ಕೆಲಸಕ್ಕೆಂದು ಹೊರಟವರು ಮಸಣ ಸೇರಿದರು
ಬೆಂಗಳೂರು, ನ.16: ಮುಂಜಾನೆ ಕೆಲಸಕ್ಕೆಂದು ಹೊರಟಿದ್ದ ಕಾರ್ಮಿಕರಿಬ್ಬರನ್ನು ವೇಗವಾಗಿ ಬರುತ್ತಿದ್ದ ಖಾಸಗಿ ಸಂಸ್ಥೆ ಬಸ್ ಮಸಣ ಸೇರಿಸಿದೆ. ಬೆಳಗ್ಗೆ ಸುಮಾರು 7 ಗಂಟೆ ಸಮಯಕ್ಕೆ ಇಬ್ಬರು ಕಾರ್ಮಿಕರು ಬೊಮ್ಮಸಂದ್ರ ಕೈಗಾರಿಕಾ ಪ್ರದೇಶದಿಂದ ಬೈಕ್ನಲ್ಲಿ ಹೋಗುವಾಗ ಬಸ್ ಡಿಕ್ಕಿ ಹೊಡೆದು ಸ್ಥಳದಲ್ಲೇ ಮೃತಪಟ್ಟ ಘಟನೆ ಹೆಬ್ಬಗೋಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಅಮಾಯಕ ಬೈಕ್ ಸವಾರರ ಸಾವಿಗೆ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿ ಪ್ರತಿಭಟನೆ ನಡೆಸಿದ್ದಾರೆ. ಆನೇಕಲ್ ತಾಲೂಕಿನ ಬೊಮ್ಮಸಂದ್ರ ಲಿಂಕ್ ರಸ್ತೆಯಲ್ಲಿ ನಡೆದ ದುರಂತದಲ್ಲಿ ತಮಿಳುನಾಡು ಮೂಲದ ಅರವಿಂದ್(25) ಮತ್ತು ಗಣೇಶ್(26) ಮೃತರಾಗಿದದ್ದಾರೆ. ಇವರು ಜಿಗಣಿ ಕೈಗಾರೀಕಾ ಪ್ರದೇಶದಲ್ಲಿರುವ ಬಿಲ್ ಫೋರ್ಜ್ ಪ್ರೈ.ಲಿಮಿಟೆಡ್ ಕಂಪನಿಯ ನೌಕರರಾಗಿದ್ದು, ಭಾನುವಾರ ಮುಂಜಾನೆ ಕೆಲಸಕ್ಕೆಂದು ಬೈಕಿನಲ್ಲಿ ಹೋಗುತ್ತಿದ್ದ ವೇಳೆ ಅಪಘಾತಕ್ಕೆ ಬಲಿಯಾಗಿದ್ದಾರೆ.

ಎಲೆಕ್ಟ್ರಾನಿಕ್ ಸಿಟಿ ಕಡೆಯಿಂದ ವೇಗವಾಗಿ ಬರುತ್ತಿದ್ದ ಎಪಿಸಿ ಕಂಪನಿಯ ಬಸ್ ನಿಲ್ಲಿಸಿದ್ದ ಕಂಟೇನರ್ ವೊಂದನ್ನು ಓವರ್ ಟೇಕ್ ಮಾಡಲು ಹೋಗಿದೆ, ಈ ಸಮಯದಲ್ಲಿ ರಸ್ತೆ ಬದಿಯಲ್ಲಿ ಸಾಗುತ್ತಿದ್ದ ಬೈಕಿಗೆ ಡಿಕ್ಕಿ ಹೊಡೆದಿದ್ದು ಸವಾರಿಬ್ಬರು ಸ್ಥಳದಲ್ಲೇ ಅಸುನೀಗಿದ್ದಾರೆ. ಘಟನೆ ನಂತರ ಬಸ್ ಚಾಲಕ ಪರಾರಿಯಾಗಿದ್ದಾನೆ.

'ಎಪಿಸಿ' ಕಂಪನಿ ಬಸ್ ಚಾಲಕರ ಅಜಾಗರೂಕತೆಯಿಂದ ಈ ಹಿಂದೆ ಕೂಡ ಇಂಥದ್ದೇ ಹಲವು ರಸ್ತೆ ಅವಘಡಗಳನ್ನು ಸಂಭವಿಸಿವೆ ಕಂಪನಿ ಮ್ಯಾನೇಜರ್ ಮತ್ತು ಬಸ್ ಚಾಲಕನನ್ನು ಬಂಧಿಸಬೇಕೆಂದು ಬಿಲ್ ಫೋರ್ಜ್ ಕಾರ್ಖಾನೆಯ ಎರಡು ಘಟಕ (ಜಿಗಣಿ ಹಾಗೂ ಬೊಮ್ಮಸಂದ್ರ) ನೌಕರರು ಹೆಬ್ಬಗೋಡಿ ಪೊಲೀಸ್ ಠಾಣೆ ಮುಂಭಾಗ ಪ್ರತಿಭಟನೆ ನಡೆಸಿದರು.

