ಪ್ರೋ ಕಬಡ್ಡಿ: ಬೆಂಗಳೂರಿಗೆ ಜಯ ತಂದ ಅಜಯ್ ಠಾಕೂರ್
ಮುಂಬೈ, ಜು. 19: ಪ್ರೋ ಕಬಡ್ಡಿ ಲೀಗ್ ಆರಂಭವಾಗಿದ್ದು ಜನರಲ್ಲಿ ದೇಶಿಯ ಕ್ರೀಡೆಯ ಕಿಚ್ಚು ಹಚ್ಚಿದೆ. ಶನಿವಾರ ರಾತ್ರಿ ನಡೆದ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಜೈಪುರ ಪಿಂಕ್ ಪ್ಯಾಂಥರ್ಸ್ ತಂಡವನ್ನು ಹಾಲಿ ರನ್ನರ್ಅಪ್ ಯು ಮುಂಬಾ ಸೋಲಿಸಿದೆ.
ಮತ್ತೊಂದು ಪಂದ್ಯದಲ್ಲಿ ಬೆಂಗಳೂರು ಜಯಭೇರಿ ಬಾರಿಸಿದೆ. ಸ್ಟಾರ್ ರೈಡರ್ ಅಜಯ್ ಠಾಕೂರ್ (11 ಅಂಕ) ತೋರಿದ ಅದ್ಭುತ ಪ್ರದರ್ಶನದ ನೆರವಿನಿಂದ ಬೆಂಗಳೂರು ಬುಲ್ಸ್ ತಂಡ ಬೆಂಗಾಲ್ ವಾರಿಯರ್ಸ್ ತಂಡವನ್ನು 33-25ರಿಂದ ಮಣಿಸಿ ಶುಭಾರಂಭ ಮಾಡಿದೆ.[ಕಬಡ್ಡಿ ತಂಡದಲ್ಲಿ ಯಾರ್ಯಾರಿದ್ದಾರೆ?]

29-28 ರಿಂದ ಜೈಪುರ ಪಿಂಕ್ಪ್ಯಾಂಥರ್ಸ್ ತಂಡವನ್ನು ಯು ಮುಂಬಾ ಸೋಲಿಸಿತು. ಇದರಿಂದ ಕಳೆದ ಆವೃತ್ತಿಯ ಪ್ರಶಸ್ತಿ ಸುತ್ತಿನಲ್ಲಿ ಅನುಭವಿಸಿದ ಸೋಲಿಗೆ ಮುಂಬೈ ತಂಡ ಮೊದಲ ಪಂದ್ಯದಲ್ಲೇ ಸೇಡು ತೀರಿಸಿಕೊಂಡಿತು.
ರೋಚಕ ಪಂದ್ಯ
ಬೆಂಗಾಲ್ ವಾರಿಯರ್ಸ್ ತಂಡದ ಸವಾಲನ್ನು ಬೆಂಗಳೂರು ಮೆಟ್ಟಿ ನಿಂತಿದ್ದು ರೋಚಕ. ಪಂದ್ಯದ ಮೊದಲಾರ್ಧದಲ್ಲಿ 2-12 ರಿಂದ ಬೆಂಗಳೂರು ತಂಡವು ಹಿನ್ನಡೆ ಅನುಭವಿಸಿತ್ತು. ಇದರಿಂದ ಸೋಲಿನ ಭೀತಿಯೂ ಎದುರಾಗಿತ್ತು. ಆದರೆ, ಅಚ್ಚರಿಯ ರೀತಿಯಲ್ಲಿ ತಿರುಗಿಬಿದ್ದ ಬೆಂಗಳೂರು ತಂಡವು ಬೆಂಗಾಲ್ ವಾರಿಯರ್ಸ್ ತಂಡಕ್ಕೆ ಸೋಲಿನ ರುಚಿ ತೋರಿಸಿತು.
6-14ರ ಹಿನ್ನಡೆಯಲ್ಲಿದ್ದಾಗ ಬುಲ್ಸ್ ತಂಡದ ರೈಡರ್ ಅಜಯ್ ಠಾಕೂರ್ ಅವರ ಚುರುಕಿನ ದಾಳಿಯಿಂದಾಗಿ ಬುಲ್ಸ್ 15-16ರ ಅಂತರ ಸಾಧಿಸಿತು. 11 ಪಾಯಿಂಟ್ ಗಳಿಸಿಕೊಟ್ಟ ಅವರು ಪಂದ್ಯದ ಹೀರೋ ಆಗಿ ಮಿಂಚಿದರು.
ಗಣ್ಯರ ಉಪಸ್ಥಿತಿ:
ಉದ್ಘಾಟನಾ ಪಂದ್ಯದ ವೇಳೆ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್, ಬಿಗ್ ಬಿ ಅಮಿತಾಬ್ ಬಚ್ಚನ್, ಕೇಂದ್ರ ಕ್ರೀಡಾ ಸಚಿವ ಸರಬಾನಂದ ಸೋನೋವಾಲ್, ಬಾಲಿವುಡ್ ನಟ ಆಮೀರ್ ಖಾನ್ ದಂಪತಿ, ಕ್ರಿಕೆಟಿಗ ಕಪಿಲ್ ದೇವ್, ಜೈಪುರ ಪಿಂಕ್ ಪ್ಯಾಂಥರ್ಸ್ ತಂಡದ ಫ್ರಾಂಚೈಸಿ ಮಾಲೀಕ, ನಟ ಅಭಿಷೇಕ್ ಬಚ್ಚನ್, ಐಶ್ವರ್ಯ ರೈ ಬಚ್ಚನ್, ಸುನೀಲ್ ಶೆಟ್ಟಿ, ನಟ ರಿತೇಶ್ ದೇಶ್ವುುಖ್ ಹಾಗೂ ಜೆನಿಲಿಯಾ ಉಪಸ್ಥಿತರಿದ್ದರು.
