ನೃಪತುಂಗ ಪ್ರಶಸ್ತಿಗೆ ಕಾದಂಬರಿಕಾರ ಎಸ್.ಎಲ್. ಭೈರಪ್ಪ ಆಯ್ಕೆ
ಬೆಂಗಳೂರು, ಡಿಸೆಂಬರ್ 14 : ಖ್ಯಾತ ಕಾದಂಬರಿಕಾರ ಡಾ. ಎಸ್.ಎಲ್. ಭೈರಪ್ಪ ಅವರು 2018ನೇ ಸಾಲಿನ 'ನೃಪತುಂಗ ಸಾಹಿತ್ಯ ಪ್ರಶಸ್ತಿ'ಗೆ ಭಾಜನರಾಗಿದ್ದಾರೆ.
ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯು ಕೊಡಮಾಡುವ ಪ್ರಶಸ್ತಿ ಇದಾಗಿದೆ. ಬಿಎಂಟಿಸಿಯು ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ಒಂದೂವರೆ ಕೋಟಿ ರೂ ಗಳ ದತ್ತಿನಿಧಿಯನ್ನು ಸ್ಥಾಪಿಸಿ ಅದರಿಂದ ಬರುವ ಬಡ್ಡಿ ಹಣದಲ್ಲಿ ಏಳು ಲಕ್ಷ ಎರೂ. ಮೊತ್ತದ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ನೃಪತುಂಗ ಪ್ರಶಸ್ತಿ ಸ್ಥಾಪಿಸಿದೆ.

ಕನ್ನಡ ಸಾರಸ್ವತ ಪ್ರಪಂಚದ ಶ್ರೇಷ್ಠ ಲೇಖಕರಿಗೆ ಈ ಪ್ರಶಸ್ತಿಯನ್ನು 2008 ರಿಂದ ನೀಡುತ್ತಾ ಬಂದಿದೆ. ಕನ್ನಡ ಸಾಹಿತ್ಯ ಪ್ರಿಷತ್ತಿನ ಅಧ್ಯಕ್ಷರಾದ ಡಾ. ಮನು ಬಳಿಗಾರ್ ಅವರ ಅಧ್ಯಕ್ಷತೆಯಲ್ಲಿ ಗುರುವಾರ ನಡೆದ ಸಭೆಯಲ್ಲಿ ಆಯ್ಕೆ ಸಮಿತಿಯು ಎಸ್. ಎಲ್. ಭೈರಪ್ಪ ಅವರನ್ನು ಆಯ್ಕೆ ಮಾಡಿದೆ.
ಕವಿ ಬಿ.ಆರ್. ಲಕ್ಮಣರಾವ್, ವಿದ್ವಾಂಸರಾದ ವೀರಣ್ಣ ರಾಜೂರ ಹಾಗೂ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ ಡಾ. ಎ.ಎನ್. ಪ್ರಕಾಶ್ ಗೌಡ, ಕಾರ್ಮಿಕ ಕಲ್ಯಾಣ ಇಲಾಖೆಯ ಅಧಿಕಾರಿ ವಿಜಯಕುಮಾರ್ ಕ.ರಾ.ರ.ಸಾ.ಸಂಸ್ಥೆಯ ಕೇಂದ್ರ ಕನ್ನಡ ಕ್ರಿಯಾ ಸಮಿತಿ ರಾಜ್ಯಾಧ್ಯಕ್ಷರಾದ ವ.ಚ. ಚನ್ನೇಗೌಡ ಅವರುಗಳಿದ್ದ ಸಮಿತಿ ಆಯ್ಕೆ ಮಾಡಿದೆ.
ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ 'ಮಯ್ಯೂರ ವರ್ಮ ಸಾಹಿತ್ಯ ಪ್ರಶಸ್ತಿ': ನೃಪತುಂಗ ಸಾಹಿತ್ಯ ಪ್ರಶಸ್ತಿ ಜತೆಗೆ, ಸಾಹಿತ್ಯದ ವಿವಿಧ ಪ್ರಕಾರಗಳಲ್ಲಿ ಸಾಧನೆ ಮಾಡಿರುವ 45 ವರ್ಷದೊಳಗಿನ ಸಾಹಿತಿಗಳಿಗೆ ಪ್ರಶಸ್ತಿ ನೀಡಲು ಮಯ್ಯೂರವರ್ಮ ಸಾಹಿತ್ಯ ಪ್ರಶಸ್ತಿ ನೀಡಲಾಗುತ್ತಿದೆ.
ಆಯ್ಕೆ ಸಮಿತಿಯು ರಾಮಲಿಂಗೇಶ್ವರ, ಡಾ. ಸಿ. ನಂದಿನಿ, ಶಾಂತಿ ಕೆ.ಅಪ್ಪಣ್ಣ ಇವರನ್ನು ಸರ್ವಾನುಮತದಿಂದ 2018 ನೇ ಸಾಲಿನ ಪ್ರಶಸ್ತಿಗೆ ಆಯ್ಕೆಮಾಡಲಾಗಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ತು ಗೌರವ ಕಾರ್ಯದರ್ಶಿ ವ.ಚ. ಚನ್ನೇಗೌಡ ತಿಳಿಸಿದ್ದಾರೆ.
-
Karnataka Weather: ಇಂದು ರಾಜ್ಯದ ಹಲವೆಡೆ ಗುಡುಗು ಸಹಿತ ಅಕಾಲಿಕ ಮಳೆ, ಬೆಂಗಳೂರಿನಲ್ಲಿ ಹೇಗಿರಲಿದೆ ವಾತಾವರಣ? -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಐಪಿಎಲ್ 2026 ಅಂಕಪಟ್ಟಿ: ರಾಜಸ್ಥಾನ್ ರಾಯಲ್ಸ್ ನಂಬರ್ 1, ಎರಡನೇ ಸ್ಥಾನದಲ್ಲಿ ಅಬ್ಬರಿಸುತ್ತಿರುವ ಆರ್ಸಿಬಿ! -
Krunal Pandya: ವಿರಾಟ್ ಕೊಹ್ಲಿ - 2026ರ ಆರ್ಸಿಬಿ ತಂಡದ ಬಗ್ಗೆ ಸ್ಟಾರ್ ಆಟಗಾರ ಕೃನಾಲ್ ಪಾಂಡ್ಯರಿಂದ ಮಹತ್ವ ವಿಷಯ ರಿವೀಲ್ -
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ?












Click it and Unblock the Notifications