ಬೆಂಗಳೂರು: ಮನೆಗೆ ನುಗ್ಗಿ ಖಾಸಗಿ ಶಾಲಾ ಶಿಕ್ಷಕಿಯನ್ನು ಕೊಂದು ಪರಾರಿಯಾದ ಆರೋಪಿ
ಶಾಂತಿನಗರ ಸಮೀಪದ ನಂಜಪ್ಪ ವೃತ್ತದಲ್ಲಿ 34 ವರ್ಷದ ಕೌಸರ್ ಮುಬೀನ್ ಎಂಬ ಖಾಸಗಿ ಶಾಲಾ ಶಿಕ್ಷಕಿಯೊಬ್ಬರನ್ನು ಅವರ ಮನೆಯಲ್ಲಿಯೇ ಚಾಕುವಿನಿಂದ ಇರಿದು ಹತ್ಯೆ ಮಾಡಲಾಗಿದೆ
ಬೆಂಗಳೂರು, ಫೆಬ್ರವರಿ. 14: ಮನೆಯಲ್ಲಿ ಒಬ್ಬರೇ ಇದ್ದ ಸಮಯದಲ್ಲಿ ದುಷ್ಕರ್ಮಿಯೊಬ್ಬ ಮನೆಗೆ ನುಗ್ಗಿ ಖಾಸಗಿ ಶಾಲೆಯ ಶಿಕ್ಷಕಿಯನ್ನು ಚಾಕುವಿನಿಂದ ಇರಿದು ಕೊಲೆ ಮಾಡಿರುವ ದಾರುಣ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ಫೆಬ್ರವರಿ 13 ರಂದು ಶಾಂತಿನಗರ ಸಮೀಪದ ನಂಜಪ್ಪ ವೃತ್ತದಲ್ಲಿ 34 ವರ್ಷದ ಕೌಸರ್ ಮುಬೀನ್ ಎಂಬ ಖಾಸಗಿ ಶಾಲಾ ಶಿಕ್ಷಕಿಯೊಬ್ಬರನ್ನು ಅವರ ಮನೆಯಲ್ಲಿಯೇ ಚಾಕುವಿನಿಂದ ಇರಿದು ಹತ್ಯೆ ಮಾಡಲಾಗಿದೆ.
ಕೌಸರ್ ಮುಬೀನ್ ಪತಿಯಿಂದ ವಿಚ್ಛೇದನ ಪಡೆದಿದ್ದು, ತನ್ನ 14 ವರ್ಷದ ಮಗಳೊಂದಿಗೆ ಶಾಂತಿನಗರ ಸಮೀಪದ ನಂಜಪ್ಪ ವೃತ್ತದಲ್ಲಿ ವಾಸಿಸುತ್ತಿದ್ದರು ಎನ್ನಲಾಗಿದೆ. ಘಟನೆ ನಡೆದಾಗ ಆಕೆ ಸಹಾಯಕ್ಕಾಗಿ ಕಿರುಚುವುದನ್ನು ನೆರೆಹೊರೆಯವರು ಕೇಳಿದ್ದಾರೆ. ತಕ್ಷಣ ಮೃತರ ಮನೆಗೆ ಓಡಿದ್ದಾರೆ. ಈ ವೇಳೆ ಒಬ್ಬ ವ್ಯಕ್ತಿ ಮನೆಯಿಂದ ಓಡಿಹೋಗುತ್ತಿರುವುದನ್ನು ಅವರು ನೋಡಿದ್ದಾರೆ.

ಪಕ್ಷದ ಮನೆಯವರು ಮೃತರ ಮನೆಗೆ ಬಂದು ನೋಡಿದಾಗ ಕೌಸರ್ ಮುಬೀನ್ ದೇಹದ ಮೇಲೆ ಅನೇಕ ಇರಿತದ ಗಾಯಗಳು ಕಂಡುಬಂದಿವೆ. ಆರೋಪಿಯು ಆಕೆಗೆ ಮೂರು ಬಾರಿ ಇರಿದಿದ್ದು, ರಕ್ತದ ಮಡುವಿನಲ್ಲಿ ಆಕೆ ಶವವಾಗಿ ಪತ್ತೆಯಾಗಿದ್ದಾಳೆ.
ಸೋಮವಾರ ಸಂಜೆ ಕೊಲೆ ನಡೆದಾಗ ಮೃತ ಶಿಕ್ಷಕಿ ಕೌಸರ್ ಮುಬೀನ್ ಅವರ ಮಗಳು ಶಾಲೆಯಲ್ಲಿದ್ದರು ಎಂದು ವರದಿಯಾಗಿದೆ. ಕೊಲೆಗಾರ ಕೌಸರ್ ಅವರಿಗೆ ಪರಿಚಿತವಿರುವ ವ್ಯಕ್ತಿ ಎಂದು ಶಂಕೆ ವ್ಯಕ್ತವಾಗಿದೆ. ಏಕೆಂದರೆ, ಮನೆಯಲ್ಲಿ ಬೆಲೆಬಾಳುವ ಯಾವುದೇ ವಸ್ತು ಕಾಣೆಯಾಗಿಲ್ಲ ಎಂದು ಡೆಪ್ಯುಟಿ ಕಮಿಷನರ್ ಆಫ್ ಪೋಲೀಸ್ (ಕೇಂದ್ರ) ಆರ್ ಶ್ರೀನಿವಾಸ್ ಗೌಡ ಪೊಲೀಸರು ತಿಳಿಸಿದ್ದಾರೆ.
