ಐಎಂಎ ಬಹುಕೋಟಿ ವಂಚನೆ ಪ್ರಕರಣ: ಕಡಿಮೆ ಹೂಡಿಕೆ ಮಾಡಿದವರಿಗೆ ಲಾಟರಿ !
ಬೆಂಗಳೂರು, ಮಾರ್ಚ್ 12 : ಐಎಂಎ ಬೋಗಸ್ ಸ್ಕೀಮ್ಗಳಲ್ಲಿ ಹೂಡಿಕೆ ಮಾಡಿ ಹಣ ಕಳೆದುಕೊಂಡವರಿಗೆ ಗುಡ್ ನ್ಯೂಸ್ ! ಐಎಂಎ ಬಹುಕೋಟಿ ವಂಚನೆ ಪ್ರಕರಣ ಸಂಬಂಧ ಹಣ ಕಳೆದುಕೊಂಡಿರುವ ಹೂಡಿಕೆದಾರರ ಬ್ಯಾಂಕ್ ಖಾತೆಗೆ ಶೀಘ್ರದಲ್ಲಿಯೇ ಹಣ ವಾಪಸು ಬರಲಿದೆ. ಐಎಂಎ ಸಮೂಹ ಸಂಸ್ಥೆಗಳಲ್ಲಿ ಹೂಡಿಕೆ ಮಾಡಿ ಹಣ ಕಳೆದುಕೊಂಡವರ ಖಾತೆಗೆ ಹಣ ಪಾವತಿಸುವ ಕಾರ್ಯಕ್ಕೆ ಸಕ್ಷಮ ಪ್ರಾಧಿಕಾರ ಮುಂದಾಗಿದೆ. ಹಣ ಕಳೆದುಕೊಂಡವರಿಗೆ ಎಷ್ಟು ಹಣ ಬರಲಿದೆ ? ಯಾವಾಗ ಬರಲಿದೆ ಎಂಬುದರ ಸಮಗ್ರ ವಿವರ ಇಲ್ಲಿದೆ.

ತಲಾ 50 ಸಾವಿರ ಖಾತೆಗೆ
ಐಎಂಎ ಸಕ್ಷಮ ಪ್ರಾಧಿಕಾರ ಎಂಎಎ ಕಂಪನಿಯಲ್ಲಿ ಹೂಡಿಕೆ ಮಾಡಿ ಹಣ ಕಳೆದುಕೊಂಡವರ ಖಾತೆಗೆ ಪ್ರಾರಂಭಿಕ ಹಂತದಲ್ಲಿ ತಲಾ 50 ಸಾವಿರ ರೂ. ಹಣ ಬೀಳಲಿದೆ. ಒಂದು ಕೋಟಿ ಕಳೆದುಕೊಂಡಿದ್ದರೂ ಮೊದಲ ಹಂತದಲ್ಲಿ ಕೇವಲ 50 ಐವತ್ತು ಸಾವಿರ ಮೊತ್ತಕ್ಕಿಂತ ಕಡಿಮೆ ಮೊತ್ತ ಹೂಡಿಕೆ ಮಾಡಿದ್ದಲ್ಲಿ, ಅವರಿಗೆ ಪೂರ್ಣ ಪ್ರಮಾಣದ ಹಣ ಸಿಗಲಿದೆ. ಹತ್ತು ಲಕ್ಷ ಮತ್ತು ಹದಿನೈದು ಲಕ್ಷ, ಕೋಟಿ ಕಳೆದುಕೊಂಡವರಿಗೆ ಕೂಡ ಮೊದಲ ಹಂತದಲ್ಲಿ ಕೇವಲ 50 ಸಾವಿರ ರೂಪಾಯಿ ಮೊದಲ ಹಂತದಲ್ಲಿ ಖಾತೆಗೆ ಬೀಳಲಿದೆ. ಐವತ್ತು ಸಾವಿರಕ್ಕೂ ಕಡಿಮೆ ಹೂಡಿಕೆ ಮಾಡಿದವರಿಗೆ ಪೂರ್ಣ ಪ್ರಮಾಣದ ಹಣ ಸಿಗಲಿದೆ ಎಂಬುದು ವಿಶೇಷ. ಇನ್ನು ಹೂಡಿಕೆದಾರರಿಗೆ ಹಣ ನೀಡುವ ಸಂಬಂಧ ಸಕ್ಷಮ ಪ್ರಾಧಿಕಾರದ ಕಾರ್ಯಕ್ಕೆ ಹೈಕೋರ್ಟ್ ಗ್ರೀನ್ ಸಿಗ್ನಲ್ ನೀಡಿದೆ.

