ಜೂ.16 ರಂದು ಅರ್ಧ ದಿನ ಖಾಸಗಿ ಆಸ್ಪತ್ರೆ ಬಂದ್
ಬೆಂಗಳೂರು, ಜೂನ್ 16: ಇಂದು(ಜೂನ್ 16) ಬೆಳಗ್ಗೆಯಿಂದ ಮಧ್ಯಾಹ್ನದವರೆಗೆ ಅಂದ್ರೆ ಅರ್ಧ ದಿನ ರಾಜ್ಯದ ಎಲ್ಲಾ ಖಾಸಗಿ ಆಸ್ಪತ್ರೆಗಳೂ ಬಂದ್ ಆಗಲಿವೆ. ರಾಜ್ಯ ಸರ್ಕಾರ ಮಂಡಿಸಿರುವ ಕರ್ನಾಟಕ ಖಾಸಗಿ ಆಸ್ಪತ್ರೆಗಳ ವಿಧೇಯಕ 2017 ಅನ್ನು ವಿರೋಧಿಸಿ ಖಾಸಗಿ ಆಸ್ಪತ್ರೆ ಸಂಘಟನೆಗಳ ಒಕ್ಕೂಟ ಈ ನಿರ್ಧಾರ ಕೈಗೊಂಡಿದೆ.
ರೋಗಿಗಳಿಗೆ ಸಮಸ್ಯೆಯಾಗಬಾರದೆಂದು ತುರ್ತುಚಿಕಿತ್ಸೆಗೆ ವಿನಾಯಿತಿ ಇದೆ. ಈ ಬಂದ್ ಗೆ ರಾಜ್ಯದಾದ್ಯಂತ 2,000 ಕ್ಕೂ ಹೆಚ್ಚು ಆಸ್ಪತ್ರೆಗಳು, ಖಾಸಗಿ ಕ್ಲಿನಿಕ್ ಗಳು ಬೆಂಬಲ ಸೂಚಿಸಿವೆ.
ತನ್ನಿಮಿತ್ತ ಇಂದು ಬೆಂಗಳೂರಿನ ಫ್ರೀಡಂ ಪಾರ್ಕಿನಲ್ಲಿ ಬೆಳಗ್ಗೆ 9 ಗಂಟೆಗೆ ಪ್ರತಿಭಟನೆ ಹಮ್ಮಿಕೊಳ್ಳಲಾಗಿದ್ದು, ಖಾಸಗಿ ಆಸ್ಪತ್ರೆಗಳ ಸುಮಾರು 15,000ಕ್ಕೂ ಹೆಚ್ಚು ವೈದ್ಯರು ಪಾಲ್ಗೊಳ್ಳುವ ನಿರೀಕ್ಷೆಯಿದೆ.
ಇತ್ತೀಚೆಗೆ ವೈದ್ಯಕೀಯ ಕ್ಷೇತ್ರದಲ್ಲಿ ಪದೇ ಪದೇ ಸಂಭವಿಸುತ್ತಿರುವ ಅಹಿತಕರ ಘಟನೆಗಳನ್ನು ಮನಗಂಡು ಸರ್ಕಾರ ಈ ವಿಧೇಯಕ ಮಂಡಿಸಿದೆ. ವೈದ್ಯರ ನಿರ್ಲಕ್ಷ್ಯದಿಂದ ರೋಗಿಗಳು ಸಾಯುತ್ತಿರುವುದು, ಖಾಸಗಿ ಆಸ್ಪತ್ರೆಗಳ ಅತಿಯಾದ ಶುಲ್ಕ, ಸೌಲಭ್ಯ ಒದಗಿಸದಿರುವುದು... ಇಂಥ ಹಲವು ಸಮಸ್ಯೆಗಳ ನಿವಾರಣೆಯಲ್ಲಿ ಈ ವಿಧೇಯಕ ಮಹತ್ವದ ಪಾತ್ರ ವಹಿಸಲಿದೆ. ಜನಸಾಮಾನ್ಯರ ಕೈಗೆಟುಕದಂತಿದ್ದ ವೈದ್ಯಕೀಯ ಸೇವೆಯನ್ನು ಸ್ವಲ್ಪವಾದರೂ ಅಗ್ಗಗೊಳಿಸುವ ಉದ್ದೇಶವನ್ನು ಇದು ಹೊಂದಿದೆ.

ತುರ್ತು ಸೇವೆ ಅಬಾಧಿತ
ತೀರಾ ಅನಾರೋಗ್ಯವಾದರೆ, ತುರ್ತು ಸೇವೆಯ ಅಗತ್ಯವಿದ್ದರೆ ಸಾರ್ವಜನಿಕರಿಗೆ ಸಮಸ್ಯೆಯಾಗದಂತೆ ವೈದ್ಯಕೀಯ ಸೇವೆ ನೀಡಲಾಗುವುದು ಎಂದೂ ಒಕ್ಕೂಟದ ಸದಸ್ಯರು ತಿಳಿಸಿದ್ದಾರೆ. ಹೆರಿಗೆ ವಿಬಾಗ, ಅಪಘಾತ ಚಿಕಿತ್ಸಾ ವಿಭಾಗ ಸೇರಿದಂತೆ ತುರ್ತು ಸೇವೆ ಲಭ್ಯವಿರುತ್ತದೆ. ಆದ್ದರಿಂದ ಸಾರ್ವಜನಿಕರು ಭಯಪಡುವ ಅಗತ್ಯವಿಲ್ಲ.