ವರದಿಗಳ ಪ್ರಕಾರ, ಆಕೆ ತನ್ನ ಪತಿಯಿಂದ ವಿಚ್ಛೇದನ ಪಡೆದಾಗ ತನ್ನ ಮಾಜಿ ಪತಿಯೊಂದಿಗೆ ಹಲವು ವಿವಾದಗಳನ್ನು ಹೊಂದಿದ್ದರು ಎಂದು ಪೊಲೀಸರಿಗೆ ತಿಳಿದು ಬಂದಿದೆ. ಘಟನೆ ಸಂಬಂಧ ಕಬ್ಬನ್ ಪಾರ್ಕ್ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಕೊಲೆಯಲ್ಲಿ ಆಕೆಯ ಮಾಜಿ ಪತಿ ವಾಸಿಂ ಪಾಷಾ ಶಾಮೀಲಾಗಿರುವ ಶಂಕೆ ವ್ಯಕ್ತವಾಗಿದೆ. ಮೃತ ಕೌಸರ್ ಮುಬೀನ್ ಅವರ ಸಂಬಂಧಿಕರು ಈತನ ಮೇಲೆ ಶಂಕೆ ವ್ಯಕ್ತಪಡಿಸಿದ್ದಾರೆ.
-
Karnataka Weather: ಸಿಲಿಕಾನ್ ಸಿಟಿಯಲ್ಲಿ ಹೆಚ್ಚಿದ ತಾಪಮಾನ; ಕರಾವಳಿ, ಮಲೆನಾಡಿನಲ್ಲಿ ಇಂದು ಮಳೆಯಾಗುವ ಸಾಧ್ಯತೆ -
Karnataka Weather: ರಾಜ್ಯವನ್ನು ಸುಡುತ್ತಿದೆ ರಣಬಿಸಿಲು; ಕರಾವಳಿ, ಮಲೆನಾಡಿಗೆ ಇಂದು ಮಳೆ ಮುನ್ಸೂಚನೆ -
Bengaluru: ನರ್ಸರಿ ತರಗತಿಗಳಿಗೆ ಪ್ರವೇಶ ಆರಂಭ: ಭಾರತೀಯ ವಿದ್ಯಾಭವನ ಸಹಯೋಗದಲ್ಲಿ ಅರ್ಜಿ ಆಹ್ವಾನ -
LPG Crisis: ಎಲ್ಪಿಜಿ ಬಿಕ್ಕಟ್ಟಿನ ಸುಳಿಯಲ್ಲಿ ಭಾರತದ ಪ್ರಮುಖ ನಗರಗಳು: ದರ್ಶಿನಿಗಳು ಬಂದ್, ಪಿಜಿಗಳಲ್ಲಿ ಮೆನು ಚೇಂಜ್ -
Cylinder Shortage: ರಾಜ್ಯದಲ್ಲಿ ಅನಿಲ ಪೂರೈಕೆ ಸಮಸ್ಯೆಗೆ ಮುಕ್ತಿ? ಸಚಿವ ಮುನಿಯಪ್ಪ ಮಹತ್ವ ಮಾಹಿತಿ -
ಹೊಸೂರು ವಿಮಾನ ನಿಲ್ದಾಣ: ಬೆಂಗಳೂರು ಸಮೀಪ 2,979 ಎಕರೆ ಭೂಮಿ ಸ್ವಾಧೀನ; ಕನ್ನಡದಲ್ಲೇ ಮಾತನಾಡಿದ ತಮಿಳುನಾಡು ಶಾಸಕ -
ಇರಾನ್ ಪರಮಾಣು ವಿಜ್ಞಾನಿ ಕಥೆ ಮುಗಿಸಿದ ಇಸ್ರೇಲ್, ಮತ್ತಷ್ಟು ತಿಕ್ಕಾಟ ಶುರು | Operation Roaring Lion -
ವಿಶ್ವಕಪ್ ಕಿರೀಟದ ಹಿಂದೆ ದೈವಬಲ: ಕರಾವಳಿಯ ಅಳಿಯ ಸೂರ್ಯಕುಮಾರ್ ಯಾದವ್ ನಡೆಗೆ ಮೆಚ್ಚುಗೆಗಳ ಸುರಿಮಳೆ -
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ











Click it and Unblock the Notifications