'ಅಪಾರ್ಟ್ ಮೆಂಟ್ ನಿವಾಸಿಗಳ ಮೇಲಿನ ಸರ್ಕಾರದ ತಾರತಮ್ಯ ನಿಲ್ಲಲಿ'
ಬೆಂಗಳೂರು, ಏಪ್ರಿಲ್ 23: ಅಪಾರ್ಟ್ ಮೆಂಟ್ ನಿವಾಸಿಗಳ ಮೇಲಾಗುತ್ತಿರುವ ನೀರು, ಒಳಚರಂಡಿ,ಎಸ್ ಟಿ ಪಿ ಘಟಕ ,ತ್ಯಾಜ್ಯ ಸಂಗ್ರಹಣೆ ಹಾಗೂ ಇನ್ನೂ ಅನೇಕ ಮೂಲ ಸೌಕರ್ಯ ವಿಷಯಗಳಲ್ಲಿ ವಿಧಿಸುತ್ತಿರುವ ತೆರಿಗೆ ,ಸೆಸ್ ಗಳಲ್ಲಿ ಸಾಕಷ್ಟು ತಾರತಮ್ಯ ಧೋರಣೆ ಅನುಸರಿಸಿ ಹೆಚ್ಚಿನ ದರ ವಿಧಿಸುತ್ತಿರುವುದು ಬೇಸರದ ಸಂಗತಿ ಎಂದು ಆಮ್ ಆದ್ಮಿ ಪಾರ್ಟಿ ಸಂಚಾಲಕ ಪೃಥ್ವಿರೆಡ್ಡಿ ಅಭಿಪ್ರಾಯ ವ್ಯಕ್ತಪಡಿಸಿದರು.
ಬೆಂಗಳೂರು ಅಪಾರ್ಟ್ ಮೆಂಟ್ ಫೆಡರೇಶನ್ ಚೌಡಯ್ಯ ಮೆಮೋರಿಯಲ್ ಹಾಲ್ ನಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಸಂವಾದದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ತ್ಯಾಜ್ಯ ನೀರು ಶುದ್ದೀಕರಣ ಘಟಕಗಳ ನಿರ್ಮಾಣ ಸಂಪೂರ್ಣವಾಗಿ ಸರ್ಕಾರದ ಕರ್ತವ್ಯವಾಗಿದ್ದು ನಾಗರೀಕರ ಮೇಲೆ ಲಕ್ಷಾಂತರ ರೂ. ಗಳ ಹೊರೆ ವಿಧಿಸುತ್ತಿರುವುದು ಅನ್ಯಾಯವೆಂದು ತಿಳಿಸಿದರು.

ದೆಹಲಿ ಆಮ್ ಆದ್ಮಿ ಸರಕಾರದ ರೀತಿ ರಾಜ್ಯದಲ್ಲಿಯೂ ಉಚಿತ ನೀರು ಪೂರೈಸಬೇಕಿರುವುದು ಸರಕಾರದ ಕರ್ತವ್ಯ , ಕಾನೂನು ಉಲ್ಲಂಘನೆ ಮಾಡುತ್ತಿರುವ ಅಧಿಕಾರಿಗಳು ,ಜನಪ್ರತಿನಿಧಿಗಳ ಮೇಲೆ ಕಠಿಣ ಕ್ರಮ ತೆಗೆದುಕೊಳ್ಳಬೇಕೆಂದು ತಿಳಿಸಿದರು. ಬೆಂಗಳೂರಿನಲ್ಲಿ ಲ್ಯಾಂಡ್ ಮಾಫಿಯಾ,ಮರಳು ಮಾಫಿಯಾ ಗಾರ್ಬೇಜ್ ಮಾಫಿಯಾ ಗಳು ತಲೆಯೆತ್ತಿವೆಯೆಂದು ತಿಳಿಸಿದರು.

ಅಪಾರ್ಟ್ ಮೆಂಟ್ ನಿವಾಸಿಗಳು ಹೆಚ್ಚಿನ ವೋಟ್ ಬ್ಯಾಂಕನ್ನು ಹೊಂದಿರುವುದರಿಂದ ರಾಜಕೀಯ ಕ್ಷೇತ್ರಕ್ಕೆ ಆಗಮಿಸಿ ವ್ಯವಸ್ಥೆ ಬದಲಾವಣೆಗಾಗಿ ಶ್ರಮಿಸಲು ಒತ್ತಾಯಿಸಿದರು. ಬೆಂಗಳೂರು ನಗರಾಭಿವೃದ್ಧಿ ಸಚಿವ ಕೆ.ಜೆ.ಜಾರ್ಜ್ ,ಬಿ ಜೆ ಪಿ ಪಕ್ಷದಿಂದ ಮಲ್ಲೇಶ್ವರಂ ಹಾಲಿ ಶಾಸಕ ಸಿ .ಎನ್ .ಅಶ್ವಥನಾರಾಯಣ ಹಾಗೂ ಜೆ ಡಿ ಎಸ್ ಪಕ್ಷದ ವಕ್ತಾರ ತನ್ವೀರ್ ಅಹಮದ್ ಭಾಗವಹಿಸಿದ್ದರು.
-
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು












Click it and Unblock the Notifications