Get Updates
Get notified of breaking news, exclusive insights, and must-see stories!

ಪ್ರಧಾನಿ ಮೋದಿ ಹುಟ್ಟುಹಬ್ಬ: ಬಿಜೆಪಿ ಯುವ ಮೋರ್ಚಾದಿಂದ 11 ಸಾವಿರ ಯೂನಿಟ್ ರಕ್ತದಾನ

ಬೆಂಗಳೂರು, ಸೆ.15: ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಹುಟ್ಟುಹಬ್ಬವನ್ನು ಸೆಪ್ಟಂಬರ್ 17ರಂದು ಜನಸ್ನೇಹಿ ಕಾರ್ಯಕ್ರಮವನ್ನಾಗಿ ದೇಶದೆಲ್ಲೆಡೆ ಆಚರಿಸಲಾಗುವುದು ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಮತ್ತು ವಿಧಾನಪರಿಷತ್ ಸದಸ್ಯ ಎನ್ ರವಿಕುಮಾರ್ ತಿಳಿಸಿದರು.

ವಿಧಾನಸೌಧದ ಬಿಜೆಪಿ ಕಚೇರಿಯಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಎನ್ ರವಿಕುಮಾರ್, "ಮೋದಿಯವರು ಹೇಗೆ ಬಡವರ, ದಲಿತರ ಮತ್ತು ಶೋಷಿತರ, ಮಹಿಳೆಯರ, ಅಂಗವಿಕಲರ ಹಾಗೂ ಪರಿಸರದ ಪರ ಎಂಬುದರ ಹಿನ್ನೆಲೆಯಲ್ಲಿ ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು" ಎಂದು ಮಾಹಿತಿ ನೀಡಿದರು.

ಕಾರ್ಯಕ್ರಮದ ವೇಳೆ ಮೋದಿ ಅವರ ಪರಿಚಯದ ದೃಷ್ಟಿಯಿಂದ ಅವರ ಬಗೆಗಿನ "ಮೋದಿ @20 ಡ್ರೀಮ್ ಮೀಟ್ ಡೆಲಿವರಿ" ಪುಸ್ತಕ ಬಿಡುಗಡೆ ಮಾಡಲಾಗುವುದು ಹಾಗೂ ಸಾಧನೆಗಳ ಪ್ರದರ್ಶಿನ ಏರ್ಪಡಿಸಲಾಗುತ್ತದೆ ಎಂದರು.

ಯುವ ಮೋರ್ಚಾ ವತಿಯಿಂದ ಗಿನ್ನೆಸ್ ದಾಖಲೆಗೆ ಪ್ರಯತ್ನ

ಯುವ ಮೋರ್ಚಾ ವತಿಯಿಂದ ಗಿನ್ನೆಸ್ ದಾಖಲೆಗೆ ಪ್ರಯತ್ನ

ಯುವ ಮೋರ್ಚಾ ವತಿಯಿಂದ ಎಲ್ಲ ಜಿಲ್ಲೆಗಳಲ್ಲಿ ಒಟ್ಟು 11 ಸಾವಿರ ಯೂನಿಟ್ ರಕ್ತದಾನ ನಡೆಯಲಿದೆ. ದೇಶದಲ್ಲಿ ಇದೊಂದು ಗಿನ್ನೆಸ್ ದಾಖಲೆ ಆಗಬೇಕು ಎಂಬ ಪ್ರಯತ್ನ ಮಾಡಲಾಗುತ್ತಿದೆ. ಸಸಿ ನೆಡುವುದಲ್ಲದೆ, ಸಸಿ ದತ್ತು ಪಡೆಯಲಾಗುವುದು. ಅರಳಿ ಮರದ ಸಸಿಗಳನ್ನು ನೆಡಲಾಗುತ್ತದೆ. ದಿವ್ಯಾಂಗರಿಗೆ ಅಗತ್ಯ ಉಪಕರಣ ನೀಡಲಾಗುವುದು ಎಂದರು.

ಇದೇ ವೇಳೆ ಕ್ಯಾಚ್ ದಿ ರೈನ್ ಅಡಿಯಲ್ಲಿ ನೀರು ಮರುಪೂರಣ ಅಭಿಯಾನ, ವೋಕಲ್ ಫಾರ್ ಲೋಕಲ್ ಧ್ಯೇಯ ವಾಕ್ಯದಡಿ ಸ್ಥಳೀಯ ವಸ್ತುಗಳ ಬಳಕೆಗೆ ಅಭಿಯಾನ ರೂಪಿಸುತ್ತೇವೆ ಎಂದರು.

