ಖಾಸಗಿ ಬಸ್, ಆಟೋ, ಟ್ಯಾಕ್ಸಿ ಚಾಲಕರ ಮುಷ್ಕರ ವಾಪಸ್: ಫಲಿಸಿದ ಸಾರಿಗೆ ಸಚಿವರ ಸಂಧಾನ
ಬೆಂಗಳೂರು, ಜುಲೈ 24: ಬೆಂಗಳೂರಿನ ಶಾಂತಿನಗರದ ಸಾರಿಗೆ ಇಲಾಖೆ ಕೇಂದ್ರ ಕಚೇರಿಯಲ್ಲಿ ನಡೆದ ಸಾರಿಗೆ ಸಚಿವ ಸಚಿವ ರಾಮಲಿಂಗ ರೆಡ್ಡಿ ಅವರ ಜೊತೆ ಖಾಸಗಿ ಸಾರಿಗೆ ಒಕ್ಕಟದ ಸಭೆಯ ಬಳಿಕ ಜುಲೈ 27ರಂದು ಕರೆ ನೀಡಿದ್ದ ಖಾಸಗಿ ಬಸ್ಸುಗಳು, ಆಟೋ ಮತ್ತು ಟ್ಯಾಕ್ಸಿ ಬಂದ್ ವಾಪಸ್ಸು ಪಡೆಯಲಾಗಿದೆ.
ಸಭೆ ಬಳಿಕ ಮಾತನಾಡಿದ ಒಕ್ಕೂಟ ಮುಖಂಡ ನಟರಾಜ ಶರ್ಮ, ನಮ್ಮ ಬೇಡಿಕೆ ಈಡೇರಿಸುವಂತೆ ಸರ್ಕಾರಕ್ಕೆ ಮನವಿ ಸಲ್ಲಿಸಲಾಗಿದೆ. ಈ ಬಗ್ಗೆ ಸರ್ಕಾರ ಕೂಡ ಸೂಕ್ತ ರೀತಿಯಲ್ಲಿ ನಡೆದುಕೊಳ್ಳವುದಾಗಿ ಹೇಳಿರುವ ಹಿನ್ನೆಲೆಯಲ್ಲಿ ಜುಲೈ 27 ರಂದು ಕರೆ ನೀಡಿದ್ದ ಖಾಸಗಿ ಬಸ್ಸುಗಳು, ಆಟೋ ಮತ್ತು ಟ್ಯಾಕ್ಸಿ ಬಂದ್ ವಾಪಸ್ಸು ಪಡೆಯಲಾಗಿದೆ. ಇದೇ ವೇಳೆ ಸರ್ಕಾರಕ್ಕೆ ಆಗಸ್ಟ್ 10 ತನಕ ಡೆಡ್ ಲೈನ್ ನೀಡಲಾಗಿದೆ. ಅಧಿಕಾರಿಗಳ ವರದಿ ಆಧಾರಿಸಿ ಮುಂದಿನ ಕ್ರಮವನ್ನು ಕೈಗೊಳ್ಳಲಾಗುವುದು ಎಂದುಸಚಿವರು ನೀಡಿದ್ದಾರೆ ಎಂದು ಅವರು ಹೇಳಿದರು.

ಕಾಂಗ್ರೆಸ್ ಸರ್ಕಾರದ ಮಹತ್ವದ ಯೋಜನೆಗಳಲ್ಲಿ ಒಂದಾಗಿರುವ ಶಕ್ತಿ ಯೋಜನೆ ಜಾರಿ ನಂತರ ಖಾಸಗಿ ಬಸ್, ಆಟೋ ಟ್ಯಾಕ್ಸಿ ಮಾಲೀಕರಿಗೆ ಭಾರೀ ಹೊಡೆತ ನೀಡಿದೆ. ಹೀಗಾಗಿ ಯೋಜನೆ ಸ್ಥಗಿತಕ್ಕೆ ಖಾಸಗಿ ಸಾರಿಗೆ ಒಕ್ಕೂಟ ಆಗ್ರಹಿಸುತ್ತು. ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ, ಆಟೋ ಚಾಲಕರ ಸಮಸ್ಯೆ ಬೇರೆ ಇದೆ, ಟ್ಯಾಕ್ಸಿ ಸಮಸ್ಯೆಯೂ ಇದೆ. ಶಕ್ತಿಯೋಜನೆ ಕುರಿತು ನಾನೊಬ್ಬನೆ ತೀರ್ಮಾನ ಕೈಗೊಳ್ಳಲು ಸಾಧ್ಯವಿಲ್ಲ. ಈ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಜೊತೆ ಚರ್ಚೆ ನಡೆಸಬೇಕು ಎಂದರು.
