BMTC: ದರ ಏರಿಕೆ ಶಾಕ್; ಶೇ.35ರಷ್ಟು ಬಿಎಂಟಿಸಿ ಬಸ್ ಪ್ರಯಾಣ ದರ ಏರಿಕೆಗೆ ಪ್ರಸ್ತಾವನೆ
ಬೆಂಗಳೂರು, ಏಪ್ರಿಲ್ 13: ದೇಶದಲ್ಲಿ ಇಂಧನ ದರ ಏರಿಕೆ ಒಂದು ಕಡೆಯಾದರೆ, ಮತ್ತೊಂದು ಕಡೆ ದಿನನಿತ್ಯ ಬಳಕೆಯ ವಸ್ತುಗಳ ಬೆಲೆಯೂ ಗಗನನಕ್ಕೆ ಏರುತ್ತಿದೆ. ಇದರಿಂದ ಜನಸಾಮಾನ್ಯರ ಬದುಕು ದಿನದಿಂದ ದಿನಕ್ಕೆ ದುಸ್ತರವಾಗುತ್ತಿದೆ.
ಇದೆಲ್ಲದರ ನಡುವೆ ಕರ್ನಾಟಕ ರಾಜಧಾನಿ ಬೆಂಗಳೂರಿಗರ ಜೀವನಾಡಿ ಎಂಬ ಹೆಗ್ಗಳಿಕೆ ಪಾತ್ರವಾಗಿರುವ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ) ಬಸ್ ಪ್ರಯಾಣ ದರ ಏರಿಕೆಯಾಗಲಿದ್ದು, ಬಿಎಂಟಿಸಿ ಬಸ್ನಲ್ಲಿ ಓಡಾಡುವ ಜನರಿಗೆ ಶಾಕ್ ದರ ಏರಿಕೆ ಶಾಕ್ ತಟ್ಟಲಿದೆ.
ಬಸ್ ಪ್ರಯಾಣ ದರ ಏರಿಕೆ ಮಾಡುವಂತೆ ರಾಜ್ಯ ಸರ್ಕಾರಕ್ಕೆ ಈಗಾಗಲೇ ಬಿಎಂಟಿಸಿ ಪ್ರಸ್ತಾವನೆ ಸಲ್ಲಿಸಿದೆ. 2 ಬಾರಿ ರಾಜ್ಯ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದು, ಮೊದಲ ಬಾರಿ ಶೇ.20ರಷ್ಟು ಬಸ್ ಟಿಕೆಟ್ ದರ ಏರಿಕೆಗೆ ಪ್ರಸ್ತಾಪಿಸಿತ್ತು. ಈಗ 2ನೇ ಪ್ರಸ್ತಾವನೆಯಲ್ಲಿ ಶೇ.35ರಷ್ಟು ದರ ಏರಿಕೆಗೆ ಬೇಡಿಕೆ ಇಟ್ಟಿದೆ.

ಕಳೆದ ವಾರವಷ್ಟೇ ಬಿಎಂಟಿಸಿ ರಾಜ್ಯ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿತ್ತು. ಈ ಪ್ರಸ್ತಾವನೆಯನ್ನು ರಾಜ್ಯ ಸರ್ಕಾರ ಒಪ್ಪಿದರೆ ಬಿಎಂಟಿಸಿ ಬಸ್ ಪ್ರಯಾಣ ದರ ಹೆಚ್ಚಳವಾಗುವ ಸಾಧ್ಯತೆ ಇದೆ.
ಏಪ್ರಿಲ್ ತಿಂಗಳಿನಲ್ಲಿ ಇಂಧನ, ಗ್ಯಾಸ್, ಹೋಟೆಲ್ ತಿಂಡಿ ದರ ಏರಿಕೆ ಬೆನ್ನಲ್ಲೇ ಜನರಿಗೆ ಬಿಎಂಟಿಸಿ ಟಿಕೆಟ್ ದರ ಹೆಚ್ಚಳದ ಆತಂಕ ಶುರುವಾಗಿದ್ದು, ಸತತವಾಗಿ ಭಾರೀ ನಷ್ಟದಲ್ಲಿ ಮುನ್ನಡೆಯುತ್ತಿರುವ ಬಿಎಂಟಿಸಿ ಮೇಲೆತ್ತಲು ಪ್ರಯಾಣ ದರ ಏರಿಕೆ ಅಗತ್ಯ ಎಂದು ಪ್ರಯಾಣ ಟಿಕೆಟ್ ದರ ಹೆಚ್ಚಿಸಲು ಮುಂದಾಗಿದೆ.