ಇದರಿಂದಾಗಿಬೊಮ್ಮಸಂದ್ರ ಮುಖ್ಯರಸ್ತೆಯಲ್ಲಿ ಕೆಲಕಾಲ ಬಿಗುವಿವ ವಾತಾವರಣ ಸೃಷ್ಟಿಯಾಗಿತ್ತು. ಆರೋಪಿಗಳನ್ನು ಕೂಡಲೇ ಬಂಧಿಸದಿದ್ದರೆ ಹೆದ್ದಾರಿ ತಡೆಯುವುದಾಗಿ ಎಚ್ಚರಿಕೆ ಕೂಡ ನೀಡಿದರು. ಘಟನೆ ಸಂಬಂಧ ಹೆಬ್ಬಗೋಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ.[ಚಿತ್ರಗಳು: ಮಾಲ ಎಂ, ಎಲೆಕ್ಟ್ರಾನಿಕ್ ಸಿಟಿ]
-
ಬೆಂಗಳೂರಿನಲ್ಲಿ 2ನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ: ಬಜೆಟ್ನಲ್ಲಿ ಹೊಸ ಸುದ್ದಿ ಕೊಟ್ಟ ಸಿಎಂ ಸಿದ್ದರಾಮಯ್ಯ -
ಕರ್ನಾಟಕ ಬಜೆಟ್ 2026: ನಮ್ಮ ಮೆಟ್ರೋ 41 ಕಿ.ಮೀ ಹೆಚ್ಚುವರಿ ಮಾರ್ಗ ಶೀಘ್ರವಾಗಿ ಪೂರ್ಣ -
Gold Rate Today: ಕರ್ನಾಟಕದ ಬೆಂಗಳೂರಿನಲ್ಲಿ ಬಂಗಾರ ದರ ಇಳಿಕೆ: ಇಲ್ಲಿದೆ ಮಾರ್ಚ್ 6ರ ದರಪಟ್ಟಿ -
Karnataka Budget 2026 PDF: ಕರ್ನಾಟಕ ಬಜೆಟ್ 2026-27 ಪಿಡಿಎಫ್ ಡಾಕ್ಯುಮೆಂಟ್ ಇಲ್ಲಿ ಡೌನ್ಲೋಡ್ ಮಾಡಿ -
ಸಂಜು ನಿಜವಾದ ಮ್ಯಾಚ್ ವಿನ್ನರ್, ವಿಶ್ವದ ನಂ.1 ಟಿ20 ಬ್ಯಾಟರ್ ಅಭಿಷೇಕ್ ಮೇಲೆ ನಂಬಿಕೆಯಿಡಿ: ರವಿಶಾಸ್ತ್ರಿ ಮಹತ್ವದ ಸಲಹೆ -
ಹೊಸ 800 ಕೆಪಿಎಸ್ ಶಾಲೆ, ಇಂಗ್ಲಿಷ್ ಭಾಷಾ ತರಬೇತಿ: ಕರ್ನಾಟಕ ಬಜೆಟ್ನಲ್ಲಿ ಶಿಕ್ಷಣ ಕ್ಷೇತ್ರಕ್ಕೆ ಭರಪೂರ ಘೋಷಣೆ -
Karnataka Budget 2026: 100 ಹೊಸ ಸ್ಕೈವಾಕ್, ಟನಲ್ ರಸ್ತೆ ಸೇರಿ ಕರ್ನಾಟಕ ಬಜೆಟ್ನಲ್ಲಿ ಬೆಂಗಳೂರಿಗೆ ಸಿಕ್ಕಿದ್ದೇನು? -
Karnataka Property: ಇ-ಆಸ್ತಿ, ಏಕೀಕೃತ ಆಸ್ತಿ ತೆರಿಗೆ ಸಂಯೋಜನೆ: ಕರ್ನಾಟಕದಲ್ಲಿ ಆಸ್ತಿ ನಿರ್ವಹಣೆಗೆ ಹೊಸ ನಿಯಮ -
ರೈತರಿಗೆ ಮಾಲ್, ಮಂಡ್ಯ ಸಾವಯ ಕೃಷಿ: ಅಡಿಕೆ - ತೆಂಗು ಬೆಳಗಾರರಿಗೂ ಬಂಪರ್, ಮೇಕೆದಾಟು ಯೋಜನೆಗೆ ಅಸ್ತು -
Karnataka Budget 2026: ಕರ್ನಾಟಕ ಬಜೆಟ್ 2026: ಬಜೆಟ್ ಗ್ರಾತ ಕಳೆದ ಬಾರಿಗಿಂತ 40 ಸಾವಿರ ಕೋಟಿ ರೂ. ಹೆಚ್ಚಳ -
ಕರ್ನಾಟಕದಲ್ಲಿ ಮೊಟ್ಟ ಮೊದಲ ಬಾರಿಗೆ ಬಸ್ ನಿಲ್ದಾಣಗಳಲ್ಲಿ ಬಜೆಟ್ ನೇರ ಪ್ರಸಾರ, ವಿಶೇಷವೇನು -
ರಷ್ಯಾದಿಂದ ತೈಲ ಖರೀದಿಸಲು ಭಾರತಕ್ಕೆ 30 ದಿನಗಳ ಅನುಮತಿ ಕೊಟ್ಟ ಅಮೆರಿಕ












Click it and Unblock the Notifications