Property: ಹಲವು ಷರತ್ತುಗಳೊಂದಿಗೆ ಚನ್ನರಾಯಪಟ್ಟಣ ಹೋಬಳಿಯ ಜಮೀನು ನೀಡಲು ರೈತರ ಒಪ್ಪಿಗೆ
Property: ಈ ಹಿಂದೆ ಕೆಐಎಡಿಬಿಗೆ ದೇವನಹಳ್ಳಿ ತಾಲ್ಲೂಕು, ಚನ್ನರಾಯಪಟ್ಟಣ ಹೋಬಳಿಯ ಜಮೀನು ನೀಡುವುದಿಲ್ಲ ಎಂದು ರೈತ ಹೋರಾಟಗಾರರು ಹೋರಾಟ ನಡೆಸುತ್ತಿದ್ದರು. ಆದರೆ, ಇದೀಗ ಇಂದು (ಜುಲೈ 12) ದಿಢೀರ್ ಸಿಎಂ ಸಿದ್ಧರಾಮಯ್ಯ ಅವರಿಗೆ ಪತ್ರ ಬರೆದಿದ್ದು, ಜಮೀನು ನೀಡುವುದಾಗಿ ತಿಳಿಸಿದ್ದಾರೆ. ಹಾಗಾದ್ರೆ ಎಷ್ಟು ಎನ್ನುವ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.
ಈ ಬಗ್ಗೆ ಸಿಎಂ ಸಿದ್ಧರಾಮಯ್ಯ ಅವರಿಗೆ ದೇವನಹಳ್ಳಿ ತಾಲ್ಲೂಕು, ಚನ್ನರಾಯಪ್ಪಟಣ ಹೋಬಳಿ ರೈತ ಹೋರಾಟ ಸಮಿತಿ ಪತ್ರ ಬರೆದಿದೆ. ಅದರಲ್ಲಿ ಚನ್ನರಾಯಪಟ್ಟಣ ಹೋಬಳಿ 1,777 ಹೆಕ್ಟೇರ್ ಜಮೀನು ನೀಡುವುದಕ್ಕೆ 13 ಗ್ರಾಮಗಳ ರೈತರ ಒಪ್ಪಿಗೆಯಿದೆ ಎಂಬುದಾಗಿ ತಿಳಿಸಿದ್ದಾರೆ.

ಆದರೆ, ರಾಜ್ಯ ಸರ್ಕಾರ ರೈತರ ಭೂಮಿಗೆ ಉತ್ತಮ ದರ ನಿಗದಿ ಮಾಡಬೇಕು. ಆ ಮೂಲಕ ಜಮೀನು ಖರೀದಿ ಮಾಡಬೇಕು ಎಂದು ಸಿಎಂ ಸಿದ್ಧರಾಮಯ್ಯ ಅವರಲ್ಲಿ ಮನವಿ ಮಾಡಿದ್ದಾರೆ. ಇನ್ನೂ ನಾಲ್ಕು ಷರತ್ತುಗಳನ್ನು ರೈತ ಹೋರಾಟ ಸಮಿತಿ ವಿಧಿಸಿದೆ. ಅದರಲ್ಲಿ ಮೊದಲನೇಯ ಷರತ್ತು ಪ್ರತಿ ಹೆಕ್ಟೇರ್ಗೆ 3.50 ಕೋಟಿಗಳ ದರ ನಿಗದಿ ಪಡಿಸಬೇಕು.
ಎರಡನೇಯದು ಜಮೀನು ಕಳೆದುಕೊಂಡ ರೈತ ಮಕ್ಕಳಿಗೆ ವಿದ್ಯಾಭ್ಯಾಸಕ್ಕೆ ಅನುಗುಣವಾಗಿ ಉದ್ಯೋಗ ನೀಡುವುದಾಗಿದೆ. ಮತ್ತೊಂದು ಯಾವುದೇ ಕಾರಣಕ್ಕೂ ಹಸಿರು ವಲಯವಾಗಿ ಪರಿವರ್ತನೆ ಮಾಡಬಾರದು. ಇನ್ನೂ ಕೊನೆಯದಾಗಿ ಷರತ್ತಾಗಿ ಗ್ರಾಮದ ಅಕ್ಕಪಕ್ಕ ಉಳಿದ ಜಮೀನುಗಳನ್ನ ಹಳದಿ ವಲಯವನ್ನಾಗಿ ಪರಿವರ್ತನೆ ಮಾಡಬೇಕು ಎಂದು ಪತ್ರದಲ್ಲಿ ತಿಳಿಸಲಾಗಿದೆ.
-
ಬೆಂಗಳೂರಿನ ಪಾನಿಪುರಿ ವ್ಯಾಪಾರಿಯ ತಿಂಗಳ ಸಂಪಾದನೆ ಫುಲ್ Viral: ದಿನಕ್ಕೆ 3 ಸಾವಿರ ರೂ. ಗಳಿಕೆ -
Viral Video: 11 ವರ್ಷದ ಬಾಲಕನಿಂದ ಯಶಸ್ವಿ ವಿಮಾನ ಲ್ಯಾಂಡಿಂಗ್; ನೆಟ್ಟಿಗರ ಮನಗೆದ್ದ ಈ ಪುಟ್ಟ ಪೋರ -
ಪೆಟ್ರೋಲ್ ಬದಲು ಎಥೆನಾಲ್ ಬ್ಲೆಂಡಿಂಗ್ ಮ್ಯಾಜಿಕ್; ಸಂಕಷ್ಟದಲ್ಲಿ ಭಾರತಕ್ಕೆ ನೆರವಾದ ಮೋದಿ ಮಾಸ್ಟರ್ ಪ್ಲ್ಯಾನ್: ಕೃಷ್ಣ ಭಟ್ ಬರಹ -
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ












Click it and Unblock the Notifications