ಈ ಬಾರಿ ಬಸ್ ದರ ಏರಿಸದಿದ್ದರೆ ಬಸ್ ಓಡಿಸುವುದು ಕಷ್ಟ ಎಂದು ಸಿಎಂ ಬಸವರಾಜ ಬೊಮ್ಮಾಯಿಯವರಿಗೆ ಬಿಎಂಟಿಸಿ ಸಂಸ್ಥೆ ಮನವರಿಕೆ ಮಾಡಿಕೊಟ್ಟಿದೆ. ಸದ್ಯ ಈ ಬಗ್ಗೆ ಪರಿಶೀಲಿಸಿ ತೀರ್ಮಾನ ತೆಗೆದುಕೊಳ್ಳುತ್ತೇವೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಟಿಕೆಟ್ ದರ ಶೇ.35ರಷ್ಟು ದರ ಏರಿಕೆ ಅಸಾಧ್ಯ, ಅಧಿಕಾರಿಗಳ ಜೊತೆ ಚರ್ಚಿಸಿ ಮುಂದಿನ ತೀರ್ಮಾನ ಮಾಡುತ್ತೇನೆ ಎಂದು ಸಿಎಂ ಬೊಮ್ಮಾಯಿ ಟಿಕೆಟ್ ದರ ಏರಿಕೆ ಬಗ್ಗೆ ತಮ್ಮ ನಿಲುವು ಸ್ಪಷ್ಟಪಡಿಸಿದ್ದಾರೆ. ಒಂದು ವೇಳೆ ಮುಖ್ಯಮಂತ್ರಿಗಳು ಒಪ್ಪಿದರೆ ಜನರ ಜೇಬಿಗೆ ಕತ್ತರಿ ಬೀಳುವುದಂತು ಖಂಡಿತ.
ಬಿಎಂಟಿಸಿ ಬಸ್ ದರ ಶೇ.35ರಷ್ಟು ಏರಿಕೆಯಾದರೆ ಸ್ಟೇಜ್ (ಹಂತ) ವೈಸ್ ದರವೂ ಹೆಚ್ಚಾಗಲಿದೆ. ಆರಂಭಿಕ ದರ ಈಗ 5 ರೂ. ಇದ್ದು, ಶೇ.35 ಹೆಚ್ಚಾದ ನಂತರ 6.75 ಪೈಸೆ ಆಗಲಿದೆ. ಈ ವೇಳೆ ಚಿಲ್ಲರೆ ಸಮಸ್ಯೆ ಒಡ್ಡಿ ಬಿಎಂಟಿಸಿ 7 ರೂ.ಗೆ ಹೆಚ್ಚಳ ಮಾಡಬಹುದು. ಇನ್ನು ಇದೇ ವೇಳೆ 10 ರೂ. ಇರುವ ದರ 13 ರೂ. 15 ಇರುವ ದರ 20 ರೂ. ಹೀಗೆ ಏರಿಕೆ ಆಗಲಿದೆ. ಬಿಎಂಟಿಸಿ ಬಸ್ ಪ್ರಯಾಣ ದರ ಹೆಚ್ಚಳ ಪ್ರಸ್ತಾವನೆ ಜಾರಿಗೆ ಬಂದರೆ ಪ್ರಯಾಣಿಕರ ಜೇಬಿಗೆ ಕತ್ತರಿ ಬೀಳಲಿದೆ.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Bengaluru: ಶ್ರೀರಾಮ ನವಮಿ ಹಬ್ಬದ ಪ್ರಯುಕ್ತ ಮಾ.27ರಂದು ನಗರದಲ್ಲಿ ಮಾಂಸ ಮಾರಾಟ ಬಂದ್ಗೆ GBA ಆದೇಶ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
ಬೆಂಗಳೂರು ಇ-ಖಾತಾ ದಂಧೆ ಬಯಲು: ಬ್ರ್ಯಾಂಡ್ ಬೆಂಗಳೂರಿಗೆ ಆರ್ ಅಶೋಕ್ ತೀವ್ರ ಟೀಕೆ -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
ಐಪಿಎಲ್ಗೂ ಮುನ್ನ ಆರ್ಸಿಬಿ ಹೊಸ ದಾಖಲೆ: 16,000 ಕೋಟಿಗೆ ಆದಿತ್ಯ ಬಿರ್ಲಾ ಗ್ರೂಪ್ ಪಾಲಾದ ರಾಯಲ್ ಚಾಲೆಂಜರ್ಸ್ ಬೆಂಗಳೂರು -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ?












Click it and Unblock the Notifications