ಇಂದಿನ ಪಂದ್ಯ, ಜುಲೈ 19
ತೆಲುಗು ಟೈಟಾನ್ಸ್ - ದೆಹಲಿ (ರಾತ್ರಿ 8ಕ್ಕೆ)
ಬೆಂಗಳೂರು ಬುಲ್ಸ್ - ಯು ಮುಂಬಾ (ರಾತ್ರಿ 9ಕ್ಕೆ)
-
Dhurandhar 2 Pakistan: ಅರಬ್ ರಾಷ್ಟ್ರದ ಸಾಲ ತೀರಿಸಲು ದುರಂಧರ್ 2 ಬಿಡುಗಡೆಗೆ ಮುಂದಾಯ್ತಾ ಪಾಕಿಸ್ತಾನ, ಟ್ವಿಸ್ಟ್ -
Lata Mangeshkar & Asha Bhosle: ಆ ಒಂದು ಕಾರಣಕ್ಕೆ ತಂಗಿ ಆಶಾ ಬೋಸ್ಲೆ ಜೊತೆ ಮಾತು ಬಿಟ್ಟಿದ್ದ ಲತಾ ಮಂಗೇಶ್ಕರ್ -
Karntaka Weather: ಹವಾಮಾನ ವೈಪರೀತ್ಯ! ರಾಜ್ಯದ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ -
ಗಂಡ-ಹೆಂಡತಿ ಜಗಳ ಇಡೀ ದಿನ ತೋರಿಸಿದರೆ ಸಮಾಜಕ್ಕೆ ಏನು ಪ್ರಯೋಜನ: ಮಾಧ್ಯಮಗಳಿಗೆ ಸಿಎಂ ಪ್ರಶ್ನೆ -
Gas Booking New Rules: ಎಲ್ಪಿಜಿ ಗ್ಯಾಸ್ ಬುಕ್ಕಿಂಗ್ನಲ್ಲಿ ಹೊಸ ನಿಯಮ, ಎಷ್ಟು ದಿನಕ್ಕೆ ಸಿಗುತ್ತೆ ಗ್ಯಾಸ್ ಸಿಲಿಂಡರ್ -
ಮೈಸೂರು-ಬೆಂಗಳೂರು ರೈಲು ಪ್ರಯಾಣಿಕರಿಗೆ ಗುಡ್ನ್ಯೂಸ್ ಕೊಟ್ಟ ವಿ.ಸೋಮಣ್ಣ -
'ಕೋಟಿಗೊಬ್ಬ' ರೀರಿಲೀಸ್: ವಿಷ್ಣುದಾದಾ ಅಭಿಮಾನಿಗಳಿಂದ ಸಂಭ್ರಮ, ಪ್ರಸನ್ನ ಥಿಯೇಟರ್ನಲ್ಲಿ ನಾಳೆ 10,000 ಮಂದಿಗೆ ನಾನ್ವೆಜ್ ಊಟ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ -
Smriti Mandhana: ಸ್ಮೃತಿ ಮಂಧಾನ-ಪಲಾಶ್ ಮುಚ್ಚಲ್ ಮತ್ತೆ ಒಂದಾಗ್ತಾರಾ? ಇಬ್ಬರ ಕುಟುಂಬಗಳ ಸೀಕ್ರೆಟ್ ಮೀಟಿಂಗ್ ವಿಡಿಯೋ ವೈರಲ್ -
Asha Bhosle Kannada Songs: ಆಶಾ ಭೋಸ್ಲೆ ಹಾಡಿದ ಕನ್ನಡದ ಹಾಡುಗಳು: ಕರ್ನಾಟಕದ ಜನರ ಮನ ಗೆದ್ದ ಖ್ಯಾತ ಗಾಯಕಿ -
Government Schools: ಈ ವರ್ಷದಿಂದಲೇ ಸರ್ಕಾರಿ ಶಾಲೆಗಳಲ್ಲಿ ದ್ವಿಭಾಷಾ ನೀತಿ: ಎಲ್ಲ ಶಿಕ್ಷಕರಿಗೆ ಇಂಗ್ಲಿಷ್ ಟ್ರೈನಿಂಗ್ -
Arecanut Price: ದಾವಣಗೆರೆ ಮಾರುಕಟ್ಟೆಯಲ್ಲಿ ಅಡಿಕೆ ಧಾರಣೆ ಭರ್ಜರಿ ಏರಿಕೆ: ಇಲ್ಲಿದೆ ಏಪ್ರಿಲ್ 11ರ ದರಪಟ್ಟಿ












Click it and Unblock the Notifications