ಇನ್ನೊಂದು ತಿಂಗಳಲ್ಲಿ ಖಾತೆಗೆ ಹಣ
ಐಎಂಎ ವಂಚನೆ ಪ್ರಕರಣ ಸಂಬಂಧ ಹೂಡಿಕೆದಾರರಿಗೆ ಮೊದಲ ಹಂತದಲ್ಲಿ ಐವತ್ತು ಸಾವಿರ ರೂಪಾಯಿ ಪಾವತಿಸುವ ಸಂಬಂಧ ಸಕ್ಷಮ ಪ್ರಾಧಿಕಾರ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿತ್ತು. ಅರ್ಜಿ ಇತ್ಯರ್ಥ ವಾಗಿದ್ದು, ಇನ್ನೊಂದು ತಿಂಗಳಲ್ಲಿ ಹೂಡಿಕೆದಾರರ ಖಾತೆಗೆ ನೇರವಾಗಿ ಹಣ ಬೀಳಲಿದೆ. ಈಗಾಗಲೇ ಹಣ ಹಾಕುವ ಪ್ರಕ್ರಿಯೆಗೆ ಚಾಲನೆ ನೀಡಿದ್ದು, ವಂಚನೆ ಸಂಬಂಧ ಯಾರು ಹಣ ಕಳೆದುಕೊಂಡು ಅರ್ಜಿ ಸಲ್ಲಿಸಿದ್ದಾರೋ ಅಂತಹವರ ಖಾತೆಗೆ ಮಾತ್ರ ಹಣ ಬರಲಿದೆ. ಇನ್ನು 2021 ಜನವರಿಗೆ ಅರ್ಜಿ ಸಲ್ಲಿಕೆಗೆ ಕೊನೆ ಕಾಲಾವಕಾಶ ನೀಡಲಾಗಿತ್ತು. ಅರ್ಜಿ ಸಲ್ಲಿಸುವ ಕಾಲಾವಕಾಶ ಮುಗಿದಿದೆ. ಇನ್ನೇನಿದ್ದರೂ ಸೂಕ್ತ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಿರುವ ಬ್ಯಾಂಕ್ ಖಾತೆಗೆ ನೇರವಾಗಿ ಹಣ ಬೀಳಲಿದೆ ಎಂದು ಐಎಂಎ ಸಕ್ಷಮ ಪ್ರಾಧಿಕಾರದ ಅಧಿಕಾರಿಗಳು ತಿಳಿಸಿದ್ದಾರೆ.

ಎಷ್ಟು ಮಂದಿಗೆ ಬರಲಿದೆ
ರಾಜ್ಯದಲ್ಲಿ ಐಎಂಎನಲ್ಲಿ ಕೇವಲ ಜನ ಸಾಮಾನ್ಯರು ಮಾತ್ರ ಹೂಡಿಕೆ ಮಾಡಿಲ್ಲ. ಪೊಲೀಸ್ ಅಧಿಕಾರಿಗಳು ಸೇರಿದಂತೆ ಸಾಕಷ್ಟು ಸಾವಿರಾರು ಜನ ಹೂಡಿಕೆ ಮಾಡಿದ್ದರು. ಆದರೆ, ಪರಿಹಾರ ಕೋರಿ ಐಎಂಎ ಸಕ್ಷಮ ಪ್ರಾಧಿಕಾರಕ್ಕೆ ಅರ್ಜಿ ಸಲ್ಲಿಸಿರುವುದು ಈವರೆಗೆ 58, 856 ಮಂದಿ ಮಾತ್ರ. ಇದರಲ್ಲಿ ಈಗಾಗಲೇ ಕೆಲವರಿಗೆ ಹೂಡಿಕೆ ಮಾಡಿ ಪರಿಹಾರ ಪಡೆದಿದ್ದಾರೆ. ಅಂತಹವರಿಗೆ ಸಕ್ಷಮ ಪ್ರಾಧಿಕಾರದಿಂದ ಹಣ ಸಿಗುವುದು ಅನುಮಾನ. ಯಾರು ಹೂಡಿಕ ಮಾಡಿ ಹಣ ಕಳೆದುಕೊಂಡಿದ್ದಾರೋ ಅಂತಹವರಿಗೆ ಮೊದಲ ಕಂತಿನಲ್ಲಿ ಐವತ್ತು ಸಾವಿರ ರೂಪಾಯಿ ಹಣ ಬ್ಯಾಂಕ್ ಖಾತೆಗೆ ಬೀಳಲಿದೆ. ಇದರಲ್ಲೂ ಈಗಾಗಲೇ ಐಎಂಎನಿಂದ ಹಣ ವಾಪಸು ಮಾಡಿದಲ್ಲಿ ಅಂತಹವರಿಗೆ ಹಣ ಹಾಕುವುದಿಲ್ಲ. ಅದರ ಪ್ರಕಾರ 11 ಸಾವಿರ ಮಂದಿಗೆ ಐವತ್ತು ಸಾವಿರ ರೂ. ಬೀಳಲಿದೆ ಎಂದು ಹೇಳಲಾಗುತ್ತಿದೆ.
Recommended Video

