ಸನ್ನಿ ಲಿಯೋನ್ ಆಗಮನ ವಿರೋಧಿಸಿ ಕನ್ನಡಪರ ಸಂಘಟನೆಗಳಿಂದ ಪ್ರತಿಭಟನೆ
ಬೆಂಗಳೂರು, ಅಕ್ಟೋಬರ್ 22: ಮಾಜಿ ನೀಲಿ ಚಿತ್ರ ತಾರೆ ಸನ್ನಿ ಲಿಯೋನ್ ಬೆಂಗಳೂರಿಗೆ ಬರುವುದು ವಿರೋಧಿಸಿ ಹಾಗೂ ಆಕೆ ಕನ್ನಡದ 'ವೀರಮಹಾದೇವಿ' ಚಿತ್ರದಲ್ಲಿ ನಟಿಸದಂತೆ ಒತ್ತಾಯಿಸಿ ಪ್ರತಿಭಟನೆ ನಡೆಸಿದ್ದಾರೆ.
ನಗರದ ಟೌನ್ಹಾಲ್ ಮುಂದೆ ಸೇರಿದ್ದ ಕನ್ನಡಪರ ಸಂಘಟನೆಗಳ ಸದಸ್ಯರು ಸನ್ನಿಲಿಯೋನ್ ಪ್ರತಿಕೃತಿ ದಹಿಸಿದ್ದಾರೆ. ಅಲ್ಲದೆ ಬ್ಲೇಡಿನಿಂದ ಕೈಗೆ ಗಾಯಮಾಡಿಕೊಂಡು ಸನ್ನಿ ಲಿಯೋನ್ ಕರ್ನಾಟಕಕ್ಕೆ ಆಗಮಿಸುವುದನ್ನು ವಿರೋಧಿಸಿದ್ದಾರೆ.
ನವೆಂಬರ್ 3ರಂದು ಸನ್ನಿ ಲಿಯೋನ್ ಅವರು ಕಾರ್ಯಕ್ರಮವೊಂದಕ್ಕೆ ಬರುತ್ತಿದ್ದು, ಇದಕ್ಕೆ ಈಗಾಗಲೇ ಭಾರಿ ಸಂಖ್ಯೆಯಲ್ಲಿ ಟಿಕೆಟ್ ಮಾರಾಟವಾಗಿದೆ. ಆದರೆ ಆ ಕಾರ್ಯಕ್ರಮಕ್ಕೆ ಸನ್ನಿ ಬರಬಾರದೆಂದು ಕನ್ನಡಪರ ಸಂಘಟನೆ ಸದಸ್ಯರು ಒತ್ತಾಯಿಸುತ್ತಿದ್ದಾರೆ.

ಕಳೆದ ವರ್ಷಾಂತ್ಯದಲ್ಲಿ ಸಹ ಸನ್ನಿ ಲಿಯೋನ್ ಬೆಂಗಳೂರಿನಲ್ಲಿ 'ಸನ್ನಿ ನೈಟ್ಸ್' ಕಾರ್ಯಕ್ರಮದಲ್ಲಿ ಪ್ರದರ್ಶನ ನೀಡುವರಿದ್ದರು. ಅದಕ್ಕೂ ಸಹ ಕನ್ನಡ ಪರ ಸಂಘಟನೆಗಳು ವಿರೋಧ ವ್ಯಕ್ತಪಡಿಸಿದ್ದವು. ಕೊನೆಗೆ ಭದ್ರತೆಯ ನೆಪವೊಡ್ಡಿ ಬೆಂಗಳೂರು ಪೊಲೀಸರು ಕಾರ್ಯಕ್ರಮಕ್ಕೆ ಅನುಮತಿ ನೀಡಿರಲಿಲ್ಲ.
ವೀರವನಿತೆ ವೀರಮಹಾದೇವಿ ಚಿತ್ರದಲ್ಲಿ ಸಹ ಸನ್ನಿಲಿಯೋನ್ ಮುಖ್ಯ ಪಾತ್ರದಲ್ಲಿ ನಟಿಸುತ್ತಿರುವುದು ಸಹ ಕನ್ನಡಪರ ಸಂಘಟನೆಗಳ ಕಣ್ಣು ಕೆಂಪಗಾಗಿಸಿದೆ. ಹಾಗಾಗಿ ಸನ್ನಿ ಲಿಯೋನ್ ಮೇಲೆ ಇಂದು ಕನ್ನಡ ಪರ ಸಂಘಟನೆಗಳ ಸದಸ್ಯರು ಪ್ರತಿಭಟನೆ ನಡೆಸಿದ್ದಾರೆ.
ಸನ್ನಿ ಲಿಯೋನ್ ಅಭಿನಯದ ವೀರಮಹಾದೇವಿ ಕನ್ನಡ, ತೆಲುಗು, ತಮಿಳು ಭಾಷೆಯಲ್ಲಿ ತೆರೆಕಾಣುತ್ತಿದೆ. ಈ ಚಿತ್ರದಲ್ಲಿ ಸನ್ನಿ ಲಿಯೋನ್ ನಟನೆ ಕೈ ಬಿಡುವಂತೆ ಒತ್ತಾಯಿಸಿ ಕರ್ನಾಟಕ ರಕ್ಷಣಾ ಯುವ ವೇದಿಕೆ ಕಾರ್ಯಕರ್ತರು ಚಿತ್ರ ಪೋಸ್ಟರ್ ಗೆ ಬೆಂಕಿ ಹಚ್ಚಿ ಪ್ರತಿಭಟಿಸಿದರು.
