ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಆವರಣದಲ್ಲಿ ಇಂದಿರಾ ಕ್ಯಾಂಟೀನ್ ತೆರೆಯಲು ಕ್ಯಾಬ್ ಚಾಲಕರ ಮನವಿ
ಬೆಂಗಳೂರು, ಜುಲೈ 28: ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ ಬಳಿಕ ಇಂದಿರಾ ಕ್ಯಾಂಟೀನ್ಗಳು ಮರುಜೀವ ಪಡೆದುಕೊಂಡಿವೆ. ಊಟ, ತಿಂಡಿಯ ಮೆನು ಕೂಡ ಬದಲಾಗಿದೆ. ಬಿಬಿಎಂಪಿ ವ್ಯಾಪ್ತಿಯಲ್ಲಿ ಹೊಸ ಇಂದಿರಾ ಕ್ಯಾಂಟೀನ್ ನಿರ್ಮಾಣಕ್ಕೆ ಯೋಜಿಸಲಾಗಿದೆ. ಇದೆಲ್ಲದರ ಜೊತೆ ವಿಮಾನ ನಿಲ್ದಾಣದಲ್ಲಿ ಕೂಡ ಇಂದಿರಾ ಕ್ಯಾಂಟೀನ್ ಆರಂಭವಾಗುವ ಸಾಧ್ಯತೆ ಇದೆ.
ದಿ ನ್ಯೂ ಇಂಡಿಯನ್ ಎಕ್ಸ್ಪ್ರೆಸ್ ವರದಿ ಮಾಡಿರುವ ಪ್ರಕಾರ, ಶೀಘ್ರದಲ್ಲೇ ಕ್ಯಾಬ್ ಚಾಲಕರು ಮತ್ತು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಭೇಟಿ ನೀಡುವವರು ಕಡಿಮೆ ವೆಚ್ಚದಲ್ಲಿ ಊಟು, ತಿಂಡಿ ಮಾಡಬಹುದು. ವಿಮಾನ ನಿಲ್ದಾಣ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಮಿತಿಯ ಅಡಿಯಲ್ಲಿ ಬರುವುದಿಲ್ಲವಾದರೂ, ಹೆಚ್ಚಿನ ಸಂಖ್ಯೆಯ ಜನರು ಪ್ರಯೋಜನ ಪಡೆಯುವುದರಿಂದ ಇದನ್ನು "ವಿಶೇಷ ಪ್ರಕರಣ" ಎಂದು ಪರಿಗಣಿಸಿ ಇಂದಿರಾ ಕ್ಯಾಂಟೀನ್ಗಳನ್ನು ಸ್ಥಾಪಿಸಬಹುದು ಎಂದು ಪಾಲಿಕೆ ಹೇಳಿದೆ.

ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಅವರನ್ನು ಭೇಟಿ ಮಾಡಿದ ವಿವಿಧ ಖಾಸಗಿ ಕ್ಯಾಬ್ ಯೂನಿಯನ್ಗಳ ಪ್ರತಿನಿಧಿಗಳು, ವಿಮಾನ ನಿಲ್ದಾಣದ ಹೊರಗೆ ಇಂದಿರಾ ಕ್ಯಾಂಟೀನ್ಗಳನ್ನು ಸ್ಥಾಪಿಸಲು ಸರ್ಕಾರಕ್ಕೆ ಮನವಿ ಮಾಡಿದರು, ವಿಮಾನ ನಿಲ್ದಾಣದಲ್ಲಿ ಊಟ, ತಿಂಡಿ ಹೆಚ್ಚಿನ ದರ ಇರುವುದರಿಂದ ಚಾಲಕರಿಗೆ ಕಷ್ಟವಾಗುತ್ತಿದೆ ಎಂದು ಮನವಿ ಮಾಡಿದ್ದಾರೆ.
ಇಂದಿರಾ ಕ್ಯಾಂಟೀನ್ ಸ್ಥಾಪನೆಯ ಭರವಸೆ
ವಿಮಾನ ನಿಲ್ದಾಣದ ಹೊರಗೆ ಒಂದು ಅಥವಾ ಎರಡು ಇಂದಿರಾ ಕ್ಯಾಂಟೀನ್ಗಳನ್ನು ಸ್ಥಾಪಿಸಲು ಕ್ರಮಕೈಗೊಳ್ಳುವಂತೆ ಬಿಬಿಎಂಪಿ ಆಯುಕ್ತ ತುಷಾರ್ ಗಿರಿನಾಥ್ ಅವರಿಗೆ ಪತ್ರ ಬರೆಯುವುದಾಗಿ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ.