ಅಮೃತ ಸರೋವರ ಯೋಜನೆಯಡಿ ಕೆರೆಗಳ ಶುದ್ಧೀಕರಣ

ಅಮೃತ ಸರೋವರ ಯೋಜನೆಯಡಿ ಕೆರೆಗಳ ಶುದ್ಧೀಕರಣ

"ಅಕ್ಟೋಬರ್ 2ರಂದು ಗಾಂಧಿ ಜಯಂತಿಯಂದು ಒಂದು ಜೊತೆ ಖಾದಿ ಡ್ರೆಸ್ ಖರೀದಿ, ಖಾದಿ ಕರ್ಚೀಪ್, ಖಾದಿ ಟವೆಲ್ ಬಳಕೆ ಅಭಿಯಾನ ಮಾಡಲಿದ್ದೇವೆ. ಖಾದಿ ಇಲಾಖೆಯು ನಮ್ಮ ಅಭಿಯಾನದ ದ್ಯೋತಕವಾಗಿ ನಷ್ಟದಿಂದ ಲಾಭ ಪಡೆಯುವಂತಾಗಿದೆ' ಎಂದು ವಿವರಿಸಿದರು.


ಜೊತೆಗೆ ಸ್ವಚ್ಛತಾ ಅಭಿಯಾನದಡಿ ಪ್ರತಿ ಜಿಲ್ಲೆಗಳಲ್ಲಿ 75 ಕೆರೆಗಳನ್ನು ಅಮೃತ ಸರೋವರ ಯೋಜನೆಯಡಿ ನಿರ್ಮಿಸಲಾಗುತ್ತದೆ. ಈ ವೇಳೆ ಕೆರೆಗಳ ಶುದ್ಧೀಕರಣ ನಡೆಯಲಿದೆ. ಸೆ.17ರಿಂದ ಅ.2ರ ವರೆಗೆ ಸೇವಾ ಪಾಕ್ಷಿಕ ನಡೆಯಲಿದ್ದು, ಮುಖ್ಯಮಂತ್ರಿ ಸೇರಿ ಜನಪ್ರತಿನಿಧಿಗಳೆಲ್ಲರೂ ಭಾಗವಹಿಸಲಿದ್ದಾರೆ ಎಂದು ಮಾಹಿತಿ ನೀಡಿದರು.

ಪ್ರಧಾನಿ ಕರೆಯಂತೆ ಕ್ಷಯರೋಗಿಗಳಿಗೆ ಸೌಲಭ್ಯ

ಪ್ರಧಾನಿ ಕರೆಯಂತೆ ಕ್ಷಯರೋಗಿಗಳಿಗೆ ಸೌಲಭ್ಯ

ಕ್ಷಯರೋಗ ಮುಕ್ತ ಅಭಿಯಾನಕ್ಕೆ ಪ್ರಧಾನಿಯವರು ಕರೆ ಕೊಟ್ಟಿದ್ದು, ಕ್ಷಯರೋಗಕ್ಕೆ ಸಿಲುಕಿದವರಿಗೆ ಜನಪ್ರತಿನಿಧಿಗಳು ಔಷಧಿ ಮತ್ತಿತರ ಸೌಲಭ್ಯ ನೀಡಿ ನೆರವಾಗಲಿದ್ದಾರೆ. 2025ಕ್ಕೆ ಕ್ಷಯಮುಕ್ತ ಭಾರತ ಮಾಡಲಾಗುತ್ತದೆ ಎಂದು ತಿಳಿಸಿದರು. ಹುಟ್ಟುಹಬ್ಬ ಆಚರನೆ ವೇಳೆ ಪ್ರಧಾನಿ ಮೋದಿಜಿಯವರ ಭಾವಚಿತ್ರಕ್ಕೆ ಹಾಲು ಎರೆಯುವುದನ್ನು, ಭಾವಚಿತ್ರಕ್ಕೆ ಪೂಜೆ, ಹೋಮ ಹವನ ಮಾಡಬಾರದು ಎಂದು ತಿಳಿಸಿದರು.