ಸಭೆಯಲ್ಲಿ ರ್ಯಾಪಿಡೋ ಸೇವೆ ಸ್ಥಗಿತಕ್ಕೆ ಒಕ್ಕೂಟವು ಮನವಿ ಮಾಡಿತ್ತು. ಈ ಬಗ್ಗೆ ಭರವಸೆ ನೀಡಿದ ರಾಮಲಿಂಗಾರೆಡ್ಡಿ, ರ್ಯಾಪಿಡೋ ಬೈಕ್ ಟ್ಯಾಕ್ಸಿಗೆ ನಿರ್ಬಂಧ ಹೇರುವುದು ನನ್ನ ಜವಾಬ್ದಾರಿ. ರ್ಯಾಪಿಡೋ ಬೈಕ್ ಟ್ಯಾಕ್ಸಿಯನ್ನು ಖಂಡಿತಾ ನಿಷೇಧ ಮಾಡುತ್ತೇವೆ ಎಂದರು.
ಇದೇ ವೇಳೆ ಅವರು 50,000 ಓಲಾ, ಉಬರ್ ಕ್ಯಾಬ್ಗಳ ಪೈಕಿ 25,000 ಕ್ಯಾಬ್ ಕಪ್ಪು ಪಟ್ಟಿಗೆ ಸೇರಿವೆ. ಕಪ್ಪುಪಟ್ಟಿಗೆ ಸೇರಿಸಿರುವ ಚಾಲಕರ ಪಟ್ಟಿ ಕೈಬಿಡುವಂತೆ ಸಚಿವರಿಗೆ ಮನವಿ ಮಾಡಿಕೊಳ್ಳಲಾಗಿದ್ದು, ಈ ಬಗ್ಗೆ ಕೂಡ ಶೀಘ್ರದಲ್ಲಿ ತೀರ್ಮಾನ ಕೈಗೊಳ್ಳಲಾಗುವುದು. ಇದಲ್ಲದೇ ಚಾಲಕರ ನಿಗಮ ಮಾಡಲು ಮನವಿ ಮಾಡಲಾಗಿದ್ದು, ಚಾಲಕರ ಅಂಕಿ ಅಂಶ ಒಂದೇ ಸ್ಥಳದಲ್ಲಿ ಸಿಗುತ್ತದೆ ಎಂದು ಸಾರಿಗೆ ಸಚಿವ ರಾಮಲಿಂಗ ರೆಡ್ಡಿ ಅವರು ಚಾಲಕರಿಗೆ ತಿಳಿಸಿದ್ದಾರೆ ಎಂದು ತಿಳಿದು ಬಂದಿದೆ.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
IPL 2026 RCB: ಹ್ಯಾಜಲ್ವುಡ್, ಯಶ್ ದಯಾಳ್ ಅಲಭ್ಯರಾದ್ರೆ ಆರ್ಸಿಬಿ ಮುಂದಿರುವ 'ಪ್ಲಾನ್ ಬಿ' ಏನು? -
Bengaluru: ಶ್ರೀರಾಮ ನವಮಿ ಹಬ್ಬದ ಪ್ರಯುಕ್ತ ಮಾ.27ರಂದು ನಗರದಲ್ಲಿ ಮಾಂಸ ಮಾರಾಟ ಬಂದ್ಗೆ GBA ಆದೇಶ -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಬೆಂಗಳೂರು ಇ-ಖಾತಾ ದಂಧೆ ಬಯಲು: ಬ್ರ್ಯಾಂಡ್ ಬೆಂಗಳೂರಿಗೆ ಆರ್ ಅಶೋಕ್ ತೀವ್ರ ಟೀಕೆ












Click it and Unblock the Notifications