ನಿತ್ಯಾನಂದನ ಹೊಸ ದೇಶಕ್ಕೆ ಪ್ರಧಾನಿ, ಕ್ಯಾಬಿನೆಟ್ ರಚನೆ
Recommended Video
ಬೆಂಗಳೂರು, ಡಿಸೆಂಬರ್ 03: ಸ್ವಯಂ ಘೋಷಿತ ದೇವ ಮಾನವನೆಂದೇ ಹೇಳಿಕೊಳ್ಳುವ ಅತ್ಯಾಚಾರದ ಆರೋಪಿಯಾಗಿರುವ ನಿತ್ಯಾನಂದ, ಆಶ್ರಮಗಳ ನಂತರ ಈಗ ತನ್ನದೇ ಆದ ದೇಶ ಕಟ್ಟಲು ಮುಂದಾಗಿದ್ದಾನೆ.
ಈಕ್ವೆಡಾರ್ ಎಂಬಲ್ಲಿ ಖಾಸಗಿ ಹಿಮಪ್ರದೇಶವನ್ನು ಖರೀದಿ ಮಾಡಿದ್ದು, ಇದು ನನ್ನದೇ ದೇಶ ಎಂದು ಹೇಳಿಕೊಳ್ಳುತ್ತಿದ್ದಾನೆ. ಈ ದೇಶಕ್ಕಾಗಿ ಧ್ವಜ, ಲಾಂಛನ, ಪ್ರತ್ಯೇಕ ಪಾಸ್ ಪೋರ್ಟ್ ನ್ನು ಸಿದ್ದಪಡಿಸಿಕೊಂಡಿದ್ದಾನೆ. ಅಲ್ಲದೇ ಈ ದೇಶಕ್ಕೆ 'ಕೈಲಾಸ' ಎಂದು ಹೆಸರಿಟ್ಟಿದ್ದಾನೆ ಎಂದು ಆಂಗ್ಲ ಮಾಧ್ಯಮ ವರದಿ ಮಾಡಿದೆ.
ಈ ನೂತನ ದೇಶವು ಟ್ರಿನಿಡಾಡ್ ಮತ್ತು ಟೊಬ್ಯಾಗೊ ಪ್ರದೇಶಕ್ಕೆ ಹತ್ತಿರವಾಗಿದೆ. ಇದನ್ನು ಹಿಂದೂ ರಾಷ್ಟ್ರವೆಂದು ಕರೆದಿದ್ದಾನೆ. ಈ ದೇಶಕ್ಕೆ ಪ್ರಧಾನಿ ಸೇರಿದಂತೆ ಸಚಿವ ಸಂಪುಟವನ್ನು ರಚಿಸಿದ್ದು, ಈ ದೇಶಕ್ಕೆ ದೇಣಿಗೆ ನೀಡುವಂತೆ ಸಾರ್ವಜನಿಕ ಪ್ರಕಟಣೆ ಹೊರಡಿಸಿದ್ದಾನೆ. ಈ ಶ್ರೇಷ್ಠ ಹಿಂದೂ ರಾಷ್ಟ್ರ ಕೈಲಾಸದ ಪೌರತ್ವವನ್ನು ಪಡೆಯಬೇಕು, ಇದು ಅದಾವಕಾಶ ಎಂದಿದ್ದಾನೆ.

