾಯಿತು. ಕಳೆದ ಜುಲೈನಲ್ಲಿ ಆಗ ಕಾರಾಗೃಹ ಡಿಐಜಿ ಆಗಿದ್ದ ರೂಪಾ ಮೌದ್ಗಿಲ್ ವರದಿಯೊಂದನ್ನು ಸರಕಾರಕ್ಕೆ ಸಲ್ಲಿಸಿದ್ದರು. ನಾಲ್ಕು ವರ್ಷದ ಜೈಲು ಶಿಕ್ಷೆ ಅನುಭವಿಸುತ್ತಿರುವ ಶಶಿಕಲಾಗೆ ರಾಜಾತಿಥ್ಯ ದೊರೆಯುತ್ತಿದೆ. ಇದಕ್ಕಾಗಿ ಕೋಟ್ಯಂತರ ರುಪಾಯಿ ಹಣ ನೀಡಲಾಗಿದೆ ಎಂದು ಆರೋಪಿಸಿದ್ದರು.
ಆ ನಂತರ ರೂಪಾ ಅವರನ್ನು ಸಂಚಾರ ವಿಭಾಗಕ್ಕೆ ವರ್ಗಾವಣೆ ಮಾಡಲಾಗಿತ್ತು. ಎಐಎಡಿಎಂಕೆಯಿಂದ ರೂಪಾ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡುವ ಬೆದರಿಕೆ ಹಾಕಲಾಗಿತ್ತು.
-
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video












Click it and Unblock the Notifications