ಸನ್ನಿ ಲಿಯೋನ್ ನವೆಂಬರ್ 3 ನೇ ತಾರೀಖು ನಡೆಸುತ್ತಿರುವ ಸನ್ನಿನೈಟ್ಸ್ ಕಾರ್ಯಕ್ರಮಕ್ಕೆ ಅಡ್ಡಿಪಡಿಸುತ್ತೇವೆ ಎಂದು ಇಂದು ಕನ್ನಡಪರ ಸಂಘಟನೆ ಸದಸ್ಯರು ಎಚ್ಚರಿಕೆ ನೀಡಿದ್ದಾರೆ. ಕಳೆದ ಬಾರಿ ಸನ್ನಿ ಬರದಂತೆ ತಡೆಯಲು ಯಶಸ್ವಿಯಾಗಿದ್ದ ಕನ್ನಡ ಪರ ಸಂಘಟನೆಗಳು ಈ ಬಾರಿ ಏನು ಮಾಡುತ್ತವೆ ಕಾದು ನೋಡಬೇಕು.
-
Karnataka Weather: ಸಿಲಿಕಾನ್ ಸಿಟಿಯಲ್ಲಿ ಹೆಚ್ಚಿದ ತಾಪಮಾನ; ಕರಾವಳಿ, ಮಲೆನಾಡಿನಲ್ಲಿ ಇಂದು ಮಳೆಯಾಗುವ ಸಾಧ್ಯತೆ -
Weekly Horoscope March 16-22: ಈ ಯುಗಾದಿಗೆ ಯಾವ ರಾಶಿಯವರಿಗೆ ಅದೃಷ್ಟದ ಬಾಗಿಲು ತೆರೆಯಲಿದೆ? ಇಲ್ಲಿದೆ ಈ ವಾರದ ನಿಮ್ಮ ರಾಶಿ ಫಲ -
PUC ವಿದ್ಯಾರ್ಥಿಗಳ ಗಮನಕ್ಕೆ: ದ್ವಿತೀಯ ಪಿಯುಸಿ ಫಲಿತಾಂಶ ಸುಧಾರಣೆಗೆ ಇನ್ಮುಂದೆ 2 ವರ್ಷ ಮಾತ್ರ ಅವಕಾಶ -
Gold Rate: ಬೆಂಗಳೂರಿನಲ್ಲಿ ಇಳಿಕೆಯಾಯ್ತು ಚಿನ್ನ-ಬೆಳ್ಳಿ ಬೆಲೆ; ಇಲ್ಲಿದೆ ದರ ಪಟ್ಟಿ -
Horoscope March 14: ಈ ರಾಶಿಯವರ ಆರ್ಥಿಕ ಸ್ಥಿತಿ ಸುಧಾರಣೆ, ದಾಂಪತ್ಯ ಜೀವನದಲ್ಲಿ ಸಂತಸ, ದಿನ ಭವಿಷ್ಯ -
BCCI: ಕರ್ನಾಟಕದ ಕ್ರಿಕೆಟ್ ದಿಗ್ಗಜರಾದ ರಾಹುಲ್ ದ್ರಾವಿಡ್, ರೋಜರ್ ಬಿನ್ನಿಗೆ ಬಿಸಿಸಿಐ ಅತ್ಯುನ್ನತ ಪ್ರಶಸ್ತಿ -
Yash: ಯಶ್ ಡಿಪ್ರೆಶನ್ನಲ್ಲಿದ್ದಾರೆ, ಕೆಜಿಎಫ್ ರೀತಿಯ ಸಿನಿಮಾ ನೀಡಲು ಆಗ್ತಿಲ್ಲ: ಜ್ಯೋತಿಷಿ ವೇಣುಸ್ವಾಮಿ -
Ajith Kumar: ನಟ ಅಜಿತ್ ಕುಮಾರ್ಗೆ ಮಹೀಂದ್ರಾದಿಂದ ರೇಸಿಂಗ್ ಕಾರ್ ಗಿಫ್ಟ್; ಇದರ ಫೀಚರ್ಸ್ ಕೇಳಿದ್ರೆ ಫಿದಾ ಆಗ್ತೀರಿ -
Double-Decker Flyover: ಸಿಲ್ಕ್ ಬೋರ್ಡ್ ಟ್ರಾಫಿಕ್ಗೆ ಮುಕ್ತಿ: ಇದೇ ತಿಂಗಳಲ್ಲಿ ಡಬಲ್ ಡೆಕ್ಕರ್ ಫ್ಲೈಓವರ್ ಸಂಚಾರಕ್ಕೆ ಮುಕ್ತ -
ಪುನೀತ್ ನಟನೆಯ "ಆಕಾಶ್" ರೀರಿಲೀಸ್: ಅಭಿಮಾನಿಗಳ ಜತೆ ಸಿನಿಮಾ ವೀಕ್ಷಿಸಿ ಕುಣಿದು ಕುಪ್ಪಳಿಸಿದ ನಟಿ ರಮ್ಯಾ -
Viral Video: ಮಗನ ಸಾಧನೆ ಕಂಡು ಭಾವುಕರಾದ ಪೋಷಕರು; ಕ್ಯೂಟ್ ವಿಡಿಯೋ ವೈರಲ್ -
ಸರ್ಕಾರಿ ಜಮೀನು ಒತ್ತುವರಿ ತಡೆಗೆ ಪ್ರತಿ ಮೂರು ತಿಂಗಳಿಗೊಮ್ಮೆ ಸ್ಥಳಕ್ಕೆ ಭೇಟಿ ನೀಡುತ್ತಿರಿ: ಸಚಿವ ಕೃಷ್ಣ ಬೈರೇಗೌಡ ಸೂಚನೆ












Click it and Unblock the Notifications