ಎಲ್ಲವೂ ಕನ್ನಡದಲ್ಲೇ ಸಿಗಬೇಕೆಂದರೆ ಕನ್ನಡಕ್ಕೆ ಡಬ್ಬಿಂಗ್ ಬೇಕು: ಬನವಾಸಿ ಬಳಗ
ಬೆಂಗಳೂರು, ಡಿಸೆಂಬರ್ 9: "ಎಲ್ಲಾದರೂ ಇರು ಎಂತಾದರು ಇರು ಎಂದೆಂದಿಗೂ ನೀ ಕನ್ನಡವಾಗಿರು ಅನ್ನುವ ಕವಿ ನುಡಿಯನ್ನು ಕಾರ್ಯರೂಪಕ್ಕೆ ತರಲು ಡಬ್ಬಿಂಗ್ ಬೇಕು. ಆಗಲೇ ಕನ್ನಡಿಗರಿಗೆ ಎಲ್ಲವೂ ಕನ್ನಡದಲ್ಲಿ ದೊರೆಯುವಂತಾಗಲು ಸಾಧ್ಯ" ಎಂದು ಭಾನುವಾರ ಬನವಾಸಿ ಬಳಗದ ಅಧ್ಯಕ್ಷ ಆನಂದ್ ಅಭಿಪ್ರಾಯ ಪಟ್ಟರು.
ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನದಲ್ಲಿ ಆಯೋಜಿಸಿದ್ದ 'ಡಬ್ಬಿಂಗ್ ಹಕ್ಕೊತ್ತಾಯ' ಪ್ರತಿಭಟನೆ ಸಭೆಯಲ್ಲಿ ಕನ್ನಡ ರಕ್ಷಣಾ ವೇದಿಕೆ ಸೇರಿದಂತೆ ಹತ್ತಾರು ಕನ್ನಡಪರ ಸಂಘಟನೆಗಳು ಭಾಗವಹಿಸಿದ್ದವು. ಆ ಸಭೆಯಲ್ಲಿ ಅವರು ಮಾತನಾಡಿ, ಡಬ್ಬಿಂಗ್ ಹೋರಾಟದ ಹತ್ತು ವರ್ಷಗಳ ಹಲವು ಮಜಲುಗಳ ಬಗ್ಗೆ ವಿವರಿಸಿದರು.
ಕನಾಟಕ ರಕ್ಷಣಾ ವೇದಿಕೆಯ ರಾಜ್ಯ ಉಪಾಧ್ಯಕ್ಷರಾದ ಆಂಜನಪ್ಪ ಮಾತನಾಡಿ, ಡಬ್ಬಿಂಗ್ ತಡೆಯುವುದು ಕನ್ನಡ ದ್ರೋಹದ ಕೆಲಸ. ಡಬ್ಬಿಂಗ್ ಚಿತ್ರಗಳಿಗೆ ತಡೆ ಒಡ್ಡಿದಲ್ಲಿ ಮುಂದಿನ ದಿನಗಳಲ್ಲಿ ಉಗ್ರ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದರು.

ಹಿರಿಯ ನಿರ್ಮಾಪಕ ಹಾಗೂ ಸಮಗ್ರ ಕನ್ನಡ ಚಲನಚಿತ್ರ ವಾಣಿಜ್ಯ ಸಂಸ್ಥೆ ಅಧ್ಯಕ್ಷ ಕೃಷ್ಣಮೂರ್ತಿ ಮಾತನಾಡಿ, ಅರವತ್ತರ ದಶಕದಲ್ಲಿ ಹಿರಿಯರಾದ ಅನಕೃ, ರಾಮಮೂರ್ತಿ ಅವರು ಎಳವೆಯಲ್ಲಿದ್ದ ಕನ್ನಡ ಚಲನಚಿತ್ರ ರಂಗದ ಅಭಿವೃದ್ಧಿಗಾಗಿ ಡಬ್ಬಿಂಗ್ ವಿರೋಧಿಸಿದ್ದರು. ಆದರೆ ಇಂದಿಗೆ ಚಿತ್ರರಂಗದ ಕೆಲವರು ತಮ್ಮ ಸ್ವಾರ್ಥಕ್ಕೆ ಡಬ್ಬಿಂಗ್ ತಡೆಯುತ್ತಿದ್ದಾರೆ. ಡಬ್ಬಿಂಗ್ ಬರುವುದರಿಂದ ಕನ್ನಡದ ಮಾರುಕಟ್ಟೆ ಬೆಳೆಯುತ್ತದೆ ಎಂದು ಅಭಿಪ್ರಾಯಪಟ್ಟರು.
ಕರುನಾಡ ಯೋಧರು ತಂಡದ ಮಂಜುನಾಥ್, ಕನಾಟಕ ರಣಧೀರ ಪಡೆಯ ಅಧ್ಯಕ್ಷ ಹರೀಶ್ ಕುಮಾರ್, ಎಚ್ ಎಎಲ್ ಕನ್ನಡ ಸಂಘದ ರಾಮಸ್ವಾಮಿ ಮತ್ತಿತರ ಕನ್ನ ಡ ಸಂಘಗಳ ಪದಾಧಿಕಾರಿಗಳು ಹಾಗೂ ಕರ್ನಾಟಕದ ಮೂಲೆ ಮೂಲೆಯಿಂದ ಬಂದಿದ್ದ ಡಬ್ಬಿಂಗ್ ಪರವಾದ ನಿಲುವು ಹೊಂದಿದ ಹಲವರು ಹಾಜರಿದ್ದರು.
-
ರಿಚರ್ಡ್ ಕೆಟಲ್ಬರೋ ಔಟ್: ಟಿ20 ವಿಶ್ವಕಪ್ ಫೈನಲ್ಗೂ ಮುನ್ನ ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಸಂತಸದ ಸುದ್ದಿ -
Weekly Horoscope March 9–15: ಮಾರ್ಚ್ ವಾರಭವಿಷ್ಯ – 12 ರಾಶಿಗಳ ಸುಖ-ದುಃಖ, ಹಣಕಾಸು ಮತ್ತು ಆರೋಗ್ಯ ಫಲ -
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Women's Day Wishes: ಹೆಣ್ಣು ಜಗದ ಕಣ್ಣು: ಮಹಿಳಾ ದಿನಕ್ಕೆ ನಿಮ್ಮ ಪ್ರೀತಿಪಾತ್ರರಿಗೆ ಶುಭ ಕೋರಲು ಇಲ್ಲಿವೆ ಸುಂದರ ಸಾಲುಗಳು -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್












Click it and Unblock the Notifications