ಸಿಗುವ ಪರಿಹಾರ ಎಷ್ಟು
ಇನ್ನು ಐಎಂಎ ವಂಚನೆ ಸಂಬಂಧ ಸಕ್ಷಮ ಪ್ರಾಧಿಕಾರದ ದಾಖಲೆಗಳ ಪ್ರಕಾರ, ಐಎಂಎ ಮತ್ತು ಅಂಗ ಸಂಸ್ಥೆಗಳಲ್ಲಿ ಬರೋಬ್ಬರಿ 2900 ರೂ. ಹೂಡಿಕೆ ಮಾಡಲಾಗಿತ್ತು. ಅದರಲ್ಲಿ ರಿಟರ್ಸ್ ರೂಪದಲ್ಲಿ ಐಎಂಎ ಸಂಸ್ಥೆ 1500 ಕೋಟಿ ರೂ. ವಾಪಸು ನೀಡಿದೆ. ಉಳಿದ 1400 ಕೋಟಿ ರೂ. ಹಣ ಹೂಡಿಕೆದಾರರಿಗೆ ನೀಡಬೇಕಾಗಿರುತ್ತದೆ. ಆದರೆ ವಾಸ್ತವದಲ್ಲಿ ಸರ್ಕಾರ 475 ಕೋಟಿ ರೂ. ಮೊತ್ತದ ಸ್ಥಿರ ಮತ್ತು ಚರಾಸ್ತಿಯನ್ನು ರಾಜ್ಯ ಸರ್ಕಾರ ಮುಟ್ಟು ಗೋಲು ಹಾಕಿಕೊಂಡಿದೆ. ಒಟ್ಟಾರೆ ಸರಾಸರಿ ಐದು ನೂರು ಕೋಟಿಯಾದರೂ ಸಹ ಹೂಡಿಕೆ ದಾರರಿಗೆ ಹೂಡಿಕೆ ಮಾಡಿದ ಮೊತ್ತದಲ್ಲಿ ಶೇ. 30 ರಷ್ಟು ಸಿಗಬಹುದು ಎಂದು ಅಂದಾಜಿಸಲಾಗಿದೆ. ಮೊದಲ ಹಂತದಲ್ಲಿ ಕೇವಲ 50 ಸಾವಿರ ನೀಡುತ್ತಿದ್ದು, ಉಳಿದ ಮೊತ್ತವನ್ನು ಎರಡನೇ ಹಂತದಲ್ಲಿ ಪಾವತಿಯಾಗಲಿದೆ.
-
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
IPL 2026 RCB: ಹ್ಯಾಜಲ್ವುಡ್, ಯಶ್ ದಯಾಳ್ ಅಲಭ್ಯರಾದ್ರೆ ಆರ್ಸಿಬಿ ಮುಂದಿರುವ 'ಪ್ಲಾನ್ ಬಿ' ಏನು? -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ












Click it and Unblock the Notifications