ಲೋಕಾಯುಕ್ತ ಕೇಸ್: ಬ್ರೋಕರ್ಸ್ ಬಳಸಿ ಬೆದರಿಕೆ ಕರೆ!
ಬೆಂಗಳೂರು, ಸೆ. 25: ಕರ್ನಾಟಕ ಲೋಕಾಯುಕ್ತ ಸಂಸ್ಥೆಯಲ್ಲಿ ನಡೆದಿದೆ ಎನ್ನಲಾದ ಭ್ರಷ್ಟಾಚಾರ ಪ್ರಕರಣದ ತನಿಖೆ ಮುಂದುವರೆಯುತ್ತಿದ್ದಂತೆ ಅನೇಕ ಸತ್ಯಗಳು ಹೊರ ಬೀಳುತ್ತಿವೆ. ಪ್ರಕರಣದಲ್ಲಿ ಪ್ರಮುಖ ಅಂಶವಾಗಿರುವ ಬೆದರಿಕೆ ಕರೆಗಳನ್ನು ಮಾಡಲು ಬ್ರೋಕರ್ ಗಳನ್ನು ಆರೋಪಿಗಳು ಬಳಸುತ್ತಿದ್ದರು ಎಂದು ತಿಳಿದು ಬಂದಿದೆ.
ಎಸ್ ಐಟಿ ತನ್ನ ತನಿಖೆಯಲ್ಲಿ ಭಾಸ್ಕರ್ ವಿ ಹಾಗೂ ಅಶೋಕ್ ರನ್ನು ಬ್ರೋಕರ್ಸ್ ಎಂದು ಹೆಸರಿಸಿದೆ. ಇವರಿಬ್ಬರು ಅಧಿಕಾರಿಗಳನ್ನು ಈ ಪ್ರಕರಣದ ಪ್ರಮುಖ ಆರೋಪಿ ಅಶ್ವಿನ್ ರಾವ್ ಬಳಿಗೆ ಕರೆದುಕೊಂಡು ಹೋಗುತ್ತಿದ್ದರು. ನಂತರ ಈ ಬೆದರಿಕೆ ಡೀಲ್ ಕುದುರಿಸಿದ್ದಕ್ಕೆ ಆರೋಪಿಯಿಂದ 20 ಲಕ್ಷ ರು ಬೇಡಿಕೆ ಬರುತ್ತಿತ್ತು ಎಂದು ಎಸ್ ಐಟಿ ಹೇಳಿದೆ. [ಚನ್ನಬಸಪ್ಪ ಕೇಸ್ ಚಾರ್ಜ್ಶೀಟ್ ವಿವರ]

ಎಸ್ ಐಟಿ ಸಲ್ಲಿಸಿರುವ ಎರಡನೇ ಚಾರ್ಜ್ ಶೀಟ್ ನಲ್ಲಿ ಲೋಕಾಯುಕ್ತ ಭಾಸ್ಕರ್ ರಾವ್ ಅವರ ಮಗ ಅಶ್ವಿನ್ ಅವರನ್ನು ಪ್ರಮುಖ ಆರೋಪಿಯಾಗಿ ಹೆಸರಿಸಲಾಗಿದ್ದು, 1,530 ಪುಟಗಳ ಚಾರ್ಜ್ ಶೀಟ್ ನಲ್ಲಿ ಲೋಕಾಯುಕ್ತ ಪಿಆರ್ ಒ ಸೈಯದ್ ರಿಯಾಜ್ ಹೆಸರು ಕೂಡಾ ಇದೆ.
