ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಇಂದಿರಾ ಕ್ಯಾಂಟಿನ್ ಸ್ಥಾಪನೆಗೆ ಮನವಿ
ಬೆಂಗಳೂರು, ಜುಲೈ 28: ಬೆಂಗಳೂರು ಏರ್ಪೋರ್ಟ್ ಟ್ಯಾಕ್ಸಿ ಚಾಲಕರಿಗೆ ಅನುಕೂಲವಾಗುವಂತೆ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 'ಇಂದಿರಾ ಕ್ಯಾಂಟೀನ್' ತೆರಲು ಬಿಬಿಎಂಪಿ ಚಿಂತನೆ ಆರಂಭಿಸಿದೆ. ಈ ಸಂಬಂಧ ಈಗಾಗಲೇ ಖಾಸಗಿ ಕ್ಯಾಬ್ ಚಾಲಕರ ಯೂನಿಯನ್ ಮುಖ್ಯಸ್ಥರು ಮನವಿ ಮಾಡಿದ್ದಾರೆ.
ಬೆಂಗಳೂರು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ (KIA)ದಲ್ಲಿ ಊಟ-ತಿಂಡಿ ಸಿಗತ್ತದೆಯಾದರೂ ಎಂದರೂ ಅದು ಬಲು ದುಬಾರಿಯಾಗಿದೆ. ಅಷ್ಟು ಹಣ ಕೊಟ್ಟು ಪ್ರತಿ ದಿವಸ ಊಟ ಮಾಡಲು ಆಗದು. ಈ ಕಾರಣದಿಂದ ನಮಗಾಗಿ ವಿಮಾನ ನಿಲ್ದಾಣದ ಹೊರಗೆ ಇಂದಿರಾ ಕ್ಯಾಂಟೀನ್ ತೆರೆಯುವಂತೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಅವರಲ್ಲಿ ಸೋಮವಾರ ಮನವಿ ಮಾಡಿದ್ದರು. ಅದರ ಬೆನ್ನಲ್ಲೆ ಬಿಬಿಎಂಪಿಯು ಇಂತದ್ದೊಂದು ಚಿಂತನೆ ಆರಂಭಿಸಿದೆ.

ಮನವಿ ಸ್ವೀಕರಿಸಿದ ಸಚಿವ ರಾಮಲಿಂಗಾ ರೆಡ್ಡಿ ಅವರು, ವಿಮಾನ ನಿಲ್ದಾಣದ ಹೊರಗೆ ಒಂದು ಅಥವಾ ಎರಡು ಇಂದಿರಾ ಕ್ಯಾಂಟೀನ್ಗಳನ್ನು ಸ್ಥಾಪಿಸಲು ಅಗತ್ಯ ಕ್ರಮ ವಹಿಸುವಂತೆ ಪಾಲಿಕೆ ಮುಖ್ಯ ಆಯುಕ್ತರಿಗೆ ಪತ್ರ ಬರೆಯುವುದಾಗಿ ಖಾಸಗಿ ಕ್ಯಾಬ್ ಯೂನಿಯನ್ ಸದಸ್ಯರಿಗೆ ಭರವಸೆ ನೀಡಿದರು.
ಕ್ಯಾಬ್ ಚಾಲಕರ ಜತೆ ಬಡವರಿಗೂ ಅನುಕೂಲ
ಬೆಂಗಳೂರು ಏರ್ಪೋರ್ಟ್ನಲ್ಲಿ ಇಂದಿರಾ ಕ್ಯಾಂಟೀನ್ ತೆರೆದಿದ್ದೇ ಆದಲ್ಲಿ ಕ್ಯಾಬ್ ಚಾಲಕರು ಮಾತ್ರವಲ್ಲದೇ ಇನ್ನಿತರ ಬಡವರಿಗೂ ಅನುಕೂಲವಾಗಲಿದೆ. ಅವರೆಲ್ಲರನ್ನು ಗಮನದಲ್ಲಿಟ್ಟುಕೊಂಡು ಇಂದಿರಾ ಕ್ಯಾಂಟೀನ್ಗಳ ಮೂಲಕ ಕೈಗೆಟಕುವ ದರದಲ್ಲಿ ಊಟ ತಿಂಡಿ ಒದಗಿಸಲು ಶ್ರಮಿಸಲಾಗುವುದು. ಇದರ ಭಾಗವಾಗಿ ಇಂದಿರಾ ಕ್ಯಾಂಟೀನ್ಗಳ ಸ್ಥಾಪನೆಗೆ ಸ್ಥಳಾವಕಾಶ ಮೀಸಲಿಡುವಂತೆ ಬಿಬಿಎಂಪಿ ಮೂಲಕ ವಿಮಾನ ನಿಲ್ದಾಣದ ಅಧಿಕಾರಿಗಳಿಗೂ ಮನವಿ ಮಾಡುತ್ತೇನೆ ಎಂದು ಸಚಿವರು ಹೇಳಿದರು.

