ಮೇ.11ರಂದು ಹೈಕೋರ್ಟ್ ಸುತ್ತ-ಮುತ್ತ ನಿಷೇಧಾಜ್ಞೆ
ಬೆಂಗಳೂರು, ಮೇ 09 : ಕರ್ನಾಟಕ ಹೈಕೋರ್ಟ್ ತಮಿಳುನಾಡು ಮಾಜಿ ಮುಖ್ಯಮಂತ್ರಿ ಜಯಲಲಿತಾ ಅವರ ಅಕ್ರಮ ಆಸ್ತಿಗಳಿಕೆ ಪ್ರಕರಣದ ಮೇಲ್ಮನವಿ ತೀರ್ಪನ್ನು ಸೋಮವಾರ ಪ್ರಕಟಿಸಲಿದೆ. ಮುಂಜಾಗ್ರತಾ ಕ್ರಮವಾಗಿ ಹೈಕೋರ್ಟ್ ಸುತ್ತಮುತ್ತ 144 ಸೆಕ್ಷನ್ ಅನ್ವಯ ನಿಷೇಧಾಜ್ಞೆ ಜಾರಿಗೊಳಿಸಿ ಬೆಂಗಳೂರು ಪೊಲೀಸರು ಆದೇಶ ಹೊರಡಿಸಿದ್ದಾರೆ.
ಬೆಂಗಳೂರು ನಗರ ಪೊಲೀಸ್ ಆಯುಕ್ತ ಎಂ.ಎನ್.ರೆಡ್ಡಿ ಅವರು ಈ ಕುರಿತು ಶನಿವಾರ ಆದೇಶ ಹೊರಡಿಸಿದ್ದಾರೆ. ತಮಿಳುನಾಡಿನ ವಿವಿಧ ಜಿಲ್ಲೆಗಳಿಂದ ಜನರು ಆಗಮಿಸಿ ಕಾನೂನು ಮತ್ತು ಸುವ್ಯವಸ್ಥೆಗೆ ಧಕ್ಕೆ ತರುವ ಬಗ್ಗೆ ಗುಪ್ತಚರ ಮಾಹಿತಿಗಳು ಬಂದಿರುವ ಹಿನ್ನಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. [ಮೇ 11ಕ್ಕೆ ಜಯಲಲಿತಾ ತೀರ್ಪು]

ಮೇ 11ರ ಸೋಮವಾರ ಬೆಳಗ್ಗೆ 6 ಗಂಟೆಯಿಂದ ರಾತ್ರಿ 9 ಗಂಟೆಯ ತನಕ ನಿಷೇಧಾಜ್ಞೆ ಜಾರಿಯಲ್ಲಿರುತ್ತದೆ. 5 ಜನಕ್ಕಿಂತ ಹೆಚ್ಚು ಜನರು ಗುಂಪು ಸೇರುವುದು, ಶಸ್ತ್ರಾಸ್ತ್ರಗಳನ್ನು ಹಿಡಿದು ಓಡಾಡುವುದು, ಕಲ್ಲು ಎಸೆಯುವುದು, ಸ್ಫೋಟಕ ಸಿಡಿಸುವುದನ್ನು ನಿಷೇಧಿಸಲಾಗಿದೆ. [ಅಕ್ರಮ ಆಸ್ತಿಗಳಿಕೆ ಪ್ರಕರಣದ Timeline]
ಕರ್ನಾಟಕ ಹೈಕೋರ್ಟ್ ವಿಶೇಷ ಪೀಠದ ನ್ಯಾಯಮೂರ್ತಿ ಸಿ.ಆರ್.ಕುಮಾರಸ್ವಾಮಿ ಅವರು ಜಯಲಲಿತಾ ವಿರುದ್ಧದ ಅಕ್ರಮ ಆಸ್ತಿಗಳಿಕೆ ಪ್ರಕರಣದ ತೀರ್ಪಿನ ಮೇಲ್ಮನವಿಯ ವಿಚಾರಣೆಯನ್ನು ಮಾ.11ರಂದು ಮುಕ್ತಾಯಗೊಳಿಸಿದ್ದಾರೆ. ಮೇ 11ರ ಸೋಮವಾರ ಬೆಳಗ್ಗೆ 11 ಗಂಟೆಗೆ ತೀರ್ಪು ಪ್ರಕಟಗೊಳ್ಳಲಿದೆ.
2014ರ ಸೆ. 27ರಂದು ಅಕ್ರಮ ಆಸ್ತಿಗಳಿಕೆ ಪ್ರಕರಣದ ತೀರ್ಪು ನೀಡಿದ್ದ ಸಿಬಿಐ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಡಿ.ಕುನ್ಹ ಅವರು, ಜಯಲಲಿತಾ, ವಿ.ಕೆ.ಶಶಿಕಲಾ, ಜೆ.ಇಳವರಸಿ ಮತ್ತು ವಿ.ಎನ್.ಸುಧಾಕರನ್ ತಪ್ಪಿತಸ್ಥರು ಎಂದು ಆದೇಶ ನೀಡಿದ್ದರು.
ಈ ತೀರ್ಪನ್ನು ಪ್ರಶ್ನಿಸಿ ಜಯಲಲಿತಾ ಅವರು ಮೇಲ್ಮನವಿ ಸಲ್ಲಿಸಿದ್ದರು. ಸುಮಾರು ಮೂರು ತಿಂಗಳ ವಿಚಾರಣೆ ಬಳಿಕ ಮೇಲ್ಮನವಿ ಅರ್ಜಿಯ ತೀರ್ಪು ಪ್ರಕಟಗೊಳ್ಳಲಿದೆ. ತೀರ್ಪು ಪ್ರಕಟಗೊಳ್ಳುವ ದಿನ ಜಯಲಲಿತಾ ಅವರು ಕೋರ್ಟ್ಗೆ ಆಗಮಿಸುವುದಿಲ್ಲ.
-
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ












Click it and Unblock the Notifications