ಅಶ್ವಿನ್ ರಾವ್ ವಿರುದ್ಧ ಐದು ಬೆದರಿಕೆ ಕರೆ ಕೇಸ್: ಭಾಸ್ಕರ್ ಹಾಗೂ ಅಶೋಕ್ ಅವರು ನೀರಾವರಿ ಇಲಾಖೆಯ ಅಧಿಕಾರಿ(ಬಿ ಚನ್ನಬಸಪ್ಪ)ಯನ್ನು ಅಶ್ವಿನ್ ರಾವ್ ಬಳಿ ಕರೆದೊಯ್ದು ಬಂದ ಮೇಲೆ ಆರೋಪಿಗಳು ಅಧಿಕಾರಿ ಮುಂದೆ 20 ಲಕ್ಷ ರು ಬೇಡಿಕೆ
ಇಟ್ಟಿದ್ದಾರೆ. ಅದರೆ, ಹೈದರಾಬಾದಿನಲ್ಲಿ ಇತ್ತೀಚೆಗೆ ಬಂಧಿತರಾದ ಅಶ್ವಿನ್ ರಾವ್ ಅವರು ಈ ಆರೋಪವನ್ನು ತಳ್ಳಿ ಹಾಕಿದ್ದಾರೆ ಎಂದು ದೋಷಾರೋಪಣ ಪಟ್ಟಿಯಲ್ಲಿ ಹೇಳಲಾಗಿದೆ.[ಲೋಕಾಯುಕ್ತರನ್ನು ಬಂಧಿಸಲು ಸಕಾಲ: ನ್ಯಾ. ಸಂತೋಷ್ ಹೆಗ್ಡೆ]
ಲೋಕಾಯುಕ್ತ ಭಾಸ್ಕರ್ ರಾವ್ ಅವರ ಪುತ್ರ ಅಶ್ವಿನ್ ಅವರು ಐಎಎಸ್ ಅಧಿಕಾರಿಯೊಬ್ಬರಿಗೆ ಬೆದರಿಕೆ ಒಡ್ಡಿ ಹಣ ಪಡೆಯಲು ಯತ್ನಿಸಿದ ಆರೋಪವನ್ನು ಹೊತ್ತುಕೊಂಡಿದ್ದಾರೆ. ಅದರೆ, ಐಎಎಸ್ ಅಧಿಕಾರಿ ಯಾವುದೇ ಹಣವನ್ನು ರವಾನಿಸಿಲ್ಲ. ಅಶ್ವಿನ್ ವಿರುದ್ಧ ಒಟ್ಟು ಐದು ಬೆದರಿಕೆ ಕರೆ ಆರೋಪಗಳಿವೆ, ತನಿಖೆ ಮುಂದುವರೆದಂತೆ ಇನ್ನಷ್ಟು ಆರೋಪಗಳು ದಾಖಲಾಗುವ ಸಾಧ್ಯತೆಯಿದೆ.
ಭಾಸ್ಕರ್ ರಾವ್ ಅವರು ಎಲ್ಲಿ?: ಈ ನಡುವೆ ಎರಡು ತಿಂಗಳ ರಜೆ ಮೇಲೆ ತೆರಳಿರುವ ಲೋಕಾಯುಕ್ತ ಜಸ್ಟೀಸ್ ರಾವ್ ಅವರು ಬೆಂಗಳೂರಿಗೆ ಯಾವಾಗ ಹಿಂತಿರುಗುತ್ತಾರೆ ಎಂಬುದರ ಬಗ್ಗೆ ಸುಳಿವು ಸಿಕ್ಕಿಲ್ಲ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ ಐಟಿ ತಂಡ ಪ್ರಶ್ನೆಗಳ ಸರಣಿಯನ್ನು ಸಿದ್ಧಪಡಿಸಿ ಲೋಕಾಯುಕ್ತರಿಗೆ ಕಳಿಸಿದೆ. ಅದರೆ, ಯಾವುದೇ ಪ್ರತಿಕ್ರಿಯೆ ಬಂದಿಲ್ಲ.
ಲೋಕಾಯುಕ್ತರ ಕಚೇರಿ, ಮನೆಯಿಂದಲೇ ಬೆದರಿಕೆ ಕರೆಗಳನ್ನು ಮಾಡಲಾಗಿರುವ ಬಗ್ಗೆ ಸಾಕಷ್ಟು ಪುರಾವೆಗಳಿರುವುದರಿಂದ ಭಾಸ್ಕರ್ ರಾವ್ ಅವರನ್ನು ಬಂಧಿಸಿ ವಿಚಾರಣೆಗೊಳಪಡಿಸಲು ಇದು ಸಕಾಲ ಎಂದು ನ್ಯಾ. ಸಂತೋಷ್ ಹೆಗ್ಡೆ ಅವರು ಅಭಿಪ್ರಾಯಪಟ್ಟಿದ್ದಾರೆ. (ಒನ್ ಇಂಡಿಯಾ ಸುದ್ದಿ)
-
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
ಮಾರ್ಚ್ 31ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ












Click it and Unblock the Notifications