ಹಿಂದೂಗಳಿಗೆ ಮುಕ್ತ ಪ್ರವೇಶ
ಈಕ್ವೆಡಾರ್ ಎಂಬಲ್ಲಿ ದ್ವೀಪ ಖರೀದಿ ಮಾಡಿದ್ದು, ಇದು ನನ್ನದೇ ದೇಶ ಎಂದು ಹೇಳಿಕೊಳ್ಳುತ್ತಿದ್ದಾನೆ. ಈ ದೇಶಕ್ಕಾಗಿ ಧ್ವಜ, ಲಾಂಛನ, ಪ್ರತ್ಯೇಕ ಪಾಸ್ ಪೋರ್ಟ್ ನ್ನು ಸಿದ್ದಪಡಿಸಿಕೊಂಡಿದ್ದಾನೆ. ಅಲ್ಲದೇ ಈ ದೇಶಕ್ಕೆ 'ಕೈಲಾಸ' ಎಂದು ಹೆಸರಿಟ್ಟಿದ್ದಾನೆ ಎಂದು ಆಂಗ್ಲ ಮಾಧ್ಯಮ ವರದಿ ಮಾಡಿದೆ.
ಈ ನೂತನ ದೇಶವು ಟ್ರಿನಿಡಾಡ್ ಮತ್ತು ಟೊಬ್ಯಾಗೊ ಪ್ರದೇಶಕ್ಕೆ ಹತ್ತಿರವಾಗಿದೆ. ಇದನ್ನು ಹಿಂದೂ ರಾಷ್ಟ್ರವೆಂದು ಕರೆದಿದ್ದಾನೆ. ಈ ದೇಶಕ್ಕೆ ಪ್ರಧಾನಿ ಸೇರಿದಂತೆ ಸಚಿವ ಸಂಪುಟವನ್ನು ರಚಿಸಿದ್ದು, ಈ ದೇಶಕ್ಕೆ ದೇಣಿಗೆ ನೀಡುವಂತೆ ಸಾರ್ವಜನಿಕ ಪ್ರಕಟಣೆ ಹೊರಡಿಸಿದ್ದಾನೆ. ಈ ಶ್ರೇಷ್ಠ ಹಿಂದೂ ರಾಷ್ಟ್ರ ಕೈಲಾಸದ ಪೌರತ್ವವನ್ನು ಪಡೆಯಬೇಕು, ಇದು ಅದಾವಕಾಶ ಎಂದಿದ್ದಾನೆ.

ಲಾಂಛನಗಳು ಸಿದ್ದವಾಗಿವೆ
ಕೈಲಾಸ ದೇಶವು ರಾಜಕೀಯದಿಂದ ಮುಕ್ತವಾಗಿದ್ದು, ಎಲ್ಲ ಮಾನವರು ಪ್ರಬುದ್ಧರಾಗಿ ಬದುಕಬಹುದು ಎಂದು ಹೇಳಿದ್ದಾನೆ. ಇಲ್ಲಿ ಅಧೀಕೃತವಾಗಿ ಹಿಂದೂ ಧರ್ಮದ ತಳಹದಿಯ ಮೇಲೆ ದೇಶ ಕಟ್ಟಲಾಗಿದ್ದು, ಪ್ರಬುದ್ಧ ನಾಗರೀಕತೆ ಸಂರಕ್ಷಣೆ, ಪುನರುಜ್ಜೀವನ ನಡೆಸುವುದರ ಬಗ್ಗೆ ಕೈಲಾಸ ದೇಶದ ಪ್ರಮುಖ ಉದ್ದೇಶವಾಗಿದೆ ಎಂದು ಬರೆದುಕೊಂಡಿದ್ದಾನೆ.
ಕೈಲಾಸ ದೇಶದ ಪಾಸ್ ಪೋರ್ಟ್ ನ ಎರಡು ಮಾದರಿಗಳು ಈಗಾಗಲೇ ಅಂತಿಮವಾಗಿದ್ದು, ಒಂದು ಬಂಗಾರದ ಬಣ್ಣದ್ದಾಗಿದೆ. ಇನ್ನೊಂದು ಕೆಂಪು ಬಣ್ಣದ್ದಾಗಿದೆ. ಎರಡು ಲಾಂಛನಗಳಿದ್ದು, ಒಂದರಲ್ಲಿ ನಿತ್ಯಾನಂದ, ಇನ್ನೊಂದರಲ್ಲಿ ನಂದಿ ಚಿತ್ರಗಳಿವೆ.