"ವಿಮಾನ ನಿಲ್ದಾಣದಲ್ಲಿ ಆಹಾರ ದುಬಾರಿಯಾಗಿರುವುದರಿಂದ ಕ್ಯಾಬ್ ಚಾಲಕರಿಗೆ ಮಾತ್ರವಲ್ಲ ಅನೇಕ ಕಾರ್ಮಿಕರಿಗೆ ಕೂಡ ಕಷ್ಟವಾಗಿದೆ. ವಿಮಾನದಲ್ಲಿ ಓಡಾಡುವರಿಗೂ ಕೂಡ ಇದು ಅನುಕೂಲವಾಗಲಿದೆ. ಈ ಜನರ ಹಿತದೃಷ್ಟಿಯಿಂದ ಇಂದಿರಾ ಕ್ಯಾಂಟೀನ್ಗಳ ಮೂಲಕ ಅವರಿಗೆ ಕೈಗೆಟಕುವ ದರದಲ್ಲಿ ಆಹಾರವನ್ನು ಒದಗಿಸಲು ನಾವು ಬಯಸುತ್ತೇವೆ. ಕ್ಯಾಂಟೀನ್ಗಳನ್ನು ಸ್ಥಾಪಿಸಲು ಜಾಗವನ್ನು ಮೀಸಲಿಡಲು ಬಿಬಿಎಂಪಿ ಮೂಲಕ ನಾವು ವಿಮಾನ ನಿಲ್ದಾಣದ ಅಧಿಕಾರಿಗಳಿಗೆ ಮನವಿ ಮಾಡುತ್ತೇವೆ" ಎಂದು ರಾಮಲಿಂಗಾರೆಡ್ಡಿ ಚಾಲಕರ ಸಂಘಗಳಿಗೆ ಭರವಸೆ ನೀಡಿದ್ದಾರೆ.
ಸೂಚನೆ ನೀಡಿದರೆ ಸ್ಥಾಪನೆ
ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಬಿಬಿಎಂಪಿ ಆಯುಕ್ತ ತುಷಾರ್ ಗಿರಿನಾಥ್, ವಿಮಾನ ನಿಲ್ದಾಣದಲ್ಲಿ ಇಂದಿರಾ ಕ್ಯಾಂಟೀನ್ ಆರಂಭಿಸುವ ಬಗ್ಗೆ ಸಚಿವರಿಂದ ಯಾವುದೇ ಸೂಚನೆ ಬಂದಿಲ್ಲ, ಒಂದು ವೇಳೆ ಅವರು ಪತ್ರ ಬರೆದು ನಮಗೆ ತಲುಪಿದರೆ, ಇಂದಿರಾ ಕ್ಯಾಂಟೀನ್ ಆರಂಭಿಸುವ ಬಗ್ಗೆ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಹೇಳಿದರು.
ಪ್ರಸ್ತುತ ನಿಯಮಗಳ ಪ್ರಕಾರ ಇಂದಿರಾ ಕ್ಯಾಂಟೀನ್ಗಳನ್ನು ನಗರ ಸ್ಥಳೀಯ ಸಂಸ್ಥೆಗಳು ಮಾತ್ರ ತೆರೆಯಬಹುದು, ಆದರೆ ವಿಮಾನ ನಿಲ್ದಾಣವು ಬಿಬಿಎಂಪಿ ಮಿತಿಯಲ್ಲಿ ಬರುವುದಿಲ್ಲ ಮತ್ತು ಕ್ಯಾಂಟೀನ್ ನಡೆಸಲು ಪಂಚಾಯಿತಿಗಳಿಗೆ ಅನುಮತಿ ಇಲ್ಲ ಎಂದು ಅವರು ವಿವರಣೆ ನೀಡಿದರು.
"ಹೆಚ್ಚಿನ ಜನ ಓಡಾಡುವ ಸ್ಥಳಗಳಲ್ಲಿ ಕ್ಯಾಂಟೀನ್ ಸ್ಥಾಪನೆ ಮಾಡಲು ನಮಗೆ ಅನುಮತಿ ಇದೆ. ಕೆಲವು ಆಸ್ಪತ್ರೆಗಳಲ್ಲಿ ಇಂದಿರಾ ಕ್ಯಾಂಟೀನ್ ಸ್ಥಾಪಿಸಲು ಯೋಜಿಸುತ್ತಿದ್ದೇವೆ. ವಿಮಾನ ನಿಲ್ದಾಣಗಳಲ್ಲಿ ಇಂದಿರಾ ಕ್ಯಾಂಟೀನ್ ನಿರ್ಮಿಸಲು ಮನವಿ ಬಂದರೆ ವಿಶೇಷ ಪ್ರಕರಣ ಎಂದು ಪರಿಗಣಿಸಿ ಬಿಬಿಎಂಪಿ ಕ್ಯಾಂಟೀನ್ ಆರಂಭಿಸಲಿದೆ ಎಂದು ತುಷಾರ್ ಗಿರಿನಾಥ್ ಹೇಳಿದರು.
-
ಬೆಂಗಳೂರು ಉತ್ತರ: ಮಳೆಗಾಲಕ್ಕೂ ಮುನ್ನ ಮುನ್ನೆಚ್ಚರಿಕೆ ಕ್ರಮ, ರಸ್ತೆ ಅಗಲೀಕರಣ, ಟಿ.ಡಿ.ಆರ್ ಬಗ್ಗೆ ಮಹತ್ವದ ಚರ್ಚೆ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ












Click it and Unblock the Notifications