ಯಾವುದಕ್ಕೆ ಬಂದ್ ಬಿಸಿ?
ಖಾಸಗಿ ಆಸ್ಪತ್ರೆಗಳ ಹೊರರೋಗಿಗಳ ವಿಭಾಗ, ಸ್ಕ್ಯಾನಿಂಗ್ ಎಕ್ಸ್ ರೇ, ಬ್ಲಡ್ ಟೆಸ್ಟ್ ಯುನಿಟ್, ತುರ್ತು ಅಗತ್ಯವಿಲ್ಲದ ಆಪರೇಶನ್ ಗಳು ಇವೆಲ್ಲಕ್ಕೂ ಇಂದು ಬಂದ್ ಬಿಸಿ ತಟ್ಟಲಿವೆ.

ಏನಿದೆ ವಿಧೇಯಕದಲ್ಲಿ
ಈ ವಿಧೇಯಕ ಖಾಸಗಿ ಆಸ್ಪತ್ರೆಗಳಲ್ಲಿನ ಚಿಕಿತ್ಸೆಗೆ ಸರ್ಕಾರ ದರ ನಿಗದಿಪಡಿಸುವ ಮತ್ತು ನಿರ್ಲಕ್ಷ್ಯ ತೋರುವ ವೈದ್ಯರನ್ನು ಜೈಲಿಗಟ್ಟುವ ಉದ್ದೇಶ ಹೊಂದಿದೆ. ಇದು ಖಾಸಗೀ ಆಸ್ಪತ್ರೆಗಳ ನಿರಂಕುಶ ಪ್ರವೃತ್ತಿಯ ಮೇಲೆ ಬರೆ ಎಳೆಯಲಿದೆ. ಮಾತ್ರವಲ್ಲ, ಸರ್ಕಾರವೇ ದರವನ್ನು ನಿಗದಿಪಡಸುವುದರಿಂದ ರೋಗಿಗಳನ್ನು ಹೈರಾಣಾಗಿಸುವಂಥ ಶುಲ್ಕವೂ ಇರುವುದಿಲ್ಲ. ಇದರಿಂದ ಖಾಸಗಿ ಆಸ್ಪತ್ರೆಗಳು ಲಾಭ ಪಡೆಯುವುದು ಕಷ್ಟವಾಗುತ್ತದೆ. ಈ ಕಾರಣದಿಂದ ಖಾಸಗಿ ಆಸ್ಪತ್ರೆಗಳು ಅರ್ಧ ದಿನ ಬಂದ್ ಆಗಿ ತಮ್ಮ ವಿರೋಧವನ್ನು ವ್ಯಕ್ತಪಡಿಸಲಿವೆ.

ಒಕ್ಕೂಟದ ಮುಖ್ಯಸ್ಥರಿಂದ ಮುಖ್ಯಮಂತ್ರಿ ಭೇಟಿ
ಜೂನ್ 15 ರ ಸಂಜೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ ಖಾಸಗಿ ಆಸ್ಪತ್ರೆ ಸಂಘಟನೆಗಳ ಮುಖ್ಯಸ್ಥರು, ವಿಧೇಯಕದ ಸಾಧಕ-ಬಾಧಕಗಳನ್ನು ಚರ್ಚಿಸಿದ್ದಾರೆ. ಆರೋಗ್ಯ ಸಚಿವ ರಮೇಶ್ ಕುಮಾರ್ ಅವರೊಂದಿಗೆ ಮಾತನಾಡಿ ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
-
Karnataka Weather: ಇಂದು ರಾಜ್ಯದ ಹಲವೆಡೆ ಗುಡುಗು ಸಹಿತ ಅಕಾಲಿಕ ಮಳೆ, ಬೆಂಗಳೂರಿನಲ್ಲಿ ಹೇಗಿರಲಿದೆ ವಾತಾವರಣ? -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
AI ಎಫೆಕ್ಟ್: 2026ರಲ್ಲೂ ಮುಂದುವರಿದ ಉದ್ಯೋಗ ಕಡಿತ; ಯಾವ್ಯಾವ ಕಂಪನಿಗಳಿಂದ ಎಷ್ಟು ವಜಾ? ಪಟ್ಟಿ ಇಲ್ಲಿದೆ -
ಅಪ್ರಾಪ್ತ ಬಾಲಕಿಯರ ಗರ್ಭಧಾರಣೆ ಮುಚ್ಚಿಟ್ಟರೆ ಜೈಲುಪಾಲು: ಖಾಸಗಿ ಆಸ್ಪತ್ರೆಗಳಿಗೆ ಆರೋಗ್ಯ ಇಲಾಖೆ ಖಡಕ್ ಎಚ್ಚರಿಕೆ -
Jobs: ಹೈಕೋರ್ಟ್ನಲ್ಲಿ ಕೆಲಸ ಬೇಕೆ? 70 ಅಸಿಸ್ಟೆಂಟ್ ಕೋರ್ಟ್ ಸೆಕ್ರೆಟರಿ ಹುದ್ದೆಗಳಿಗೆ ಅರ್ಜಿ ಆಹ್ವಾನ, ಇಂದೇ ಅರ್ಜಿ ಸಲ್ಲಿಸಿ -
Bengaluru Rent: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಬಾಡಿಗೆ ಮನೆಗಳು ಸಿಗುವ 6 ಪ್ರಮುಖ ಪ್ರದೇಶಗಳು -
ನೌಕರಿ ಬಿಟ್ಟು ಸ್ವಂತ ಉದ್ಯಮ: ಹುಣಸೆ ಸಿಹಿತಿಂಡಿಗೆ ಪೇಟೆಂಟ್ ಪಡೆದ ಬೈಲಹೊಂಗಲದ ಟೆಕ್ಕಿ; 17 ದೇಶಗಳಿಗೆ ರಫ್ತು -
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ












Click it and Unblock the Notifications