ಇದೇ ವಿಚಾರವಾಗಿ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರು ಪ್ರತಿಕ್ರಿಯಿಸಿದ್ದು, ವಿಮಾನ ನಿಲ್ದಾಣವು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವ್ಯಾಪ್ತಿಯಲ್ಲಿ ಬಾರದು. ಹೀಗಿದ್ದರೂ ಸಹ ಹೆಚ್ಚಿನ ಸಂಖ್ಯೆಯ ಜನರಿಗೆ ಅಲ್ಲಿ ಇಂದಿರಾ ಕ್ಯಾಂಟೀನ್ ಸ್ಥಾಪಿಸಿದರೆ ಪ್ರಯೋಜನ ಆಗುತ್ತದೆ ಎಂದರೆ, ಇದನ್ನು ವಿಶೇಷ ಪ್ರಕರಣವೆಂದು ಪರಿಗಣಿಸಲಾಗುವುದು ಎಂದು ಅವರು ಸಹಮತ ವ್ಯಕ್ತಪಡಿಸಿದರು.
ಕೆಲವು ಆಸ್ಪತ್ರೆಗಳ ಆವರಣ ಇಂದಿರಾ ಕ್ಯಾಂಟೀನ್?
ಸದ್ಯಕ್ಕಿರುವ ಹಾಲಿ ನಿಯಮಗಳ ಪ್ರಕಾರ ಇಂದಿರಾ ಕ್ಯಾಂಟೀನ್ಗಳನ್ನು ಬಿಬಿಎಂಪಿ ಮಾತ್ರ ತೆರೆಯಬಹುದಾಗಿದೆ. ಆದರೆ ವಿಮಾನ ನಿಲ್ದಾಣದ ಮಿತಿಯಲ್ಲಿ ಇದನ್ನು ತೆರೆಯಲು ಬರುತ್ತದೋ ಇಲ್ಲವೋ ಎಂಬುದರ ಚರ್ಚೆ ನಡೆದ ಬಳಿಕ ಅಂತಿಮ ನಿರ್ಧಾರ ತಿಳಿಯಲಿದೆ.
ಸರ್ಕಾರ ಹಿಂದಿನಿಂದಲೂ ಸಹ ಹೆಚ್ಚೆಚ್ಚು ಜನ ಸೇರುವ ಸ್ಥಳಗಳಲ್ಲಿ ಇಂದಿರಾ ಕ್ಯಾಂಟೀನ್ ತೆರೆಯಲು ಅವಕಾಶ ಇದೆ. ಈಗಾಗಲೇ ಸರ್ಕಾರ ಹೆಚ್ಚು ಜನ ಬಂದು ಹೋಗುವ ಕೆಲವು ಆಸ್ಪತ್ರೆಗಳ ಆವರಣದಲ್ಲೂ ಕ್ಯಾಂಟೀನ್ ಸ್ಥಾಪನೆಗೆ ಚಿಂತನೆ ನಡೆಸುತ್ತಿದೆ. ಅದೇ ರೀತಿ ಬೆಂಗಳೂರು ಏರ್ಪೋರ್ಟ್ನಲ್ಲೂ ಸ್ಥಾಪಿಸಲು ಮನವಿ ಬಂದಿದೆ. ಇದನ್ನು ವಿಶೇಷ ಪ್ರಕರಣವಾಗಿ ಸರ್ಕಾರ/ಬಿಬಿಎಂಪಿ ಪರಿಗಣಿಸಿ ಸ್ಥಾಪನೆಗೆ ಮುಂದಾಗುವ ಸಾಧ್ಯತೆಗಳು ಇದೆ ಎಂದು ತಿಳಿದು ಬಂದಿದೆ.
ಈಗಾಗಲೇ ರಾಜ್ಯ ಸರ್ಕಾರ ಬೆಂಗಳೂರಿನಲ್ಲಿ 50ಕ್ಕೂ ಹೆಚ್ಚು ಇಂದಿರಾ ಕ್ಯಾಂಟಿನ್ ನಿರ್ಮಿಸಲು ನೀರ್ಣಯಿಸಿದ್ದು, ಸುಮಾರು ನೂರು ಕೋಟಿ ರೂಪಾಯಿ ಅನುದಾನ ಮೀಸಲಿಟ್ಟಿದೆ.
-
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Bengaluru: ಶ್ರೀರಾಮ ನವಮಿ ಹಬ್ಬದ ಪ್ರಯುಕ್ತ ಮಾ.27ರಂದು ನಗರದಲ್ಲಿ ಮಾಂಸ ಮಾರಾಟ ಬಂದ್ಗೆ GBA ಆದೇಶ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Expressway: ಏಪ್ರಿಲ್ 1ರಿಂದ ರಾಜ್ಯಾದ್ಯಂತ ಟೋಲ್ ದರ ಏರಿಕೆ; ಬೆಂಗಳೂರು-ಮೈಸೂರು ಸೇರಿ ಈ ಪ್ರಮುಖ ಹೆದ್ದಾರಿಗಳಲ್ಲಿ ಸಂಚಾರ ದುಬಾರಿ -
ಐಪಿಎಲ್ಗೂ ಮುನ್ನ ಆರ್ಸಿಬಿ ಹೊಸ ದಾಖಲೆ: 16,000 ಕೋಟಿಗೆ ಆದಿತ್ಯ ಬಿರ್ಲಾ ಗ್ರೂಪ್ ಪಾಲಾದ ರಾಯಲ್ ಚಾಲೆಂಜರ್ಸ್ ಬೆಂಗಳೂರು -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
ಬೆಂಗಳೂರು ಇ-ಖಾತಾ ದಂಧೆ ಬಯಲು: ಬ್ರ್ಯಾಂಡ್ ಬೆಂಗಳೂರಿಗೆ ಆರ್ ಅಶೋಕ್ ತೀವ್ರ ಟೀಕೆ












Click it and Unblock the Notifications