ಕಾಂಗ್ರೆಸ್ ನಾಯಕರು ತಮ್ಮ ಭ್ರಷ್ಟಾಚಾರವನ್ನು ಶುದ್ಧ ಮಾಡಬೇಕು

ಕಾಂಗ್ರೆಸ್ ನಾಯಕರು ತಮ್ಮ ಭ್ರಷ್ಟಾಚಾರವನ್ನು ಶುದ್ಧ ಮಾಡಬೇಕು

ರಾಜ್ಯ ಮುಖ್ಯ ವಕ್ತಾರ ಎಂ.ಜಿ. ಮಹೇಶ್ ಮಾತನಾಡಿ, 'ರಾಜ್ಯದ ಕಾಡುಕುರುಬರ ಸಮಸ್ಯೆಗೆ ಕೇಂದ್ರದ ಸಚಿವ ಸಂಪುಟವು ಶಾಶ್ವತವಾದ ಪರಿಹಾರ ಒದಗಿಸಿದೆ. ಇದು ನೆನೆಗುದಿಗೆ ಬಿದ್ದ ಸಮಸ್ಯೆಯಾಗಿತ್ತು. ನರೇಂದ್ರ ಮೋದಿಯವರ ಈ ಉತ್ತಮ ನಡೆಗೆ ಕರ್ನಾಟಕ ಬಿಜೆಪಿ ಅಭಿನಂದನೆಗಳನ್ನು ಸಲ್ಲಿಸುತ್ತದೆ' ಎಂದು ತಿಳಿಸಿದರು.

ಇನ್ನು, ಬೆಂಗಳೂರಿಗೆ ಸಂಬಂಧಿಸಿದ ಟೋಯಿಂಗ್ ವಿಚಾರದಲ್ಲಿ ಹೈಕೋರ್ಟ್ ತೀರ್ಮಾನಕ್ಕೆ ಸರಕಾರವು ಮೇಲ್ಮನವಿ ಸಲ್ಲಿಸಬೇಕು. ಟೋಯಿಂಗ್ ಮೂಲಕ ಆಗುತ್ತಿರುವ ಶ್ರೀಸಾಮಾನ್ಯನ ಮೇಲಿನ ದಬ್ಬಾಳಿಕೆ, ಸುಲಿಗೆಗಳಿಂದ ಬೆಂಗಳೂರಿನ ಜನರನ್ನು ಪಾರು ಮಾಡಬೇಕು. ಮೇಲ್ಮನವಿ ಮೂಲಕ ಕೋರ್ಟಿನಿಂದ ನ್ಯಾಯ ಸಿಗಬೇಕು ಎಂದು ಒತ್ತಾಯಿಸಿದರು.

ಕಾಂಗ್ರೆಸ್‌ನವರು ಮೂರು ದಿನಗಳ ಹಿಂದೆ ಭ್ರಷ್ಟಾಚಾರಕ್ಕೆ ಸಂಬಂಧಿಸಿ ಕಾಲ್ ಸೆಂಟರ್ ಆರಂಭಿಸಿದ್ದಾರೆ. 1,800 ಭ್ರಷ್ಟಾಚಾರದ ಪ್ರಕರಣಗಳು ಬಂದಿವೆ ಎಂದೂ ಅವರು ಹೇಳಿಕೊಂಡಿದ್ದಾರೆ. ಕಾಂಗ್ರೆಸ್ಸಿಗರ ಭ್ರಷ್ಟಾಚಾರ ಪ್ರಕರಣಗಳು ಲೋಕಾಯುಕ್ತ ಮತ್ತು ಇತರ ಸಂಸ್ಥೆಗಳಲ್ಲಿವೆ. ಕಾಂಗ್ರೆಸಿಗರು ತಮ್ಮ ಭ್ರಷ್ಟಾಚಾರವನ್ನು ಶುದ್ಧ ಮಾಡಬೇಕು. ಸಿದ್ದರಾಮಯ್ಯನವರ ಮೇಲೆ 50ಕ್ಕೂ ಹೆಚ್ಚು ಕೇಸುಗಳಿವೆ. ತಾವು ಮೊದಲು ಮಾದರಿ ಆಗಬೇಕು ಎಂದು ಆಗ್ರಹಿಸಿದರು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+