'ವಿದ್ವತ್ ಏನು, ಬಾರ್ಗೆ ಹಾಲು ಕುಡಿಯಲು ಹೋಗಿದ್ನಾ?'
ಬೆಂಗಳೂರು, ಫೆಬ್ರವರಿ 27: ವಿದ್ವತ್ ವಿರುದ್ಧ ಹಲ್ಲೆ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಮೊಹಮ್ಮದ್ ನಲಪಾಡ್ ಹೊರತಾಗಿ ಉಳಿದ ಆರೋಪಿಗಳ ವಕೀಲ ಎಸ್.ಬಾಲನ್ ಇಂದು ಸೆಷನ್ಸ್ ನ್ಯಾಯಾಲಯದಲ್ಲಿ ಭರ್ಜರಿಯಾಗಿ ವಾದ ಮಂಡಿಸಿದರು.
ಹಲವು ದಾಖಲೆಗಳನ್ನು ನ್ಯಾಯಾಲಯಕ್ಕೆ ಸಲ್ಲಿಸಿದ ಅವರು ಆಸ್ಪತ್ರೆ ದಾಖಲೆಗಳು, ಎಫ್ಐಆರ್ನಲ್ಲಿ ಇರುವ ದೋಷಗಳು ಮತ್ತು ಇತರೆ ಆರೋಪಿಗಳ ಸ್ಥಿತಿ ಮುಂತಾದ ವಿಷಯಗಳನ್ನು ಕೋರ್ಟ್ನ ಗಮನಕ್ಕೆ ತಂದು ಸಶಕ್ತವಾಗಿ ವಾದ ಮಂಡಿಸಿದರು.
'ಇದೊಂದು ಇಬ್ಬರು ಬಿಸಿ ರಕ್ತದ ಹುಡುಗರ ನಡುವಿನ ಜಗಳವಷ್ಟೆ' ಎಂದು ಕೋರ್ಟ್ನಲ್ಲಿ ಹೇಳಿದ ಅವರು ಹೊರಗೆ ಸುದ್ದಿಗಾರರೊಂದಿಗೆ ಮಾತನಾಡುವಾಗಲೂ ಅದೇ ಮಾತನ್ನಾಡಿದರು.

'ವಿದ್ವತ್ ಏನು ಹಾಲು ಕುಡಿಯಲು ಆ ಐಶಾರಾಮಿ ಬಾರ್ಗೆ ಹೋಗಿದ್ದನಾ' ಎಂದು ಪ್ರಶ್ನಿಸಿದ ಬಾಲನ್ ಅವರು ಅವನೂ ಅಲ್ಲಿಗೆ ಕುಡಿಯಲೆಂದೇ ಹೋಗಿದ್ದ, ಹಾಲು ಕುಡಿಯುವಂತಿದ್ದರೆ ಬಾರ್ಗೆ ಬರುತ್ತಿರಲಿಲ್ಲ ಎಂದ ಅವರು ಕುಡಿದ ನಂತರ ಇಬ್ಬರು ಬಿಸಿ ರಕ್ತದ ಯುವಕರ ನಡುವಿನ ಎರಡು ನಿಮಿಷ ನಡೆದಿರುವ ಗಲಾಟೆ ಅಷ್ಟೆ ಎಂದಿದ್ದಾರೆ.
ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಅರುಣ್ ಬಾಬು ಎಂಬ ನಮ್ಮ ಕಕ್ಷೀದಾರ ಸಹ ವಿದ್ವತ್ ಮೇಲೆ ಹಲ್ಲೆ ಪ್ರಕರಣ ದಾಖಲಿಸಿದ್ದಾರೆ ಆದರೆ ಅದನ್ನು ಪೊಲೀಸರು ಬೇಕೆಂದೆ ನಿರ್ಲಕ್ಷ ಮಾಡಿದ್ದಾರೆ ಎಂದು ಅವರು ಹೇಳಿದರು.
ಈ ಪ್ರಕರಣದಲ್ಲಿ ದುರುದ್ದೇಶಪೂರ್ವಕವಾಗಿ 307 ಕೇಸು ದಾಖಲಿಸಿದ್ದು, ಆರೋಪಿಗಳಿಗೆಲ್ಲಾ ಜಾಮೀನು ದೊರಕುವ ಸಂಭವ ಇದೆ ಎಂದು ಅವರು ಹೇಳಿದರು.
-
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
KEA: ರಾಜ್ಯದ ವಸತಿ ಶಾಲೆಗಳ ಪ್ರವೇಶ ಪರೀಕ್ಷೆ, ಅಂತಿಮ ಅಂಕಪಟ್ಟಿ ಪ್ರಕಟ -
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
ದಾವಣಗೆರೆ ಉಪಚುನಾವಣೆ: ಕಣದಿಂದ ಹಿಂದೆ ಸರಿದ ಬಂಡಾಯ ಅಭ್ಯರ್ಥಿ ಸಾದಿಕ್ ಪೈಲ್ವಾನ್, ಕಾಂಗ್ರೆಸ್ ಬೆಂಬಲಕ್ಕೆ ನಿರ್ಧಾರ -
SSLC Hindi Exam: ಮಾರ್ಚ್ 30ರ ಎಸ್ಎಸ್ಎಲ್ಸಿ ಹಿಂದಿ ಪರೀಕ್ಷೆಗೆ ಹೊಸ ಸಮಸ್ಯೆ: ಪರೀಕ್ಷಾ ಮಂಡಳಿ ಹೇಳಿದ್ದೇನು -
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
ಮಾ.30ರಂದು ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ದಿಢೀರ್ ಮುಂದೂಡಿಕೆ: ಕಾರಣವೇನು? -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
IPL 2026: ಆರ್ಸಿಬಿ ಫ್ಯಾನ್ಸ್ ಗಮನಿಸಿ; ಮ್ಯಾಚ್ ದಿನ ನಮ್ಮ ಮೆಟ್ರೋ ತಡರಾತ್ರಿವರೆಗೂ ಸಂಚಾರ -
ವಂದೇ ಭಾರತ್ ರೈಲಿನ ಊಟದಲ್ಲಿ ಹುಳು: 'ಅದು ಕೇಸರಿ' ಎಂದ ಸಿಬ್ಬಂದಿ, IRCTCಗೆ 10 ಲಕ್ಷ ದಂಡ











Click it and Unblock the Notifications