ಸರ್ಕಾರದ ಇಲಾಖೆಗಳು ಕಾರ್ಯರೂಪಕ್ಕೆ
ನಿತ್ಯಾನಂದ ಕೈಲಾಸ ದೇಶಕ್ಕೆ ಪ್ರಧಾನಿಯನ್ನು ಸೂಚಿಸಿದ್ದು, ಮಾ ಎಂಬ ಹೆಸರಿನವ ಪ್ರಧಾನಿಯಾಗಿದ್ದಾನೆ. ಪ್ರತಿನಿತ್ಯ ನಿತ್ಯಾನಂದ ಸಚಿವ ಸಂಪುಟ ಸಭೆ ಕರೆಯುತ್ತಾನೆ ಎಂದು ಆಂಗ್ಲ ಮಾಧ್ಯಮ ವರದಿ ಮಾಡಿದೆ.
ಕೈಲಾಸ ದೇಶಕ್ಕೆ ಯಾವುದೇ ನಿರ್ಭಂಧಗಳನ್ನು ವಿಧಿಸಿರುವುದಿಲ್ಲ. ವಿಶ್ವದ ಯಾವುದೇ ಕಡೆಗಳಿಂದ ಹಿಂದೂಗಳು ಈ ದೇಶಕ್ಕೆ ಬರಬಹುದಾಗಿದೆ. ಈ ದೇಶದಲ್ಲಿ 10 ಇಲಾಖೆಗಳು ಕಾರ್ಯನಿರ್ವಹಿಸುತ್ತಿವೆ. ಇದರಲ್ಲಿ ಒಂದು ಶ್ರೀ ನಿತ್ಯಾನಂದ ಪರಮಶಿವಂ, ಕೈಲಾಸ ಸರ್ಕಾರದ ಅಂತರಾಷ್ಟ್ರೀಯ ಸಂಬಂಧ, ಡಿಜಿಟಲ್ ಕಾರ್ಯಕ್ರಮಗಳು ಹಾಗೂ ಸಾಮಾಜಿಕ ಜಾಲತಾಣಗಳು ಸೇರಿಕೊಂಡಿವೆ.

ನಕಲಿ ಪಾಸ್ ಪೋರ್ಟ್ ಬಳಸಿ ಪರಾರಿ
ಗೃಹ, ರಕ್ಷಣೆ, ವಾಣಿಜ್ಯ ಹಾಗೂ ಶಿಕ್ಷಣ ಸೇರಿದಂತೆ ಅನೇಕ ಇಲಾಖೆಗಳನ್ನು ರಚಿಸಿಕೊಂಡಿದ್ದಾನೆ. ಕೈಲಾಸದ ಕಾನೂನು ತಂಡ ಈ ಹೊಸ ದೇಶವನ್ನು ಘೋಷಣೆ ಮಾಡಲು ವಿಶ್ವಸಂಸ್ಥೆಗೆ ಅರ್ಜಿ ಸಲ್ಲಿಸಲಿದೆ. ಭಾರತದಲ್ಲಿ ಬೆದರಿಕೆ ಇರುವ ಬಗ್ಗೆಯೂ ಉಲ್ಲೇಖಿಸಲಾಗಿದೆ.
ಪಾಸ್ ಪೋರ್ಟ್ ಅವಧಿ ಮುಕ್ತಾಯವಾದಾಗ ನೇಪಾಳದ ಮೂಲಕ ಭಾರತವನ್ನು ತೊರೆದು ಹೋಗಿದ್ದಾನೆ. ನಕಲಿ ಪಾಸ್ ಪೋರ್ಟ್ ಬಳಸಿ ವೆನೆಜುವೆಲಾ ಪಾಸ್ ಪೋರ್ಟ್ ಪಡೆದು ದೇಶ ತೊರೆದು ಹೋಗಿದ್ದಾನೆ ಎಂದು ಆಂಗ್ಲ ಮಾಧ್ಯಮ ವರದಿ ಮಾಡಿದೆ.
-
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
ಶೃಂಗೇರಿ ಮಠದಿಂದ ಶಾಲಾ ಮಕ್ಕಳಿಗೆ ಸುವರ್ಣಾವಕಾಶ: 'ರಾಮಾಯಣ ಪರೀಕ್ಷೆ' ಬರೆದು 50 ಸಾವಿರ ರೂ. ನಗದು ಗೆಲ್ಲಿ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
ಕರ್ನಾಟಕ PGCET 2026 ಅಧಿಸೂಚನೆ ಪ್ರಕಟ: ಎಂಬಿಎ ಸೇರಿ ವಿವಿಧ ಸ್ನಾತಕೋತ್ತರ ಪದವಿ ಪ್ರವೇಶಾತಿಗೆ ಮಾರ್ಚ್ 23 ರಿಂದ ಅರ್ಜಿ ಆಹ್ವಾನ -
ವಿಶ್ವಮಾತೆ ಎನ್ನುತ್ತಾ ಶ್ರೀಚಾಮುಂಡೇಶ್ವರಿಯ ಕನ್ನಡ ಹಾಡು ಹಂಚಿಕೊಂಡ ಪ್ರಧಾನಿ ಮೋದಿ -
ಮಾರ್ಚ್ 21ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ












Click it and Unblock the Notifications